Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸಂಸ್ಕೃತಿಯ ಜೊತೆಜೊತೆಗೆ ಉದ್ಯಮದಲ್ಲೂ ಯಶಸ್ಸು ಗಳಿಸಬೇಕು | ಸಂಸದ ತೇಜಸ್ವಿ ಸೂರ್ಯ ಸಲಹೆ

ಹವ್ಯಕ ಯುವಜನೋತ್ಸವ | 'ಪ್ರತಿಬಿಂಬ Grand Final' ಹಾಗೂ 'ಯುವಜನೋತ್ಸವ'

August 7, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಹೆದರುವುದೇ ನಮ್ಮೆಲ್ಲರ ದೌರ್ಬಲ್ಯವಾಗಿದ್ದು, ಹೆದರದೇ ಮುನ್ನುಗಿದಾಗ ಯಶಸ್ಸು ಸಾಧ್ಯ. ನಾವು ಸಶಕ್ತವಾಗಿದ್ದಾಗ ಮಾತ್ರ ಜಗತ್ತಿನಲ್ಲಿ ಗೌರವ ಪ್ರಾಪ್ತವಾಗುತ್ತದೆ. ಉದ್ಯಮಗಳನ್ನು ಹುಟ್ಟುಹಾಕಲು ಈಗ ಪೂರಕ ವಾತಾವರಣವಿದ್ದು, ಈ ದಿಶೆಯಲ್ಲಿ ಯುವ ಸಮುದಾಯ ಆಲೋಚಿಸಬೇಕು ಎಂದು ಸಂಸದ ತೇಜಸ್ವಿ ಸೂರ್ಯ #MP Tejaswi Surya ಹೇಳಿದರು.

ಹವ್ಯಕ ಮಹಾಸಭೆಯಿಂದ ಮಲ್ಲೇಶ್ವರದ ಹವ್ಯಕ ಭವನದಲ್ಲಿ ಆಯೋಜಿತವಾಗಿದ್ದ ‘ಪ್ರತಿಬಿಂಬ Grand Final’ ಹಾಗೂ ‘ಯುವಜನೋತ್ಸವ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾಷೆ ಕೇವಲ ಸಂವಹನ ಮಾಧ್ಯಮ ಮಾತ್ರವಲ್ಲ. ಭಾಷೆ ನಮ್ಮ ಸಂಸ್ಕೃತಿಯ ಸಂವಹನ ಮಾಧ್ಯಮವೂ ಹೌದು. ನಾವು ನಮ್ಮ ಮಾತೃಭಾಷೆಯನ್ನೇ ಮನೆಯಲ್ಲಿ ಬಳಸುವುದರಿಂದ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯ. ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಇರುವವರು ಉದ್ಯಮ ಜಗತ್ತಿನಲ್ಲಿ ಯಶಸ್ಸು ಗಳಿಸುವುದು ಅಸಾಧ್ಯ ಎಂಬ ವಾತಾವರಣವನ್ನು ಕಲ್ಪಿಸಲಾಗಿದೆ. ಇದನ್ನು ಮೀರಿ ನಾವು ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಜೊತೆಜೊತೆಗೆ ಉದ್ಯಮದಲ್ಲೂ ಯಶಸ್ಸು ಗಳಿಸಬೇಕು ಎಂದು ಕಿವಿಮಾತು ಹೇಳಿದ ಅವರು, ಹಣಕಾಸಿನ ಕುರಿತಾದ ಶಿಕ್ಷಣ ಇಂದಿನ ಯುವಜನಾಂಗಕ್ಕೆ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.

ಹವ್ಯಕ ಸಮಾಜ ಜನಸಂಖ್ಯಾ ದೃಷ್ಟಿಯಿಂದ ಅತಿ ಚಿಕ್ಕ ಸಮುದಾಯವಾದರೂ, ಸಮಷ್ಟಿ ಸಮಾಜದ ಮೇಲೆ ಈ ಪುಟ್ಟ ಸಮುದಾಯದ ಪ್ರಭಾವ ಅಚ್ಚಳಿಯದಂತಿದೆ ಎಂದು ಹವ್ಯಕ ಸಮಾಜವನ್ನು ಶ್ಲಾಘಿಸಿದರು.
ಹಿರಿಯ ಪತ್ರಕರ್ತರು ಹಾಗೂ ಉದಯವಾಣಿ ಪ್ರಧಾನ ಸಂಪಾದಕ ರವಿಶಂಕರ್ ಭಟ್ ಮಾತನಾಡಿ, ಸಂಸ್ಕೃತಿ ಎಂಬುದು ಇಂಜಿನ್ ಇದ್ದಂತೆ. ನಾವು ಬಳಸಿದಂತೆ ನಮ್ಮ ಸಂಸ್ಕೃತಿಯು ಉಳಿದು ಬೆಳೆಯುತ್ತದೆ. ವೈವಿಧ್ಯಮಯವಾದ ನಮ್ಮ ಸಂಸ್ಕೃತಿಯನ್ನು ತಲೆಮಾರಿನಿಂದ ತಲೆಮಾರಿಗೆ ದಾಟಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಇಂದು ಸಂಬಂಧಗಳು ವಾಟ್ಸಪ್ – ಫೇಸ್‌ಬುಕ್‌’ಗೇ ಮಾತ್ರ ಸೀಮಿತವಾಗುತ್ತರುವುದು ವಿಷಾಧನೀಯ ಎಂದರು.

ಹವ್ಯಕ ಜನಾಂಗವು ತನ್ನದೇ ಆದ ಭಾಷಾ ಸೊಗಡನ್ನು ಹೊಂದಿದೆ. ಪ್ರಾಂತ್ಯವಾರು ವಿಭಿನ್ನವಾದ ಭಾಷಾ ಸೊಗಡು ಹವಿಗನ್ನಡದ ಹಿರಿಮೆ. ಮನೆಯಲ್ಲಿ ನಮ್ಮ ಭಾಷೆಯನ್ನು ಬಳಸುವ ಮೂಲಕ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಬೇಕು ಎಂದು ಅಭಿಪ್ರಾಯಪಟ್ಟರು.
ಹವ್ಯಕ ಮಹಾಸಭೆಯ ಅಧ್ಯಕ್ಷರಾದ ಡಾ.ಗಿರಿಧರ ಕಜೆ ಮಾತನಾಡಿ, ಯಾವುದೇ ಬೇಡಿಕೆ ಇಲ್ಲದ ಸಮಾಜ ಹವ್ಯಕ ಸಮಾಜ. ನಾವು ಸರ್ಕಾರಗಳಿಗೆ ಎಂದಿಗೂ ಬೇಡಿಕೊಳ್ಳುವುದಿಲ್ಲ. ಹವ್ಯಕ ಸಮಾಜ ನೀಡುವ ಸಮಾಜವಾಗಿದ್ದು, ನಮ್ಮಲ್ಲಿರುವ ಪ್ರತಿಭೆಯಿಂದ ಸಮಷ್ಠಿ ಸಮಾಜದಲ್ಲಿ ಅಗ್ರಗಣ್ಯ ಸ್ಥಾನವನ್ನು ಪಡೆದಿದ್ದೇವೆ ಎಂದರು.

Also read: ಕೊಪ್ಪಳ | ಕಿರ್ಲೋಸ್ಕರ್ ಫೌಂಡ್ರಿ ವಿಸ್ತರಣೆ, ನೂತನ ಯೋಜನೆಗಳ ಜಾರಿಗೆ ವ್ಯಾಪಕ ಬೆಂಬಲ

ಹವಿಗನ್ನಡ ಭಾಷಾ ಶ್ರೀಮಂತಿಕೆಯನ್ನು ಹೊಂದಿದೆ. ಕನ್ನಡದ ಮೊದಲ ನಾಟಕ ಯಾವದು ಎಂದು ಕೇಳಿದರೆ ‘ಇಗ್ಗಪ್ಪ ಹೆಗಡೆ ವಿವಾಹ ಪ್ರಹಸನ’ ಎಂಬ ಉತ್ತರ ಬರುತ್ತದೆ. ಈ ನಾಟಕ ಇರುವುದು ಹವಿಗನ್ನಡದಲ್ಲಿ ಎಂಬುದು ಹವ್ಯಕ ಕನ್ನಡದ ಭಾಷಾ ಶ್ರೀಮಂತಿಕೆಯನ್ನು ತಿಳಿಸುತ್ತದೆ ಎಂದರು.

ಡಿಸೆಂಬರ್ 27, 28 ಹಾಗೂ 29 ರಂದು ಮೂರನೇ ವಿಶ್ವಹವ್ಯಕ ಸಮ್ಮೇಳನ ನಡೆಯಲಿದೆ. ಇದು ಜಾತಿಯ ಸಮ್ಮೇಳನವಾಗಿರದೇ, ಹವ್ಯಕ ಸಂಸ್ಕೃತಿಯನ್ನು ಜಗತ್ತಿನ ಮುಂದೆ ತೆರದಿಡುವ ಕಾರ್ಯವಾಗಿರಲಿದೆ. ಈ ಬೃಹತ್ ಕಾರ್ಯಕ್ರಮಕ್ಕೆ ಸಮಾಜ ಕೈಜೋಡಿಸಬೇಕು ಎಂದು ಕರೆನೀಡಿದರು‌.

ಇದಕ್ಕೂ ಮೊದಲು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿದ್ವಾನ್ ಸೂರ್ಯನಾರಾಯಣ ಭಟ್ ಹಿತ್ಲಳ್ಳಿ, ನಾವು ಅನುಸರಿಸುವ ಅದ್ವೈತ ತತ್ತ್ವದ ಪ್ರತಿಪಾದನೆಯಂತೆ ಈ ಜಗತ್ತೇ ಪ್ರತಿಬಿಂಬವಾಗಿದ್ದು, ಈ ಪ್ರತಿಬಿಂಬ ಕಾರ್ಯಕ್ರಮ ಹವ್ಯಕ ಸಮಾಜದ ಪ್ರತಿಬಿಂಬವಾಗಿದೆ. ಹವ್ಯಕ ಸಮಾಜ ಎಲ್ಲಾ ರಂಗದಲ್ಲೂ ಇದ್ದು, ನಮ್ಮ ಛಾಪನ್ನು ಎಲ್ಲೆಡೆ ಮೂಡಿಸಬೇಕು ಎಂದರು.

ಮಿಸ್ ಯೂನಿವರ್ಸ್ ಪಿಟೈಟ್ ಡಾ.ಶೃತಿ ಹೆಗಡೆ ಮಾತನಾಡಿ, ಸ್ಪರ್ಧೆಯಲ್ಲಿ ಅಥವಾ ಜೀವನದಲ್ಲಿ ಗೆಲ್ಲಲು ಆತ್ಮವಿಶ್ವಾಸ ಮುಖ್ಯ. ಆತ್ಮವಿಶ್ವಾಸದ ಜೊತೆಗೆ ಪರಿಶ್ರಮ ಸೇರಿಕೊಂಡಾಗ ಯಶಸ್ಸು ಕಟ್ಟಿಟ್ಟಬುತ್ತಿ ಎಂದು ಯುವಜನತೆಗೆ ಸ್ಪೂರ್ತಿಯ ಮಾತುಗಳನ್ನಾಡಿದರು.

ಅಭ್ಯಾಗತರಾದ ಅಜಿತ್ ಬೊಪ್ಪನಹಳ್ಳಿ ಮಾತನಾಡಿ, ಇದು ಸಮಾಜಮಾಧ್ಯಮದ ಯುಗವಾಗಿದ್ದು ಸಮಾಜ ಮಾಧ್ಯಮದಲ್ಲಿ ನಾವು ಜವಾಬ್ದಾರಿಯುತವಾಗಿ ವರ್ತಿಸಬೇಕು. ತಾಳ್ಮೆಯಿಂದ ವರ್ತಿಸಬೇಕಾದ್ದು ಸಮಾಜ ಮಾಧ್ಯಮದ ಕುರಿತಾದ ಮೊದಲ ನಿಯಮ ಎಂದು ಕಿವಿಮಾತು ಹೇಳಿದರು.

ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣಕನ್ನಡ, ಬೆಂಗಳೂರಿನ ವಿವಿಧ ಪ್ರಾಂತ್ಯಗಳಲ್ಲಿ ಆಯೋಜಿಸಲಾಗಿದ್ದ ‘ಪ್ರತಿಬಿಂಬ’ ಕಾರ್ಯಕ್ರಮದ Grand finale ನಡೆಯಿತು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.

‘The success story of enterpriser’ ಎಂಬ ಕಾರ್ಯಕ್ರಮದಲ್ಲಿ ಹವ್ಯಕ ಸಮಾಜದ ಯುವ ಉದ್ಯಮಿಗಳು ತಮ್ಮ ಅನುಭವವನ್ನು ಹಂಚಿಕೊಂಡು, ಉದ್ಯಮವನ್ನು ಆರಂಭಿಸುವ ಕುರಿತು ಯುವ ಜನತೆಗೆ ಮಾರ್ಗದರ್ಶನ ಮಾಡಿದರು.
ಖ್ಯಾತ ಗಾಯಕಿ ಪೃಥ್ವಿ ಭಟ್ ಹಾಗೂ ದಿಯಾ ಹೆಗಡೆ ಅವರ ಭಾವಯಾನ ಸಂಗೀತ ಕಾರ್ಯಕ್ರಮ, ಯಕ್ಷನೃತ್ಯ ವೈಭವ, ಯೋಗನೃತ್ಯ ಮುಂತಾದ ಕಾರ್ಯಕ್ರಮಗಳು ಜನಮನರಂಜಿಸಿತು.

ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಸಿಎ. ವೇಣುವಿಘ್ನೇಶ ಸಂಪ, ಉಪಾಧ್ಯಕ್ಷರಾದ ಶ್ರೀಧರ್ ಭಟ್ ಕೆಕ್ಕಾರು, ಕಾರ್ಯದರ್ಶಿ ಪ್ರಶಾಂತ ಭಟ್, ಆದಿತ್ಯ ಕಲಗಾರು, ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ , ಕಾರ್ಯಕ್ರಮದ ಸಂಚಾಲಕ ದಿನೇಶ್ ಎಂ ಭಟ್ ಸೇರಿದಂತೆ ಮಹಾಸಭೆಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMP Tejaswi SuryaNews_in_KannadaNews_Kannadaಬೆಂಗಳೂರುಸಂಸದ ತೇಜಸ್ವಿ ಸೂರ್ಯ
Previous Post

ಕೊಪ್ಪಳ | ಕಿರ್ಲೋಸ್ಕರ್ ಫೌಂಡ್ರಿ ವಿಸ್ತರಣೆ, ನೂತನ ಯೋಜನೆಗಳ ಜಾರಿಗೆ ವ್ಯಾಪಕ ಬೆಂಬಲ

Next Post

VISL ಮುಚ್ಚುವ, ಖಾಸಗೀಕರಣ ಅನುಮೋದನೆ ಹಿಂಪಡೆತ | ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

VISL ಮುಚ್ಚುವ, ಖಾಸಗೀಕರಣ ಅನುಮೋದನೆ ಹಿಂಪಡೆತ | ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!