No Result
View All Result
Record Budget: Chief Minister Must Fulfill Hometown Demands, Urges Dr. Shushrutha Gowda
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Monday, March 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಕಲಿ ಬೀಜ ಪೂರೈಕೆದಾರರ ವಿರುದ್ಧ ಕಠಿಣ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 3, 2022
in ಬೆಂಗಳೂರು ನಗರ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಹಿರಿಯ ಅಧಿಕಾರಿಗಳು ಖುದ್ದು ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅವರು ಇಂದು ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ರಾಜ್ಯದಲ್ಲಿ ಮೇ 31ರ ಮಾಹಿತಿಯಂತೆ 1.26 ಲಕ್ಷ ಮೆಟ್ರಿಕ್ ಟನ್ ಡಿಎಪಿ ಲಭ್ಯವಿದ್ದು, ಒಟ್ಟಾರೆ, 7.64 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದೆ. ರಾಜ್ಯದ ಬೇಡಿಕೆ ಪೂರೈಸಲು ಯಾವುದೇ ಕೊರತೆ ಇಲ್ಲ. ಆದರೆ, ವ್ಯವಸ್ಥಿತವಾಗಿ ಅಗತ್ಯ ಆಧರಿಸಿ, ರಸಗೊಬ್ಬರ ಸಕಾಲದಲ್ಲಿ ಪೂರೈಸಲು ಹಿರಿಯ ಅಧಿಕಾರಿಗಳೇ ಮೇಲ್ವಿಚಾರಣೆ ನಡೆಸಿ, ಯಾವುದೇ ಕೃತಕ ಅಭಾವ ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಅಂತೆಯೇ ಬಿತ್ತನೆ ಬೀಜ ರಾಜ್ಯದಲ್ಲಿ 7.81 ಲಕ್ಷ ಕ್ವಿಂಟಾಲ್‍ ನಷ್ಟು ಲಭ್ಯವಿದ್ದು, ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿಯೇ ಲಭ್ಯವಿದೆ. ಆದರೆ ನಕಲಿ ಬೀಜಗಳ ಹಾವಳಿಯನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಈ ಕುರಿತು ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕು. ನಕಲಿ ಬೀಜ ಪೂರೈಕೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 114.54 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇದರೊಂದಿಗೆ ಕಂದಾಯ ಇಲಾಖೆ ಹಾಗೂ ಜಲ ಸಂಪನ್ಮೂಲ ಇಲಾಖೆಗಳಿಂದ, ಬಂಜರು ಭೂಮಿ ಹಾಗೂ ಸವಳು-ಜವಳು ಭೂಮಿಯ ಮಾಹಿತಿ ಪಡೆದು, ಈ ವರ್ಷ ಕನಿಷ್ಠ ತಲಾ ಒಂದು ಲಕ್ಷ ಹೆಕ್ಟೇರ್‍ ನಷ್ಟು ಬಂಜರು ಭೂಮಿ ಹಾಗೂ ಸವಳು-ಜವಳು ಭೂಮಿಯನ್ನು ಕೃಷಿಯೋಗ್ಯವಾಗಿ ಪರಿವರ್ತಿಸುವಂತೆ ಸೂಚಿಸಿದರು.

ಸಭೆಯ ಮುಖ್ಯಾಂಶಗಳು:
ಸೆಕೆಂಡರಿ ಕೃಷಿ ನಿರ್ದೇಶನಾಲಯವು ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಎಂಎಸ್‍ಎಂಇಗಳು, ಅಗ್ರಿಗೇಟರುಗಳು, ಸ್ವಸಹಾಯ ಸಂಘಗಳು, ಆಂಕರ್‍ ಬ್ಯಾಂಕಿಂಗ್ ಜೊತೆಗೆ ನಿಕಟ ಸಂಪರ್ಕ ಬೆಳೆಸಿ ಕಾರ್ಯ ನಿರ್ವಹಿಸಬೇಕು. ರೈತರಿಂದ ಕೃಷಿ ಉತ್ಪನ್ನ ಖರೀದಿಸುವಂತೆ ಹಲವು ಅಗ್ರಿಗೇಟರುಗಳಿಗೆ ವಿವಿಧ ಸಂದರ್ಭಗಳಲ್ಲಿ ಸಲಹೆ ನೀಡಿದ್ದೇನೆ. ಈ ಕುರಿತು ಸಮನ್ವಯ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Also read: ಅತ್ಯಾಧುನಿಕ ರೇಷ್ಮೆಗೂಡು ಮಾರುಕಟ್ಟೆ: ಜೂನ್ ಅಂತ್ಯದೊಳಗೆ ಡಿಪಿಆರ್ ಸಿದ್ಧತೆಗೆ ಸಿಎಂ ಸೂಚನೆ

ರಾಜ್ಯದಲ್ಲಿ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳು ಬೆಳೆಗಳ ಉತ್ಪಾದಕತೆಯನ್ನು ಸುಸ್ಥಿರ ಅಭಿವೃದ್ಧಿ ಗುರಿಯ ಮಟ್ಟಕ್ಕೆ ಹೆಚ್ಚಿಸಲು ಕ್ರಿಯಾ ಯೋಜನೆ ರೂಪಿಸುವಂತೆ ಸೂಚಿಸಿದರು.

ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಹಂಚಿಕೆ ಮಾಡುವಾಗ ರೈತ ಉತ್ಪಾದಕ ಸಂಘಗಳಿಗೆ ಆದ್ಯತೆ ನೀಡಲು ನಿರ್ದೇಶನ ನೀಡಿದರು.

ಕೃಷಿ ಸಿಂಚಾಯಿ ಯೋಜನೆಯಡಿ 57 ತಾಲ್ಲೂಕುಗಳ 2.75 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜಲಾನಯನ ಅಭಿವೃದ್ಧಿ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ರಾಜ್ಯದ ಪಾಲಿನ ಅನುದಾನ ಮಂಜೂರು ಮಾಡಲಾಗಿದೆ. ಈ ಯೋಜನೆಯಡಿ ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಿ, ಜಲಾನಯನ ಅಭಿವೃದ್ಧಿ ಕೆಲಸಗಳಿಗೇ ಹೆಚ್ಚಿನ ಒತ್ತು ನೀಡಬೇಕು ಹಾಗೂ ಹಿಂದಿನ ಯೋಜನೆಗಳ ಪರಿಣಾಮದ ಅಧ್ಯಯನ ವರದಿ ಸಲ್ಲಿಸುವಂತೆ ಮುಖ್ಯಂತ್ರಿಗಳು ತಿಳಿಸಿದರು.

ಕೃಷಿ ಯಾಂತ್ರೀಕರಣ ಉತ್ತೇಜನಕ್ಕಾಗಿ ಪ್ರತಿ ಎಕರೆಗೆ 250 ರೂ. ನಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಯನ್ನು ಈ ಮಾಸಾಂತ್ಯದೊಳಗೆ ಜಾರಿಗೊಳಿಸಲು ಸೂಚಿಸಿದರು.

ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐಎಸ್ ಎನ್ ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾಧ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share200Tweet123Send
Previous Post

ಅತ್ಯಾಧುನಿಕ ರೇಷ್ಮೆಗೂಡು ಮಾರುಕಟ್ಟೆ: ಜೂನ್ ಅಂತ್ಯದೊಳಗೆ ಡಿಪಿಆರ್ ಸಿದ್ಧತೆಗೆ ಸಿಎಂ ಸೂಚನೆ

Next Post

ಶ್ರೀರಂಗಪಟ್ಟಣದ ಹಿಂದೂ ರ್‍ಯಾಲಿ ಕೊನೆಯ ಕ್ಷಣದಲ್ಲಿ ರದ್ದು: ಕಾರಣವೇನು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀರಂಗಪಟ್ಟಣದ ಹಿಂದೂ ರ್‍ಯಾಲಿ ಕೊನೆಯ ಕ್ಷಣದಲ್ಲಿ ರದ್ದು: ಕಾರಣವೇನು ಗೊತ್ತಾ?

ಶ್ರೀರಂಗಪಟ್ಟಣದ ಹಿಂದೂ ರ್‍ಯಾಲಿ ಕೊನೆಯ ಕ್ಷಣದಲ್ಲಿ ರದ್ದು: ಕಾರಣವೇನು ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
Record Budget: Chief Minister Must Fulfill Hometown Demands, Urges Dr. Shushrutha Gowda

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

March 2, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

March 2, 2026
ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL