Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಡಾಬರ್ ಚವನ್ಪ್ರಾಶ್‌ಗೆ ಸೂಪಸ್ಟಾರ್ ಅಕ್ಕಿನೇನಿ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್

ದಕ್ಷಿಣ ಭಾರತೀಯ ಮಾರುಕಟ್ಟೆಯ ಗ್ರಾಹಕರನ್ನು ಸೆಳೆಯಲು ಈ ಸಹಭಾಗಿತ್ವ

February 25, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಭಾರತದ ಮುಂಚೂಣಿಯಲ್ಲಿರುವ ವಿಜ್ಞಾನ ಆಧಾರಿತ ಆಯುರ್ವೇದ ಪರಿಣತ ಸಂಸ್ಥೆಯಾಗಿರುವ ಡಾಬರ್ ಇಂಡಿಯಾ ಲಿಮಿಟೆಡ್ #Dabur India Ltd ಇಂದು ತನ್ನ ಡಾಬರ್ ಚವನ್ಪ್ರಾಶ್ಗೆ ದಕ್ಷಿಣ ಭಾರತದ ಮಾರುಕಟ್ಟೆಯಲ್ಲಿ ನೂತನ ಬ್ರ್ಯಾಂಡ್ ಅಂಬಾಸಿಡರ್ ಆಗಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ಮತ್ತು ಸಿನಿಮಾ ಐಕಾನ್ ನಾಗಾರ್ಜುನ #Actor Nagarjuna ಅವರನ್ನು ನೇಮಕ ಮಾಡಿದೆ.

ದಕ್ಷಿಣ ಭಾರತೀಯ ಮಾರುಕಟ್ಟೆಗಳಿಗೆಂದೇ ಸಿದ್ಧಪಡಿಸಲಾಗಿರುವ ಹೊಸ ಜಾಹೀರಾತು ಅಭಿಯಾನದಲ್ಲಿ ನಟ ಅಕ್ಕಿನೇನಿ ನಾಗಾರ್ಜುನ ಅವರು ನಟಿಸಿದ್ದು, ಸದ್ಯದಲ್ಲಿಯೇ ಈ ಅಭಿಯಾನ ಚಿತ್ರವು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕ ಮತ್ತು ಕೇರಳದ ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗಲಿದೆ. ಈ ಸಹಯೋಗದೊಂದಿಗೆ ಡಾಬರ್ ದಕ್ಷಿಣ ಭಾರತದ ಪ್ರತಿಯೊಂದು ಮನೆ ಮನಗಳನ್ನು ತಲುಪುವ ಉದ್ದೇಶವನ್ನು ಹೊಂದಿದೆ. ಅಲ್ಲದೇ, ಇದರ ಮೂಲಕ ಬಲವಾದ ರೋಗನಿರೋಧಕ ಶಕ್ತಿಯ ಪ್ರಾಮುಖ್ಯತೆ ಮತ್ತು ರೋಗಗಳ ವಿರುದ್ಧ ಹೋರಾಡಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಡಾಬರ್ ಚವನ್ಪ್ರಾಶ್ ನಿರ್ವಹಿಸುವ ಪ್ರಮುಖ ಪಾತ್ರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಿದೆ.

ಡಾಬರ್ ಇಂಡಿಯಾ ಲಿಮಿಟೆಡ್ನ ದಕ್ಷಿಣ ವಲಯದ ಪ್ರಾದೇಶಿಕ ಬಿಸಿನೆಸ್ ಮುಖ್ಯಸ್ಥ ಜೆಪಿ ವಿಕ್ಟೋರಿಯಾ ಅವರು ಈ ಸಹಭಾಗಿತ್ವದ ಬಗ್ಗೆ ಮಾತನಾಡಿ, “ದಕ್ಷಿಣ ಭಾರತೀಯ ಮಾರುಕಟ್ಟೆಗಳಿಗೆ ಡಾಬರ್ ಚವನ್ಪ್ರಾಶ್ಗೆ ನೂತನ ಬ್ರ್ಯಾಂಡ್ ಅಂಬಾಸಿಡರ್ ಅನ್ನಾಗಿ ಸೂಪರ್ಸ್ಟಾರ್ ನಾಗಾರ್ಜುನ ಅವರನ್ನು ಹೊಂದಲು ನಮಗೆ ಅತೀವ ಸಂತಸವೆನಿಸುತ್ತಿದೆ. ಜನೋಪಕಾರಿಯಾಗಿರುವ ಮತ್ತು ಎಚ್ಐವಿ/ಏಡ್ಸ್ ಜಾಗೃತಿ ಅಭಿಯಾನಗಳ ರಾಯಭಾರಿಯಾಗಿರುವ ನಾಗಾರ್ಜುನ ಅವರು ಅನೇಕ ಸಮುದಾಯ ಅಭಿವೃದ್ಧಿ ಉಪಕ್ರಮಗಳಿಗೆ ಸಾಕಷ್ಟು ಪ್ರಚಾರ ನೀಡುವ ತಾರೆಯಾಗಿದ್ದಾರೆ. ಅದೇ ರೀತಿ, ಅಶ್ವಗಂಧ, ಗಿಲೋಯ್ ಮತ್ತು ಆಮ್ಲ ಮುಂತಾದ 40 ಕ್ಕೂ ಹೆಚ್ಚು ಗಿಡಮೂಲಿಕೆಗಳ ಶಕ್ತಿಯನ್ನು ಹೊಂದಿರುವ ಡಾಬರ್ ಚವನ್ಪ್ರಾಶ್ ಯಾವಾಗಲೂ ಅನಾರೋಗ್ಯದ ವಿರುದ್ಧ ಹೋರಾಟ ನಡೆಸಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲಿದೆ. ಡಾಬರ್ ಚವನ್ಪ್ರಾಶ್ ಯಾವಾಗಲೂ ದೇಶದ ಆರೋಗ್ಯವನ್ನು ನಿರ್ಮಾಣ ಮಾಡುವ ಕಾರಣವನ್ನು ಹೊಂದಿರುತ್ತದೆ ಮತ್ತು ಈ ವಲಯದಲ್ಲಿ ಚಾಂಪಿಯನ್ ಆಗಿದೆ. ಈ ದಿಸೆಯಲ್ಲಿ ಸೂಪರ್ಸ್ಟಾರ್ ನಾಗಾರ್ಜುನ ಅವರನ್ನು ಡಾಬರ್ ಕುಟುಂಬಕ್ಕೆ ಸ್ವಾಗತಿಸಲು ನಾವು ಸಂತೋಷಪಡುತ್ತೇವೆ ಎಂದು ತಿಳಿಸಿದರು.

Also read: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದೂರಶಿಕ್ಷಣದ ಫಲಿತಾಂಶ ಪ್ರಕಟ: ಪ್ರೊ. ವೀರಭದ್ರಪ್ಪ


ಈ ಸಹಯೋಗದ ಬಗ್ಗೆ ಮಾತನಾಡಿದ ನಾಗಾರ್ಜುನ ಅವರು, “ಡಾಬರ್ ಕುಟುಂಬದೊಂದಿಗೆ ಸಹಯೋಗ ಹೊಂದುತ್ತಿರುವುದಕ್ಕೆ ನನಗೆ ಸಂತಸವೆನಿಸುತ್ತಿದೆ ಮತ್ತು ಜನರು ತಮ್ಮ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಲು ಡಾಬರ್ ಚವನ್ಪ್ರಾಶ್ ಅನ್ನು ಬಳಸುವಂತೆ ಮಾಡಲು ಪ್ರೇರಣೆ ದೊರೆಯುತ್ತದೆ ಎಂಬ ವಿಶ್ವಾಸ ನನಗಿದೆ. ಹಿಂದೆಂದಿಗಿಂತಲೂ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳುವುದಕ್ಕೆ ಹೆಚ್ಚು ಆದ್ಯತೆ ನೀಡುವ ಪರಿಸ್ಥಿತಿಯಲ್ಲಿ ನಾವಿಂದು ಬದುಕುತ್ತಿದ್ದೇವೆ. ಬಲಯುತವಾದ ರೋಗನಿರೋಧಕ ಶಕ್ತಿಯ ಅಗತ್ಯತೆ ಇಂದಿದೆ. ಡಾಬರ್ ಅಧಿಕೃತ ಆಯುರ್ವೇದದ ವಿಜ್ಞಾನದ ಮೂಲಕ ದೇಶದ ಆರೋಗ್ಯ ಮತ್ತು ಫಿಟ್ನೆಸ್ ಅನ್ನು ಪಟ್ಟುಬಿಡದೇ ಪೋಷಿಸುತ್ತಾ ಬರುತ್ತಿದೆ. ಒಬ್ಬ ಗ್ರಾಹಕನಾಗಿ ನಾನು ಡಾಬರ್ನೊಂದಿಗೆ ಹಲವಾರು ವರ್ಷಗಳಿಂದ ಸಂಬಂಧವನ್ನು ಹೊಂದಿದ್ದೇನೆ. ಡಾಬರ್ ಮತ್ತು ನಾನು ಒಟ್ಟಾಗಿ ದಕ್ಷಿಣ ಭಾರತದ ಪ್ರತಿ ಮನೆಗೆ ಡಾಬರ್ ಚವನ್ಪ್ರಾಶ್ ಅನ್ನು ಕೊಂಡೊಯ್ಯುತ್ತೇವೆ ಮತ್ತು ದೇಶದ ಪ್ರತಿರಕ್ಷೆಯನ್ನು ನಿರ್ಮಾಣ ಮಾಡುವ ಕೆಲಸ ಮಾಡುತ್ತೇವೆ ಎಂದು ನಾನು ನಿಜವಾಗಿಯೂ ನಂಬುತ್ತೇನೆ’ ಎಂದು ಹೇಳಿದರು.

ಈ ಅಭಿಯಾನವು ದಕ್ಷಿಣ ಭಾರತದ ಸಮರ ಕಲೆಯ ಸಿಲಂಬಂ ಅನ್ನು ರೂಪಕವಾಗಿ ಬಳಸುತ್ತದೆ. ಇದು ಅನಾರೋಗ್ಯದ ವಿರುದ್ಧ ಹೋರಾಟಲು ಪ್ರತಿರಕ್ಷೆಯನ್ನು ನಿರ್ಮಾಣ ಮಾಡುವ ಅಗತ್ಯತೆಯನ್ನು ಒತ್ತಿ ಹೇಳುತ್ತದೆ.

Also read: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರ್ಷನ ಕುಟುಂಬಕ್ಕೆ 10ಲಕ್ಷ ರೂ. ನೆರವು: ಸಚಿವ ಅಶ್ವತ್ಥನಾರಾಯಣ ಘೋಷಣೆ

ಈ ಬಗ್ಗೆ ಮಾತನಾಡಿದ ಮ್ಯಾಕನ್ ವಲ್ರ್ಡ್ ಗ್ರೂಪ್ ಕ್ರಿಯೇಟಿವ್ ಹೆಡ್-ದಕ್ಷಿಣ ಸಂಬಿತ್ ಮೊಹಾಂತಿ ಅವರು, “ಸೃಜನಾತ್ಮಕವಾದ ಕಥೆ ಹೇಳುವಿಕೆಯು ಉತ್ಪನ್ನದ ಪ್ರತಿಪಾದನೆಯನ್ನು ಜನರು ಗಮನಕ್ಕೆ ತೆಗೆದುಕೊಳ್ಳಲು ಹೆಚ್ಚು ತೊಡಗಿಸಿಕೊಳ್ಳುವಂತೆ ಮಾಡುತ್ತದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ಡಾಬರ್ ಚವನ್ಪ್ರಾಶ್ ಅನ್ನು ಪರಿಚಯಿಸುವ ಕಾರ್ಯವನ್ನು ನಾವು ವಹಿಸಿಕೊಂಡಾಗ ಪ್ರಾಚೀನ ದಕ್ಷಿಣದ ಸಮರ ಕಲೆಯಾದ `ಸಿಲಂಬಂ’ ಅಥವಾ ಕೋಲು ಕಾದಾಟವನ್ನು ಥೀಮ್ ಆಗಿ ಬಳಸುವ ಕಲ್ಪನೆಯನ್ನು ನಾವು ಅಳವಡಿಸಿಕೊಂಡಿದ್ದೇವೆ. ಇದರಲ್ಲಿ ಆಶ್ಚರ್ಯವೇನಿಲ್ಲ. ನಮ್ಮ ಚಿತ್ರವು ರೋಮಾಂಚನಾಕಾರಿ, ಆಕ್ಷನ್ ಹೊಂದಿದ ಕಥೆಯಾಗಿದ್ದು, ಡಾಬರ್ ಚವನ್ಪ್ರಾಶ್ ನಿಮ್ಮ ಶಕ್ತಿ ಮತ್ತು ರೋಗನಿರೋಧಕ ಶಕ್ತಿಯನ್ನು ರೋಗಗಳ ವಿರುದ್ಧ ಹೋರಾಡಲು ಹೇಗೆ ನಿರ್ಮಾಣ ಮಾಡುತ್ತದೆ ಎಂಬುದನ್ನು ಎತ್ತಿ ತೋರಿಸುತ್ತದೆ’’ ಎಂದು ತಿಳಿಸಿದರು.

ಅಕ್ಕಿನೇನಿ ನಾಗಾರ್ಜುನ ಅವರು ದಕ್ಷಿಣ ಭಾರತದ ಸಿನಿಮಾ ಕ್ಷೇತ್ರದ ಅತ್ಯಂತ ಪ್ರತಿಭಾನ್ವಿತ ನಟರಾಗಿದ್ದಾರೆ. ಕಳೆದ ಮೂರು ದಶಕಗಳಿಗೂ ಅಧಿಕ ಸಮಯದಿಂದ ಅವರು ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ. ಬೆಳ್ಳಿತೆರೆಯಲ್ಲಿ ಅನೇಕ ಅವಿಸ್ಮರಣೀಯ ಸಾಧನೆ ಮಾಡಿರುವ ಅವರು ತಮ್ಮ ಸಮಾಜ ಸೇವೆಯನ್ನು ನಡೆಸುವ ಮೂಲಕ ಸಹ ನಟರು, ಯುವ ನಟರು ಮತ್ತು ಪ್ರೇಕ್ಷಕರಿಗೆ ಪ್ರೇರಕ ಶಕ್ತಿಯಾಗಿದ್ದಾರೆ.

“ನಾವು ಅತ್ಯುತ್ಕøಷ್ಠವಾದ ಅಭಿಯಾನದಲ್ಲಿ ಕೆಲಸ ಮಾಡಿದ್ದೇವೆ. ಡಾಬರ್ ಚವನ್ಪ್ರಾಶ್ನ ಮುಖವಾಗಿ ನಾಗಾರ್ಜುನ ಜೊತೆಗೆ ಈ ಅಭಿಯಾನವು ದಕ್ಷಿಣ ಭಾರತದ ಮಾರುಕಟ್ಟೆಗಳಲ್ಲಿನ ಗ್ರಾಹಕರೊಂದಿಗೆ ಉತ್ತಮ ವ್ಯಾಪ್ತಿಯನ್ನು ಮತ್ತು ಸಂಪರ್ಕ ಹೊಂದಿದೆ ಎಂದು ನಿರೀಕ್ಷಿಸಲಾಗಿದೆ. ಈ ಸಂವಹನದೊಂದಿಗೆ ನಾವು `ಭಾರತದಲ್ಲಿ ತಯಾರಿಸಿದ, ಭಾರತೀಯರಿಂದ, ಭಾರತೀಯರಿಗಾಗಿ’ ಎಂಬ ಪರಿಕಲ್ಪನೆಯ ಮೂಲಕ ನಮ್ಮ ಬಲವಾದ ಹೆಮ್ಮೆಯ ಪ್ರಜ್ಞೆಯನ್ನು ಸ್ಥಾಪಿಸಿದ್ದೇವೆ. ಇದಲ್ಲದೇ ಭಾರತದಲ್ಲಿ ಪ್ರತಿ ಮನೆಯ ರೋಗನಿರೋಧಕ ಶಕ್ತಿ ಮತ್ತು ಯೋಗಕ್ಷೇಮಕ್ಕಾಗಿ ಕಾಳಜಿ ವಹಿಸುತ್ತಿದ್ದೇವೆ’’ ಎಂದು ವಿಕ್ಟೋರಿಯಾ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor NagarjunaBangaloreDabur India LtdKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಡಾಬರ್ ಇಂಡಿಯಾ ಲಿಮಿಟೆಡ್ನಟ ಅಕ್ಕಿನೇನಿ ನಾಗಾರ್ಜುನಬೆಂಗಳೂರು
Previous Post

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದೂರಶಿಕ್ಷಣದ ಫಲಿತಾಂಶ ಪ್ರಕಟ: ಪ್ರೊ. ವೀರಭದ್ರಪ್ಪ

Next Post

ಸಮಾನತೆಯ ವಿಚಾರದಲ್ಲಿ ಸಂಪೂರ್ಣ ಪರಿವರ್ತನೆ ಸಾಧ್ಯವಾಗಿಲ್ಲ : ತಹಶೀಲ್ದಾರ ರಘುಮೂರ್ತಿ ವಿಷಾದ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಮಾನತೆಯ ವಿಚಾರದಲ್ಲಿ ಸಂಪೂರ್ಣ ಪರಿವರ್ತನೆ ಸಾಧ್ಯವಾಗಿಲ್ಲ : ತಹಶೀಲ್ದಾರ ರಘುಮೂರ್ತಿ ವಿಷಾದ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!