ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಸೃಷ್ಟಿಸಿರುವ ಗೊಂದಲಗಳ ನಿವಾರಣೆಗೆ ಬಜೆಟ್ ಅಧಿವೇಶನ ಮುಗಿದ ನಂತರ ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಹಾಗೂ ಸಮುದಾಯದ ಸಚಿವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸುತ್ತೇನೆ. ನಾನು ಸಾಮಾಜಿಕ ನ್ಯಾಯದ ಪರವಾಗಿದ್ದು ವಾಲ್ಮೀಕಿ ಸಮಾಜದ ಹಿತ ಕಾಪಾಡಲು ಬದ್ದವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಪೀಠದ ಪೀಠಾಧ್ಯಕ್ಷ ಶ್ರೀ ಪ್ರಸನ್ನಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಸಚಿವರು ಹಾಗೂ ಶಾಸಕರ ನಿಯೋಗ ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಹಿಂದಿನ ಸರ್ಕಾರ ಮೀಸಲಾತಿ ಕುರಿತು ಆತುರಾತುರವಾಗಿ ತೀರ್ಮಾನ ಮಾಡಿದ್ದು, ಗೊಂದಲ ಸೃಷ್ಟಿಸಿದೆ. ಮುಸ್ಲಿಮರಿಗೆ ಶೇ 4 ರಷ್ಟಿದ್ದ ಮೀಸಲಾತಿ ರದ್ದು ಮಾಡಿ ಒಕ್ಕಲಿಗರು ಹಾಗೂ ಲಿಂಗಾಯತರಿಗೆ ತಲಾ ಶೇ 2 ರಷ್ಟು ಮೀಸಲಾತಿ ನೀಡಿದೆ. 2 ಸಿ, 2 ಡಿ ಸಹ ಮಾಡಿದ್ದಾರೆ. ಇದರ ಬಗ್ಗೆ ಗೊಂದಲಗಳಿವೆ. ಸಂವಿಧಾನಾತ್ಮಕ ವಾಗಿ ಇಲ್ಲದಿರುವ ಕಾರಣ ಸುದೀರ್ಘ ಚರ್ಚೆಯ ಅಗತ್ಯವಿದೆ. ಒಟ್ಟಾರೆ ಮೀಸಲಾತಿಯ ಪರಿಮಿತಿಯನ್ನು ಸಡಿಲಗೊಳಿಸದಿದ್ದರೆ ಪರಿಹಾರ ಸಿಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post