No Result
View All Result
Culture & Tradition Shine as Rudraksham Marks Milestone Achievement
English Articles

Culture & Tradition Shine as Rudraksham Marks Milestone Achievement

by kalpa News
July 8, 2026
0

Kalpa Media House  |  Bengaluru  | The rich rhythmic heritage of Kerala took center stage in the city as the...

Read moreDetails
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಾಧ್ಯಮ ಶಿಕ್ಷಣದ ಮರುವಿನ್ಯಾಸ ಅನಿವಾರ್ಯ: ಪ್ರೊ.ಬಿ.ಕೆ. ರವಿ ಅಭಿಮತ

ಮಾಧ್ಯಮ ಶಿಕ್ಷಣದ ಪಠ್ಯಕ್ರಮದ ಮರುವಿನ್ಯಾಸ ಕಾರ್ಯಾಗಾರ

kalpa News by kalpa News
March 25, 2024
in ಬೆಂಗಳೂರು ನಗರ
0
ಮಾಧ್ಯಮ ಶಿಕ್ಷಣದ ಮರುವಿನ್ಯಾಸ ಅನಿವಾರ್ಯ: ಪ್ರೊ.ಬಿ.ಕೆ. ರವಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಆಧುನಿಕ ತಂತ್ರಜ್ಞಾನದ ಜೊತೆಗೆ ಉದ್ಯೋಗ ಅವಕಾಶಗಳ ಅಗತ್ಯತೆಗಳನ್ನು ಅರಿತು ಮಾಧ್ಯಮ ಶಿಕ್ಷಣದ ಮರುವಿನ್ಯಾಸ ರೂಪಿಸುವ ಅನಿವಾರ್ಯತೆ ಇದೆ ಎಂದು ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ. ರವಿ ಅಭಿಪ್ರಾಯಪಟ್ಟರು.

ನಗರದ ಕರ್ನಾಟಕ ಉನ್ನತ ಶಿಕ್ಷಣ ಕೌನ್ಸೆಲ್ ಮತ್ತು ಪತ್ರಿಕೋದ್ಯಮ ಅಧ್ಯಾಪಕರ ಸಂಘದ ಆಶ್ರಯದಲ್ಲಿ ಭಾನುವಾರ ‘ಮಾಧ್ಯಮ ಶಿಕ್ಷಣದ ಪಠ್ಯಕ್ರಮದ ಮರುವಿನ್ಯಾಸ’ ಕುರಿತು ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮಾಧ್ಯಮ ಕ್ಷೇತ್ರದ ಮೇಲೆ ತಂತ್ರಜ್ಞಾನದ ಪ್ರಭಾವ ಹೆಚ್ಚಾಗಿದೆ. ಓದುಗರ ಆಸಕ್ತಿಗೆ ತಕ್ಕಂತೆ ಉದ್ಯೋಗದ ನಿರೀಕ್ಷೆಗಳೂ ಬದಲಾಗುತ್ತಿವೆ. ಈ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮಾಧ್ಯಮ ಶಿಕ್ಷಣದ ಪಠ್ಯಕ್ರಮ, ಪ್ರಾಯೋಗಿಕ ಶಿಕ್ಷಣವೂ ಪರಿವರ್ತನೆ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮ ಮತ್ತು ಪತ್ರಿಕೋದ್ಯಮ ಶಿಕ್ಷಣ ನೀಡುವ ಸಂಸ್ಥೆಗಳು ಪರಸ್ಪರ ಸಹಯೋಗದಲ್ಲಿ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದರು.

ಪ್ರಸ್ತುತ ಮಾಧ್ಯಮದಲ್ಲಿ ಡೇಟಾ ಅನಲೈಸಿಸ್, ಆಗ್ಮೆಂಟೆಡ್ ರಿಯಾಲಿಟಿ, ವರ್ಚುವಲ್ ರಿಯಾಲಿಟಿ, ಕೃತಕ ಬುದ್ಧಿಮತ್ತೆ, ಬ್ಲಾಕ್‌ಚೈನ್ ಸೇರಿದಂತೆ ಹಲವು ಡಿಜಿಟಲ್ ತಂತ್ರಜ್ಞಾನಗಳು ಬಳಕೆಯಾಗುತ್ತಿದೆ. ಪಾರಂಪರಿಕ ಮಾಧ್ಯಮದ ಜೊತೆಗೆ ಸಾಮಾಜಿಕ ಮಾಧ್ಯಮಗಳು ಮುನ್ನೆಲೆಗೆ ಬಂದಿವೆ. ಅವಶ್ಯಕತೆ, ಅಗತ್ಯಗಳನ್ನು ಅರಿತು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮ ಶಿಕ್ಷಣ ಶಿಕ್ಷಕರೂ ಹೊಸ ಸವಾಲುಗಳನ್ನು ಎದುರಿಸಲು ಸಜ್ಜಾಗಬೇಕಾಗಿದೆ ಎಂದು ಹೇಳಿದರು.
ಮಾಧ್ಯಮ ಶಿಕ್ಷಣವು ಅಂತರಶಿಸ್ತೀಯ ವಿಷಯಗಳ ಆಯ್ಕೆಗೆ ಗಮನ ನೀಡಬೇಕಾಗಿದೆ. ಬೇರೆ ಬೇರೆ ಕ್ಷೇತ್ರಗಳಲ್ಲಿ ಮಾಧ್ಯಮದ ವಿದ್ಯಾರ್ಥಿಗಳು ಅವಕಾಶ ಪಡೆಯಲು ಸಾಧ್ಯವಾಗುವಂತೆ ಪಠ್ಯಕ್ರಮ ರೂಪಿಸಬೇಕಾಗಿದೆ. ಗ್ರಾಮೀಣ ಭಾಗದಲ್ಲಿ ಪತ್ರಿಕೋದ್ಯಮ ಕೋರ್ಸ್ಗಳನ್ನು ಆರಂಭಿಸಿ, ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಆದ್ಯತೆ ನೀಡಬೇಕು. ಇದಕ್ಕೆ ಅಧ್ಯಾಪಕರ ಸ್ವಯಂ ಆಸಕ್ತಿಯೂ ಬೇಕಾಗಿದೆ ಎಂದು ಸಲಹೆ ನೀಡಿದರು.

ಪಿಯುಸಿ ಮತ್ತು ಕಾಲೇಜು ಹಂತಗಳಿಂದಲೇ ಮಾಧ್ಯಮ ಶಿಕ್ಷಣವನ್ನು ಅಳವಡಿಸಲು ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದೆ. ಸಂಘಟನೆಯ ಮೂಲಕ ಮುಂದಿನ ದಿನಗಳಲ್ಲಿ ಈ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಖಾಸಗಿ ಸಂಸ್ಥೆಗಳ ಮಾದರಿಯಲ್ಲಿ ಸರ್ಕಾರದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳೂ ತಮ್ಮ ಕಾರ್ಯಶೈಲಿಯನ್ನು ಉನ್ನತೀಕರಿಸಿಕೊಳ್ಳಬೇಕಾಗಿದೆ. ಮಾಧ್ಯಮ ಶಿಕ್ಷಣಕ್ಕೆ ಎದುರಾಗುತ್ತಿರುವ ಸಮಸ್ಯೆಯನ್ನು ಸರ್ಕಾರದ ಮುಂದಿಡುವ ಆಲೋಚನೆ ಬಹಳ ಹಿಂದಿನಿಂದ ನಡೆಯುತ್ತಿದ್ದೂ, ಹೊಸ ಪೀಳಿಗೆಯ ಅಧ್ಯಾಪಕರು ವೈಯಕ್ತಿಕ ಬೆಳವಣಿಗೆಯ ಜೊತೆಗೆ ಸಂವಹನ ಮತ್ತು ಮಾಧ್ಯಮ ಕ್ಷೇತ್ರದ ಅಭಿವೃದ್ದಿಗೂ ಒತ್ತು ನೀಡಬೇಕು ಎಂದು ತಿಳಿಸಿದರು.

Also read: ರಾಷ್ಟ್ರೀಯ ಸ್ಪರ್ಧೆಯಲ್ಲಿ ಮಹಿಷಿ ವಂಶರಾಮ ಭಟ್ಟರಿಗೆ ಚಿನ್ನ

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಮಾತನಾಡಿ, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ರಾಜ್ಯ ಸರ್ಕಾರ ತರಲು ಯೋಚಿಸುತ್ತಿರುವ ರಾಜ್ಯ ಶಿಕ್ಷಣ ನೀತಿಯಲ್ಲಿ ಯಾವುದೇ ನೀತಿ ಅನುಷ್ಠಾನಕ್ಕೆ ಬಂದರೂ ವೃತ್ತಿ ಮತ್ತು ಅವಕಾಶಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ನುಡಿದರು.

ಪ್ರಸ್ತುತ ಮಾಧ್ಯಮ ಶಿಕ್ಷಣ ಹಾಗೂ ಅಧ್ಯಾಪಕರಲ್ಲಿ ಮಾಧ್ಯಮ ಪಠ್ಯ ಮತ್ತು ಉದ್ಯೋಗದ ಕುರಿತಾಗಿರುವ ಚಿಂತನ ಮಂಥನ ಕಾರ್ಯಕ್ರಮವಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ಬದಲಾವಣೆಯನ್ನು ಗುರುತಿಸಿ, ನಿರಂತರ ಕಲಿಕೆಗೆ ಅವಕಾಶ ಒದಗಿಸುವುದು ಮುಖ್ಯ. ಜೊತೆಗೆ ಸಂಘಟನೆಯನ್ನು ಬಲಪಡಿಸಲು ಸಾಧ್ಯವಾಗುವುದು ಎಂದರು.

ಪಾಠ ಮಾಡುವುದಕ್ಕೆ ಅಧ್ಯಾಪಕರು ಸೀಮಿತವಾಗದೆ ಮಾಧ್ಯಮ ಶಿಕ್ಷಣಕ್ಕೆ ಅಗತ್ಯವಿರುವ ಪಠ್ಯಪುಸ್ತಕ ಸಿದ್ಧಪಡಿಸಲು ಆದ್ಯತೆ ನೀಡಬೇಕು. ಪತ್ರಿಕೋದ್ಯಮಕ್ಕೆ ಪ್ರತ್ಯೇಕ ಪಠ್ಯಕ್ರಮವಿದ್ದರೆ ವಿದ್ಯಾರ್ಥಿಗಳ ಕಲಿಕೆಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.
Kalahamsa Infotech private limitedಹಿರಿಯ ಪ್ರಾಧ್ಯಾಪಕರಾದ ಪ್ರೊ. ಪುಟ್ಟಸ್ವಾಮಿ, ಪ್ರೊ. ಓಂಕಾರಗೌಡ ಕಾಕಡೆ, ಪ್ರೊ. ಶೈಲಶ್ರೀ, ಪ್ರೊ. ಮಮತಾ, ಪ್ರೊ. ಸ್ವಪ್ನಾ, ಪ್ರೊ. ಚಂದೂನವರ, ಪ್ರೊ. ತೇಜಸ್ವಿ ನವಿಲೂರು, ಪ್ರೊ. ಸತೀಶಕುಮಾರ, ಪ್ರೊ. ಶಿವಕುಮಾರ ಕಣಸೋಗಿ, ಡಾ. ಭಾಸ್ಕರ್ ಹೆಗಡೆ, ಡಾ. ವಾಹಿನಿ, ಡಾ. ರಾಜೇಶ್ವರಿ, ಡಾ.ಬಿ.ಟಿ. ಮುದ್ದೇಶ, ಡಾ. ಸೀಬಂತಿ ಪದ್ಮನಾಭ ಸೇರಿದಂತೆ ರಾಜ್ಯದ ವಿವಿಧ ಕಾಲೇಜುಗಳ ಅಧ್ಯಾಪಕರು ಭಾಗವಹಿಸಿದ್ದರು. ಡಾ.ಟಿ. ಶಾರದಾ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4

  

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರೀಯ ಸ್ಪರ್ಧೆಯಲ್ಲಿ ಮಹಿಷಿ ವಂಶರಾಮ ಭಟ್ಟರಿಗೆ ಚಿನ್ನ

Next Post

ನಾಲ್ವರು ಭಯೋತ್ಪಾದಕರ ಹೆಡೆಮುರಿ ಕಟ್ಟಿದ ಸೇನೆ | ಅಪಾರ ಶಸ್ತ್ರಾಸ್ತ್ರ ಸೀಜ್

kalpa News

kalpa News

Next Post
ಸೇನೆಗಾಗಿ ರಾಹುಲ್ ಗಾಂಧಿ ಕ್ಷೇತ್ರದಲ್ಲಿ ಮೋದಿ ಸರ್ಕಾರ ತಯಾರಿಸಲಿದೆ ಅತ್ಯಾಧುನಿಕ ಶಸ್ತ್ರಾಸ್ತ್ರ!

ನಾಲ್ವರು ಭಯೋತ್ಪಾದಕರ ಹೆಡೆಮುರಿ ಕಟ್ಟಿದ ಸೇನೆ | ಅಪಾರ ಶಸ್ತ್ರಾಸ್ತ್ರ ಸೀಜ್

Leave a Reply Cancel reply

Your email address will not be published. Required fields are marked *

No Result
View All Result
Culture & Tradition Shine as Rudraksham Marks Milestone Achievement
English Articles

Culture & Tradition Shine as Rudraksham Marks Milestone Achievement

by kalpa News
July 8, 2026
0

Kalpa Media House  |  Bengaluru  | The rich rhythmic heritage of Kerala took center stage in the city as the...

Read moreDetails
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL