No Result
View All Result
PCCF Kumar Pushkar Warns Human Intolerance Fueling Biodiversity Crisis
English Articles

PCCF Kumar Pushkar Warns Human Intolerance Fueling Biodiversity Crisis

by ಕಲ್ಪ ನ್ಯೂಸ್
May 15, 2026
0

Kalpa Media House  |  Shankaraghatta  | Warning of a volatile future where "one species stands against all others," Karnataka’s Principal...

Read moreDetails
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
  • Advertise With Us
  • Grievances
  • About Us
  • Contact Us
Friday, May 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮ ಪರಿಷ್ಕರಿಸಿ: ಡಾ. ಧನಂಜಯ ಸರ್ಜಿ ಒತ್ತಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 13, 2025
in ಬೆಂಗಳೂರು ನಗರ
0
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮ ಪರಿಷ್ಕರಿಸಿ: ಡಾ. ಧನಂಜಯ ಸರ್ಜಿ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಪದವಿ ಪಠ್ಯಕ್ರಮಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಸಮರ್ಪಕವಾದ ವಿಷಯಗಳು ಒಳಗೊಂಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರದ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾದರು ಆಯ್ಕೆಯಾಗುವ ಅಭ್ಯರ್ಥಿಗಳು ಅತಿವಿರಳ ಹಾಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಗುಣವಾಗಿ ರಾಜ್ಯದ ಪದವಿ ಪಠ್ಯಕ್ರಮಗಳನ್ನು ಪರಿಷ್ಕರಣೆ ಮಾಡುವಂತೆ ಸದನದಲ್ಲಿ ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ #Dr. Dhananjaya Sarji ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ #Minister M C Sudhakar ಅವರಿಗೆ ಮನವಿ ಮಾಡಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಳ್ಳೆಯ ಅಂಕಗಳನ್ನು ತೆಗೆದು ಸರ್ಕಾರಿ ಕೆಲಸಗಳನ್ನು ತೆಗೆದುಕೊಳ್ಳಬೇಕೆಂದು ಲಕ್ಷಾಂತರ ಅಭ್ತರ್ಥಿಗಳು ಕನಸು ಕಂಡಿರುತ್ತಾರೆ, ಆ ಕನಸನ್ನು ನನಸು ಮಾಡಿಕೊಳ್ಳಲು ಸುಮಾರು ಹಣವನ್ನು ಖರ್ಚು ಮಾಡಿ ಬೆಂಗಳೂರು, ವಿಜಯಪುರ, ಧಾರವಾಡದಂತಹ  ದೊಡ್ಡ ದೊಡ್ಡ ನಗರಗಳಲ್ಲಿ ಕೋಚಿಂಗ್ ಸೇರಿಕೊಂಡು ಹಗಲು ರಾತ್ರಿ ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ನಮ್ಮ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಿ ಎ, ಬಿ ಎಸ್ ಸಿ, ಬಿ ಕಾಂ ಪದವೀಧರ ಪಠ್ಯ ಕ್ರಮ ಮತ್ತು ಯುಪಿಎಸ್ ಸಿ ಮತ್ತು ಎಸ್ ಎಸ್ ಸಿ ಮತ್ತು ಬ್ಯಾಂಕಿಂಗ್, ರೈಲ್ವೇಸ್ , ಕೆಪಿಎಸ್ ಸಿ, ಕೆಇಎ, ಮುಂತಾದ ರಾಜ್ಯ ಹಾಗೂ ಕೇಂದ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಪಠ್ಯಕ್ರಮದ ನಡುವೆ ಸ್ಪಷ್ಟವಾದ ವ್ಯತ್ಯಾಸವಿದೆ. ನಮ್ಮ ಪದವಿಪೂರ್ವ ಪಠ್ಯಕ್ರಮವು ಮುಖ್ಯವಾಗಿ ಶೈಕ್ಷಣಿಕ ಮತ್ತು ಸಿದ್ದಾಂತಧಾರಿತವಾಗಿದ್ದು ಸ್ಪರ್ಧಾತ್ಮಕ ಪರೀಕ್ಷೆಗಳು ಮಾನಸಿಕ ಸಾಮರ್ಥ್ಯ, ತಾರ್ಕಿಕತೆ ಪ್ರಚಲಿತ ಘಟನೆಗಳು ಇಂಗ್ಲೀಷ್ ವ್ಯಾಕರಣ ಹಾಗೂ ಕಂಪ್ಯೂಟರ್ ಜ್ಞಾನವನ್ನು ಕೇಳುತ್ತೇವೆ- ಇವುಗಳಲ್ಲಿ ಯಾವುದೂ ನಮ್ಮ ಪ್ರಸ್ತುತ ಪದವಿ ಪಠ್ಯಕ್ರಮದಲ್ಲಿ ಸಮರ್ಪಕವಾಗಿ ಒಳಗೊಂಡಿಲ್ಲ ಎಂದು ಹೇಳಿದರು.
ಈ ವ್ಯತ್ಯಾಸದಿಂದ ಕರ್ನಾಟಕದ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಬ್ಯಾಂಕಿಂಗ್ ಎಸ್ ಎಸ್ ಸಿ ಹಾಗೂ ಕೇಂದ್ರ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಕೇಂದ್ರ ಸರ್ಕಾರಿ ಹುದ್ದೆಗಳಲ್ಲಿ ಸೇರುವ ಪ್ರಮಾಣ ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ರಾಜ್ಯಗಳಿಗಿಂತ ತುಂಬಾ ಕಡಿಮೆ ಇರಲು ಪ್ರಮುಖ ಕಾರಣವಾಗಿದೆ.

2024ರಲ್ಲಿ ನಡೆದ ಎಸ್ ಎಸ್ ಸಿ ಪರೀಕ್ಷೆಯಲ್ಲಿ  ದೆಹಲಿಯ 589, ಹರಿಯಾಣದ 292, ತಮಿಳುನಾಡಿನ 119, ಬಿಹಾರದ 80 ಅಭ್ಯರ್ಥಿಗಳು ಆಯ್ಕೆಯಾಗಿರುತ್ತಾರೆ. ಆದರೆ ಕರ್ನಾಟಕದಿಂದ ಕೇವಲ 40 ಅಭ್ತರ್ಥಿಗಳು ಮಾತ್ರ ಆಯ್ಕೆಯಾಗಿರುತ್ತಾರೆ.

ಗ್ರೂಪ್-ಬಿ ಹುದ್ದೆಗಳಲ್ಲಿ 180 ಅಭ್ಯರ್ಥಿಗಳು ಗ್ರೂಪ-ಸಿ ಯಲ್ಲಿ 410 ಅಭ್ಯರ್ಥಿಗಳು ಒಟ್ಟು 590 ಅಭ್ಯರ್ಥಿಗಳು  ಕರ್ನಾಟಕದಿಂದ ಆಯ್ಕೆಯಾದರೆ ಉತ್ತರಪ್ರದೇಶದಲ್ಲಿ ಗ್ರೂಪ್-ಬಿಯಲ್ಲಿ 890ಮತ್ತು ಗ್ರೂಪ್-ಸಿಯಲ್ಲಿ 1580 ಒಟ್ಟು 2,470 ಅಭ್ಯರ್ಥಿಗಳು, ಬಿಹಾರದಲ್ಲಿ ಗ್ರೂಪ್-ಬಿಯಲ್ಲಿ 720 ಮತ್ತು ಗ್ರೂಪ್-ಸಿಯಲ್ಲಿ 1320 ಒಟ್ಟು 2,040ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ, ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಿಂದ ಅತಿ ಕಡಿಮೆ ಅಭ್ಯರ್ಥಿಗಳು ಆಯ್ಕೆಯಾಗುತ್ತಾರೆ. ಅಂಕಿಅಂಶಗಳ ಪ್ರಕಾರ ಕರ್ನಾಟಕ ಸುಮಾರು 6570 ಹುದ್ದೆಗಳನ್ನು ಕಳೆದುಕೊಂಡಿದೆ. ಯುಪಿಎಸ್ ಸಿ ಪರೀಕ್ಷೆಯಲ್ಲು ಸಹ ಕರ್ನಾಟಕದಿಂದ 20ಜನ ಮಾತ್ರ ಆಯ್ಕೆಯಾಗಿದ್ದಾರೆ.

ಒಂದು ಅಂಕಿ ಅಂಶ ಹೇಳಬೇಕಾದರೆ ಕೇಂದ್ರದ ಗ್ರೂಪ್ ಬಿ ಮತ್ತು ಸಿ ನೇಮಕಾತಿಗಳಲ್ಲಿ 2022ರಲ್ಲಿ 20,000 ಹುದ್ದೆ, 2023ರಲ್ಲಿ 7,500 ಹುದ್ದೆ, 2024ರಲ್ಲಿ 17,727 ಹುದ್ದೆ, 2025ರಲ್ಲಿ14,582 ಹುದ್ದೆ ಸೃಷ್ಟಿಯಾಗಿವೆ.
ಇದರ ಪ್ರಕಾರ ಕರ್ನಾಟಕದಲ್ಲಿ ವರ್ಷಕ್ಕೆ ಸೃಷ್ಟಿಯಾಗುವ ಹುದ್ದೆಗಳ ಸಂಖ್ಯೆ 2000 ಆಗಿದ್ದು, ಕೇಂದ್ರದಲ್ಲಿ ಅತೀ ಹೆಚ್ಚು ಹುದ್ದೆಗಳು ಸೃಷ್ಟಿಯಾಗುತ್ತಿರುವುದರಿಂದ ರಾಜ್ಯದ ಅಭ್ಯರ್ಥಿ ಗಳಿಗೆ ಸ್ಪರ್ಧೆ ಮಾಡಲಾಗದೆ ಇಲ್ಲಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಇದಕ್ಕೆ ನಮ್ಮ ಪದವಿ ಪಠ್ಯ ಕ್ರಮ ಮತ್ತು ಪರೀಕ್ಷಾ ಕ್ರಮ ವ್ಯತ್ಯಾಸವಿರುವುದು ಸ್ಪಷ್ಟವಾಗಿ ಕಾಣುತ್ತದೆ. ಲಕ್ಷಾಂತರ ಅಭ್ಯರ್ಥಿಗಳು ಸರ್ಕಾರಿ ಕೆಲಸಕ್ಕೆ ಸೇರಬೇಕು ಎಂಬ ಮಹಾದಾಸೆಯಿಂದ ಹಗಲಿರುಳೆನ್ನೆದೆ ವ್ಯಾಸಂಗ ಮಾಡುತ್ತಿರುತ್ತಾರೆ, ಆದರೆ ಕೆಪಿಎಸ್ ಸಿ ಹಲವು ಬಾರಿ 2 ರಿಂದ 4 ವರ್ಷಗಳವರೆಗೆ ವಿಳಂಬವಾಗುತ್ತವೆ, ಇದರಿಂದ ಅನೇಕ ಅರ್ಹ ಅಭ್ಯರ್ಥಿಗಳು ವಯೋಮಿತಿಯನ್ನು ದಾಟಿ ನ್ಯಾಯ ಸಮ್ಮತ ಅವಕಾಶವನ್ನೆ ಕಳೆದುಕೊಳ್ಳುತ್ತಾರೆ. ಇದಕ್ಕೆ ವಿರುದ್ದವಾಗಿ ಸ್ಟಾಪ್ ಸೆಲಕ್ಷನ್ ಕಮಿಷನ್ ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು 8 ರಿಂದ 12 ತಿಂಗಳೊಳಗೆ ಪೂರ್ಣಗೊಳಿಸಿ ಸಮಯಕ್ಕೆ ತಕ್ಕಂತೆ ಉದ್ಯೋಗವಕಾಶಗಳನ್ನು ಒದಗಿಸುತ್ತಿದೆ. ಆದ್ದರಿಂದ ವಿಳಂಬ ಅವಕಾಶ ನೀಡದೆ ಅಭ್ಯರ್ಥಿಗಳಿಗೆ ಉಪಯೋಗವಾಗುವಂತೆ ಕ್ರಮ ವಹಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು.

ಈ ವೇಳೆ ಸದನದ ಇತರೆ ಸದಸ್ಯರು ಕೂಡ ಧ್ವನಿಗೂಡಿಸಿ ಇದಕ್ಕೆ ಶಿಕ್ಷಣ ತಜ್ಞರ ಸಮಿತಿ ರಚನೆ ಮಾಡಬೇಕು ಎಂದು ಹೇಳಿದರು.

ಪಠ್ಯ ಕ್ರಮ ಬದಲಾಯಿಸಲು ಸಲಹೆ ನೀಡಿದ ಡಾ.ಸರ್ಜಿ, ಈ ನಿಟ್ಟಿನಲ್ಲಿ ಪಠ್ಯಕ್ರಮವನ್ನು ತಿದ್ದುಪಡಿ ಮಾಡಿ ಪದವಿ ಹಂತದಲ್ಲೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ದತೆ ನಡೆಸಲು ಸಹಾಯವಾಗುವಂತೆ ರಾಜ್ಯ ಪದವಿ ಪಠ್ಯಕ್ರಮಗಳಲ್ಲಿ ಮಾನಸಿಕ ಸಾಮರ್ಥ್ಯ ತಾರ್ಕಿಕ ಸಾಮಾರ್ಥ್ಯ ಇಂಗ್ಲೇಷ್ ವ್ಯಾಕರಣ ಪ್ರಚಲಿತ ಘಟನೆಗಳು ಸಾಮಾನ್ಯ ಜ್ಞಾನ ಮತ್ತು ಕಂಪ್ಯೂಟರ ಜ್ಞಾನ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷಾ  ಸಿದ್ದತಾ ಘಟಕಗಳನ್ನು ಸೇರಿಸುವುದು ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ  ಸ್ಪರ್ಧಾತ್ಮಕ ಪರೀಕ್ಷಾ  ಮಾರ್ಗದರ್ಶನ ಕೇಂದ್ರಗಳನ್ನು ಸ್ಥಾಪಿಸುವುದು. ನೇಮಕಾತಿ ವೇಳಾಪಟ್ಟಿಯನ್ನು ಸುಗಮಗೊಳಿಸಲು, ನೇಮಕಾತಿ ವಿಳಂಬದಿಂದ ಹಾನಿಗೊಳಗಾದ ಅಭ್ಯರ್ಥಿಗಳಿಗೆ ವಯೋ ಮಿತಿಯಲ್ಲಿನ ಸಡಿಲಿಕೆ ನೀಡಲು ಮತ್ತು ಸಂಪೂರ್ಣ ಪಾರದರ್ಶಕತೆಯನ್ನು ಖಾತ್ರಿ ಪಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು, ಇದು ಕೇವಲ ಶಿಕ್ಷಣದ ವಿಷಯವಲ್ಲ ಉದ್ಯೋಗ ಅವಕಾಶ ಮತ್ತು ಕರ್ನಾಟಕದ ಯುವಕರ ಭವಿಷ್ಯದ ಪ್ರಶ್ನೆಯಾಗಿದೆ, ಆದ್ದರಿಂದ ಸರ್ಕಾರ ತಕ್ಷಣ ನಿರ್ಧರಾತ್ಮಕ ಕ್ರಮ ಕೈಗೊಳ್ಳಬೇಕೆಂದು ಸದನದಲ್ಲಿ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಯಿಸಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್, ರಾಜ್ಯದ ಸಾರ್ವಜನಿಕ ವಿಶ್ವವಿದ್ಯಾಲಯಗಳು ಸ್ವಾಯತ್ತ ಸಂಸ್ಥೆಗಳಾಗಿದ್ದು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ, 2000ರ ಪ್ರಕರಣ 33ರಲ್ಲಿ ವಿಶ್ವವಿದ್ಯಾಲಯಗಳಿಗೆ ಪ್ರದತ್ತವಾದ ಅಧಿಕಾರದನ್ವಯ ಆಯಾ ವಿಶ್ವವಿದ್ಯಾಲಯಗಳು ನಡೆಸುವ ಸ್ನಾತಕ/ಸ್ನಾತಕೋತ್ತರ ಕೋರ್ಸ್‌ಗಳಿಗೆ Board of Studies (ಅಧ್ಯಯನ ಮಂಡಲಿ) ಪಠ್ಯಕ್ರಮವನ್ನು ಸಿದ್ಧಪಡಿಸಲು ಅವಕಾಶ ಕಲ್ಪಿಸಲಾಗಿದೆ. ಅಧ್ಯಯನ ಮಂಡಳಿಯಲ್ಲಿ ಉದ್ಯಮ ಮತ್ತು ಪರಿಣಿತ ವಲಯದ ಸಂಪನ್ಮೂಲ ವ್ಯಕ್ತಿಗಳನ್ನು ಒಳಗೊಂಡಂತೆ ವಿಷಯ ತಜ್ಞರು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಗುಣಮಟ್ಟಕ್ಕನುಗುಣವಾಗಿ ಪಠ್ಯಕ್ರಮಗಳನ್ನು ರೂಪಿಸಿಕೊಳ್ಳುತ್ತಿವೆ.

