ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಾಡು ಕಂಡ ಉತ್ತಮ ನಾಯಕ ಶಾಂತವೇರಿ ಗೋಪಾಲ ಗೌಡರ Shanthaveri Gopala Gowda ವಿಚಾರಧಾರೆಗಳನ್ನು ನಮ್ಮ ತಂದೆಯ ಕಾಲದಿಂದಲೇ ತಿಳಿದಿದ್ದೇನೆ. ನನ್ನ ಅವಧಿಯಲ್ಲಿ ಅವರ ನೆನಪು ಶತಮಾನೋತ್ಸವ ರೂಪದಲ್ಲಿ ಮಾಡಿಕೊಳ್ಳುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದರು.
ಗೋಪಾಲ ಗೌಡ ರವರ ಜನ್ಮ ಶತಮಾನೋತ್ಸವ ಕಾರ್ಯಕ್ರಮಕ್ಕೆ ಇಂದು ವಿಧಾನ ಸೌಧದ ಮುಂಭಾಗದ ಶಾಂತವೇರಿ ಗೋಪಾಲ ಗೌಡ ಸರ್ಕಲ್ ನಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಗೋಪಾಲ ಗೌಡರ ಹೆಸರು ಶಾಶ್ವತವಾಗಿರಲು ಉತ್ತಮ ಕೃಷಿಕ ಹಾಗೂ ಉತ್ತಮ ಶಾಸಕ ಪ್ರಶಸ್ತಿ ಗಳನ್ನು ಪ್ರತಿ ವರ್ಷ ನೀಡಲಾಗುವುದು ಎಂದು ತಿಳಿಸಿದರು.
Also read: ಆದರ್ಶ ಸಮಾಜ ನಿರ್ಮಾಣಕ್ಕಾಗಿ ಮಹಿಳೆಯರು ಮುಖ್ಯವಾಹಿನಿಗೆ ಬರುವಂತೆ ವಿನುತಾ ಮಂಚಾಲೆ ಕರೆ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಗೃಹಮಂತ್ರಿ ಆರಗ ಜ್ಞಾನೇಂದ್ರ, ಸಹಕಾರ ಸಚಿವ ಸೋಮಶೇಖರ್ ಹಾಗೂ ಇನ್ನಿತರರು ವೇದಿಕೆಯಲ್ಲಿದ್ದರು. ಗೋಪಾಲ ಗೌಡರ ಮಗ ರಾಮಮನೋಹರ ಅಧ್ಯಕ್ಷತೆ ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post