ಕಲ್ಪ ಮೀಡಿಯಾ ಹೌಸ್ | ಬೆಂಗಳೂರು ಗ್ರಾಮಾಂತರ |
ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಾರ್ಯಕ್ರಮದಡಿ ಆಗಸ್ಟ್ 13 ರಿಂದ 15 ರವರೆಗೆ ಪ್ರತಿ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕಂತಿ ಇಲಾಖೆ ವತಿಯಿಂದ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು ಪ್ರದರ್ಶಿಸುವ ಮೂಲಕ ಜಿಲ್ಲಾದ್ಯಂತ “ಹರ್ ಘರ್ ತಿರಂಗಾ ಅಭಿಯಾನ”ಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರೇತರ ಸಂಘ ಸಂಸ್ಥೆಗಳ ಕಟ್ಟಡಗಳು ಹಾಗೂ ಸಾರ್ವಜನಿಕರು ಅವರವರ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಆಗಸ್ಟ್ 13 ರಿಂದ 15 ರವರೆಗೆ ಹಾರಿಸಲು ಸಿದ್ಧತೆ ಮಾಡಿಕೊಳ್ಳಬೇಕು. ತ್ರಿವರ್ಣ ಧ್ವಜದ ಶಿಷ್ಟಾಚಾರಕ್ಕೆ ಚ್ಯುತಿ ಬಾರದಂತೆ ಎಚ್ಚರಿಕೆ ವಹಿಸಬೇಕು. ಹಾನಿಗೀಡಾದ ಧ್ವಜವನ್ನು ಹಾರಿಸಬಾರದು ಎಂದು ಅವರು ಸೂಚನೆ ನೀಡಿದರು.
Also read: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆ: ಬಿಗಿ ಭದ್ರತೆ
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯು ದೇಶದ ಜನತೆಗೆ ಬಹಳ ವಿಶೇಷವಾಗಿದೆ. ಭಾರತ ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ತುಂಬಿದ ಶುಭ ಸಂದರ್ಭ ಇದಾಗಿದೆ. ಈ ಹಿನ್ನಲೆಯಲ್ಲಿ ಪ್ರತಿ ಮನೆ ಮನೆಯಲ್ಲಿಯೂ ರಾಷ್ಟ್ರಧ್ವಜಾರೋಣ ಮಾಡಬೇಕು ಎಂಬ ಉದ್ದೇಶದಿಂದ ಸರ್ಕಾರವು ಈ ಅಭಿಯಾನ ಹಮ್ಮಿಕೊಂಡಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ ಧ್ವಜಗಳು ಮಾರಾಟಕ್ಕೆ ಲಭ್ಯವಿದ್ದು, ಧ್ವಜ ಒಂದಕ್ಕೆ ರೂ.22 ಅನ್ನು ಪಾವತಿಸಿ ಧ್ವಜಗಳನ್ನು ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಖರೀದಿಸಿ ಅವುಗಳನ್ನು ಹಾರಿಸುವ ಮೂಲಕ ರಾಷ್ಟ್ರಪ್ರೇಮವನ್ನು ಮೆರೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ ಅವರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post