No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Thursday, May 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಂಸ್ಕೃತಿಯ ಜೊತೆಜೊತೆಗೆ ಉದ್ಯಮದಲ್ಲೂ ಯಶಸ್ಸು ಗಳಿಸಬೇಕು | ಸಂಸದ ತೇಜಸ್ವಿ ಸೂರ್ಯ ಸಲಹೆ

ಹವ್ಯಕ ಯುವಜನೋತ್ಸವ | 'ಪ್ರತಿಬಿಂಬ Grand Final' ಹಾಗೂ 'ಯುವಜನೋತ್ಸವ'

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 7, 2024
in ಬೆಂಗಳೂರು ನಗರ
0
ಸಂಸ್ಕೃತಿಯ ಜೊತೆಜೊತೆಗೆ ಉದ್ಯಮದಲ್ಲೂ ಯಶಸ್ಸು ಗಳಿಸಬೇಕು | ಸಂಸದ ತೇಜಸ್ವಿ ಸೂರ್ಯ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಹೆದರುವುದೇ ನಮ್ಮೆಲ್ಲರ ದೌರ್ಬಲ್ಯವಾಗಿದ್ದು, ಹೆದರದೇ ಮುನ್ನುಗಿದಾಗ ಯಶಸ್ಸು ಸಾಧ್ಯ. ನಾವು ಸಶಕ್ತವಾಗಿದ್ದಾಗ ಮಾತ್ರ ಜಗತ್ತಿನಲ್ಲಿ ಗೌರವ ಪ್ರಾಪ್ತವಾಗುತ್ತದೆ. ಉದ್ಯಮಗಳನ್ನು ಹುಟ್ಟುಹಾಕಲು ಈಗ ಪೂರಕ ವಾತಾವರಣವಿದ್ದು, ಈ ದಿಶೆಯಲ್ಲಿ ಯುವ ಸಮುದಾಯ ಆಲೋಚಿಸಬೇಕು ಎಂದು ಸಂಸದ ತೇಜಸ್ವಿ ಸೂರ್ಯ #MP Tejaswi Surya ಹೇಳಿದರು.

ಹವ್ಯಕ ಮಹಾಸಭೆಯಿಂದ ಮಲ್ಲೇಶ್ವರದ ಹವ್ಯಕ ಭವನದಲ್ಲಿ ಆಯೋಜಿತವಾಗಿದ್ದ ‘ಪ್ರತಿಬಿಂಬ Grand Final’ ಹಾಗೂ ‘ಯುವಜನೋತ್ಸವ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾಷೆ ಕೇವಲ ಸಂವಹನ ಮಾಧ್ಯಮ ಮಾತ್ರವಲ್ಲ. ಭಾಷೆ ನಮ್ಮ ಸಂಸ್ಕೃತಿಯ ಸಂವಹನ ಮಾಧ್ಯಮವೂ ಹೌದು. ನಾವು ನಮ್ಮ ಮಾತೃಭಾಷೆಯನ್ನೇ ಮನೆಯಲ್ಲಿ ಬಳಸುವುದರಿಂದ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯ. ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಇರುವವರು ಉದ್ಯಮ ಜಗತ್ತಿನಲ್ಲಿ ಯಶಸ್ಸು ಗಳಿಸುವುದು ಅಸಾಧ್ಯ ಎಂಬ ವಾತಾವರಣವನ್ನು ಕಲ್ಪಿಸಲಾಗಿದೆ. ಇದನ್ನು ಮೀರಿ ನಾವು ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಜೊತೆಜೊತೆಗೆ ಉದ್ಯಮದಲ್ಲೂ ಯಶಸ್ಸು ಗಳಿಸಬೇಕು ಎಂದು ಕಿವಿಮಾತು ಹೇಳಿದ ಅವರು, ಹಣಕಾಸಿನ ಕುರಿತಾದ ಶಿಕ್ಷಣ ಇಂದಿನ ಯುವಜನಾಂಗಕ್ಕೆ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.

