No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನ.21ರಂದು ಹಿಂದುಳಿದ ಸಮುದಾಯಗಳ ಪ್ರಮುಖರ ರಾಜ್ಯಮಟ್ಟದ ಸಮಾವೇಶ: ಸಚಿವ ಈಶ್ವರಪ್ಪ

kalpa News by kalpa News
October 27, 2021
in ಬೆಂಗಳೂರು ನಗರ
0
ನ.21ರಂದು ಹಿಂದುಳಿದ ಸಮುದಾಯಗಳ ಪ್ರಮುಖರ ರಾಜ್ಯಮಟ್ಟದ ಸಮಾವೇಶ: ಸಚಿವ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ ೨೧ರಂದು ೨೨೪ ವಿಧಾನಸಭಾ ಕ್ಷೇತ್ರಗಳ ವಿವಿಧ ಹಿಂದುಳಿದ ಸಮುದಾಯಗಳ 8 ಜನ ಪ್ರಮುಖರ ರಾಜ್ಯ ಮಟ್ಟದ ಸಮಾವೇಶ ಏರ್ಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ವತಿಯಿಂದ ಬೆಂಗಳೂರಿನ ವಸಂತ್ ನಗರದ ಅಂಬೇಡ್ಕರ್ ಭವನದಲ್ಲಿ ಇಂದು ನಡೆದ ಕಾರ್ಯಕರ್ತರ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ಹಿಂದುಳಿದ ಸಮಾಜಗಳ ಮಾಜಿ ಸಂಸದರು, ಮಾಜಿ ಶಾಸಕರು, ಮಾಜಿ ಸಚಿವರು, ವಿಧಾನಪರಿಷತ್ ಮಾಜಿ ಸದಸ್ಯರು ಸೇರಿದಂತೆ ಒಬಿಸಿ ಮೋರ್ಚಾ ಪದಾಧಿಕಾರಿಗಳು ಸೇರಿ ಸುಮಾರು 2ರಿಂದ 2,500 ಜನರು ಇದರಲ್ಲಿ ಭಾಗವಹಿಸಲಿದ್ದು, ಈ ಸಮಾವೇಶಕ್ಕೆ ಅರ್ಹರನ್ನು ಗುರುತಿಸಿ ಆಹ್ವಾನಿಸುವ ಕೆಲಸವನ್ನು ಮಾಡಬೇಕು. ಇದು ಸಂಘಟನೆಯ ಮೊದಲನೇ ಪ್ರಯತ್ನ ಎಂದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನೇಕ ಸೌಲಭ್ಯಗಳನ್ನು ನೀಡುತ್ತಿವೆ. ಅವುಗಳ ಬಗ್ಗೆ ತಿಳಿದುಕೊಂಡು ಅರ್ಹ ಫಲಾನುಭವಿಗಳಿಗೆ ತಲುಪಿಸಿ. ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿ ಗರಿಷ್ಠ ಸಂಖ್ಯೆಯ ಹಿಂದುಳಿದ ಸಮಾಜದವರು ಮತ್ತು ದಲಿತರಿಗೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ಪ್ರಧಾನಿಯವರಿಗೆ ಧನ್ಯವಾದ ಸಮರ್ಪಿಸಿದರು. ಬಿಜೆಪಿ ಹಿಂದೆಯೂ ಹಿಂದುಳಿದ ಸಮಾಜಗಳ ಮಠಗಳಿಗೆ 100 ಕೋಟಿ ಅನುದಾನ ನೀಡಿದೆ. ಇದರಿಂದ ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್, ಆಸ್ಪತ್ರೆ ಸೇರಿದಂತೆ ವಿವಿಧ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳೂ ನಡೆದಿವೆ ಎಂದರು.

ಹಿಂದುಳಿದ ಸಮಾಜ, ಜನಪ್ರತಿನಿಧಿಗಳು ಮತ್ತು ಸರಕಾರದ ನಡುವಿನ ಕೊಂಡಿಯಾಗಿ ಮೋರ್ಚಾ ಕೆಲಸ ಮಾಡಬೇಕು. ಕುಟುಂಬ, ಜಾತಿಯ ಅಭಿವೃದ್ಧಿಯಿಂದ ಹಿಂದುತ್ವದ ಅಭಿವೃದ್ಧಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಜಾತಿಯ ಸಂಘಟನೆಗಳ ಸಮಾವೇಶದಲ್ಲಿ ಭಾಗವಹಿಸುವುದು ತಪ್ಪಲ್ಲ. ಒಂದು ಕಾಲದಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರು ಕಾಂಗ್ರೆಸ್ ಜೊತೆಗಿದ್ದರು. ಕಾಂಗ್ರೆಸ್ ಜಾತಿ, ಮತ ರಾಜಕೀಯವನ್ನು ನೆಚ್ಚಿಕೊಂಡಿದೆ. ಈಗ ಹಿಂದುಳಿದವರು ಮತ್ತು ದಲಿತರಲ್ಲಿ ಶೇ ೭೦ಕ್ಕೂ ಹೆಚ್ಚು ಜನರು ಬಿಜೆಪಿ ಜೊತೆಗಿದ್ದಾರೆ. ರಾಷ್ಟಿಯವಾದ ಮುಸ್ಲಿಮರು ಬಿಜೆಪಿ ಜೊತೆಗಿದ್ದಾರೆ. ಅವರೆಲ್ಲರೂ ನರೇಂದ್ರ ಮೋದಿಯವರು, ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿ ನಮ್ಮ ಜೊತೆಗಿದ್ದಾರೆ ಎಂದು ಹೇಳಿದರು.

ಕಂಬಳಿ ವಿಚಾರ ಮೇಲೆತ್ತಿ ಸ್ವಲ್ಪವಾದರೂ ಮತ ಪಡೆಯಲು ಕಾಂಗ್ರೆಸ್‌ನವರು ಮುಂದಾಗಿದ್ದಾರೆ. ಅಷ್ಟು ವರ್ಷ ಆಡಳಿತದಲ್ಲಿದ್ದರೂ ಕಾಂಗ್ರೆಸ್‌ಗೆ ವಾಲ್ಮೀಕಿ, ಸಂಗೊಳ್ಳಿ ರಾಯಣ್ಣ ಅವರ ನೆನಪಾಗಲಿಲ್ಲ. ಎಲ್ಲ ಸಮಾಜದಲ್ಲೂ ಮಹಾತ್ಮರಿದ್ದಾರೆ. ಅವರ ಕೊಡುಗೆ, ಜೀವನಾದರ್ಶವನ್ನು ತಿಳಿಸುವ ಕೆಲಸ ನಮ್ಮ ಮೋರ್ಚಾದಿಂದ ನಡೆಯಲಿ ಎಂದು ತಿಳಿಸಿದರು.

ಒಬಿಸಿ ಮೋರ್ಚಾದ ರಾಷ್ಟಿಯ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಎ ಸುವರ್ಣ ಅವರು ಮಾತನಾಡಿ, ದೇಶದಲ್ಲಿ ಆಡಳಿತ ಮಾಡಿದ ಕಾಂಗ್ರೆಸ್ ಸರಕಾರಗಳು ಹಿಂದುಳಿದ ವರ್ಗದವರನ್ನು ಕೇವಲ ಮತ ಬ್ಯಾಂಕ್ ಆಗಿ ಬಳಸಿಕೊಂಡವು. ಆದರೆ, ಬಿಜೆಪಿ ಸರಕಾರ ಕೇಂದ್ರದಲ್ಲಿ ಆಡಳಿತಕ್ಕೆ ಬಂದ ಬಳಿಕ ಹಿಂದುಳಿದ ವರ್ಗದ ನಿಜವಾದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಇದರಿಂದ ಹಿಂದುಳಿದ ವರ್ಗಗಳು ಈಗ ಬಿಜೆಪಿಯನ್ನು ಬೆಂಬಲಿಸುತ್ತಿವೆ ಎಂದರು.

ಒಬಿಸಿ ಮೋರ್ಚಾದ ರಾಜ್ಯ ಅಧ್ಯಕ್ಷ ನೆ.ಲ. ನರೇಂದ್ರಬಾಬು ಮಾತನಾಡಿ, ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಅಂತ್ಯೋದಯದ ಪರಿಕಲ್ಪನೆಯನ್ನು ನನಸಾಗಿಸಲು ಒಬಿಸಿ ಮೋರ್ಚಾ ಶ್ರಮಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ಧಿಯ ಕನಸು ನನಸಾಗುವತ್ತ ನಡೆದಿದೆ ಎಂದು ವಿವರಿಸಿದರು. ದೊಡ್ಡ ಸಂಖ್ಯೆಯಲ್ಲಿರುವ ಹಿಂದುಳಿದ ಸಮಾಜಕ್ಕೆ ನ್ಯಾಯ ಒದಗಿಸಲು ಪ್ರಧಾನಿಯವರು ಶ್ರಮಿಸುತ್ತಿದ್ದಾರೆ. ಹಿಂದೆ ಆಡಳಿತ ಮಾಡಿದ ಸರಕಾರಗಳು ಈ ವರ್ಗವನ್ನೇ ಕಡೆಗಣಿಸಿದ್ದವು ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್, ವಿಧಾನಪರಿಷತ್ ಸದಸ್ಯರಾದ ರಘುನಾಥ್ರಾವ್ ಮಲ್ಕಾಪುರೆ, ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ನೂರೊಂದುಶೆಟ್ಟಿ, ಮಾಜಿ ಸಂಸದರಾದ ವಿರೂಪಾಕ್ಷಪ್ಪ, ಸಿ.ಎಸ್. ವಿಜಯಶಂಕರ್, ವಿಶ್ವಕರ್ಮ ನಿಗಮದ ಅಧ್ಯಕ್ಷರಾದ ಬಾಬು ಪತ್ತಾರ್, ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister EshwarappaNews in KannadaNews KannadaOBC MorchaState Newsಒಬಿಸಿ ಮೋರ್ಚಾಬೆಂಗಳೂರುಸಚಿವ ಈಶ್ವರಪ್ಪ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭರಮಸಾಗರದ ಕೆರೆಯನ್ನು ಪ್ರವಾಸಿ ತಾಣವನ್ನಾಗಿಸಲು ಮನವಿ

Next Post

ಆಕ್ರಮ ಮರಳು ಸಾಗಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

kalpa News

kalpa News

Next Post
ಆಕ್ರಮ ಮರಳು ಸಾಗಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಆಕ್ರಮ ಮರಳು ಸಾಗಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

Leave a Reply Cancel reply

Your email address will not be published. Required fields are marked *

No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL