ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕಾವಲ್ ಬೈರಸಂಧ್ರದಲ್ಲಿ ನಡೆಯುತ್ತಿರುವ ಗಲಭೆ ನಿಯಂಣತ್ರಣಕ್ಕೆ ತಂದು, ಪುಂಡರ ಹೆಡೆಮುರಿ ಕಟ್ಟಲು ರಾಜ್ಯ ಸರ್ಕಾರ ಪೊಲೀಸರಿಗೆ ಫುಲ್ ಪವರ್ ನೀಡಿದೆ.
ಈ ಕುರಿತಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದು, ಗಲಭೆ ನಿಯಂತ್ರಿಸಿ, ಪುಂಡರ ಹೆಡೆಮುರಿ ಕಟ್ಟಿ, ಶಾಂತಿ ನೆಲೆಸುವಂತೆ ಮಾಡಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ ನೀಡಲಾಗಿದೆ ಎಂದಿದ್ದಾರೆ.
ಇನ್ನು, ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಪೊಲೀಸರು 200 ಸುತ್ತು ಫೈರಿಂಗ್ ನಡೆಸಿದ್ದು, ಈ ವೇಳೆಯಲ್ಲಿ ಓರ್ವ ಬಲಿಯಾಗಿದ್ದಾನೆ ಎಂದು ಹೇಳಲಾಗಿದ್ದು, ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ. ಇದೇ ವೇಳೆ ಮೂವರ ಕಾಲಿಗೆ ಗುಂಡೇಟು ತಗುಲಿದೆ.
ಘಟನೆ ಕುರಿತಂತೆ ವಿದ್ಯುನ್ಮಾನ ಮಾಧ್ಯಮವೊಂದಕ್ಕೆ ಮಾತನಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಪರಿಸ್ಥಿತಿ ಕೈಮೀರುತ್ತಿದ್ದ ಹಿನ್ನೆಲೆಯಲ್ಲಿ ಗುಂಡು ಹಾರಿಸಬೇಕಾಯಿತು. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಇಡಿಯ ಪ್ರದೇಶದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಸ್ಥಳಕ್ಕೆ ಆಗಮಿಸುತ್ತಿದ್ದ ಪೊಲೀಸ್ ವಾಹನಗಳಿಗೆ ಮೊದಲು ಬಡಾವಣೆಯ ಒಳಕ್ಕೆ ಹೋಗಲು ಸಾಧ್ಯವಾಗದ ಕಾರಣ, ಘಟನಾ ಸ್ಥಳಕ್ಕೆ ನಡೆದುಕೊಂಡೇ ತೆರಳಬೇಕಾಯಿತು ಎಂದು ಆಯುಕ್ತರು ಹೇಳಿಕೆ ನೀಡಿದ್ದಾರೆ.
ಇಡಿಯ ಪ್ರದೇಶದಲ್ಲಿ ಭಾರೀ ಪೊಲೀಸ್ ನಿಯೋಜನೆ ಮಾಡಲಾಗಿದ್ದು, ಗರುಡ ಪಡೆ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದೆ.
Get In Touch With Us info@kalpa.news Whatsapp: 9481252093
Discussion about this post