ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾಂಗ್ರೆಸ್ ಸರ್ಕಾರವು ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಬಯ್ಯುವುದು ಬಿಟ್ಟರೆ ತಾವು ಮಾಡಿದ ಅಭಿವೃದ್ಧಿ ಕಾರ್ಯ ಏನೆಂದು ತಿಳಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು CM Siddaramaiah ಸುಳ್ಳಿನ ಆರ್ಥಿಕತೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ R Ashok ಟೀಕಿಸಿದರು.
ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

Also read: ಘೋಷ ವಾಕ್ಯ ಬದಲು | ಮಕ್ಕಳ ತಿಳಿಮನಸ್ಸಿನಲ್ಲಿ ಕಲ್ಲು ಹಾಕುವ ನೀಚ ಕೆಲಸ | ಬಿಜೆಪಿ ಕಿಡಿ
ಬಿಜೆಪಿ ಸರ್ಕಾರ ಇದ್ದಾಗ ಸರ್ಪ್ಲಸ್ ಬಜೆಟ್ ಇದ್ದರೆ, ಕಾಂಗ್ರೆಸ್ ಸರ್ಕಾರದಿಂದ ಅದು ಹೋಪ್ಲೆಸ್ ಬಜೆಟ್ ಆಗಿದೆ. 1.5 ಲಕ್ಷ ಕೋಟಿ ರೂ. ಸಾಲ ಪಡೆದಿದ್ದು, ಎಲ್ಲ ಕಡೆ ಹಣ ಶೂನ್ಯವಾಗಿದೆ. 90% ಸಾಲ ಮಾಡಿರುವುದು ಕಾಂಗ್ರೆಸ್ ಸರ್ಕಾರಗಳೇ. ಸಿದ್ದರಾಮಯ್ಯನವರು ಒಂದೇ ವರ್ಷದಲ್ಲಿ ಸಾಲವನ್ನು 1 ಲಕ್ಷ ಕೋಟಿ ರೂ. ದಾಟಿಸಿದ್ದಾರೆ. ನೀರಾವರಿಗೆ ಒಂದೇ ಒಂದು ಯೋಜನೆ ನೀಡಿಲ್ಲ. ಅಭಿವೃದ್ಧಿ ಕುರಿತು ಮಾತನಾಡದೆ ಕೇವಲ ಸಂತೆ ಭಾಷಣ ಮಾಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಬೀದಿಯಲ್ಲಿ ನಿಂತು ಸುಳ್ಳು ಟೀಕೆ ಮಾತ್ರ ಮಾಡುತ್ತಿದ್ದಾರೆ ಎಂದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post