ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶಿವಮೊಗ್ಗದ ಪ್ರಧಾನಮಂತ್ರಿ ಜನಔಷಧಿ ಕೇಂದ್ರದಲ್ಲಿ ಇತರೆ ಔಷಧಿ ಮತ್ತು ಮಾತ್ರೆಗಳನ್ನು ಮಾರಾಟ ಮಾಡುತ್ತಿರುವ ವಿಷಯ ಗಮನಕ್ಕೆ ಬಂದಿದ್ದು, ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ಒತ್ತಾಯಿಸಿದರು.
ಬೆಂಗಳೂರಿನ ಬಜೆಟ್ ಅಧಿವೇಶನದಲ್ಲಿ ಈ ಕುರಿತು ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಶಿವಮೊಗ್ಗದ ಜನ ಔಷಧಿ #Janoushadhi ಕೇಂದ್ರದಲ್ಲಿ ಇತರೆ ಔಷಧಿಗಳು ಮಾರಾಟ ಮಾಡುತ್ತಿರುವ ಬಗ್ಗೆ ಜಿಲ್ಲಾ ಔಷಧಿ ವ್ಯಾಪಾರಗಳ ಸಂಘ ಹಾಗೂ ಜನೌಷಧಿ ವ್ಯಾಪಾರಗಳು ಪರಸ್ಪರ ಒಬ್ಬರ ಮೇಲೊಬ್ಬರು ಆರೋಪಿಸಿಕೊಳ್ಳುತ್ತಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೊಂದು ಪರಿಹಾರ ಕಲ್ಪಿಸಿ ಕೊಡಬೇಕೆಂಬುವ ಹಾಗೂ ಜನೌಷಧಿ ಕೇಂದ್ರಗಳನ್ನು ನಂಬಿ ಔಷಧಿ ಖರೀದಿಸುವ ಸಾಮಾನ್ಯರಿಗೆ ನ್ಯಾಯ ಒದಗಿಸಬೇಕೆಂಬುವ ಆಶಯದಿಂದ ಮಾನ್ಯ ಶಾಸಕರು ಸಾರ್ವಜನಿಕ ಮಹತ್ವದ ಜರೂರು ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿದರು.
ಪ್ರಧಾನಮಂತ್ರಿ ಜನಔಷಧಿ ಕೇಂದ್ರದ ಪ್ರಮುಖ ಉದ್ದೇಶವೆಂದರೆ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದೆ, ಬ್ರ್ಯಾಂಡ್ ಔಷಧಿಗಳಿಗಿಂತ ತುಂಬಾ ಕಡಿಮೆ ದರದಲ್ಲಿ ಬಡವರಿಗೆ ಹಾಗೂ ಅಗತ್ಯತೆ ಇರುವವರಿಗೆ ಸುಲಭವಾಗಿ ಔಷಧಿಗಳನ್ನು ಲಭ್ಯವಾಗಿಸುವುದೆ ಮೂಲ ಉದ್ದೇಶವಾಗಿರುತ್ತದೆ.
Also read: ರಾಜ್ಯದ ಜನತೆಗೆ ಕರೆಂಟ್ ಶಾಕ್ ! ವಿದ್ಯುತ್ ದರ ಏರಿಕೆ | ಎಷ್ಟು ರೂ. ಹೆಚ್ಚಳ?
ಕೇಂದ್ರ ಸರ್ಕಾರದ ಜನೌಷದಿ ಕೇಂದ್ರಗಳಲ್ಲಿ 2047 ವಿಧದ ಔಷಧಿಗಳು ಮತ್ತು 300 ಶಾಸ್ತ್ರ ಚಿಕಿತ್ಸೆ ವಸ್ತುಗಳು ಸಿಗುವಂತಿದ್ದು, ಕರ್ನಾಟಕ ರಾಜ್ಯದಲ್ಲಿ 950ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳಿದ್ದು, ಶಿವಮೊಗ್ಗ ನಗರದಲ್ಲಿ 14 ಜನೌಷದಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ, ಶಿವಮೊಗ್ಗದ ಜನೌಷಧಿ ಕೇಂದ್ರಗಳು ಜನರಿಕ್ ಔಷಧಿಗಳನ್ನು ತಂದು ಜನ ಔಷಧಿ ಬೆಲೆಗೆ ಸಮಾನವಾಗಿ 5-10ರೂ ಲಾಭದಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ತಿಳಿಸಿ,ಬಿಪಿಪಿಎಐ ಸಂಸ್ಥೆ ಪಿಎಂಡಿಐ ರೂಪಾಂತರ ಹೊಂದಿ ನಿಯಮಾವಳಿಯಲ್ಲಿ ಹಲವಾರು ಮಾರ್ಪಾಡುಗಳನ್ನು ಮಾಡಿದ್ದು ಅದರಲ್ಲಿ ಜನರಿಕ್ ಔಷಧಿಗಳನ್ನು ಮಾರಬಾರದೆಂಬ ನಿಯಮವು ಸೇರಿದೆ, ಅದಾಗಿಯೂ ಜನ ಔಷಧಿ ಕೇಂದ್ರಗಳಲ್ಲಿ ಭಾರತೀಯ ಜನ ಔಷಧಿ ಪರಿ ಯೋಜನೆ ಮೋಹರಿಲ್ಲದೆ ಅಸಂಖ್ಯಾತ ಔಷಧಿಗಳನ್ನು ಅವ್ಯಾಹತವಾಗಿ ಮಾರಾಟ ಮಾಡುತ್ತಿದ್ದು, ಇದು ಜನ ಔಷಧಿ ಕೇಂದ್ರಗಳು ಸಂಬಂಧಪಟ್ಟ ಪ್ರಾಧಿಕಾರದ ಜೊತೆ ಮಾಡಿಕೊಂಡ ಒಪ್ಪಂದದ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ ಎಂಬ ಮಾಹಿತಿಯನ್ನು ಶಾಸಕರು ತಿಳಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ #PM Narendra Modi ಅವರ ಕನಸಿನ ಕೂಸಾದ ಜನೌಷಧಿ ಕೇಂದ್ರವನ್ನು ಪ್ರಾರಂಭದಲ್ಲಿ ಇದ್ದಂತೆ ಮೂಲ ರೂಪದಲ್ಲೇ ಉಳಿಸಿಕೊಳ್ಳಬೇಕು ಹಾಗೂ 2027ರ ಒಳಗೆ ದೇಶದಲ್ಲಿ 25,000 ಜನೌಷದಿ ಕೇಂದ್ರಗಳನ್ನು ತೆರೆಯುವ ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿ,ಕೇಂದ್ರ ಸರ್ಕಾರ ರೂಪಿಸಿರುವ ನಿಯಮಾವಳಿಯಲ್ಲಿಯೇ ಜನೌಷಧಿಗಳು ಕಾರ್ಯನಿರ್ವಹಿಸುವಂತಾಗಬೇಕು. ನಿಯಮಬಾಹಿರವಾಗಿ ಜನೌಷದಿ ಕೇಂದ್ರಗಳಲ್ಲಿ ಜನರಿಕ್ ಔಷಧಿಗಳನ್ನು ತಂದು ಜನೌಷದಿ ಬೆಲೆಗೆ ಮಾರಾಟ ಮಾಡುತ್ತಿರುವ ಕುರಿತು, ರಾಜ್ಯ ಸರಕಾರ ನಿಗಾ ವಹಿಸಿ ಮಾನ್ಯ ಪ್ರಧಾನಮಂತ್ರಿ ಅವರ ಅತ್ಯುತ್ತಮ ಕಾರ್ಯಕ್ರಮವನ್ನು ಬುಡಮೇಲು ಮಾಡುತ್ತಿರುವ ಎಲ್ಲಾ ಜನ ಔಷಧಿ ಕೇಂದ್ರಗಳ ಮೇಲೆ ರಾಜ್ಯದಲ್ಲಿ ನೋಡಿಲ್ ಅಧಿಕಾರಿಗಳು ನಿರಂತರವಾಗಿ ದಾಳಿ ನಡೆಸಿ ಯಾರು ಜನ ಔಷಧಿ ಕೇಂದ್ರಗಳಲ್ಲಿ ಬೇರೆ ಬೇರೆ ಔಷಧಿಗಳನ್ನು ಮಾರುತ್ತಿದ್ದಾರೋ ಅಂಥವರ ಮೇಲೆ ಕಾನೂನು ಕ್ರಮವನ್ನು ಜರಗಿಸಿ ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಶೂನ್ಯ ವೇಳೆಯಲ್ಲಿ ಮಾನ್ಯ ಆರೋಗ್ಯ ಸಚಿವರನ್ನು, ಶಾಸಕರು ಒತ್ತಾಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post