ಯುಜಿಸಿಯು ರಾಜ್ಯದ ವಿಶ್ವವಿದ್ಯಾಲಯಗಳಿಗೆ ಪಠ್ಯಕ್ರಮ ರಚನೆಗೆ ಮಾರ್ಗಸೂಚಿಗಳನ್ನು ಒದಗಿಸಿದ್ದು, ಇದರಲ್ಲಿ, lectures, tutorials, laboratory work, field work, project work, and other components ಗಳನ್ನೂ ವಿವರಿಸಿದ್ದು, ಈ ಪಠ್ಯಕ್ರಮಗಳ ರಚನೆಯು ಸಮಗ್ರ ಶಿಕ್ಷಣ, ಪರಿಕಲ್ಪನಾತ್ಮಕ ತಿಳುವಳಿಕ, ಸೃಜನಶೀಲತೆ ಮತ್ತು ವಿಮರ್ಶಾತ್ಮಕ ಚಿಂತನೆ, ನೀತಿಶಾಸ್ತ್ರ ಮತ್ತು ಮಾನವ ಮತ್ತು ಸಾಂವಿಧಾನಿಕ ಮೌಲ್ಯಗಳು, ಜೀವನ ಕೌಶಲ್ಯಗಳು, ವೈವಿಧ್ಯತೆ ಮತ್ತು ಭೌಗೋಳಿಕ ರಚನೆ ಆಧಾರದಲ್ಲಿ ಕಲಿಕೆಯ ಉದ್ದೇಶಗಳನ್ನು ಒಳಗೊಂಡಿರುತ್ತದೆ.
ರಾಜ್ಯ ಶಿಕ್ಷಣ ನೀತಿ ಆಯೋಗವು ಸರ್ಕಾರಕ್ಕೆ ನೀಡಿದ ಮಧ್ಯಂತರ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಸರ್ಕಾರದ ಆದೇಶ ಸಂಖ್ಯೆ: ಇಡಿ 166 ಯುಎನ್‌ಇ 2023, ದಿನಾಂಕ: 08.05.2024ರಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಪಠ್ಯ ಕ್ರಮದಲ್ಲಿ ಈಗಾಗಲೇ ಕೆಲವು ಬದಲಾವಣೆಗಳನ್ನು ತರಲಾಗಿದ್ದು, ಪಠ್ಯಕ್ರಮ ರಚನೆಯಲ್ಲಿನ ಬದಲಾವಣೆಯ ಮೂಲಕ ಆಳವಾದ ಜ್ಞಾನ, ಔದ್ಯಮಿಕ ಆಧಾರಿತ ಕೋರ್ಸ್‌ಗಳನ್ನು ಮತ್ತು ಪ್ರಾದೇಶಿಕ ನಿರ್ದಿಷ್ಟ ವಿಷಯಗಳನ್ನು ವಿಶ್ವವಿದ್ಯಾಲಯಗಳ ಅಧ್ಯಯನ ಮಂಡಳಿಗೆ (Board of Studies) ಸ್ಥಾಯತ್ತತೆಯನ್ನು ನೀಡುವುದನ್ನು ಕೇಂದ್ರೀಕರಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗುವಂತಹ ರಾಜ್ಯ ಶಿಕ್ಷಣ ನೀತಿಯಲ್ಲಿ  Compulsory Skilled Course ಗಳನ್ನೂ ಮತ್ತು Elective Paper ಗಳನ್ನು ಪರಿಚಯಿಸಿರುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ Main Subjects ಒಟ್ಟಿಗೆ Environmental Science, Constitutions Values, Skilled base Courses ( ಕಲಿಕೆ ಮತ್ತು ಕೌಶಲ್ಯ  ) Apprenticeship-embedded degree courses ಗಳನ್ನು ಸಹ ಪಠ್ಯಕ್ರಮದ ಭಾಗವಾಗಿ ಪರಿಗಣಿಸಲಾಗಿದೆ. Elective Subjects ಗಳಿಂದ ವಿದ್ಯಾರ್ಥಿಗಳು ಒಂದು ವಿಷಯದಿಂದ ಮತ್ತೊಂದು ವಿಷಯ ಕಲಿಕೆಗೆ ಅವಕಾಶವನ್ನು ಕಲ್ಪಿಸಿರುವುದರಿಂದ, ಇದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚು ಸಹಕಾರಿಯಾಗಿರುತ್ತದೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreDr. Dhananjaya SarjiKannada NewsKannada News LiveKannada News OnlineKannada News WebsiteKannada WebsiteLatest News KannadaMinister M C SudhakarNews in KannadaNews Kannadaಬೆಂಗಳೂರುವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿಸಚಿವ ಎಂ.ಸಿ ಸುಧಾಕರ್
Share196Tweet123Send
Previous Post

ಸೊರಬ | ಅಖಂಡ ಭಾರತ ಸಂಕಲ್ಪ ದಿನ | ಪಟ್ಟಣದಲ್ಲಿ ಬೃಹತ್ ಪಂಜಿನ ಮೆರವಣಿಗೆ

Next Post

ಆಗಸ್ಟ್‌ 14 | ಸೊರಬದಲ್ಲಿ ಬಜರಂಗದಳ–ವಿಶ್ವ ಹಿಂದೂ ಪರಿಷತ್ ವತಿಯಿಂದ ಪಂಜಿನ ಮೆರವಣಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಗಸ್ಟ್‌ 14 | ಸೊರಬದಲ್ಲಿ ಬಜರಂಗದಳ–ವಿಶ್ವ ಹಿಂದೂ ಪರಿಷತ್ ವತಿಯಿಂದ ಪಂಜಿನ ಮೆರವಣಿಗೆ

ಆಗಸ್ಟ್‌ 14 | ಸೊರಬದಲ್ಲಿ ಬಜರಂಗದಳ–ವಿಶ್ವ ಹಿಂದೂ ಪರಿಷತ್ ವತಿಯಿಂದ ಪಂಜಿನ ಮೆರವಣಿಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಆಗುಂಬೆ | ವೃದ್ಧೆಯ ಕಟ್ಟಿಹಾಕಿ ರಾಬರಿ ಪ್ರಕರಣ | ನಾಲ್ವರು ಅಂದರ್, ಕದ್ದ ಮಾಲು ವಶಕ್ಕೆ

ಆಗುಂಬೆ | ವೃದ್ಧೆಯ ಕಟ್ಟಿಹಾಕಿ ರಾಬರಿ ಪ್ರಕರಣ | ನಾಲ್ವರು ಅಂದರ್, ಕದ್ದ ಮಾಲು ವಶಕ್ಕೆ

May 15, 2026
ಸಾಗರ | ಭೀಕರ ಅಪಘಾತ | ಬೈಕ್ ಸಂಪೂರ್ಣ ಭಸ್ಮ, ಯುವಕ ಸ್ಥಳದಲ್ಲೇ ಸಾವು!

ಸಾಗರ | ಭೀಕರ ಅಪಘಾತ | ಬೈಕ್ ಸಂಪೂರ್ಣ ಭಸ್ಮ, ಯುವಕ ಸ್ಥಳದಲ್ಲೇ ಸಾವು!

May 15, 2026
ಶಿವಮೊಗ್ಗ | ಮೇ 16-24 | ರಾಜ್ಯಮಟ್ಟದ ಅಂತರ್ ಜಿಲ್ಲಾ ಫುಟ್‍ಬಾಲ್ ಲೀಗ್ | MLC ಡಾ.ಧನಂಜಯ ಸರ್ಜಿ

ಶಿವಮೊಗ್ಗ | ಮೇ 16-24 | ರಾಜ್ಯಮಟ್ಟದ ಅಂತರ್ ಜಿಲ್ಲಾ ಫುಟ್‍ಬಾಲ್ ಲೀಗ್ | MLC ಡಾ.ಧನಂಜಯ ಸರ್ಜಿ

May 15, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
ದಿ ಕ್ಲೈಮೇಟ್ ಪ್ಲೆಡ್ಜ್ ನಿಂದ ಸಿ40 ಸಿಟೀಸ್ ಸಹಭಾಗಿತ್ವದಲ್ಲಿ ಭಾರತದ ಸರಕು ಸಾಗಣೆ ಹೆದ್ದಾರಿಗಳ ವಿದ್ಯುದ್ದೀಕರಣಕ್ಕೆ ಬ್ಲೂಪ್ರಿಂಟ್ ಬಿಡುಗಡೆ

ದಿ ಕ್ಲೈಮೇಟ್ ಪ್ಲೆಡ್ಜ್ ನಿಂದ ಸಿ40 ಸಿಟೀಸ್ ಸಹಭಾಗಿತ್ವದಲ್ಲಿ ಭಾರತದ ಸರಕು ಸಾಗಣೆ ಹೆದ್ದಾರಿಗಳ ವಿದ್ಯುದ್ದೀಕರಣಕ್ಕೆ ಬ್ಲೂಪ್ರಿಂಟ್ ಬಿಡುಗಡೆ

May 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL