No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯ ರಜತ ಮಹೋತ್ಸವ | ವಿದುಷಿ ರಂಜನಿ, ವಿದ್ವಾನ್ ಸಂಜೀವ ಕುಮಾರ್‌ಗೆ ಸನ್ಮಾನ

kalpa News by kalpa News
February 18, 2025
in ಬೆಂಗಳೂರು ನಗರ
0
ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯ ರಜತ ಮಹೋತ್ಸವ | ವಿದುಷಿ ರಂಜನಿ, ವಿದ್ವಾನ್ ಸಂಜೀವ ಕುಮಾರ್‌ಗೆ ಸನ್ಮಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅಪರೋಕ್ಷ ಜ್ಞಾನಿಗಳು ರಚಿಸಿರುವ ಕೃತಿಗಳನ್ನು ಹಾಡುವ ಮೂಲಕ ನಮ್ಮ ಅಂತರಂಗದ ಸಾಧನೆಯನ್ನು ಹೆಚ್ಚು ಹೆಚ್ಚು ಮಾಡಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ, ಅಂಕಣಕಾರ , ವಿಜಯವಾಣಿ ಡೆಪ್ಯೂಟಿ ಎಡಿಟರ್ ರಾಘವೇಂದ್ರ ಗಣಪತಿ ಹೇಳಿದರು.

ನಗರದ ಶ್ರೀ ಅನುಗ್ರಹ ಸಂಗೀತ ಮಹಾ ವಿದ್ಯಾಲಯದ 25ನೇ ವರ್ಷದ ಕರ್ನಾಟಕ ಸಂಗೀತ ಪಿತಾಮಹ ಪುರಂದರ ದಾಸರ ಮತ್ತು ಸದ್ಗುರು ತ್ಯಾಗರಾಜ ಸ್ವಾಮಿಗಳ ಆರಾಧನಾ ಮಹೋತ್ಸವದ ಅಂಗವಾಗಿ ನಗರದ ಬಸವನಗುಡಿಯ ಪುತ್ತಿಗೆ ಮಠದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮ ಸರಣಿಯ 3 ನೇ ದಿನವಾದ ಭಾನುವಾರ ವಿವಿಧ ರಂಗದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಸಂಗೀತವು ಕೇವಲ ಮನೋರಂಜನೆಗೆ ಮಾತ್ರ ಇರುವ ಕಲೆ ಅಲ್ಲ. ಇದರಿಂದ ಆತ್ಮೋನ್ನತಿ ಸಾಧ್ಯವಿದೆ. ಪರಂಪರಾನುಗತವಾಗಿ ಹಾಡಿಕೊಂಡು ಬಂದಿರುವ ದಾಸರ ಕೃತಿಗಳಲ್ಲಿ ವಿಶೇಷವಾದ ಶಕ್ತಿ ಇದೆ. ಬದುಕಿನ ಸಾರವಿದೆ. ಅಧ್ಯಾತ್ಮದ ಸೆಲೆ ಇದೆ. ಹೊಸ ಪೀಳಿಗೆಗೆ ಈ ಕೃತಿಗಳು ಪರಿಚಯವಾಗಬೇಕು ಎಂದು ಅವರು ಆಶಿಸಿದರು. ಸಂಗೀತ ಕಲಿಕೆಗೆ ಯಾವುದೇ ವಯಸ್ಸಿನ ಅಂತರ ಇಲ್ಲ . ಯಾರು, ಯಾವಾಗಬೇಕಾದರೂ ಕಲಿಕೆ ಆರಂಭಿಸಬಹುದು. ಕಲೆಯನ್ನು ಆರಾಧಿಸಲು, ಸಾಧನೆಗೆ ಪ್ರೇರಣೆಯನ್ನಾಗಿಸಿಕೊಳ್ಳಲು ಸಂಕಲ್ಪ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಸಾಧನೆ ಮಾಡಿದಷ್ಟೂ ಅನಂತ: ಶ್ರೀ ಅನುಗ್ರಹ ವಿದ್ಯಾಲಯದ ಸನ್ಮಾನಕ್ಕೆ ಪ್ರತಿಕ್ರಿಯಿಸಿದ ಹಿರಿಯ ವಯೋಲಿನ್ ವಿದ್ವಾಂಸ ಮೈಸೂರು ಸಂಜೀವ ಕುಮಾರ್, ಸಾಧನೆ ಮಾಡಿದಷ್ಟೂ ಕಲೆ ಅನಂತವಾಗಿದೆ ಎಂದರು. ವಿದ್ವಾನ್ ಶ್ರೀಕಂಠ ಭಟ್ಟರು ಅಭಿಮಾನ ಮತ್ತು ವಾತ್ಸಲ್ಯದಿಂದ ಮಕ್ಕಳಿಗೆ ಸಂಗೀತ ಪಾಠ ಹೇಳಿಕೊಡುತ್ತಾರೆ. ಉತ್ತಮ ಗುರು ದೊರೆತಾಗ ಕಲೆಯನ್ನು ನಮ್ಮದನ್ನಾಗಿಸಿಕೊಳ್ಳಲು ನಿಷ್ಠೆಯಿಂದ ಅಭ್ಯಾಸ ಮಾಡಬೇಕು ಎಂದರು.
ಭರತನಾಟ್ಯ ವಿದುಷಿ ರಂಜನಿ ಜಯಸಿಂಹ ಮಾತನಾಡಿ, ನೃತ್ಯಕ್ಕೆ ಸಂಗೀತವೇ ಮೂಲ ಆಧಾರ. ಸಂಗೀತವನ್ನು ಶ್ರದ್ಧೆಯಿಂದ ಕಲಿಯಲು ವಿದ್ಯಾರ್ಥಿಗಳು ಮುಂದಾಗಬೇಕು. ನೃತ್ಯಾಭ್ಯಾಸಿಗಳಿಗೂ ಸಂಗೀತ ಅನಿವಾರ್ಯವಾಗಿದೆ ಎಂದರು. ವಿದ್ಯಾಲಯದ ಪ್ರಾಚಾರ್ಯ ವಿದ್ವಾನ್ ಜೆ.ಎಸ್. ಶ್ರೀಕಂಠ ಭಟ್ ನೇತೃತ್ವದಲ್ಲಿ ಹಿರಿಯ ಮತ್ತು ಕಿರಿಯ ಗಾಯಕರು ಏಕಕಂಠದಲ್ಲಿ ಶ್ರೀ ತ್ಯಾಗರಾಜರ ಘನರಾಗ ಪಂಚರತ್ನ ಕೃತಿಗಳನ್ನು ಭಕ್ತಿ- ಭಾವಪೂರ್ಣವಾಗಿ ಹಾಡಿದರು. ವಸುಮತಿ ಭಟ್, ಸುಬ್ಬುಕೃಷ್ಣ, ಆರ್ಯ, ಬಿ.ಆರ್.ವಿ. ಪ್ರಸಾದ್ ಹಾಜರಿದ್ದರು.

ಕೃಷ್ಣ ದೇವರಿಗೆ ಸಂಕೀರ್ತನೆ ಸೇವೆ : ಬೆಳಗ್ಗೆ 7:45 ಕ್ಕೆ ಪುತ್ತಿಗೆ ಮಠದ ಶ್ರೀ ಕೃಷ್ಣ ದೇವರಿಗೆ ಸಂಕೀರ್ತನೆ ಸೇವೆ ನೆರವೇರಿತು. ನಂತರ ವಿದ್ಯಾಲಯದ ಹಿರಿಯ, ಕಿರಿಯ ವಿದ್ಯಾರ್ಥಿಗಳಿಂದ ದಾಸರ ಪದಗಳ ಗಾಯನ ಸುಶ್ರಾವ್ಯವಾಗಿ ಮೂಡಿಬಂತು.
ಸಮಾರೋಪ: ಸಂಜೆ 5:30ಕ್ಕೆ ವಿದ್ಯಾಲಯದ ವಿದ್ಯಾರ್ಥಿಗಳಿಂದ ದೇವರ ನಾಮಗಳ ಗೋಷ್ಠಿ, ನಂತರ ದೇವರ ನಾಮ ಉಚಿತ ಕಲಿಕಾ ಶಿಬಿರದ ಸಮಾರೋಪ ಸಂಪನ್ನಗೊಂಡಿತು. ಹಿರಿಯ ವಿದ್ವಾಂಸ ಮತ್ತು ಪೂರ್ಣಪ್ರಜ್ಞ ವಿದ್ಯಾಪೀಠದ ನಿವೃತ್ತ ಪ್ರಾಚಾರ್ಯ ಡಾ. ಹರಿದಾಸ ಭಟ್ಟರು ದೇವರ ನಾಮಗಳಿಗೆ ವಿಶೇಷ ವ್ಯಾಖ್ಯಾನ ನೀಡಿದರು. ಇದೇ ಸಂದರ್ಭ ವೀಣಾ ವಿದುಷಿ ಮತ್ತು ಸಂಗೀತ ಪೋಷಕರಾದ ರೇವತಿ ಕಾಮತ್ ಅವರಿಗೆ ಗೌರವಿಸಲಾಯಿತು.

ಭಾನುವಾರ ಶ್ರೀ ತ್ಯಾಗರಾಜರ ಘನರಾಗ ಪಂಚರತ್ನ ಗೋಷ್ಠಿ ಗಾಯನ ನೆರವೇರಿತು. ವಿದ್ವಾನ್ ಶ್ರೀಕಂಠ ಭಟ್ ನೇತೃತ್ವ ವಹಿಸಿದ್ದರು.

ಅನುಗ್ರಹ ಸಂಗೀತ ಮಹಾವಿದ್ಯಾಲಯ ನಗರದ ಪುತ್ತಿಗೆ ಮಠದಲ್ಲಿ ಹಮ್ಮಿಕೊಂಡಿದ್ದ 25ನೇ ವರ್ಷದ ಶ್ರೀ ಪುರಂದರ ದಾಸರ ಮತ್ತು ತ್ಯಾಗರಾಜ ಸ್ವಾಮಿಗಳ ಆರಾಧನಾ ಮಹೋತ್ಸವದಲ್ಲಿ ಭರತನಾಟ್ಯ ವಿದುಷಿ ರಂಜನಿ ಜಯಸಿಂಹ ಮತ್ತು ಪಿಟೀಲು ವಿದ್ವಾಂಸ ಮೈಸೂರು ಸಂಜೀವ ಕುಮಾರ್ ಅವರಿಗೆ ಸನ್ಮಾನಿಸಲಾಯಿತು. ವಿದ್ವಾನ್ ಶ್ರೀಕಂಠ ಭಟ್, ವಸುಮತಿ ಭಟ್, ಹಿರಿಯ ಪತ್ರಕರ್ತ ರಾಘವೇಂದ್ರ ಗಣಪತಿ, ಸುಬ್ಬುಕೃಷ್ಣ, ಆರ್ಯ, ಬಿ.ಆರ್.ವಿ. ಪ್ರಸಾದ್ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಾಸ ಸಾಹಿತ್ಯದ ಅರ್ಥ ತಿಳಿದು ಹಾಡಿರಿ: ಡಾ. ಹರಿದಾಸ ಭಟ್ ಸಲಹೆ

Next Post

A great tribute to the Khanjira Maestro LAYA BRAHMA Sri. G.Harishankar

kalpa News

kalpa News

Next Post
A great tribute to the Khanjira Maestro LAYA BRAHMA Sri. G.Harishankar

A great tribute to the Khanjira Maestro LAYA BRAHMA Sri. G.Harishankar

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL