No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜ.30ರೊಳಗಾಗಿ ಮುಜರಾಯಿ ದೇವಾಲಯಗಳ ಆಡಿಟ್ ವರದಿ ಸಲ್ಲಿಸಿ: ಸಚಿವೆ ಶಶಿಕಲಾ ಜೊಲ್ಲೆ ತಾಕೀತು

kalpa News by kalpa News
November 17, 2021
in ಬೆಂಗಳೂರು ನಗರ
0
ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದ ಮುಜರಾಯಿ ಇಲಾಖೆಯ ಹಲವಾರು ದೇವಸ್ಥಾನಗಳಲ್ಲಿ ಹಲವಾರು ವರ್ಷಗಳಿಂದ ಲೆಕ್ಕಪತ್ರ ತಪಾಸಣೆ ನಡೆದಿಲ್ಲ. ಇದು ದೇವಸ್ಥಾನದ ಆಡಳಿತದ ವಿಷಯದಲ್ಲಿ ಜನರಲ್ಲಿ ಸಂಶಯ ಮೂಡಿಸುತ್ತದೆ. ಈ ನಿಟ್ಟಿನಲ್ಲಿ ಜನವರಿ 30, 2022 ರ ಒಳಗಾಗಿ ಲೆಕ್ಕಪತ್ರ ತಪಾಸಣೆ ವರದಿಯನ್ನು ಸಲ್ಲಿಸದ ದೇವಸ್ಥಾನದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ, ಹಜ್‌ ಹಾಗೂ ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಎಚ್ಚರಿಕೆ ನೀಡಿದ್ದಾರೆ.

ವಿಕಾಸಸೌಧಲ್ಲಿ ನಡೆದ ಎ ಮತ್ತು ಬಿ ವರ್ಗದ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗೊಳೊಂದಿಗಿನ ಸಭೆಯಲ್ಲಿ ರಾಜ್ಯದ ಮುಜರಾಯಿ ದೇವಸ್ಥಾನಗಳ ಅಭಿವೃದ್ದಿ ಕಾರ್ಯ ಎದುರಿಸುತ್ತಿರುವ ಸಮಸ್ಯೆಗಳ ವಿಸ್ತ್ರತ ವರದಿಯನ್ನು ಪಡೆದುಕೊಂಡರು.

ಆಡಿಟ್‌ ರಿಪೋರ್ಟ್‌ ಸಲ್ಲಿಸಲು ಗಡುವು:
ಜನವರಿ 30,2022 ರ ಒಳಗಾಗಿ ಮಜರಾಯಿ ದೇವಸ್ಥಾನಗಳು ಬಾಕಿ ಇರುವ ಎಲ್ಲಾ ವರ್ಷಗಳ ಲೆಕ್ಕಪತ್ರ ತಪಾಸಣೆಯ ವರದಿಯನ್ನು ಸಲ್ಲಸಬೇಕು. ರಾಜ್ಯದಲ್ಲಿ 207 ಎ ದರ್ಜೆ, 139 ಬಿ ದರ್ಜೆ ದೇವಸ್ಥಾನಗಳಿವೆ. ಆದಾಯ ಕಡಿಮೆ ಇರುವ 34217 ಸಿ ದರ್ಜೆಯ ದೇವಸ್ಥಾನಗಳಿವೆ. ಇವುಗಳಲ್ಲಿ ಚಾಮುಂಡೇಶ್ವರಿ ದೇವಸ್ಥಾನ, ಯಡಿಯೂರು ಸಿದ್ದಲಿಂಗೇಶ್ವರ ದೇವಸ್ಥಾನ, ಘಾಟಿ ಸುಬ್ರಮಣ್ಯ ಮತ್ತು ಬೆಂಗಳೂರಿನ ಬನಶಂಕರಿ ದೇವಸ್ಥಾನಗಳಲ್ಲಿ ಮಾತ್ರ ಪ್ರತಿವರ್ಷ ಲೆಕ್ಕತಪಾಸಣಾ ವರದಿಯನ್ನು ನೀಡಲಾಗಿದೆ. ಇನ್ನುಳಿದ ದೇವಸ್ಥಾನಗಳಲ್ಲಿ ಹಲವು ದೇವಸ್ಥಾನಗಳ ಲೆಕ್ಕಪತ್ರ ತಪಾಸಣೆಯ ಸುಮಾರು ೨ ದಶಕಗಳಿಂದ ಬಾಕಿ ಇದೆ. ಈ ರೀತಿ ಲೆಕ್ಕಪತ್ರ ವರದಿಯನ್ನು ನೀಡದೇ ಇರುವುದು ದೇವಸ್ಥಾನ ಆಡಳಿತ ಮಂಡಳಿ ಹಾಗೂ ಆಡಳಿತದ ಬಗ್ಗೆ ಸಂಶಯ ಹುಟ್ಟು ಹಾಕುತ್ತದೆ. ಇನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ದೇವಸ್ಥಾನಗಳು ತಮ್ಮ ಲೆಕ್ಕಪತ್ರ ತಪಾಸಣಾ ವರದಿಯನ್ನು ಸಲ್ಲಿಸುವುದು ಕಡ್ಡಾಯ. ಮುಂದಿನ ಜನವರಿ 30 ರ ಒಳಗಾಗಿ ಲೆಕ್ಕಪತ್ರ ತಪಾಸಣಾ ವರದಿಯನ್ನು ಸಲ್ಲಿಸದೇ ಇದ್ದಲ್ಲಿ ಆಯಾ ದೇವಸ್ಥಾನಗಳ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು

ಐಟಿಎಂಎಸ್‌ ಕಾರ್ಯ ಚುರುಕುಗೊಳಿಸಲು ಸೂಚನೆ:
ರಾಜ್ಯದ ಸಮಗ್ರ ದೇವಸ್ಥಾನಗಳ ಇಂಟಿಗ್ರೇಟೆಡ್‌ ವೆಬ್‌ಸೈಟ್‌ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ. ದೇವಸ್ಥಾನಗಳ ಇತಿಹಾಸ, ಐತಿಹ್ಯ ಹಾಗೂ ದೇವಸ್ಥಾನದ ಮಹತ್ವ ವನ್ನು ವೆಬ್‌ಸೈಟ್‌ ನಲ್ಲಿ ಅಳವಡಿಸಲು ಮಾಹಿತಿಯನ್ನ ಕ್ರೋಢೀಕರಿಸಲು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಮುಜರಾಯಿ ದೇವಸ್ಥಾನಗಳ ಮೇಲೆ ಸರಕಾರದ ನಾಮಫಲಕ ಕಡ್ಡಾಯ: ರಾಜ್ಯದ ಹಲವಾರು ಮುಜರಾಯಿ ದೇವಸ್ಥಾನಗಳ ಮೇಲೆ ಕರ್ನಾಟಕ ಸರಕಾರದ ನಾಮಫಲಕ ಇಲ್ಲ. ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳ ಮೇಲೆ ಮುಜರಾಯಿ ಇಲಾಖೆಯ ನಾಮಫಲಕಗಳನ್ನು ಅಳವಡಿಸುವುದು ಕಡ್ಡಾಯ ವಾಗಿದೆ. ಈ ನಿಟ್ಟಿನಲ್ಲಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳು ತಪ್ಪದೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಚತೆಗೆ ಆದ್ಯತೆ: ರಾಜ್ಯದ ಧಾರ್ಮಿಕ ಕೇಂದ್ರಗಳನ್ನು ಮತ್ತಷ್ಟು ಪ್ರವಾಸಿ ಸ್ನೇಹೀ ಮಾಢುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಗೊಳಿಸುವತ್ತ ಹೆಚ್ಚಿನ ಗಮನ ನೀಡಬೇಕು. ಮುಖ್ಯವಾಗಿ ದೇವಸ್ಥಾನ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಚತೆ ಕಾಪಾಡುವುದು ಆದ್ಯತೆ ಆಗಬೇಕು. ರಾಜ್ಯದ 25 ಪ್ರಮುಖ ದೇವಸ್ಥಾನಗಳಲ್ಲಿ ತ್ಯಾಜ್ಯ ವಿಲೇವಾರಿ, ಮೂಲಭೂತ ಸೌಕರ್ಯಗಳ ಅಭಿವೃದ್ದಿ ಹೀಗೆ ಹಲವಾರು ವಿಷಯಗಳ ಬಗ್ಗೆ ಡಿಪಿಆರ್‌ ರಚಿಸಲು ಏಜೆನ್ಸಿಯನ್ನು ನೇಮಕ ಮಾಡಲಾಗಿದೆ. ಈ ಏಜೆನ್ಸಿ ಡಿಸೆಂಬರ್‌ ತಿಂಗಳಲ್ಲಿ 4 ದೇವಸ್ಥಾನಗಳ ಡಿಪಿಆರ್‌ ಸಲ್ಲಿಸಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು.

ಕಲ್ಯಾಣೀ ಪುನರುಜ್ಜೀವನಕ್ಕೆ ನರೇಗಾ ಮತ್ತು ಸ್ವಯಂ ಸೇವಾ ಸಂಘಟನೆಗಳ ಬಳಕೆಗೆ ಸೂಚನೆ:
ರಾಜ್ಯದ ಒಟ್ಟಾರೆ ಕಲ್ಯಾಣಿಗಳಲ್ಲಿ ಸ್ವಚ್ಚವಾಗಿರುವ ಹಾಗೂ ಸ್ವಚ್ಚತೆ ಕಾಪಾಡದೇ ಇರುವ ಕಲ್ಯಾಣೀಗಳ ಪಟ್ಟಿಯನ್ನು ನೀಡುವಂತೆ ಆಯುಕ್ತರಿಗೆ ಸೂಚನೆ ನೀಡಿದರು. ಸ್ವಚ್ಚತೆಯನ್ನು ಕಾಪಾಡದೇ ಇರುವ ಕಲ್ಯಾಣೀಗಳ ಪುನರುಜ್ಜೀವನಕ್ಕೆ ಪಂಚಾಯತ್‌ ಇಲಾಖೆ ಸಹಯೋಗದಲ್ಲಿ ನರೆಗಾ ಮತ್ತು ಸ್ವಯಂ ಸೇವಾ ಸಂಘಟನೆಗಳನ್ನು ಬಳಸಿಕೊಳ್ಳುವಂತೆ ಸೂಚನೆ ನೀಡಿದರು.

ದೇವಸ್ಥಾನಗಳ ಜಾಗ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ದೇವಸ್ಥಾನಗಳ ಜಾಗ ಸಮೀಕ್ಷೆಗೆ ವಿಶೇಷ ಅಭಿಯಾನ ನಡೆಸಲು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವಂತೆ ಸೂಚನೆ ನೀಡಿದರು. ಒಟ್ಟಾರೆಯಾಗಿ ರಾಜ್ಯದ ದೇವಸ್ಥಾನಗಳನ್ನ ಇನ್ನಷ್ಟು ಅಭಿವೃದ್ದಿಗೊಳಿಸುವ ಮತ್ತು ಪಾರದರ್ಶಕ ಆಡಳಿತ ಮಾಡುವ ನಿಟ್ಟಿನಲ್ಲಿ ಕಾರ್ಯತತ್ಪರರಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮುಜರಾಯಿ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌, ಆಯುಕ್ತೆ ರೋಹಿಣಿ ಸಿಂಧೂರಿ ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯರು ಮತ್ತು ರಾಜ್ಯದ ಎ ಮತ್ತು ಬಿ ದರ್ಜೆಯ ದೇವಸ್ಥಾನಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Audit ReportBangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Shashikala JolleNews in KannadaNews KannadaState Newsಆಡಿಟ್‌ ರಿಪೋರ್ಟ್‌ಬೆಂಗಳೂರುಮುಜರಾಯಿ ದೇವಾಲಯಸಚಿವೆ ಶಶಿಕಲಾ ಜೊಲ್ಲೆ
Share219Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಲಿತ ವಿದ್ಯೆಯನ್ನು ಸಮಾಜದಲ್ಲಿನ ನ್ಯೂನತೆ ಹೋಗಲಾಡಿಸಲು ಬಳಸಿಕೊಳ್ಳಿ: ಕುಲಸಚಿವೆ ಅನುರಾಧ ಸಲಹೆ

Next Post

ವಾಣಿಜ್ಯ ಮಂಡಳಿ ಚುನಾವಣೆ ನಡೆಸಲು ಸಹಕಾರ ಇಲಾಖೆಯಿಂದ ಹಸಿರು ನಿಶಾನೆ

kalpa News

kalpa News

Next Post
ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ವಾಣಿಜ್ಯ ಮಂಡಳಿ ಚುನಾವಣೆ ನಡೆಸಲು ಸಹಕಾರ ಇಲಾಖೆಯಿಂದ ಹಸಿರು ನಿಶಾನೆ

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL