No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡಿ.25 ರಿಂದ 28 ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 24, 2025
in ಬೆಂಗಳೂರು ನಗರ
0
ಡಿ.25 ರಿಂದ 28 ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದೊಂದಿಗೆ ಡಿಸೆಂಬರ್ 25 ರಿಂದ 28, 2025 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನವನ್ನು #Second World Ayurveda Conference ಆಯೋಜಿಸಿದ್ದು, ಆಯುರ್ವೇದದ ವೈಶಿಷ್ಟ್ಯಗಳ ಅನಾವರಣ ಬೃಹತ್ ರೂಪದಲ್ಲಿ ನೆರವೇರಲಿದೆ. ನಾಡಿನ ಸಂತ ಮಹಂತರು – ಗಣ್ಯ ಮಾನ್ಯರು – ದೇಶ ವಿದೇಶಗಳ ಆಯುರ್ವೇದ ತಜ್ಞರ ಉಪಸ್ಥಿತಿಯಲ್ಲಿ ವಿಶಿಷ್ಟ ಆಯುರ್ವೇದ ಉತ್ಸವ ನಡೆಯಲಿದೆ.

ಶ್ರೀ ಧನ್ವಂತರಿ ಪೂಜೆ, ಸಮ್ಮೇಳನ ಆಶೀರ್ವಚನ, ಶ್ರೀ ಧನ್ವಂತರಿ ಮಹಾಯಜ್ಞ, ವೈಜ್ಞಾನಿಕ ವಿಚಾರ ಸಂಕಿರಣಗಳು, ಧನ್ವಂತರಿ ರಥೋತ್ಸವ, ಆಯುರ್ವೇದ ಅನುಭವ ಕೇಂದ್ರಗಳು, ಆಯುರ್ವೇದ ವಸ್ತು ಪ್ರದರ್ಶನ, ಆಯುರ್ವೇದ ಆಹಾರ ಪ್ರದರ್ಶನಿ, ಆಯುರ್ವೇದ ಪಾಕೋತ್ಸವ, ಮೆಗಾ ಆಯುರ್ವೇದ ಎಕ್ಸ್‌ಪೋ, ಜನಪ್ರಿಯ ವೈದ್ಯರ ವಿಚಾರ ಧಾರೆ, ಆಯುರ್ವೇದ ಲೇಸರ್ ಶೋ, ಔಷಧೀಯ ಸಸ್ಯಗಳ ಉಚಿತ ವಿತರಣೆ, ಸಾಂಸ್ಕೃತಿಕ ಉತ್ಸವಗಳು, ವಿಶ್ವದ ನಾನಾ ಭಾಗಗಳ 6000+ ಪ್ರತಿನಿಧಿಗಳು, 400 ಸಾಧಕರಿಗೆ ಸನ್ಮಾನ, ಯಕ್ಷಗಾನ ಯಾನ, ಸ್ವದೇಶಿ ಮೇಳ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ಈ ಐತಿಹಾಸಿಕ ಆಯುರ್ವೇದ ವಿಶ್ವ ಸಮ್ಮೇಳನದಲ್ಲಿ ಇರಲಿದ್ದು, 4 ದಿನದ ಕಾರ್ಯಕ್ರಮದಲ್ಲಿ ಸುಮಾರು 4 ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ.
ಧನ್ವಂತರಿ ಮಹಾಯಜ್ಞ – ಪೂಜೆ – ರಥೋತ್ಸವ

ಆಯುರ್ವೇದದ ಬೃಹತ್ ಉತ್ಸವದಲ್ಲಿ ಧನ್ವಂತರಿಯ ಮಹಾರಾಧನೆ ನಡೆಯಲಿದ್ದು, ಶ್ರೀಧನ್ವಂತರಿ ಮಹಾಯಜ್ಞ – ಧನ್ವಂತರಿ ಪೂಜೆಗಳು ನೆರವೇರಲಿದೆ. ಪಾರಂಪರಿಕ ರಥದಲ್ಲಿ ಧನ್ವಂತರಿಯ ರಥೋತ್ಸವವು ಬಹಳ‌ ವಿಜೃಂಭಣೆಯಿಂದ ನಡೆಯಲಿದೆ. ಬೆಂಗಳೂರಿನಂತಹ ಮಹಾನಗರಗಳಲ್ಲಿ ಪಾರಂಪರಿಕ ರಥೋತ್ಸವ ಅಪರೂಪವಾಗಿದ್ದು, ಆಯುರ್ವೇದ ಸಮ್ಮೇಳನದ ಕಳೆಯನ್ನು ಹೆಚ್ಚಿಸುವುದರ ಜೊತೆಗೆ‌ ದೇವತಾನುಗ್ರವನ್ನೂ ಕರುಣಿಸಲಿದೆ.

ಆಯುರ್ವೇದ ಅನುಭವ ಕೇಂದ್ರಗಳು

ಆಯುರ್ವೇದದ ಇತಿಹಾಸದಲ್ಲಿಯೇ ಪ್ರಥಮಬಾರಿಗೆ ವೈಶಿಷ್ಟ್ಯಪೂರ್ಣವಾದ 10 ಆಯುರ್ವೇದ ಅನುಭವ ಕೇಂದ್ರಗಳನ್ನು ಈ ಸಮ್ಮೇಳನದಲ್ಲಿ ಸ್ಥಾಪಿಸಲಾಗುತ್ತಿದ್ದು, ಪ್ರಾತ್ಯಕ್ಷಿಕೆ ರೂಪದಲ್ಲಿ ಪಾರಂಪರಿಕ ಆಯುರ್ವೇದ ಚಿಕಿತ್ಸಾ ವಿಧಾನ, ಸಂವಾದಾತ್ಮಕ ರೀತಿಯಲ್ಲಿ ಆಯುರ್ವೇದದ  ಚಿಕಿತ್ಸಾ ಪದ್ಧತಿಯ ಪರಿಚಯವನ್ನು ಈ ಅನುಭವ ಕೇಂದ್ರಗಳು ಮಾಡಲಿದ್ದು, ಆಯುರ್ವೇದ ಜೀವನ ಪದ್ಧತಿಯ ಪ್ರತ್ಯಕ್ಷ ಅನುಭವವನ್ನು ಇದು ಕಟ್ಟುಕೊಡಲಿದೆ.

ವೈಜ್ಞಾನಿಕ ವಿಚಾರ ಸಂಕಿರ್ಣ – ಸಂಶೋಧನಾ ಪ್ರಬಂಧಗಳ ಮಂಡನೆ

‘ಚರಕ ಸಭಾ’ ವೇದಿಕೆಯಲ್ಲಿ ನಾಲ್ಕು ದಿನಗಳ ಕಾಲ ನಿರಂತರವಾಗಿ ವೈಜ್ಞಾನಿಕ ವಿಚಾರಗಳ ಸಂಕೀರ್ಣ ನಡೆಯಲಿದ್ದು, ದೇಶ ವಿದೇಶಗಳ ಆಯುರ್ವೇದ ತಜ್ಞರು ಇಂದಿನ ಜ್ವಲಂತ ಆರೋಗ್ಯ ಸಮಸ್ಯೆಗಳ ಕುರಿತಾಗಿ ಸಂಶೋಧನಾ ಪ್ರಬಂಧಗಳ ಮಂಡನೆಯನ್ನು ಮಾಡಲಿದ್ದಾರೆ.  ಆಯುರ್ವೇದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ನಡೆದ ವೈಜ್ಞಾನಿಕ ಪ್ರಬಂಧ ಮಂಡನೆ ಸ್ಪರ್ಧೆಯಲ್ಲಿ ಬಹುಮಾನಿತ ಪ್ರಬಂಧಗಳ ಮಂಡನೆಯೂ ಇಲ್ಲಿ ನಡೆಯಲಿದ್ದು, ಪ್ರಸ್ತುತ ಕಾಲದಲ್ಲಿ ಆಯುರ್ವೇದ ಆಗತ್ಯತೆಯ ಕುರಿತಾದ ಚಿಂತನ – ಮಂಥನ ನಡೆಯಲಿದೆ.

ಆಯುರ್ವೇದ ವಸ್ತು ಪ್ರದರ್ಶನ

ಪಾರಂಪರಿಕ ಆಯುರ್ವೇದ ಚಿಕಿತ್ಸೆಯಲ್ಲಿ ಬಳಸುವ ಅಪರೂಪದ ಪರಿಕರಗಳು, ಪ್ರಾಚೀನ ಗ್ರಂಥಗಳಲ್ಲಿ ಉಲ್ಲೇಖಿತವಾದ ಆಯುರ್ವೇದ ಗಿಡಮೂಲಿಕೆಗಳ ಕುರಿತಾದ ಪ್ರದರ್ಶನ ಇರಲಿದ್ದು, ಆಯುರ್ವೇದದ ವೈಜ್ಞಾನಿಕತೆ ಹಾಗೂ ಆಯುರ್ವೇದ ಸಾಗಿಬಂದ ದಾರಿಯನ್ನು ಇದು ಜಗತ್ತಿನ ಮುಂದೆ ಪ್ರಸ್ತುತ ಪಡಿಸಲಿದೆ.

ಆಯುರ್ವೇದ ಲೇಸರ್ ಶೋ

ಪ್ರಾಚೀನ ಆಯುರ್ವೇದ ಮುನ್ನೆಡೆದು ಬಂದ ದಾರಿ, ಆಯುರ್ವೇದದ ಮಹತ್ವವನ್ನು ಆಧುನಿಕ ಲೇಸರ್ ಶೋ ಮೂಲಕ ವಿಭಿನ್ನವಾಗಿ ಚಿತ್ರಿಸುವ, ಆಯುರ್ವೇದದ ಕುರಿತಾದ ಚಿಂತನೆಯನ್ನು ಕಟ್ಟಿಕೊಡುವ ವಿಶಿಷ್ಟ ಪ್ರಯೋಗ ಇದಾಗಿರಲಿದೆ.
ಆಯುರ್ವೇದ ಆಹಾರ ಪ್ರದರ್ಶಿನಿ – ಪಾಕೋತ್ಸವ

ಪಾರಂಪರಿಕವಾದ ಹಾಗೂ ಆಯುರ್ವೇದ ಗ್ರಂಥಗಳಲ್ಲಿ ಉಲ್ಲೇಖಿತವಾದ ವೈವಿಧ್ಯಮಯ ಅಹಾರಗಳ ಪ್ರದರ್ಶನ ಇರಲಿದ್ದು, ಪಾಕೋತ್ಸವದಲ್ಲಿ ನಾಲಿಗೆಗೆ ಮುದ ನೀಡುವ ಹಾಗೂ ದೇಹ ಹಾಗೂ ಮನಸ್ಸಿಗೆ ಹಿತನೀಡುವ ವಿಶೇಷ ತಿಂಡಿ ತಿನಿಸು – ತಂಬಳಿಗಳು ಇಲ್ಲಿರಲಿವೆ.

ದೇಶ ವಿದೇಶಗಳ 6000+ ಪ್ರತಿನಿಧಿಗಳು

ವೈದ್ಯಕೀಯ ಸಮ್ಮೇಳನಗಳ ಇತಿಹಾಸದಲ್ಲಿ ಮೈಲುಗಲ್ಲು ಎಂಬಂತೆ ಈ ಆಯುರ್ವೇದ ಸಮ್ಮೇಳನದಲ್ಲಿ ವಿಶ್ವದ ನಾನಾ ಭಾಗಗಳ 6000+ ಪ್ರತಿನಿಧಿಗಳು ಭಾಗವಹಿಸಲಿದ್ದು, ಆಯುರ್ವೇದದ ಪ್ರಾಚೀನತೆಯ ಹಾಗೂ ಆಧುನಿಕ ಜಗತ್ತಿನಲ್ಲಿ ಅದರ ಅಗತ್ಯತೆಯ ಕುರಿತಾದ ವಿಚಾರವಿಮರ್ಷೆಗಳು ನಡೆಯಲಿವೆ.

400 ಸಾಧಕರಿಗೆ ಸನ್ಮಾನ

ಆಯುರ್ವೇದ ಕ್ಷೇತ್ರಕ್ಕೆ ಹಲವಾರು ರೀತಿಯಲ್ಲಿ ಅಪಾರ ಸೇವೆಯನ್ನು ಸಮರ್ಪಿಸಿದ ನಾಡಿನ 400 ಅಪರೂಪದ ಸಾಧಕರನ್ನು ಇಲ್ಲಿ ಗೌರವಿಸಲಾಗುತ್ತಿದ್ದು, ಆಯುರ್ವೇದ ಸಂಶೋಧಕರು, ವೈದ್ಯರು, ಔಷಧ ತಯಾರಕರು, ಆಯುರ್ವೇದ ಸಂಸ್ಥೆಗಳನ್ನು ಗುರುತಿಸಿ, ಆಯುರ್ವೇದ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಮಹೋನ್ನತವಾದ ಗೌರವವನ್ನು ನೀಡಲಾಗುವುದು.

 ಮೆಗಾ ಆಯುರ್ವೇದ ಎಕ್ಸ್’ಪೋ – ಸ್ವದೇಶಿ ಮೇಳ

ಆಯುರ್ವೇದ ಕ್ಷೇತ್ರಕ್ಕೆ ಸಂಬಂಧಿಸಿದ ಬೃಹತ್ ಎಕ್ಸ್’ಪೋ ಪ್ರದರ್ಶನ ನಡೆಯಲಿದ್ದು, ಆಯುರ್ವೇದ ಸಮ್ಮೇಳನಗಳ ಇತಿಹಾಸದಲ್ಲೇ ದಾಖಲೆಯ ಪ್ರದರ್ಶನ ಇದಾಗಲಿದೆ. ಹಾಗೆಯೇ ಸ್ವದೇಶಿ ಮೇಳ ಇಲ್ಲಿರಲಿದ್ದು, ಗುಡಿಕೈಗಾರಿಕೆ – ಗೃಹೋದ್ಯಮ ಉತ್ಪನ್ನಗಳ ಮಾರಾಟ ಮಳಿಗೆಗಳೂ ಇರಲಿವೆ.

7 ರಾಜ್ಯಗಳನ್ನು ಸಂದರ್ಶಿಸಿ ಬಂದ ಆಯುರ್ವೇದ ರಥಯಾತ್ರೆ

ದ್ವಿತೀಯ ವಿಶ್ವ ಆಯುರ್ವೇದ ಸಮ್ಮೇಳನ ಹಾಗೂ ಆಯುರ್ವೇದ ಪದ್ಧತಿಯ ಕುರಿತಾದ ಜನಜಾಗೃತಿಗೆ ಆಯುರ್ವೇದ ರಥಯಾತ್ರೆ ನಡೆದಿದ್ದು, ಇದು ದಕ್ಷಿಣ ಭಾರತದ 7 ರಾಜ್ಯಗಳನ್ನು ಕಳೆದ ಒಂದೂವರೆ ತಿಂಗಳಿನಲ್ಲಿ ಸಂದರ್ಶಿಸಿ ಬಂದಿದೆ. ಕರ್ನಾಟಕದ ಎಲ್ಲಾ ಆಯುರ್ವೇದ ಕಾಲೇಜುಗಳು ಹಾಗೂ ಗೋವಾ, ಕೇರಳ, ಮಹಾರಾಷ್ಟ್ರ, ಆಂಧ್ರ, ತೆಲಂಗಾಣ, ತಮಿಳುನಾಡಿನ 30ಕ್ಕೂ ಅಧಿಕ  ಆಯುರ್ವೇದ ಕಾಲೇಜು ಸೇರಿದಂತೆ ಒಟ್ಟು 137 ಆಯುರ್ವೇದ ವಿದ್ಯಾಲಯಗಳನ್ನು ಒಟ್ಟು ಎರಡು ರಥಗಳು ಸಂಚರಿಸಿವೆ.

ಸಾಂಸ್ಕೃತಿಕ ಉತ್ಸವಗಳು

ನಾಡಿನ ಖ್ಯಾತ ಕಲಾವಿದರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಪಂಡಿತ್ ಪ್ರವೀಣ್ ಗೋಡ್ಖಿಂಡಿ ತಂಡದ ಕೊಳಲು, ಅನೂರು ಅನಂತಕೃಷ್ಣ ಶರ್ಮರ ತಾಳ ತರಂಗ, ರಾಘವೇಂದ್ರ ಹೆಗಡೆಯವರ ಮರಳು ಕಲೆ, ಖ್ಯಾತ ಕಲಾವಿದರ ಯಕ್ಷಗಾನ ಪ್ರದರ್ಶನ, ವಿಭಿನ್ನ ಪಿಕ್ಸಲ್ ಪೋಯ್ ಪ್ರದರ್ಶನ, ಹುಲಿವೇಷ ಮುಂತಾದವು ಜನಮನ ರಂಜಿಸಲಿವೆ. 350 ಕಲಾವಿದರಿಂದ ವಿಶಿಷ್ಟ ಆಳ್ವಾಸ್ ಸಾಂಸ್ಕೃತಿಕ ಸಂಭ್ರಮವು ಸಾಂಸ್ಕೃತಿಕ ಕಾರ್ಯಕ್ರಮಗಳ ವಿಶೇಷತೆಗಳಲ್ಲೊಂದಾಗಿರಲಿದೆ.

http://kalpa.news/wp-content/uploads/2024/04/VID-20240426-WA0008.mp4

ಧನ್ವಂತರಿ ಜ್ಯೋತಿಯಿಂದ ಸಮ್ಮೇಳನದ ಉದ್ಘಾಟನೆ

ದಕ್ಷಿಣ ಭಾರತದ 7 ರಾಜ್ಯಗಳನ್ನು ಸಂಚರಿಸಿ ಬಂದಿರುವ ಆಯುರ್ವೇದ ರಥಗಳು, ತಮ್ಮ ಜೊತೆಗೆ ಧನ್ವಂತರಿ ಜ್ಯೋತಿಯನ್ನು ಹೊತ್ತು ತಂದಿವೆ. ಅದೇ ಧನ್ವಂತರಿ ಜ್ಯೋತಿಯ ಮೂಲಕ ವಿಶ್ವ ಸಮ್ಮೇಳನದ ಭವ್ಯ ಉದ್ಘಾಟನೆ ನೆರವೇರಲಿದೆ. ಹಾಗೂ 137 ಆಯುರ್ವೇದ ವಿದ್ಯಾಲಯಗಳ ಮಣ್ಣನ್ನು ತಂದಿದ್ದು, ಆ ಮಣ್ಣುನ್ನಿಂದ ಬೆಳಸಿದ ಗಿಡಕ್ಕೆ ನೀರೆರೆಯುವ ಮೂಲಕ ಸಮ್ಮೇಳನಕ್ಕೆ ಚಾಲನೆ ದೊರಯಲಿದೆ.

ಇದಷ್ಟೇ ಅಲ್ಲದೇ ಆಯುರ್ವೇದ ಉದ್ಯೋಗ ಮೇಳ, ಆಯುರ್ವೇದ ಉದ್ಯಮಿಗಳ ಸಮಾಲೋಚನೆ, ಆಯುರ್ವೇದ ನವೋದ್ಯಮಕ್ಕೆ ಹೂಡಿಕೆ ಸಾಧ್ಯತೆಗಳ ಚರ್ಚೆಗಳು, ರಕ್ತದಾನ ಶಿಬಿರ, ತಂತ್ರಜ್ಞಾನ ತರಬೇತಿ ಶಿಬಿರ, ದಿಕ್ಸೂಚಿ ಭಾಷಣಗಳು ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ಆಯುರ್ವೇದ ಸಮ್ಮೇಳನದಲ್ಲಿ ಇರಲಿದೆ.

ಸಾರ್ವಜನಿಕರಿಗೆ ಉಚಿತ ಹಾಗೂ ಮುಕ್ತ ಪ್ರವೇಶ

ಆಯುರ್ವೇದ ಸಮ್ಮೇಳನದಲ್ಲಿ ಸಾರ್ವಜನಿಕರಿಗೆ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದ್ದು, ಆಯುರ್ವೇದದ ಅನುಭವ ಹಾಗೂ ಪ್ರಾಚೀನ ಪದ್ಧತಿಯ ಕುರಿತಾಗಿ ತಮ್ಮ ಕುತೂಹಲವನ್ನು ಸಾರ್ವಜನಿಕರು ತಣಿಸಿಕೊಳ್ಳ ಬಹುದಾಗಿದೆ. ಎಲ್ಲಾ ವಯೋಮಾನದ ಜನರ ಅಭಿರುಚಿಗೆ ತಕ್ಕಂತೆ ವೈವಿಧ್ಯಮಯ ಕಾರ್ಯಕ್ರಮಗಳು ಇಲ್ಲಿರುವುದು ವಿಶೇಷವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSecond World Ayurveda Conferenceದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನಬೆಂಗಳೂರು
Share196Tweet123Send
Previous Post

ಜನವರಿ 5ರಿಂದ ಕೂಪ್ಪಳ ಗವಿಸಿದ್ದೇಶ್ವರ ಜಾತ್ರೆ | ಟ್ರೇಲರ್ ಸಾಂಗ್ ಮೂಲಕ ಭಕ್ತರಿಗೆ ಆಹ್ವಾನ

Next Post

ಸಾಗರ ರೈಲು ನಿಲ್ದಾಣದಲ್ಲಿ ಸ್ಟೇಷನ್ ಮಹೋತ್ಸವ | ಏನಿದು ಆಚರಣೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಗರ ರೈಲು ನಿಲ್ದಾಣದಲ್ಲಿ ಸ್ಟೇಷನ್ ಮಹೋತ್ಸವ | ಏನಿದು ಆಚರಣೆ?

ಸಾಗರ ರೈಲು ನಿಲ್ದಾಣದಲ್ಲಿ ಸ್ಟೇಷನ್ ಮಹೋತ್ಸವ | ಏನಿದು ಆಚರಣೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

April 22, 2026
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

April 22, 2026
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

April 22, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

April 22, 2026
ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

April 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL