Monday, September 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಗತಿ ಶಕ್ತಿ ಯೋಜನೆಯ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶದ ಗುರಿ: ಸಚಿವ ವಿ. ಸೋಮಣ್ಣ

ಗತಿಶಕ್ತಿ ಉಪಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ದಿಲ್ಲಿಯ ಪ್ರಗತಿ ಮೈದಾನದಲ್ಲಿ ಚಾಲನೆ...

October 14, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸಮಗ್ರ ಮೂಲಸೌಕರ್ಯಕ್ಕೆ ಅಡಿಪಾಯವಾಗಲಿರುವ 100 ಲಕ್ಷ ಕೋಟಿಯ ಗತಿಶಕ್ತಿ ಉಪಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ದಿಲ್ಲಿಯ ಪ್ರಗತಿ ಮೈದಾನದಲ್ಲಿ ಚಾಲನೆ ನೀಡಿದರು.

ಕೊರೋನಾ, ಲಾಕ್‌ಡೌನ್‌ನಿಂದ ಹಳಿ ತಪ್ಪಿದ್ದ ದೇಶದ ಆರ್ಥಿಕತೆ ಮತ್ತೆ ನಿಧಾನಗತಿಗೆ ಹಳಿಗೆ ಮರಳುತ್ತಿದ್ದು, ಅದಕ್ಕೆ ಮತ್ತಷ್ಟು ಉತ್ತೇಜನ ನೀಡಲು, ‘ಗತಿಶಕ್ತಿ’ ಯೋಜನೆ ಪೂರಕವಾಗಿದೆ. 100 ಲಕ್ಷ ಕೋಟಿ ರಾಷ್ಟ್ರೀಯ ಮೂಲಸೌಕರ್ಯ ಮಾಸ್ಟರ್ ಪ್ಲಾನ್ ಇದಾಗಿದ್ದು, ದೇಶದ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿದೆ. ಜತೆಗೆ ಲಾಜಿಸ್ಟಿಕ್‌ ವೆಚ್ಚವನ್ನೂ ತಗ್ಗಿಸಲಿದೆ ಎಂದು ವಸತಿ ಮತ್ತು ಮೂಲಸೌಕರ್ಯ ಸಚಿವ ವಿ. ಸೋಮಣ್ಣ ಹೇಳಿದರು.

ನಗರದ ಅಶೋಕ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ  ರಾಜ್ಯ ಸರ್ಕಾರದ ಪರವಾಗಿ ಪಾಲ್ಗೊಂಡು, ವೀಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟನಾ ಕಾರ್ಯಕ್ರಮ ವೀಕ್ಷಿಸಿ ಅವರು ಮಾತನಾಡಿದರು.

“ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಗುರಿ ಹೊಂದಿದೆ. ಈ ಯೋಜನೆಯು ದೇಶದ ಪ್ರಗತಿಯ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಲ್ಲಿ ಮತ್ತು ಮೂಲಸೌಕರ್ಯದ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಯೋಜನೆಯ ಮೂಲಕ ಸ್ಥಳೀಯ ಉತ್ಪಾದಕರನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸುವ ಗುರಿ ಇದೆ. ಇದು ಕೈಗಾರಿಕೆಗಳ ಅಭಿವೃದ್ಧಿಗೆ ಕಾರಣವಾಗಲಿದೆ,”ಎಂದು ಸೋಮಣ್ಣ ತಿಳಿಸಿದರು.

“ರಾಜ್ಯದಲ್ಲಿ ಕೈಗಾರಿಕಾ-ಸ್ನೇಹಿ ವಾತಾವರಣ ಹಾಗೂ ಸುಲಲಿತ ವ್ಯವಹಾರಕ್ಕೆ ಒತ್ತು ನೀಡಲಾಗುತ್ತಿದೆ. ರಾಷ್ಟ್ರೀಯ ಯೋಜನೆಗೆ ಅನುಗುಣವಾಗಿ ರಾಜ್ಯದಲ್ಲಿನ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಗೊಳಿಸಲು ಕೇಂದ್ರ ಸರ್ಕಾರದೊಂದಿಗೆ ಕೈ ಜೋಡಿಸುತ್ತದೆ. ರಾಜ್ಯದ ಪೂರ್ವ, ಪಶ್ಚಿಮ, ಉತ್ತರ ಹಾಗೂ ದಕ್ಷಿಣ ವಲಯಗಳಲ್ಲಿ ವಿಮಾನ ನಿಲ್ದಾಣಗಳ ನಿರ್ಮಿಸುವುದರಿಂದ ವಿವಿಧ ಆರ್ಥಿಕ ವಲಯಗಳಿಗೆ ತ್ವರಿತಗತಿಯ ಸಂಪರ್ಕ ದೊರೆಯಲಿದೆ. ರಾಜ್ಯ ಹಾಗೂ ಅಂತಾರಾಜ್ಯ ರೈಲು ಮಾರ್ಗಗಳ ನಿರ್ಮಾಣ ವೆಚ್ಚದಲ್ಲಿ ಶೇ.50ರಷ್ಟು ಭಾಗವನ್ನು ರಾಜ್ಯ ಸರ್ಕಾರ ಭರಿಸುವುದಲ್ಲದೆ, ಅಗತ್ಯ ಭೂಮಿಯನ್ನು ಉಚಿತವಾಗಿ ನೀಡುತ್ತದೆ. 9 ಹೊಸ ರೈಲು ಮಾರ್ಗಗಳ ಯೋಜನೆಯನ್ನು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕೈಗೊಳ್ಳಲಾಗುತ್ತದೆ. ಬಂದರು ಹಾಗೂ ಜಲ ಸಾರಿಗೆ ಅಭಿವೃದ್ಧಿ ಮೂಲಕ ಆರ್ಥಿಕ ಹಾಗೂ ಔದ್ಯಮಿಕ ಪ್ರಗತಿ ಹೆಚ್ಚಲಿದೆ ,”ಎಂದು ವಿವರಿಸಿದರು.

ದಾಬಸ್‌ ಪೇಟೆಯಲ್ಲಿ ಲಾಜಿಸ್ಟಿಕ್‌ ಪಾರ್ಕ್‌:
ದಾಬಸ್‌ಪೇಟೆಯಲ್ಲಿ ಮಲ್ಟಿ ಮೋಡಲ್‌ ಲಾಜಿಸ್ಟಿಕ್‌ ಪಾರ್ಕ್‌ (ಎಂಎಂಎಲ್‌) ಅಭಿವೃದ್ಧಿಗೆ 400 ಎಕರೆ ಭೂಮಿ ಗುರುತಿಸಲಾಗಿದೆ. ದೇಶದ ಅತಿ ಹೆಚ್ಚು ಲಾಜಿಸ್ಟಿಕ್‌ ಜಾಲ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದ್ದು, ನೂತನ ಕೈಗಾರಿಕಾ ನೀತಿಯ ಅನುಸ್ಠಾನದ ಮೂಲಕ ಮೊದಲ ಸ್ಥಾನಕ್ಕೇರುವುದು ನಮ್ಮ ಗುರಿ”ಎಂದರು.

ಕಾರ್ಯಕ್ರಮದಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಡಾ. ಇವಿ ರಣಮಣರೆಡ್ಡಿ, ಕೆಐಎಡಿಬಿ ಸಿಇಓ ಡಾ.ಎನ್‌ ಶಿವಶಂಕರ್‌, ಇನ್ವೆಸ್ಟ್‌ ಕರ್ನಾಟಕದ ಸಿಓಓ ಬಿ.ಕೆ ಶಿವಕುಮಾರ್ ಉಪಸ್ಥಿತರಿದ್ದರು.

“ಭಾಸ್ಕರಾಚಾರ್ಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸ್ಪೇಸ್ ಅಪ್ಲಿಕೇಶನ್ ಸಹಯೋಗದಲ್ಲಿ ಜಿಯೋ-ಇನ್ಫಾರ್ಮ್ಯಾಟಿಕ್ಸ್‌ ಅಭಿವೃದ್ಧಿಪಡಿಸಿರುವ ಜಿಐಎಸ್‌- ಆಧಾರಿತ ಇಆರ್‌ಪಿ ವ್ಯವಸ್ಥೆಯು, ಮೂಲಸೌಕರ್ಯ ಸಂಪರ್ಕ ಸಚಿವಾಲಯಗಳನ್ನು ಒಳಗೊಂಡ ನೆಟ್‌ವರ್ಕ್‌ ಗುಂಪಿಗೆ ಯೋಜನೆಯ ಕ್ಷಣ ಕ್ಷಣದ ಮೇಲ್ವಿಚಾರಣೆ ನಡೆಸಲು ನೆರವಾಗಲಿದೆ.”
– ಡಾ. ಇ.ವಿ. ರಣಮಣರೆಡ್ಡಿ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ


ಏನಿದು ಗತಿಶಕ್ತಿ ಯೋಜನೆ?

