ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ #SSLC Exam ಆರಂಭವಾಗಿದ್ದು, ಬೆಂಗಳೂರು ಉತ್ತರ ಜಿಲ್ಲೆಯ ಮಲ್ಲೇಶ್ವರಂನ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ #Minister Machu Bangarappa ಭೇಟಿನೀಡಿ, ಆತ್ಮಸ್ಥೈರ್ಯ ತುಂಬುವ ಮೂಲಕ ವಿದ್ಯಾರ್ಥಿಗಳಿಗೆ ಪುಷ್ಪನೀಡಿ ಶುಭಹಾರೈಸಿದರು.
ಬಳಿಕ ಪರೀಕ್ಷಾ ಸಿದ್ದತಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಕೊಠಡಿಗಳನ್ನು ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
Also read: ಶಿವಮೊಗ್ಗ MLA ಚನ್ನಬಸಪ್ಪ ಸೇರಿ 18 BJP ಶಾಸಕರು 6 ತಿಂಗಳು ಕಲಾಪದಿಂದ ಸಸ್ಪೆಂಡ್ | ಕಾರಣವೇನು?
ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸುತ್ತಿರುವ ನನ್ನೆಲ್ಲಾ ಆತ್ಮೀಯ ವಿದ್ಯಾರ್ಥಿಗಳು ಭಯ, ಆತಂಕ ಬಿಟ್ಟು ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ, ಯಶಸ್ಸು ನಿಮ್ಮದಾಗಲಿ ಎಂದು ಈ ಸಂದರ್ಭದಲ್ಲಿ ಮತ್ತೊಮ್ಮೆ ಶುಭ ಹಾರೈಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post