ಹವ್ಯಕ ಸಮಾಜ ಜನಸಂಖ್ಯಾ ದೃಷ್ಟಿಯಿಂದ ಅತಿ ಚಿಕ್ಕ ಸಮುದಾಯವಾದರೂ, ಸಮಷ್ಟಿ ಸಮಾಜದ ಮೇಲೆ ಈ ಪುಟ್ಟ ಸಮುದಾಯದ ಪ್ರಭಾವ ಅಚ್ಚಳಿಯದಂತಿದೆ ಎಂದು ಹವ್ಯಕ ಸಮಾಜವನ್ನು ಶ್ಲಾಘಿಸಿದರು.
ಹಿರಿಯ ಪತ್ರಕರ್ತರು ಹಾಗೂ ಉದಯವಾಣಿ ಪ್ರಧಾನ ಸಂಪಾದಕ ರವಿಶಂಕರ್ ಭಟ್ ಮಾತನಾಡಿ, ಸಂಸ್ಕೃತಿ ಎಂಬುದು ಇಂಜಿನ್ ಇದ್ದಂತೆ. ನಾವು ಬಳಸಿದಂತೆ ನಮ್ಮ ಸಂಸ್ಕೃತಿಯು ಉಳಿದು ಬೆಳೆಯುತ್ತದೆ. ವೈವಿಧ್ಯಮಯವಾದ ನಮ್ಮ ಸಂಸ್ಕೃತಿಯನ್ನು ತಲೆಮಾರಿನಿಂದ ತಲೆಮಾರಿಗೆ ದಾಟಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಇಂದು ಸಂಬಂಧಗಳು ವಾಟ್ಸಪ್ – ಫೇಸ್‌ಬುಕ್‌’ಗೇ ಮಾತ್ರ ಸೀಮಿತವಾಗುತ್ತರುವುದು ವಿಷಾಧನೀಯ ಎಂದರು.

ಹವ್ಯಕ ಜನಾಂಗವು ತನ್ನದೇ ಆದ ಭಾಷಾ ಸೊಗಡನ್ನು ಹೊಂದಿದೆ. ಪ್ರಾಂತ್ಯವಾರು ವಿಭಿನ್ನವಾದ ಭಾಷಾ ಸೊಗಡು ಹವಿಗನ್ನಡದ ಹಿರಿಮೆ. ಮನೆಯಲ್ಲಿ ನಮ್ಮ ಭಾಷೆಯನ್ನು ಬಳಸುವ ಮೂಲಕ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಬೇಕು ಎಂದು ಅಭಿಪ್ರಾಯಪಟ್ಟರು.
ಹವ್ಯಕ ಮಹಾಸಭೆಯ ಅಧ್ಯಕ್ಷರಾದ ಡಾ.ಗಿರಿಧರ ಕಜೆ ಮಾತನಾಡಿ, ಯಾವುದೇ ಬೇಡಿಕೆ ಇಲ್ಲದ ಸಮಾಜ ಹವ್ಯಕ ಸಮಾಜ. ನಾವು ಸರ್ಕಾರಗಳಿಗೆ ಎಂದಿಗೂ ಬೇಡಿಕೊಳ್ಳುವುದಿಲ್ಲ. ಹವ್ಯಕ ಸಮಾಜ ನೀಡುವ ಸಮಾಜವಾಗಿದ್ದು, ನಮ್ಮಲ್ಲಿರುವ ಪ್ರತಿಭೆಯಿಂದ ಸಮಷ್ಠಿ ಸಮಾಜದಲ್ಲಿ ಅಗ್ರಗಣ್ಯ ಸ್ಥಾನವನ್ನು ಪಡೆದಿದ್ದೇವೆ ಎಂದರು.

Also read: ಕೊಪ್ಪಳ | ಕಿರ್ಲೋಸ್ಕರ್ ಫೌಂಡ್ರಿ ವಿಸ್ತರಣೆ, ನೂತನ ಯೋಜನೆಗಳ ಜಾರಿಗೆ ವ್ಯಾಪಕ ಬೆಂಬಲ

ಹವಿಗನ್ನಡ ಭಾಷಾ ಶ್ರೀಮಂತಿಕೆಯನ್ನು ಹೊಂದಿದೆ. ಕನ್ನಡದ ಮೊದಲ ನಾಟಕ ಯಾವದು ಎಂದು ಕೇಳಿದರೆ ‘ಇಗ್ಗಪ್ಪ ಹೆಗಡೆ ವಿವಾಹ ಪ್ರಹಸನ’ ಎಂಬ ಉತ್ತರ ಬರುತ್ತದೆ. ಈ ನಾಟಕ ಇರುವುದು ಹವಿಗನ್ನಡದಲ್ಲಿ ಎಂಬುದು ಹವ್ಯಕ ಕನ್ನಡದ ಭಾಷಾ ಶ್ರೀಮಂತಿಕೆಯನ್ನು ತಿಳಿಸುತ್ತದೆ ಎಂದರು.

ಡಿಸೆಂಬರ್ 27, 28 ಹಾಗೂ 29 ರಂದು ಮೂರನೇ ವಿಶ್ವಹವ್ಯಕ ಸಮ್ಮೇಳನ ನಡೆಯಲಿದೆ. ಇದು ಜಾತಿಯ ಸಮ್ಮೇಳನವಾಗಿರದೇ, ಹವ್ಯಕ ಸಂಸ್ಕೃತಿಯನ್ನು ಜಗತ್ತಿನ ಮುಂದೆ ತೆರದಿಡುವ ಕಾರ್ಯವಾಗಿರಲಿದೆ. ಈ ಬೃಹತ್ ಕಾರ್ಯಕ್ರಮಕ್ಕೆ ಸಮಾಜ ಕೈಜೋಡಿಸಬೇಕು ಎಂದು ಕರೆನೀಡಿದರು‌.

ಇದಕ್ಕೂ ಮೊದಲು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿದ್ವಾನ್ ಸೂರ್ಯನಾರಾಯಣ ಭಟ್ ಹಿತ್ಲಳ್ಳಿ, ನಾವು ಅನುಸರಿಸುವ ಅದ್ವೈತ ತತ್ತ್ವದ ಪ್ರತಿಪಾದನೆಯಂತೆ ಈ ಜಗತ್ತೇ ಪ್ರತಿಬಿಂಬವಾಗಿದ್ದು, ಈ ಪ್ರತಿಬಿಂಬ ಕಾರ್ಯಕ್ರಮ ಹವ್ಯಕ ಸಮಾಜದ ಪ್ರತಿಬಿಂಬವಾಗಿದೆ. ಹವ್ಯಕ ಸಮಾಜ ಎಲ್ಲಾ ರಂಗದಲ್ಲೂ ಇದ್ದು, ನಮ್ಮ ಛಾಪನ್ನು ಎಲ್ಲೆಡೆ ಮೂಡಿಸಬೇಕು ಎಂದರು.

ಮಿಸ್ ಯೂನಿವರ್ಸ್ ಪಿಟೈಟ್ ಡಾ.ಶೃತಿ ಹೆಗಡೆ ಮಾತನಾಡಿ, ಸ್ಪರ್ಧೆಯಲ್ಲಿ ಅಥವಾ ಜೀವನದಲ್ಲಿ ಗೆಲ್ಲಲು ಆತ್ಮವಿಶ್ವಾಸ ಮುಖ್ಯ. ಆತ್ಮವಿಶ್ವಾಸದ ಜೊತೆಗೆ ಪರಿಶ್ರಮ ಸೇರಿಕೊಂಡಾಗ ಯಶಸ್ಸು ಕಟ್ಟಿಟ್ಟಬುತ್ತಿ ಎಂದು ಯುವಜನತೆಗೆ ಸ್ಪೂರ್ತಿಯ ಮಾತುಗಳನ್ನಾಡಿದರು.

ಅಭ್ಯಾಗತರಾದ ಅಜಿತ್ ಬೊಪ್ಪನಹಳ್ಳಿ ಮಾತನಾಡಿ, ಇದು ಸಮಾಜಮಾಧ್ಯಮದ ಯುಗವಾಗಿದ್ದು ಸಮಾಜ ಮಾಧ್ಯಮದಲ್ಲಿ ನಾವು ಜವಾಬ್ದಾರಿಯುತವಾಗಿ ವರ್ತಿಸಬೇಕು. ತಾಳ್ಮೆಯಿಂದ ವರ್ತಿಸಬೇಕಾದ್ದು ಸಮಾಜ ಮಾಧ್ಯಮದ ಕುರಿತಾದ ಮೊದಲ ನಿಯಮ ಎಂದು ಕಿವಿಮಾತು ಹೇಳಿದರು.

ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣಕನ್ನಡ, ಬೆಂಗಳೂರಿನ ವಿವಿಧ ಪ್ರಾಂತ್ಯಗಳಲ್ಲಿ ಆಯೋಜಿಸಲಾಗಿದ್ದ ‘ಪ್ರತಿಬಿಂಬ’ ಕಾರ್ಯಕ್ರಮದ Grand finale ನಡೆಯಿತು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.

‘The success story of enterpriser’ ಎಂಬ ಕಾರ್ಯಕ್ರಮದಲ್ಲಿ ಹವ್ಯಕ ಸಮಾಜದ ಯುವ ಉದ್ಯಮಿಗಳು ತಮ್ಮ ಅನುಭವವನ್ನು ಹಂಚಿಕೊಂಡು, ಉದ್ಯಮವನ್ನು ಆರಂಭಿಸುವ ಕುರಿತು ಯುವ ಜನತೆಗೆ ಮಾರ್ಗದರ್ಶನ ಮಾಡಿದರು.
ಖ್ಯಾತ ಗಾಯಕಿ ಪೃಥ್ವಿ ಭಟ್ ಹಾಗೂ ದಿಯಾ ಹೆಗಡೆ ಅವರ ಭಾವಯಾನ ಸಂಗೀತ ಕಾರ್ಯಕ್ರಮ, ಯಕ್ಷನೃತ್ಯ ವೈಭವ, ಯೋಗನೃತ್ಯ ಮುಂತಾದ ಕಾರ್ಯಕ್ರಮಗಳು ಜನಮನರಂಜಿಸಿತು.

ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಸಿಎ. ವೇಣುವಿಘ್ನೇಶ ಸಂಪ, ಉಪಾಧ್ಯಕ್ಷರಾದ ಶ್ರೀಧರ್ ಭಟ್ ಕೆಕ್ಕಾರು, ಕಾರ್ಯದರ್ಶಿ ಪ್ರಶಾಂತ ಭಟ್, ಆದಿತ್ಯ ಕಲಗಾರು, ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ , ಕಾರ್ಯಕ್ರಮದ ಸಂಚಾಲಕ ದಿನೇಶ್ ಎಂ ಭಟ್ ಸೇರಿದಂತೆ ಮಹಾಸಭೆಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMP Tejaswi SuryaNews_in_KannadaNews_Kannadaಬೆಂಗಳೂರುಸಂಸದ ತೇಜಸ್ವಿ ಸೂರ್ಯ
Share198Tweet123Send
Previous Post

ಕೊಪ್ಪಳ | ಕಿರ್ಲೋಸ್ಕರ್ ಫೌಂಡ್ರಿ ವಿಸ್ತರಣೆ, ನೂತನ ಯೋಜನೆಗಳ ಜಾರಿಗೆ ವ್ಯಾಪಕ ಬೆಂಬಲ

Next Post

VISL ಮುಚ್ಚುವ, ಖಾಸಗೀಕರಣ ಅನುಮೋದನೆ ಹಿಂಪಡೆತ | ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
VISL ಮುಚ್ಚುವ, ಖಾಸಗೀಕರಣ ಅನುಮೋದನೆ ಹಿಂಪಡೆತ | ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು?

VISL ಮುಚ್ಚುವ, ಖಾಸಗೀಕರಣ ಅನುಮೋದನೆ ಹಿಂಪಡೆತ | ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL