No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡಾಬರ್ ಚವನ್ಪ್ರಾಶ್‌ಗೆ ಸೂಪಸ್ಟಾರ್ ಅಕ್ಕಿನೇನಿ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್

ದಕ್ಷಿಣ ಭಾರತೀಯ ಮಾರುಕಟ್ಟೆಯ ಗ್ರಾಹಕರನ್ನು ಸೆಳೆಯಲು ಈ ಸಹಭಾಗಿತ್ವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 25, 2022
in ಬೆಂಗಳೂರು ನಗರ
0
ಡಾಬರ್ ಚವನ್ಪ್ರಾಶ್‌ಗೆ ಸೂಪಸ್ಟಾರ್ ಅಕ್ಕಿನೇನಿ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಭಾರತದ ಮುಂಚೂಣಿಯಲ್ಲಿರುವ ವಿಜ್ಞಾನ ಆಧಾರಿತ ಆಯುರ್ವೇದ ಪರಿಣತ ಸಂಸ್ಥೆಯಾಗಿರುವ ಡಾಬರ್ ಇಂಡಿಯಾ ಲಿಮಿಟೆಡ್ #Dabur India Ltd ಇಂದು ತನ್ನ ಡಾಬರ್ ಚವನ್ಪ್ರಾಶ್ಗೆ ದಕ್ಷಿಣ ಭಾರತದ ಮಾರುಕಟ್ಟೆಯಲ್ಲಿ ನೂತನ ಬ್ರ್ಯಾಂಡ್ ಅಂಬಾಸಿಡರ್ ಆಗಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ಮತ್ತು ಸಿನಿಮಾ ಐಕಾನ್ ನಾಗಾರ್ಜುನ #Actor Nagarjuna ಅವರನ್ನು ನೇಮಕ ಮಾಡಿದೆ.

ದಕ್ಷಿಣ ಭಾರತೀಯ ಮಾರುಕಟ್ಟೆಗಳಿಗೆಂದೇ ಸಿದ್ಧಪಡಿಸಲಾಗಿರುವ ಹೊಸ ಜಾಹೀರಾತು ಅಭಿಯಾನದಲ್ಲಿ ನಟ ಅಕ್ಕಿನೇನಿ ನಾಗಾರ್ಜುನ ಅವರು ನಟಿಸಿದ್ದು, ಸದ್ಯದಲ್ಲಿಯೇ ಈ ಅಭಿಯಾನ ಚಿತ್ರವು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕ ಮತ್ತು ಕೇರಳದ ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗಲಿದೆ. ಈ ಸಹಯೋಗದೊಂದಿಗೆ ಡಾಬರ್ ದಕ್ಷಿಣ ಭಾರತದ ಪ್ರತಿಯೊಂದು ಮನೆ ಮನಗಳನ್ನು ತಲುಪುವ ಉದ್ದೇಶವನ್ನು ಹೊಂದಿದೆ. ಅಲ್ಲದೇ, ಇದರ ಮೂಲಕ ಬಲವಾದ ರೋಗನಿರೋಧಕ ಶಕ್ತಿಯ ಪ್ರಾಮುಖ್ಯತೆ ಮತ್ತು ರೋಗಗಳ ವಿರುದ್ಧ ಹೋರಾಡಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಡಾಬರ್ ಚವನ್ಪ್ರಾಶ್ ನಿರ್ವಹಿಸುವ ಪ್ರಮುಖ ಪಾತ್ರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಿದೆ.

ಡಾಬರ್ ಇಂಡಿಯಾ ಲಿಮಿಟೆಡ್ನ ದಕ್ಷಿಣ ವಲಯದ ಪ್ರಾದೇಶಿಕ ಬಿಸಿನೆಸ್ ಮುಖ್ಯಸ್ಥ ಜೆಪಿ ವಿಕ್ಟೋರಿಯಾ ಅವರು ಈ ಸಹಭಾಗಿತ್ವದ ಬಗ್ಗೆ ಮಾತನಾಡಿ, “ದಕ್ಷಿಣ ಭಾರತೀಯ ಮಾರುಕಟ್ಟೆಗಳಿಗೆ ಡಾಬರ್ ಚವನ್ಪ್ರಾಶ್ಗೆ ನೂತನ ಬ್ರ್ಯಾಂಡ್ ಅಂಬಾಸಿಡರ್ ಅನ್ನಾಗಿ ಸೂಪರ್ಸ್ಟಾರ್ ನಾಗಾರ್ಜುನ ಅವರನ್ನು ಹೊಂದಲು ನಮಗೆ ಅತೀವ ಸಂತಸವೆನಿಸುತ್ತಿದೆ. ಜನೋಪಕಾರಿಯಾಗಿರುವ ಮತ್ತು ಎಚ್ಐವಿ/ಏಡ್ಸ್ ಜಾಗೃತಿ ಅಭಿಯಾನಗಳ ರಾಯಭಾರಿಯಾಗಿರುವ ನಾಗಾರ್ಜುನ ಅವರು ಅನೇಕ ಸಮುದಾಯ ಅಭಿವೃದ್ಧಿ ಉಪಕ್ರಮಗಳಿಗೆ ಸಾಕಷ್ಟು ಪ್ರಚಾರ ನೀಡುವ ತಾರೆಯಾಗಿದ್ದಾರೆ. ಅದೇ ರೀತಿ, ಅಶ್ವಗಂಧ, ಗಿಲೋಯ್ ಮತ್ತು ಆಮ್ಲ ಮುಂತಾದ 40 ಕ್ಕೂ ಹೆಚ್ಚು ಗಿಡಮೂಲಿಕೆಗಳ ಶಕ್ತಿಯನ್ನು ಹೊಂದಿರುವ ಡಾಬರ್ ಚವನ್ಪ್ರಾಶ್ ಯಾವಾಗಲೂ ಅನಾರೋಗ್ಯದ ವಿರುದ್ಧ ಹೋರಾಟ ನಡೆಸಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲಿದೆ. ಡಾಬರ್ ಚವನ್ಪ್ರಾಶ್ ಯಾವಾಗಲೂ ದೇಶದ ಆರೋಗ್ಯವನ್ನು ನಿರ್ಮಾಣ ಮಾಡುವ ಕಾರಣವನ್ನು ಹೊಂದಿರುತ್ತದೆ ಮತ್ತು ಈ ವಲಯದಲ್ಲಿ ಚಾಂಪಿಯನ್ ಆಗಿದೆ. ಈ ದಿಸೆಯಲ್ಲಿ ಸೂಪರ್ಸ್ಟಾರ್ ನಾಗಾರ್ಜುನ ಅವರನ್ನು ಡಾಬರ್ ಕುಟುಂಬಕ್ಕೆ ಸ್ವಾಗತಿಸಲು ನಾವು ಸಂತೋಷಪಡುತ್ತೇವೆ ಎಂದು ತಿಳಿಸಿದರು.

Also read: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದೂರಶಿಕ್ಷಣದ ಫಲಿತಾಂಶ ಪ್ರಕಟ: ಪ್ರೊ. ವೀರಭದ್ರಪ್ಪ


ಈ ಸಹಯೋಗದ ಬಗ್ಗೆ ಮಾತನಾಡಿದ ನಾಗಾರ್ಜುನ ಅವರು, “ಡಾಬರ್ ಕುಟುಂಬದೊಂದಿಗೆ ಸಹಯೋಗ ಹೊಂದುತ್ತಿರುವುದಕ್ಕೆ ನನಗೆ ಸಂತಸವೆನಿಸುತ್ತಿದೆ ಮತ್ತು ಜನರು ತಮ್ಮ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಲು ಡಾಬರ್ ಚವನ್ಪ್ರಾಶ್ ಅನ್ನು ಬಳಸುವಂತೆ ಮಾಡಲು ಪ್ರೇರಣೆ ದೊರೆಯುತ್ತದೆ ಎಂಬ ವಿಶ್ವಾಸ ನನಗಿದೆ. ಹಿಂದೆಂದಿಗಿಂತಲೂ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳುವುದಕ್ಕೆ ಹೆಚ್ಚು ಆದ್ಯತೆ ನೀಡುವ ಪರಿಸ್ಥಿತಿಯಲ್ಲಿ ನಾವಿಂದು ಬದುಕುತ್ತಿದ್ದೇವೆ. ಬಲಯುತವಾದ ರೋಗನಿರೋಧಕ ಶಕ್ತಿಯ ಅಗತ್ಯತೆ ಇಂದಿದೆ. ಡಾಬರ್ ಅಧಿಕೃತ ಆಯುರ್ವೇದದ ವಿಜ್ಞಾನದ ಮೂಲಕ ದೇಶದ ಆರೋಗ್ಯ ಮತ್ತು ಫಿಟ್ನೆಸ್ ಅನ್ನು ಪಟ್ಟುಬಿಡದೇ ಪೋಷಿಸುತ್ತಾ ಬರುತ್ತಿದೆ. ಒಬ್ಬ ಗ್ರಾಹಕನಾಗಿ ನಾನು ಡಾಬರ್ನೊಂದಿಗೆ ಹಲವಾರು ವರ್ಷಗಳಿಂದ ಸಂಬಂಧವನ್ನು ಹೊಂದಿದ್ದೇನೆ. ಡಾಬರ್ ಮತ್ತು ನಾನು ಒಟ್ಟಾಗಿ ದಕ್ಷಿಣ ಭಾರತದ ಪ್ರತಿ ಮನೆಗೆ ಡಾಬರ್ ಚವನ್ಪ್ರಾಶ್ ಅನ್ನು ಕೊಂಡೊಯ್ಯುತ್ತೇವೆ ಮತ್ತು ದೇಶದ ಪ್ರತಿರಕ್ಷೆಯನ್ನು ನಿರ್ಮಾಣ ಮಾಡುವ ಕೆಲಸ ಮಾಡುತ್ತೇವೆ ಎಂದು ನಾನು ನಿಜವಾಗಿಯೂ ನಂಬುತ್ತೇನೆ’ ಎಂದು ಹೇಳಿದರು.

ಈ ಅಭಿಯಾನವು ದಕ್ಷಿಣ ಭಾರತದ ಸಮರ ಕಲೆಯ ಸಿಲಂಬಂ ಅನ್ನು ರೂಪಕವಾಗಿ ಬಳಸುತ್ತದೆ. ಇದು ಅನಾರೋಗ್ಯದ ವಿರುದ್ಧ ಹೋರಾಟಲು ಪ್ರತಿರಕ್ಷೆಯನ್ನು ನಿರ್ಮಾಣ ಮಾಡುವ ಅಗತ್ಯತೆಯನ್ನು ಒತ್ತಿ ಹೇಳುತ್ತದೆ.

Also read: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರ್ಷನ ಕುಟುಂಬಕ್ಕೆ 10ಲಕ್ಷ ರೂ. ನೆರವು: ಸಚಿವ ಅಶ್ವತ್ಥನಾರಾಯಣ ಘೋಷಣೆ

ಈ ಬಗ್ಗೆ ಮಾತನಾಡಿದ ಮ್ಯಾಕನ್ ವಲ್ರ್ಡ್ ಗ್ರೂಪ್ ಕ್ರಿಯೇಟಿವ್ ಹೆಡ್-ದಕ್ಷಿಣ ಸಂಬಿತ್ ಮೊಹಾಂತಿ ಅವರು, “ಸೃಜನಾತ್ಮಕವಾದ ಕಥೆ ಹೇಳುವಿಕೆಯು ಉತ್ಪನ್ನದ ಪ್ರತಿಪಾದನೆಯನ್ನು ಜನರು ಗಮನಕ್ಕೆ ತೆಗೆದುಕೊಳ್ಳಲು ಹೆಚ್ಚು ತೊಡಗಿಸಿಕೊಳ್ಳುವಂತೆ ಮಾಡುತ್ತದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ಡಾಬರ್ ಚವನ್ಪ್ರಾಶ್ ಅನ್ನು ಪರಿಚಯಿಸುವ ಕಾರ್ಯವನ್ನು ನಾವು ವಹಿಸಿಕೊಂಡಾಗ ಪ್ರಾಚೀನ ದಕ್ಷಿಣದ ಸಮರ ಕಲೆಯಾದ `ಸಿಲಂಬಂ’ ಅಥವಾ ಕೋಲು ಕಾದಾಟವನ್ನು ಥೀಮ್ ಆಗಿ ಬಳಸುವ ಕಲ್ಪನೆಯನ್ನು ನಾವು ಅಳವಡಿಸಿಕೊಂಡಿದ್ದೇವೆ. ಇದರಲ್ಲಿ ಆಶ್ಚರ್ಯವೇನಿಲ್ಲ. ನಮ್ಮ ಚಿತ್ರವು ರೋಮಾಂಚನಾಕಾರಿ, ಆಕ್ಷನ್ ಹೊಂದಿದ ಕಥೆಯಾಗಿದ್ದು, ಡಾಬರ್ ಚವನ್ಪ್ರಾಶ್ ನಿಮ್ಮ ಶಕ್ತಿ ಮತ್ತು ರೋಗನಿರೋಧಕ ಶಕ್ತಿಯನ್ನು ರೋಗಗಳ ವಿರುದ್ಧ ಹೋರಾಡಲು ಹೇಗೆ ನಿರ್ಮಾಣ ಮಾಡುತ್ತದೆ ಎಂಬುದನ್ನು ಎತ್ತಿ ತೋರಿಸುತ್ತದೆ’’ ಎಂದು ತಿಳಿಸಿದರು.

ಅಕ್ಕಿನೇನಿ ನಾಗಾರ್ಜುನ ಅವರು ದಕ್ಷಿಣ ಭಾರತದ ಸಿನಿಮಾ ಕ್ಷೇತ್ರದ ಅತ್ಯಂತ ಪ್ರತಿಭಾನ್ವಿತ ನಟರಾಗಿದ್ದಾರೆ. ಕಳೆದ ಮೂರು ದಶಕಗಳಿಗೂ ಅಧಿಕ ಸಮಯದಿಂದ ಅವರು ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ. ಬೆಳ್ಳಿತೆರೆಯಲ್ಲಿ ಅನೇಕ ಅವಿಸ್ಮರಣೀಯ ಸಾಧನೆ ಮಾಡಿರುವ ಅವರು ತಮ್ಮ ಸಮಾಜ ಸೇವೆಯನ್ನು ನಡೆಸುವ ಮೂಲಕ ಸಹ ನಟರು, ಯುವ ನಟರು ಮತ್ತು ಪ್ರೇಕ್ಷಕರಿಗೆ ಪ್ರೇರಕ ಶಕ್ತಿಯಾಗಿದ್ದಾರೆ.

“ನಾವು ಅತ್ಯುತ್ಕøಷ್ಠವಾದ ಅಭಿಯಾನದಲ್ಲಿ ಕೆಲಸ ಮಾಡಿದ್ದೇವೆ. ಡಾಬರ್ ಚವನ್ಪ್ರಾಶ್ನ ಮುಖವಾಗಿ ನಾಗಾರ್ಜುನ ಜೊತೆಗೆ ಈ ಅಭಿಯಾನವು ದಕ್ಷಿಣ ಭಾರತದ ಮಾರುಕಟ್ಟೆಗಳಲ್ಲಿನ ಗ್ರಾಹಕರೊಂದಿಗೆ ಉತ್ತಮ ವ್ಯಾಪ್ತಿಯನ್ನು ಮತ್ತು ಸಂಪರ್ಕ ಹೊಂದಿದೆ ಎಂದು ನಿರೀಕ್ಷಿಸಲಾಗಿದೆ. ಈ ಸಂವಹನದೊಂದಿಗೆ ನಾವು `ಭಾರತದಲ್ಲಿ ತಯಾರಿಸಿದ, ಭಾರತೀಯರಿಂದ, ಭಾರತೀಯರಿಗಾಗಿ’ ಎಂಬ ಪರಿಕಲ್ಪನೆಯ ಮೂಲಕ ನಮ್ಮ ಬಲವಾದ ಹೆಮ್ಮೆಯ ಪ್ರಜ್ಞೆಯನ್ನು ಸ್ಥಾಪಿಸಿದ್ದೇವೆ. ಇದಲ್ಲದೇ ಭಾರತದಲ್ಲಿ ಪ್ರತಿ ಮನೆಯ ರೋಗನಿರೋಧಕ ಶಕ್ತಿ ಮತ್ತು ಯೋಗಕ್ಷೇಮಕ್ಕಾಗಿ ಕಾಳಜಿ ವಹಿಸುತ್ತಿದ್ದೇವೆ’’ ಎಂದು ವಿಕ್ಟೋರಿಯಾ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor NagarjunaBangaloreDabur India LtdKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಡಾಬರ್ ಇಂಡಿಯಾ ಲಿಮಿಟೆಡ್ನಟ ಅಕ್ಕಿನೇನಿ ನಾಗಾರ್ಜುನಬೆಂಗಳೂರು
Share201Tweet123Send
Previous Post

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದೂರಶಿಕ್ಷಣದ ಫಲಿತಾಂಶ ಪ್ರಕಟ: ಪ್ರೊ. ವೀರಭದ್ರಪ್ಪ

Next Post

ಸಮಾನತೆಯ ವಿಚಾರದಲ್ಲಿ ಸಂಪೂರ್ಣ ಪರಿವರ್ತನೆ ಸಾಧ್ಯವಾಗಿಲ್ಲ : ತಹಶೀಲ್ದಾರ ರಘುಮೂರ್ತಿ ವಿಷಾದ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಮಾನತೆಯ ವಿಚಾರದಲ್ಲಿ ಸಂಪೂರ್ಣ ಪರಿವರ್ತನೆ ಸಾಧ್ಯವಾಗಿಲ್ಲ : ತಹಶೀಲ್ದಾರ ರಘುಮೂರ್ತಿ ವಿಷಾದ

ಸಮಾನತೆಯ ವಿಚಾರದಲ್ಲಿ ಸಂಪೂರ್ಣ ಪರಿವರ್ತನೆ ಸಾಧ್ಯವಾಗಿಲ್ಲ : ತಹಶೀಲ್ದಾರ ರಘುಮೂರ್ತಿ ವಿಷಾದ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL