ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಐಎಸ್’ಎಲ್ ಕಾರ್ಖಾನೆಯನ್ನು VISL ಮುಚ್ಚುವ ನಿರ್ಧಾರ ಕೈಬಿಡುವಂತೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಬೆಂಗಳೂರಿಗೂ ತಲುಪಿದ್ದು, ಸಾವಿರಾರು ಕಾರ್ಮಿಕರು ಹಾಗೂ ಕುಟುಂಬಸ್ಥರು ಧರಣಿ ನಡೆಸುತ್ತಿದ್ದಾರೆ.
ಭದ್ರಾವತಿಯಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳಿದ ಸಾವಿರಾರು ಮಂದಿ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್’ವರೆಗೂ ಬೃಹತ್ ರ್ಯಾಲಿ ನಡೆಸಿದರು.
ಫ್ರೀಡಂ ಪಾರ್ಕ್’ನಲ್ಲಿ ಧರಣಿ ನಡೆಸಿರುವ ಕಾರ್ಮಿಕರು ಯಾವುದೇ ಕಾರಣಕ್ಕೂ ವಿಐಎಸ್’ಎಲ್ ಕಾರ್ಖಾನೆಯನ್ನು ಮುಚ್ಚದಂತೆ ಘೋಷಣೆಗಳನ್ನು ಕೂಗಿದರು.
Also read: ಗಮನಿಸಿ! ಫೆ.16ರಂದು ಸೊರಬದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ
ಇದಕ್ಕೆ ಪೂರಕವಾಗಿ ಭದ್ರಾವತಿಯ ದಯಾನಂದ್ ಎಂಬ ಯುವಕ ಬೆಂಗಳೂರಿನವರೆಗೂ ಪಾದಯಾತ್ರೆ ನಡೆಸಿ ಇಂದು ಫ್ರೀಡಂ ಪಾರ್ಕ್ ತಲುಪಿದ್ದು, ಈತನಿಗೆ ಸಾವಿರಾರು ಮಂದಿ ಕಾರ್ಮಿಕರು ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ವಿಐಎಸ್’ಎಲ್ ಹಾಗೂ ಎಂಪಿಎಂ ಕಾರ್ಖಾನೆಯನ್ನು ನಂಬಿಕೊಂಡು ಸಾವಿರಾರು ಕುಟುಂಬದ ಲಕ್ಷಾಂತರ ಮಂದಿ ಜೀವನ ಸಾಗಿಸುತ್ತಿದ್ದಾರೆ. ಎಂಪಿಎಂ ಕಾರ್ಖಾನೆ ಈಗಾಗಲೆ ಗತಕಾಲ ಸೇರಿದೆ. ಆದರೆ, ಈಗ ವಿಐಎಸ್’ಎಲ್ ಕಾರ್ಖಾನೆಯನ್ನಾದರೂ ಸಹ ಉಳಿಸಿಕೊಡಬೇಕಿದೆ ಎಂದರು.
ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಆರಂಭದಿಂದಲೂ ಕಾರ್ಮಿಕರ ಮೂಗಿಗೆ ತುಪ್ಪ ಸವರಲಾಯಿತು. ಆನಂತರ ಖಾಸಗಿಗೆ ವಹಿಸುವುದಾಗಿ ಹೇಳಿದ್ದರು. ಆದರೆ, ಈಗ ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ಪ್ರಕ್ರಿಯೆಗಳನ್ನು ಆರಂಭಿಸುವ ಮೂಲಕ ಕಾರ್ಮಿಕರ ಹೊಟ್ಟೆಯ ಮೇಲೆ ಕೇಂದ್ರ ಸರ್ಕಾರ ಹೊಡೆಯುತ್ತಿದೆ. ಈ ನಿರ್ಧಾರದಿಂದ ಸಾವಿರಾರು ಗುತ್ತಿಗೆ ಕಾರ್ಮಿಕರ ಜೀವನ ಬೀದಿಗೆ ಬೀಳುತ್ತದೆ ಎಂದು ಅಳಲು ತೋಡಿಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post