ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ಚಿತ್ರರಂಗದ ಹಿರಿಯ ನಟ, ಪದ್ಮಭೂಷಣ ಡಾ. ಅನಂತನಾಗ್ #Ananthnag ದಂಪತಿಗೆ ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ #Minister Pralhad Joshi ಅವರು ಹೋಳಿ ಹಬ್ಬದ ಶುಭಾಶಯ ಕೋರಿ ಸನ್ಮಾನಿಸಿ ಕುಶಲೋಪರಿ ವಿಚಾರಿಸಿದರು.
ನಟ ಅನಂತನಾಗ ಅವರ ಬೆಂಗಳೂರಿನ ನಿವಾಸಕ್ಕೆ ಇಂದು ಸೌಹಾರ್ದಯುತ ಭೇಟಿ ನೀಡಿದ ಸಚಿವರು ಅನಂತನಾಗ್ ಮತ್ತು ಗಾಯತ್ರಿ ಅನಂತನಾಗ ಅವರಿಗೆ ಶಾಲು ಹೊದಿಸಿ, ಸುಸ್ಥಿರ ಹಸಿರು ಇಂಧನಕ್ಕೆ ಕೊಡುಗೆ ಎನ್ನುವಂತೆ ಗಿಡ ನೀಡಿ ಅಭಿನಂದಿಸಿದರು. ದಂಪತಿಯ ಕುಶಲೋಪರಿ ವಿಚಾರಿಸಿದ ಸಚಿವರು ಪರಸ್ಪರ ಹೋಳಿ ಹಬ್ಬದ ಶುಭಾಶಯ ಕೋರಿದರು. ಅನಂತನಾಗ್ ಅವರ ಗೃಹದಲ್ಲಿ ನಿರ್ಮಿಸಿದ್ದ ಆರ್ಟ್ ಗ್ಯಾಲರಿ ವೀಕ್ಷಿಸಿ ಸಂತಸಪಟ್ಟರು ಜೋಶಿ.
Also read: ಯುವ ಸಮೂಹ ಕ್ರಿಯಾಶೀಲ ಕೌಶಲ್ಯತೆಯೊಂದಿಗೆ ಸದೃಡರಾಗಿ

ಪ್ರಸ್ತುತ ದಿನಮಾನದಲ್ಲಿ ಭಾರತದ ಅಭಿವೃದ್ಧಿಪರ ಓಟ, ದೇಶದ ವಿಶಿಷ್ಠ ಇತಿಹಾಸ ಹೀಗೆ ವಿಭಿನ್ನ ವಿಷಯಗಳ ಕುರಿತಂತೆ ಪರಸ್ಪರ ಮಾತುಕತೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಹೇಗೆ ಪರಿಣಾಮಕಾರಿ ಕೆಲಸ ಮಾಡುತ್ತಿದೆ ಎಂಬುದನ್ನು ಸಚಿವ ಜೋಶಿ ವಿವರಿಸಿದರು.
ಈ ವೇಳೆ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post