No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಕಾಯ್ದೆ ಜಾರಿಗೊಳಿಸಲು ಜನ ಜಾಗೃತಿ: ಸಚಿವ ಈಶ್ವರ ಖಂಡ್ರೆ

ಎರಡು ದಿನಗಳ ರೀ ಕಾಮರ್ಸ್‌ ಎಕ್ಸ್‌ ಪೋ ಗೆ ಅರಮನೆ ಮೈದಾನದಲ್ಲಿ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 9, 2023
in ಬೆಂಗಳೂರು ನಗರ
0
ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಕಾಯ್ದೆ ಜಾರಿಗೊಳಿಸಲು ಜನ ಜಾಗೃತಿ: ಸಚಿವ ಈಶ್ವರ ಖಂಡ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೈಗಾರಿಕೆಗಳಿಂದ ಉತ್ಪಾದನೆಯಾಗುವ ತ್ಯಾಜ್ಯ ವಿಲೇವಾರಿಗಾಗಿ ಉತ್ಪಾದನಾ ವಲಯದ ವಿಸ್ತೃತ ಜವಾಬ್ದಾರಿ ಕಾಯ್ದೆ [Extended producer Responsibility act] ಇದ್ದು, ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಜನ ಜಾಗೃತಿ ಮೂಡಿಸಲಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವ ಈಶ್ವರ್‌ ಖಂಡ್ರೆ Eshwar Khandre ಹೇಳಿದ್ದಾರೆ.

ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿಂದು ಅವರು ದುರಸ್ತಿ, ನವೀಕರಣ ಮತ್ತು ಮರು ಸಂಸ್ಕರಣೆ ಕುರಿತಂತೆ ಕರಡು ಕಾರ್ಯಸೂಚಿ ಸಿದ್ಧಪಡಿಸಲು ಆಯೋಜಿಸಿರುವ ಎರಡು ದಿನಗಳ ರೀ ಕಾಮರ್ಸ್‌ ಎಕ್ಸ್‌ ಪೋ – 2023 ಅನ್ನು ಉದ್ಘಾಟಿಸಿದರು. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌, ಸಣ್ಣ, ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣ ಬಸಪ್ಪ ದರ್ಶನಾಪುರ್‌ ಭಾಗವಹಿಸಿದ್ದರು.
ಸಚಿವ ಈಶ್ವರ ಖಂಡ್ರೆ ಮಾತನಾಡಿ, ಕೈಗಾರಿಕೆಗಳಿಂದ ಉತ್ಪಾದನೆಯಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ಮರು ಸಂಸ್ಕರಣೆ ಮಾಡುವುದು ಕೈಗಾರಿಕೆಗಳ ಜವಾಬ್ದಾರಿ. ಈ ಕುರಿತು ಅಸ್ಥಿತ್ವದಲ್ಲಿರುವ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಎಲ್ಲಾ ಪಾಲುದಾರರನ್ನು ವಿಶ್ವಾಸಕ್ಕೆ ಪಡೆದು ಅರಿವು ಮೂಡಿಸಲಾಗುವುದು ಎಂದರು.

ಬೆಂಗಳೂರು ಜಾಗತಿಕ ಐಟಿ ರಾಜಧಾನಿಯಾಗಿದ್ದು, ಇಲ್ಲಿ ಉತ್ಪಾದನೆಯಾಗುವ ಇ ತ್ಯಾಜ್ಯ ನಿವಾರಣೆ ಅತ್ಯಂತ ಮಹತ್ವದ್ದಾಗಿದೆ. ಇದನ್ನು ಸರಿಯಾಗಿ ನಿರ್ವಹಿಸದಿದ್ದರೆ ಸಾಕಷ್ಟು ಅನಾರೋಗ್ಯ ಸಮಸ್ಯೆಗಳು ಎದುರಾಗಲಿವೆ. ತ್ಯಾಜ್ಯ ವಿಲೇವಾರಿಗಾಗಿ ಉತ್ಪಾದನಾ ವಲಯದ ವಿಸ್ತೃತ ಜವಾಬ್ದಾರಿ ಕಾಯ್ದೆ ಜಾರಿಗೊಳಿಸಿದರೆ ಇಂತಹ ಸಮಸ್ಯೆಗಳಿಗೆ ಸಾಕಷ್ಟು ಪರಿಹಾರ ದೊರೆಯಲಿದೆ ಎಂದು ಹೇಳಿದರು.

ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆ ಮಾಡಬೇಕಾಗಿದ್ದು, ಇದಕ್ಕಾಗಿ ವಿಶೇಷವಾಗಿ ಸಂಸ್ಕರಣಾ ವಲಯದಲ್ಲಿ ಕಾರ್ಯನಿರ್ವಹಿಸಲಿರುವ ಕೈಗಾರಿಕೆಗಳಿಗೆ ಸರ್ಕಾರ ಸೂಕ್ತ ಸಹಕಾರ ಮತ್ತು ನೆರವು ನೀಡಲಿದೆ. ಕರ್ನಾಟಕವನ್ನು ಪರಿಸರ ಸ್ನೇಹಿಯಾಗಿ ಮಾಡುವ ಜೊತೆಗೆ ಈ ವಲಯದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸೃಜನೆಗೆ ಒತ್ತು ನೀಡಲಾಗುವುದು. ಅನೇಕ ಕೈಗಾರಿಕೋದ್ಯಮಗಳು ಒಂದುಗೂಡಿ ರೀ ಕಾಮರ್ಸ್‌ ಎಕ್ಸ್‌ ಪೋ ಆಯೋಜಿಸಿರುವುದು ಉತ್ತಮ ಬೆಳವಣಿಗೆ ಎಂದರು.
ಜಗತ್ತಿನಲ್ಲಿ ಅತಿ ದೊಡ್ಡ ಸಮಸ್ಯೆ ಎಂದರೆ ಅದು ಮಾಲೀನ್ಯ, ಆಹಾರ, ನೀರು, ಗಾಳಿ ಸೇರಿ ಎಲ್ಲಾ ವಲಯಗಳು ಮಲಿನಗೊಂಡಿವೆ. ಹವಾಮಾನ ವೈಪರಿತ್ಯ ಜಾಗತಿಕ ತಾಪಮಾನಕ್ಕೂ ತ್ಯಾಜ್ಯ ಕಾರಣವಾಗಿದೆ. ಏಕ ಬಳಕೆ ಪ್ಲಾಸ್ಟಿಕ್‌ ನಿಷೇಧದಿಂದ ಸಾಕಷ್ಟು ಪರಿಹಾರವಿದ್ದು, ಜೊತೆಗೆ ಇ ತ್ಯಾಜ್ಯ ಇತ್ಯರ್ಥ ಮಾಡದಿದ್ದರೆ ಅನೇಕ ರೋಗಗಳು ಬರುತ್ತವೆ ಎಂಬುದನ್ನು ಸಹ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದರು.

ನಾವು ಅಭಿವೃದ್ಧಿ ಜೊತೆಗೆ ಪ್ರಕೃತಿ, ಪರಿಸರ, ಅರಣ್ಯ, ಜಲಮೂಲಗಳನ್ನೂ ಸಂರಕ್ಷಿಸಬೇಕು. ತಂತ್ರಜ್ಞಾನದ ನೆರವು ಪಡೆದು ಸಕಲ ಜೀವ, ಸಸ್ಯ ಸಂಕುಲ ಉಳಿಸಬೇಕು. ರಾಜ್ಯದ ಹಸಿರು ವ್ಯಾಪ್ತಿ ಹೆಚ್ಚಿಸಲು 5 ಕೋಟಿ ಸಸಿ ನೆಟ್ಟು ಪೋಷಿಸುವ ಸಂಕಲ್ಪ ಮಾಡಿರುವುದಾಗಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
“ಪರಿಣಾಮಕಾರಿ ತ್ಯಾಜ್ಯ ನಿರ್ವಹಣೆ”, “ಸರಕುಗಳು ಮತ್ತು ವಸ್ತುಗಳ ಮರುಬಳಕೆ” ಮತ್ತು “ವೃತ್ತಾಕಾರದ ಆರ್ಥಿಕತೆ” ಇಂದಿನ ಅಗತ್ಯವಾಗಿದೆ. ಈ ಪ್ರಕೃತಿಯಲ್ಲಿ ನಿರುಪಯುಕ್ತವಾದ ವಸ್ತು ಯಾವುದೂ ಇಲ್ಲ. ಎಲ್ಲ ವಸ್ತುಗಳ ಸಮರ್ಪಕ ಬಳಕೆ ಮಾಡುವುದನ್ನು ಕಲಿತರೆ, ಪ್ರಕೃತಿ, ಪರಿಸರ ಸಂಪನ್ಮೂಲ ಉಳಿಸಬಹುದು ಎಂದರು.

ರೀ ಕಾರ್ಮಸ್‌ ಏಕ್ಸ್‌ ಪೋ ಅಯೋಜಕ ಮತ್ತು ಊರ್ಧವ್‌ ಮ್ಯಾನೇಜ್ಮೆಂಟ್‌ ಸಂಸ್ಥೆಯ ಸಂಸ್ಥಾಪಕ ವೆಂಕಟ್‌ ರೆಡ್ಡಿ ಪಾಟೀಲ್‌ ಮಾತನಾಡಿ, ಜಗತ್ತಿನಲ್ಲಿ ಮರು ಸಂಸ್ಕರಣೆ ಅತ್ಯಂತ ಅಗತ್ಯವಾಗಿರುವ ವಲಯವಾಗಿದ್ದು, ಪರಿಸರ ಸಂರಕ್ಷಣೆಗೆ ಈಗಲೇ ಎಚ್ಚೆತ್ತುಕೊಳ್ಳಬೇಕಾಗಿದೆ. ಇದಕ್ಕಾಗಿ ಅಗತ್ಯ ಕರಡು ಕಾರ್ಯಸೂಚಿ ತಯಾರಿಸಲು ದೇಶದ ಪ್ರಮುಖ ತಜ್ಞರು ಮತ್ತು ಕೈಗಾರಿಕೋದ್ಯಮಿಗಳ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share196Tweet123Send
Previous Post

ಕೋಟೆಗಂಗೂರು ಗ್ರಾ.ಪಂ ಅಧ್ಯಕ್ಷರಾಗಿ ಡಿಬಿ ವಿಜಯಕುಮಾರ್, ಉಪಾಧ್ಯಕ್ಷರಾಗಿ ರೇಖಾಬಾಯಿ ಆಯ್ಕೆ

Next Post

ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ತೆರೆಯಲು ಆರ್ಥಿಕ ನೆರವು ನೀಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ತೆರೆಯಲು ಆರ್ಥಿಕ ನೆರವು ನೀಡಿ

ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ತೆರೆಯಲು ಆರ್ಥಿಕ ನೆರವು ನೀಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

April 20, 2026
ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

April 20, 2026
ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ DRM ಬೇಲಾ ಮೀನಾ ಭೇಟಿ, ಪರಿಶೀಲನೆ

ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ DRM ಬೇಲಾ ಮೀನಾ ಭೇಟಿ, ಪರಿಶೀಲನೆ

April 20, 2026
ಏ.23, 24ರಂದು ಸಿಇಟಿ ಪರೀಕ್ಷೆ | ಅಕ್ರಮ ತಡೆಯಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ: ಅಪರ ಜಿಲ್ಲಾಧಿಕಾರಿ ಅಭಿಷೇಕ್ 

ಏ.23, 24ರಂದು ಸಿಇಟಿ ಪರೀಕ್ಷೆ | ಅಕ್ರಮ ತಡೆಯಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ: ಅಪರ ಜಿಲ್ಲಾಧಿಕಾರಿ ಅಭಿಷೇಕ್ 

April 20, 2026
ಯಮಹಾ ‘ದಿ ಕಾಲ್ ಆಫ್ ದಿ ಬ್ಲೂ’ ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

ಯಮಹಾ ‘ದಿ ಕಾಲ್ ಆಫ್ ದಿ ಬ್ಲೂ’ ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

April 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL