ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಸರ್ಕಾರ ಶೀಘ್ರವೇ ಮೇಕೆ ದಾಟು ಯೋಜನೆಯನ್ನು ಜಾರಿಗೊಳಿಸುವ ಜೊತೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ರದ್ದತಿ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕರಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಕಾವೇರಿ ಅಂತಿಮ ತೀರ್ಪಿನಲ್ಲಿ ಸೂಚಿಸಿರುವ ತಮಿಳುನಾಡಿನ 179 ಟಿಎಂಸಿ ಹಂಚಿಕೆ ನೀರನ್ನು ಹರಿಸಿ ಹೆಚ್ಚುವರಿ ನೀರನ್ನು ರಾಜ್ಯಕ್ಕೆ ಬಳಸಿಕೊಳ್ಳಲು ಅಗತ್ಯವಾಗಿ ಮೇಕೆದಾಟು ಅಣೆಕಟ್ಟೆ ನಿರ್ಮಿಸಲು ರಾಜ್ಯ ಸರ್ಕಾರ ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದಿದ್ದಾರೆ.
ಕೇಂದ್ರ ಸರ್ಕಾರ ಭತ್ತಕ್ಕೆ ಬೆಂಬಲ ಬೆಲೆ ಏರಿಕ್ಕೆ ಮಾಡಿರುವುದು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬAತಾಗಿದೆ ಒಂದು ಚೀಲ ಗೊಬ್ಬರಕ್ಕೆ 500ರೂ ಏರಿಕೆಯಾಗಿದೆ ರೈತರ ಬತ್ತಕ್ಕೆ 140ರೂ ಮಾತ್ರ ಏರಿಕೆ ಯಾಕೆ? ಎಂದು ಪ್ರಶ್ನಿಸಿದ್ದಾರೆ.
ಗೋಹತ್ಯ ನಿಷೇಧ ಕಾಯ್ದೆ ರದ್ದು ಬೇಡ ರಾಜಕೀಯ ಪಕ್ಷಗಳು ಗೋವುಗಳ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಕೋಣನಿಗೂ ಹಸುವಿಗೂ ಹೋಲಿಕೆ ಮಾಡಿರುವುದು ಸರಿಯಲ್ಲ. ಹಸುಗಳು ರೈತರ ಬದುಕಿಗೆ ಆಸರೆಯಾಗಿ ಜೀವನಾಡಿಯಾಗಿ ಕಾಯಕ ಮಾಡುತ್ತವೆ ರೈತರು ಗೌರವ ಭಾವನೆಯಿಂದ ಪೂಜಿಸುತ್ತೇವೆ ಗೋವುಗಳನ್ನು ಹತ್ಯೆ ಮಾಡಿದರೆ ಏನು ತಪ್ಪು ಎಂದು ಹೇಳುವುದು ಒಪ್ಪುವಂತದ್ದಲ್ಲ ಎಂದಿದ್ದಾರೆ.
ಕಾನೂನಿನಲ್ಲಿರುವ ಅಡೆ ತಡೆಗಳನ್ನು ನಿವಾರಿಸಿ ತಪ್ಪೇನಿಲ್ಲ. ಗೋಹತ್ಯೆ ಕಾಯ್ದೆ ರದ್ದು ಮಾಡಲು ರೈತರು ಒಪ್ಪುವುದಿಲ್ಲ. ಕಾಡು ಪ್ರಾಣಿಗಳ ಹಾವಳಿಯಿಂದ ಕಾಡಂಚಿನ ಭಾಗದ ರೈತರ ಬದುಕು ಭಯದಿಂದ ತತ್ತರಿಸುತ್ತಿದೆ. ಕಾಡಿನ ಒಳಗೆ ಇರುವ ಎಲ್ಲಾ ರೆಸಾರ್ಟ್’ಗಳು ಮೋಜಿನತಾಣಗಳನ್ನು ಬಂದ್ ಮಾಡಲು ಗಣಿಗಾರಿಕೆಯನ್ನು ನಿಲ್ಲಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
Also read: ಸ್ವಂತ ಅಜ್ಜಿಯನ್ನೇ ಕೊಂದ ಮೊಮ್ಮಗ, ವೆಬ್ ಸೀರೀಸ್ ಶೈಲಿಯಲ್ಲಿ ಶವ ಸುಡಲು ಯತ್ನಿಸಿ ಸಿಕ್ಕಿಬಿದ್ದ
ರಾಜ್ಯದ ಕಬ್ಬು ಬೆಳೆಗಾರರ ಬಾಕಿ ಹಣ ಕೊಡಿಸುವ ಬಗ್ಗೆ ನ್ಯಾಯಾಲಯದಲ್ಲಿರುವ ತಡೆಯಾಜ್ಞೆ ತೆರವುಗೊಳಿಸುವ ಬಗ್ಗೆ ಪ್ರಸಕ್ತ ಸಾಲಿನ ಕಬ್ಬಿನ ದರ ನಿಗದಿಪಡಿಸುವ ಬಗ್ಗೆ ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಜೊತೆ ರಾಜ್ಯ ಕಬ್ಬು ಬೆಳೆಗಾರ ಸಂಘದ ಪದಾಧಿಕಾರಿಗಳು ಕೃಷಿ ಮಾರುಕಟ್ಟೆ ಸಬಾಂಗಣದಲ್ಲಿ ಚರ್ಚಿಸಲಾಯಿತು ಈ ವೇಳೆ ಕಬ್ಬು ಹಾಗು ಸಕ್ಕರೆ ಅಭಿವೃದ್ಧಿ ಆಯುಕ್ತ ಶಿವಾನಂದ ಕೆಲಗಿರಿ ಇದ್ದರು.
ಈ ಸಂದರ್ಭದಲ್ಲಿ ರೈತ ಮುಖಂಡರುಗಳಾದ ರೇವಣ್ಣಯ್ಯ ಹಿರೇಮಠ ಪರಶುರಾಮ್ ಎತ್ತಿನ ಗುಡ್ಡ, ಎನ್.ಎಚ್. ದೇವಕುಮಾರ, ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್, ಎಚ್.ಎನ್. ದೇವಕುಮಾರ್, ಅತ್ತಹಳ್ಳಿ ದೇವರಾಜ್, ಕಾನೂನು ಸಲಹೆಗಾರ ಕಿಸಾನ್, ನರಸಿಂಹಮೂರ್ತಿ, ಸಿದ್ದಲಿಂಗ ಒಡೆಯರ್, ಮಹಾಂತೇಶ್ ಕೆರುಟಗಿ ಇದ್ದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post