ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಯುಪಿಐ ಮೂಲಕ ಮಿತಿಗಿಂತ ಹೆಚ್ಚಿನ ಹಣ ಸ್ವೀಕರಿಸಿದ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿಸುವಂತೆ ನೀಡಿರುವ ನೋಟಿಸ್ ವಾಪಸ್ ಪಡೆಯುವಂತೆ ಆಗ್ರಹಿಸಿ ವ್ಯಾಪಾರಿಗಳು ರಾಜ್ಯವ್ಯಾಪಿ ಹಾಲು, ಬೇಕರಿ ಉತ್ಪನ್ನ ಮಾರಾಟ ಬಂದ್ ಮಾಡಿದ್ದಾರೆ.
ಚಿಕ್ಕ ಪುಟ್ಟ ಅಂಗಡಿಗಳಿಗೆ ರಾಜ್ಯ ತೆರಿಗೆ ಇಲಾಖೆ ತೆರಿಗೆ ಕಟ್ಟುವಂತೆ ನೋಟಿಸ್ ನೀಡುತ್ತಿರುವುದನ್ನು ಖಂಡಿಸಿ ಬಂದ್ ನಡೆಯುತ್ತಿದೆ.
ವಾಣಿಜ್ಯ ತೆರಿಗೆ ಇಲಾಖೆಯ ನೋಟಿಸ್ ವಿರುದ್ಧ ವರ್ತಕರು ಸಮರ ಸಾರಿದ್ದಾರೆ. ಇಂದಿನಿಂದ ಹಾಲು, ಹಾಲಿನ ಉತ್ಪನ್ನ ಮಾರಾಟ ಬಂದ್ ಮಾಡಲಾಗುತ್ತದೆ. ಹಾಲು ಬಳಸದೆ ಟೀ-ಕಾಫಿ ಮಾಡುವ ಮೂಲಕ ಆಕ್ರೋಶ ಹೊರಹಾಕಲಿದ್ದಾರೆ. ಪ್ರತಿಭಟನಾರ್ಥವಾಗಿ ಕಪ್ಪು ಪಟ್ಟಿ ಧರಿಸಿ ಇತರೆ ವಸ್ತುಗಳ ಮಾರಾಟ ಮಾಡಲಾಗುತ್ತದೆ.
ಕಾಂಡಿಮೆಂಟ್ಸ್ ಹಾಗೂ ಬೇಕರಿ ಮಾಲೀಕರು ಜುಲೈ 24ರಂದು ಪ್ರತಿಭಟನೆ ನಡೆಸಲಿದ್ದಾರೆ. ಜುಲೈ 25ರಂದು ಕರ್ನಾಟಕ ಕಾರ್ಮಿಕ ಪರಿಷತ್ ಬಂದ್ಗೆ ಕರೆಕೊಟ್ಟಿದೆ. ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಯಲಿದ್ದು, ಸುಮಾರು 10 ಸಾವಿರ ಅಂಗಡಿಗಳ ಮಾಲೀಕರು ಭಾಗಿಯಾಗುವ ನಿರೀಕ್ಷೆ ಇದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post