100 ಲಕ್ಷ ಕೋಟಿ ಗತಿಶಕ್ತಿ ಉಪಕ್ರಮವು ಸಮಗ್ರ ಮೂಲಸೌಕರ್ಯ ಬೆಳವಣಿಗೆಗೆ ಪೂರಕವಾಗಿದ್ದು, ವಿವಿಧ ಆರ್ಥಿಕ ವಲಯಗಳಿಗೆ ಬಹುಮುಖ ಸಂಪರ್ಕ ಕಲ್ಪಿಸುವ ಯೋಜನೆಯಾಗಿದೆ. ಇದು ರೈಲ್ವೆ, ರಸ್ತೆಗಳು ಮತ್ತು ಹೆದ್ದಾರಿಗಳು, ಪೆಟ್ರೋಲಿಯಂ ಮತ್ತು ಅನಿಲ, ವಿದ್ಯುತ್, ದೂರಸಂಪರ್ಕ, ಹಡಗು, ವಾಯುಯಾನ ಮತ್ತು ಕೈಗಾರಿಕಾ ಪಾರ್ಕ್ ಇಲಾಖೆಗಳು ಸೇರಿದಂತೆ ಕೇಂದ್ರ ಸರ್ಕಾರದ 16 ಇಲಾಖೆಗಳು ಒಳಗೊಳ್ಳಲಿವೆ. ಕೇಂದ್ರದ ಎಲ್ಲಾ 16 ಇಲಾಖೆಗಳ ಉನ್ನತ ಅಧಿಕಾರಿಗಳ ನೆಟ್‌ವರ್ಕ್‌ ಪ್ಲಾನಿಂಗ್ ಗ್ರೂಪ್ ಸಹ ರಚಿಸಲಾಗುತ್ತಿದೆ ಎಂದರು.

100 ಲಕ್ಷ ಕೋಟಿಯ ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆ ಆರಂಭಿಸವುದಾಗಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCoronaGathi Shakthi YojaneKannada NewsKannada News LiveKannada News OnlineKannada News WebsiteKannada WebsiteLatest News KannadaLockdownMinister V SomannaNews in KannadaNews KannadaPM Narendra ModiState Newsಕೊರೋನಾಗತಿ ಶಕ್ತಿ ಯೋಜನೆಪ್ರಧಾನಿ ನರೇಂದ್ರ ಮೋದಿಬೆಂಗಳೂರುಲಾಕ್‍ಡೌನ್ಸಚಿವ ವಿ. ಸೋಮಣ್ಣ
Previous Post

ಜಿಲ್ಲೆಯಲ್ಲಿ ಶೇ.100 ರಷ್ಟು ಲಸಿಕೆ ಹಾಕಲು ಸರ್ಕಾರಕ್ಕೆ ಸಹಯೋಗ : ಎಸ್. ದತ್ತಾತ್ರಿ

Next Post

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕೈಗೊಂಡ ನಿರ್ಣಯಳೇನು ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕೈಗೊಂಡ ನಿರ್ಣಯಳೇನು ಗೊತ್ತಾ? ಇಲ್ಲಿದೆ ಮಾಹಿತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಿಜೋರಾಂ | ಬೈರಾಬಿ-ಸೈರಾಂಗ್ ಅದ್ಭುತ ನೂತನ ರೈಲು ಮಾರ್ಗದ ವಿಶೇಷತೆಯೇನು? ಇಲ್ಲಿದೆ ವಿವರ

September 8, 2025

ಶ್ರೀ ಭಗವದ್ಗೀತಾ ಅಭಿಯಾನ | ನ.29ರಂದು ರಾಜ್ಯಮಟ್ಟದ ಸ್ಫರ್ಧೆ

September 8, 2025

ಪಕ್ಷಮಾಸದ ಪ್ರಯುಕ್ತ ಸೆ.21ರವರೆಗೆ ವಿವಿಧೆಡೆ “ಗರುಡ ಪುರಾಣ” ಧಾರ್ಮಿಕ ಪ್ರವಚನ

September 8, 2025

ಕಲೆ ಮಾನವೀಯ ಮೌಲ್ಯಗಳನ್ನು ಕಲಿಸುತ್ತದೆ: ಡಾ. ಜೋಗಿಲ ಸಿದ್ದರಾಜು

September 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಿಜೋರಾಂ | ಬೈರಾಬಿ-ಸೈರಾಂಗ್ ಅದ್ಭುತ ನೂತನ ರೈಲು ಮಾರ್ಗದ ವಿಶೇಷತೆಯೇನು? ಇಲ್ಲಿದೆ ವಿವರ

September 8, 2025

ಶ್ರೀ ಭಗವದ್ಗೀತಾ ಅಭಿಯಾನ | ನ.29ರಂದು ರಾಜ್ಯಮಟ್ಟದ ಸ್ಫರ್ಧೆ

September 8, 2025

ಪಕ್ಷಮಾಸದ ಪ್ರಯುಕ್ತ ಸೆ.21ರವರೆಗೆ ವಿವಿಧೆಡೆ “ಗರುಡ ಪುರಾಣ” ಧಾರ್ಮಿಕ ಪ್ರವಚನ

September 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!