No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಳೆ ಹಾನಿ: ನ್ಯಾಯಯುತ ಪರಿಹಾರ ಒದಗಿಸಿ – ಕೇಂದ್ರ ತಂಡಕ್ಕೆ ಸಿಎಂ ಮನವಿ

kalpa News by kalpa News
September 7, 2022
in ಬೆಂಗಳೂರು ನಗರ
0
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯ ಸರ್ಕಾರವು ಅತ್ಯಂತ ನಿಖರವಾಗಿ ಹಾಗೂ ಪಾರದರ್ಶಕವಾಗಿ ಹಾನಿಯ ಅಂದಾಜುಪಟ್ಟಿ ಸಿದ್ಧಪಡಿಸಿ, ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ತಿಳಿಸಿದರು.

ಅವರು ರಾಜ್ಯದ ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿ, ರಾಜ್ಯದಲ್ಲಿ ಪ್ರವಾಹದಿಂದ ಜುಲೈ, ಆಗಸ್ಟ್ ಹಾಗೂ ಈ ತಿಂಗಳು ಸಂಭವಿಸಿದ ಹಾನಿಯ ಕುರಿತು ಚರ್ಚಿಸಿದರು.
ರಾಜ್ಯದಲ್ಲಿ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿಯಿಂದ ಸಂಭವಿಸಿದ ಹಾನಿಯ ಕುರಿತು ಹಾಗೂ ರಾಜ್ಯ ಸರ್ಕಾರ ಕೈಗೊಂಡ ಪರಿಹಾರ ಕ್ರಮಗಳ ಕುರಿತು ಸಭೆಯಲ್ಲಿ ವಿವರವಾದ ಮಾಹಿತಿ ಒದಗಿಸಲಾಯಿತು.

ತಂಡವು ಚಿತ್ರದುರ್ಗ, ಹಾಸನ, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಗದಗ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ರೂಪಿಸಲಾಗಿತ್ತು. ಇದರೊಂದಿಗೆ ಅತಿ ಹೆಚ್ಚು ಭೂಕುಸಿತ, ಸಮುದ್ರ ಕೊರೆತ ಸಂಭವಿಸಿರುವ ಕೊಡಗು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೂ ಭೇಟಿ ನೀಡುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಜೊತೆಗೆ ಬೆಂಗಳೂರು ನಗರ, ನೆರೆಯ ಮಂಡ್ಯ, ರಾಮನಗರ ಜಿಲ್ಲೆಗಳ ಪ್ರವಾಹ ಪರಿಸ್ಥಿತಿಯನ್ನು ಸಹ ಅವಲೋಕಿಸುವಂತೆ ತಿಳಿಸಲಾಯಿತು.
ಈ ಬಾರಿ ಭಾರಿ ಸಂಖ್ಯೆಯಲ್ಲಿ ಮೀನುಗಾರಿಕಾ ದೋಣಿಗಳಿಗೆ, ಅಂಗಡಿ ಮುಂಗಟ್ಟುಗಳಿಗೆ ಸಂಭವಿಸಿದ ಹಾನಿ ಹಾಗೂ ರಾಮನಗರದ ರೇಷ್ಮೆ ರೀಲಿಂಗ್ ಘಟಕ ಹಾಗೂ ಟ್ವಿಸ್ಟಿಂಗ್ ಘಟಕಗಳಿಗೆ ಸಂಭವಿಸಿದ ಹಾನಿಯ ಕುರಿತೂ ಸಹ ಕೇಂದ್ರ ತಂಡದ ಗಮನಕ್ಕೆ ತಂದ ಮುಖ್ಯಮಂತ್ರಿಗಳು, ಮೊದಲ ಬಾರಿಗೆ ಇಂತಹ ಹಾನಿ ಸಂಭವಿಸಿದ್ದು, ಅವರಿಗೆ ಜೀವನೋಪಾಯಕ್ಕೆ ತೊಂದರೆಯಾಗಿದೆ. ಆದ್ದರಿಂದ ಮಾನವೀಯ ದೃಷ್ಟಿಯಿಂದ ಅವರಿಗೆ ನೆರವು ನೀಡಲು ಪರಿಶೀಲಿಸುವಂತೆ ಕೋರಿದರು.

ಕಡಲಕೊರೆತ
ರಾಜ್ಯವು 330 ಕಿ.ಮೀ. ಕರಾವಳಿ ಪ್ರದೇಶವನ್ನು ಹೊಂದಿದ್ದು, ಸಮುದ್ರ ಕೊರೆತ ತಡೆಗಟ್ಟಲು ಹಲವು ಸೂಕ್ಷ್ಮ ಪ್ರದೇಶಗಳಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೆ ಹೊಸ ಜಾಗಗಳಲ್ಲಿ ಕಡಲಕೊರೆತ ಉಂಟಾಗಿದ್ದು, ರಾಜ್ಯದ ಸಂಪೂರ್ಣ ಕರಾವಳಿ ಪ್ರದೇಶದ ರಕ್ಷಣೆಗೆ ಕೇಂದ್ರದ ನೆರವಿನ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

Also read: Rain damage: CM Bommai seeks a fair relief as per Central guidelines

ಉತ್ತರ ಕರ್ನಾಟಕ ಭಾಗದಲ್ಲಿಯೂ ಹಿಂದೆ ಪ್ರವಾಹ ಕಾಣಿಸಿಕೊಳ್ಳದ ಕಲಬುರಗಿ, ಗದಗ, ಬೀದರ್, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಈ ಬಾರಿ ಪ್ರವಾಹ ಉಂಟಾಗಿದೆ. ಕಳೆದ ನವೆಂಬರ್ ತಿಂಗಳಿನಿಂದ ಬಿಟ್ಟು ಬಿಟ್ಟು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಮಳೆಯ ಮಾದರಿಯನ್ನು ಅಧ್ಯಯನ ನಡೆಸುವ ಅಗತ್ಯವಿದೆ. ಸತತ ಮಳೆಯಿಂದಾಗಿ ರಾಜ್ಯದ ಬಹುತೇಕ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಕೆರೆ ತುಂಬಿ ಹಾಗೂ ಕೆರೆ ಏರಿ ಒಡೆದು ಪ್ರವಾಹ ಉಂಟಾಗುತ್ತಿದೆ. ನದಿ ಪ್ರವಾಹಕ್ಕಿಂತ ಭಿನ್ನ ಪರಿಸ್ಥಿತಿ ಇದಾಗಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.
ಮೂಲಸೌಕರ್ಯ ದುರಸ್ತಿಗೆ 1600 ಕೋಟಿ ರೂ. ಬಿಡುಗಡೆ
ರಾಜ್ಯದಲ್ಲಿ ಕಳೆದ ನವೆಂಬರ್ ನಿಂದೀಚೆಗೆ ಮೂಲಸೌಕರ್ಯಗಳ ದುರಸ್ತಿಗೆ ಎರಡು ಬಾರಿ 500 ಕೋಟಿ ರೂ.ಗಳಂತೆ ಹಾಗೂ ಎರಡು ದಿನಗಳ ಹಿಂದೆ 600 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಪರಿಹಾರ ನೀಡುತ್ತಿದ್ದು, 18.58 ಲಕ್ಷ ರೈತರಿಗೆ ಒಟ್ಟು 2452 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. ಇದರಲ್ಲಿ 1160 ಕೋಟಿ ರೂ. ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರದ ಬೊಕ್ಕಸದಿಂದ ಭರಿಸಲಾಗಿದೆ. ಮನೆ ಹಾನಿಗೂ ನಷ್ಟದ ಪ್ರಮಾಣವನ್ನು ಆಧರಿಸಿ, ಪರಿಹಾರ ವಿತರಿಸಲಾಗುತ್ತಿದೆ. ಈ ಎಲ್ಲ ಪರಿಹಾರಗಳನ್ನೂ ಅತ್ಯಂತ ತ್ವರಿತವಾಗಿ, ಪಾರದರ್ಶಕವಾಗಿ ನೇರವಾಗಿ ಸಂತ್ರಸ್ತರ ಖಾತೆಗೆ ಜಮಾ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಕಳೆದ ಒಂದು ವಾರದಿಂದೀಚೆಗೆ ಪುನಃ ಭಾರಿ ಮಳೆಯಾಗುತ್ತಿದ್ದು, ಬೆಂಗಳೂರು, ರಾಮನಗರ, ಮಂಡ್ಯ ಮತ್ತಿತರ ಜಿಲ್ಲೆಗಳಲ್ಲಿ ಬಹಳಷ್ಟು ಹಾನಿಯಾಗಿದೆ. ಈ ಅವಧಿಯಲ್ಲಿ ಸಂಭವಿಸಿದ ನಷ್ಟದ ಕುರಿತು ಪೂರಕ ಪ್ರಸ್ತಾವನೆಯನ್ನು ಸಹ ಕೂಡಲೇ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೇಂದ್ರ ತಂಡ
ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶೀಶ್ ಕುಮಾರ್ ನೇತೃತ್ವದ ತಂಡವು ಕೇಂದ್ರ ಹಣಕಾಸು ಇಲಾಖೆಯ ಉಪಕಾರ್ಯದರ್ಶಿ ಮಹೇಶ್ ಕುಮಾರ್, ಇಂಧನ ಇಲಾಖೆಯ ಸಹಾಯಕ ನಿರ್ದೇಶಕರಾದ ಭಾವ್ಯ ಪಾಂಡೆ, ಜಲಶಕ್ತಿ ಸಚಿವಾಲಯದ ಅಶೋಕ್ ಕುಮಾರ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀಕ್ಷಕ ಅಭಿಯಂತರ ವಿ.ವಿ.ಶಾಸ್ತ್ರಿ, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಡಾ. ಕೆ. ಮನೋಹರನ್, ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ಎಸ್.ಬಿ. ತಿವಾರಿ ಅವರನ್ನು ಒಳಗೊಂಡಿದೆ.

ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಬಿ.ಸಿ. ಪಾಟೀಲ, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರನಾಯಕ್, ವಿಪತ್ತು ನಿರ್ವಹಣೆ ಆಯುಕ್ತ ಮನೋಜ್ ರಾಜನ್ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Rain damage: CM Bommai seeks a fair relief as per Central guidelines

Next Post

ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಬೇಕೆ? ಆಸ್ಪತ್ರೆ ಸೋರುವುದ ತಪ್ಪಿಸಿ, ನಂತರ ಆಂಬುಲೆನ್ಸ್ ಶೆಡ್ ಕಟ್ಟಿಸಿ

kalpa News

kalpa News

Next Post
ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಬೇಕೆ? ಆಸ್ಪತ್ರೆ ಸೋರುವುದ ತಪ್ಪಿಸಿ, ನಂತರ ಆಂಬುಲೆನ್ಸ್ ಶೆಡ್ ಕಟ್ಟಿಸಿ

ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಬೇಕೆ? ಆಸ್ಪತ್ರೆ ಸೋರುವುದ ತಪ್ಪಿಸಿ, ನಂತರ ಆಂಬುಲೆನ್ಸ್ ಶೆಡ್ ಕಟ್ಟಿಸಿ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL