Monday, June 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಜ.30ರೊಳಗಾಗಿ ಮುಜರಾಯಿ ದೇವಾಲಯಗಳ ಆಡಿಟ್ ವರದಿ ಸಲ್ಲಿಸಿ: ಸಚಿವೆ ಶಶಿಕಲಾ ಜೊಲ್ಲೆ ತಾಕೀತು

November 17, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದ ಮುಜರಾಯಿ ಇಲಾಖೆಯ ಹಲವಾರು ದೇವಸ್ಥಾನಗಳಲ್ಲಿ ಹಲವಾರು ವರ್ಷಗಳಿಂದ ಲೆಕ್ಕಪತ್ರ ತಪಾಸಣೆ ನಡೆದಿಲ್ಲ. ಇದು ದೇವಸ್ಥಾನದ ಆಡಳಿತದ ವಿಷಯದಲ್ಲಿ ಜನರಲ್ಲಿ ಸಂಶಯ ಮೂಡಿಸುತ್ತದೆ. ಈ ನಿಟ್ಟಿನಲ್ಲಿ ಜನವರಿ 30, 2022 ರ ಒಳಗಾಗಿ ಲೆಕ್ಕಪತ್ರ ತಪಾಸಣೆ ವರದಿಯನ್ನು ಸಲ್ಲಿಸದ ದೇವಸ್ಥಾನದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ, ಹಜ್‌ ಹಾಗೂ ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಎಚ್ಚರಿಕೆ ನೀಡಿದ್ದಾರೆ.

ವಿಕಾಸಸೌಧಲ್ಲಿ ನಡೆದ ಎ ಮತ್ತು ಬಿ ವರ್ಗದ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗೊಳೊಂದಿಗಿನ ಸಭೆಯಲ್ಲಿ ರಾಜ್ಯದ ಮುಜರಾಯಿ ದೇವಸ್ಥಾನಗಳ ಅಭಿವೃದ್ದಿ ಕಾರ್ಯ ಎದುರಿಸುತ್ತಿರುವ ಸಮಸ್ಯೆಗಳ ವಿಸ್ತ್ರತ ವರದಿಯನ್ನು ಪಡೆದುಕೊಂಡರು.

ಆಡಿಟ್‌ ರಿಪೋರ್ಟ್‌ ಸಲ್ಲಿಸಲು ಗಡುವು:
ಜನವರಿ 30,2022 ರ ಒಳಗಾಗಿ ಮಜರಾಯಿ ದೇವಸ್ಥಾನಗಳು ಬಾಕಿ ಇರುವ ಎಲ್ಲಾ ವರ್ಷಗಳ ಲೆಕ್ಕಪತ್ರ ತಪಾಸಣೆಯ ವರದಿಯನ್ನು ಸಲ್ಲಸಬೇಕು. ರಾಜ್ಯದಲ್ಲಿ 207 ಎ ದರ್ಜೆ, 139 ಬಿ ದರ್ಜೆ ದೇವಸ್ಥಾನಗಳಿವೆ. ಆದಾಯ ಕಡಿಮೆ ಇರುವ 34217 ಸಿ ದರ್ಜೆಯ ದೇವಸ್ಥಾನಗಳಿವೆ. ಇವುಗಳಲ್ಲಿ ಚಾಮುಂಡೇಶ್ವರಿ ದೇವಸ್ಥಾನ, ಯಡಿಯೂರು ಸಿದ್ದಲಿಂಗೇಶ್ವರ ದೇವಸ್ಥಾನ, ಘಾಟಿ ಸುಬ್ರಮಣ್ಯ ಮತ್ತು ಬೆಂಗಳೂರಿನ ಬನಶಂಕರಿ ದೇವಸ್ಥಾನಗಳಲ್ಲಿ ಮಾತ್ರ ಪ್ರತಿವರ್ಷ ಲೆಕ್ಕತಪಾಸಣಾ ವರದಿಯನ್ನು ನೀಡಲಾಗಿದೆ. ಇನ್ನುಳಿದ ದೇವಸ್ಥಾನಗಳಲ್ಲಿ ಹಲವು ದೇವಸ್ಥಾನಗಳ ಲೆಕ್ಕಪತ್ರ ತಪಾಸಣೆಯ ಸುಮಾರು ೨ ದಶಕಗಳಿಂದ ಬಾಕಿ ಇದೆ. ಈ ರೀತಿ ಲೆಕ್ಕಪತ್ರ ವರದಿಯನ್ನು ನೀಡದೇ ಇರುವುದು ದೇವಸ್ಥಾನ ಆಡಳಿತ ಮಂಡಳಿ ಹಾಗೂ ಆಡಳಿತದ ಬಗ್ಗೆ ಸಂಶಯ ಹುಟ್ಟು ಹಾಕುತ್ತದೆ. ಇನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ದೇವಸ್ಥಾನಗಳು ತಮ್ಮ ಲೆಕ್ಕಪತ್ರ ತಪಾಸಣಾ ವರದಿಯನ್ನು ಸಲ್ಲಿಸುವುದು ಕಡ್ಡಾಯ. ಮುಂದಿನ ಜನವರಿ 30 ರ ಒಳಗಾಗಿ ಲೆಕ್ಕಪತ್ರ ತಪಾಸಣಾ ವರದಿಯನ್ನು ಸಲ್ಲಿಸದೇ ಇದ್ದಲ್ಲಿ ಆಯಾ ದೇವಸ್ಥಾನಗಳ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು

ಐಟಿಎಂಎಸ್‌ ಕಾರ್ಯ ಚುರುಕುಗೊಳಿಸಲು ಸೂಚನೆ:
ರಾಜ್ಯದ ಸಮಗ್ರ ದೇವಸ್ಥಾನಗಳ ಇಂಟಿಗ್ರೇಟೆಡ್‌ ವೆಬ್‌ಸೈಟ್‌ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ. ದೇವಸ್ಥಾನಗಳ ಇತಿಹಾಸ, ಐತಿಹ್ಯ ಹಾಗೂ ದೇವಸ್ಥಾನದ ಮಹತ್ವ ವನ್ನು ವೆಬ್‌ಸೈಟ್‌ ನಲ್ಲಿ ಅಳವಡಿಸಲು ಮಾಹಿತಿಯನ್ನ ಕ್ರೋಢೀಕರಿಸಲು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಮುಜರಾಯಿ ದೇವಸ್ಥಾನಗಳ ಮೇಲೆ ಸರಕಾರದ ನಾಮಫಲಕ ಕಡ್ಡಾಯ: ರಾಜ್ಯದ ಹಲವಾರು ಮುಜರಾಯಿ ದೇವಸ್ಥಾನಗಳ ಮೇಲೆ ಕರ್ನಾಟಕ ಸರಕಾರದ ನಾಮಫಲಕ ಇಲ್ಲ. ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳ ಮೇಲೆ ಮುಜರಾಯಿ ಇಲಾಖೆಯ ನಾಮಫಲಕಗಳನ್ನು ಅಳವಡಿಸುವುದು ಕಡ್ಡಾಯ ವಾಗಿದೆ. ಈ ನಿಟ್ಟಿನಲ್ಲಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳು ತಪ್ಪದೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಚತೆಗೆ ಆದ್ಯತೆ: ರಾಜ್ಯದ ಧಾರ್ಮಿಕ ಕೇಂದ್ರಗಳನ್ನು ಮತ್ತಷ್ಟು ಪ್ರವಾಸಿ ಸ್ನೇಹೀ ಮಾಢುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಗೊಳಿಸುವತ್ತ ಹೆಚ್ಚಿನ ಗಮನ ನೀಡಬೇಕು. ಮುಖ್ಯವಾಗಿ ದೇವಸ್ಥಾನ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಚತೆ ಕಾಪಾಡುವುದು ಆದ್ಯತೆ ಆಗಬೇಕು. ರಾಜ್ಯದ 25 ಪ್ರಮುಖ ದೇವಸ್ಥಾನಗಳಲ್ಲಿ ತ್ಯಾಜ್ಯ ವಿಲೇವಾರಿ, ಮೂಲಭೂತ ಸೌಕರ್ಯಗಳ ಅಭಿವೃದ್ದಿ ಹೀಗೆ ಹಲವಾರು ವಿಷಯಗಳ ಬಗ್ಗೆ ಡಿಪಿಆರ್‌ ರಚಿಸಲು ಏಜೆನ್ಸಿಯನ್ನು ನೇಮಕ ಮಾಡಲಾಗಿದೆ. ಈ ಏಜೆನ್ಸಿ ಡಿಸೆಂಬರ್‌ ತಿಂಗಳಲ್ಲಿ 4 ದೇವಸ್ಥಾನಗಳ ಡಿಪಿಆರ್‌ ಸಲ್ಲಿಸಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು.

ಕಲ್ಯಾಣೀ ಪುನರುಜ್ಜೀವನಕ್ಕೆ ನರೇಗಾ ಮತ್ತು ಸ್ವಯಂ ಸೇವಾ ಸಂಘಟನೆಗಳ ಬಳಕೆಗೆ ಸೂಚನೆ:
ರಾಜ್ಯದ ಒಟ್ಟಾರೆ ಕಲ್ಯಾಣಿಗಳಲ್ಲಿ ಸ್ವಚ್ಚವಾಗಿರುವ ಹಾಗೂ ಸ್ವಚ್ಚತೆ ಕಾಪಾಡದೇ ಇರುವ ಕಲ್ಯಾಣೀಗಳ ಪಟ್ಟಿಯನ್ನು ನೀಡುವಂತೆ ಆಯುಕ್ತರಿಗೆ ಸೂಚನೆ ನೀಡಿದರು. ಸ್ವಚ್ಚತೆಯನ್ನು ಕಾಪಾಡದೇ ಇರುವ ಕಲ್ಯಾಣೀಗಳ ಪುನರುಜ್ಜೀವನಕ್ಕೆ ಪಂಚಾಯತ್‌ ಇಲಾಖೆ ಸಹಯೋಗದಲ್ಲಿ ನರೆಗಾ ಮತ್ತು ಸ್ವಯಂ ಸೇವಾ ಸಂಘಟನೆಗಳನ್ನು ಬಳಸಿಕೊಳ್ಳುವಂತೆ ಸೂಚನೆ ನೀಡಿದರು.

ದೇವಸ್ಥಾನಗಳ ಜಾಗ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ದೇವಸ್ಥಾನಗಳ ಜಾಗ ಸಮೀಕ್ಷೆಗೆ ವಿಶೇಷ ಅಭಿಯಾನ ನಡೆಸಲು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವಂತೆ ಸೂಚನೆ ನೀಡಿದರು. ಒಟ್ಟಾರೆಯಾಗಿ ರಾಜ್ಯದ ದೇವಸ್ಥಾನಗಳನ್ನ ಇನ್ನಷ್ಟು ಅಭಿವೃದ್ದಿಗೊಳಿಸುವ ಮತ್ತು ಪಾರದರ್ಶಕ ಆಡಳಿತ ಮಾಡುವ ನಿಟ್ಟಿನಲ್ಲಿ ಕಾರ್ಯತತ್ಪರರಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮುಜರಾಯಿ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌, ಆಯುಕ್ತೆ ರೋಹಿಣಿ ಸಿಂಧೂರಿ ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯರು ಮತ್ತು ರಾಜ್ಯದ ಎ ಮತ್ತು ಬಿ ದರ್ಜೆಯ ದೇವಸ್ಥಾನಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Audit ReportBangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Shashikala JolleNews in KannadaNews KannadaState Newsಆಡಿಟ್‌ ರಿಪೋರ್ಟ್‌ಬೆಂಗಳೂರುಮುಜರಾಯಿ ದೇವಾಲಯಸಚಿವೆ ಶಶಿಕಲಾ ಜೊಲ್ಲೆ
Previous Post

ಕಲಿತ ವಿದ್ಯೆಯನ್ನು ಸಮಾಜದಲ್ಲಿನ ನ್ಯೂನತೆ ಹೋಗಲಾಡಿಸಲು ಬಳಸಿಕೊಳ್ಳಿ: ಕುಲಸಚಿವೆ ಅನುರಾಧ ಸಲಹೆ

Next Post

ವಾಣಿಜ್ಯ ಮಂಡಳಿ ಚುನಾವಣೆ ನಡೆಸಲು ಸಹಕಾರ ಇಲಾಖೆಯಿಂದ ಹಸಿರು ನಿಶಾನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಾಣಿಜ್ಯ ಮಂಡಳಿ ಚುನಾವಣೆ ನಡೆಸಲು ಸಹಕಾರ ಇಲಾಖೆಯಿಂದ ಹಸಿರು ನಿಶಾನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025

ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್

June 2, 2025

ಮತ್ತೆ ಕೊರೋನಾ ಆತಂಕ? ಈ ರಾಜ್ಯಗಳಲ್ಲಿ ಹೆಚ್ಚು ಪ್ರಕರಣ | ಎಲ್ಲೆಲ್ಲಿ?

June 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025

ಮಹಿಳೆಯರು ಸಮಾಜದಲ್ಲಿ ಸಬಲರಾಗಲು ಕುಟುಂಬದ ಸಹಕಾರ ಅತ್ಯಗತ್ಯ: ಕವಿತಾ ಯೋಗಪ್ಪನವರ್

June 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!