Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಅಹಿಂದಾ ಅಹಿಂದಾ ಎನ್ನುವ ಸಿಎಂ ಅಹಿಂದಾ ವರ್ಗಕ್ಕೆ ಏನು ಮಾಡಿದ್ದಾರೆ? HD ಕುಮಾರಸ್ವಾಮಿ

ಸಂಕ್ರಾಂತಿ ಬಳಿಕ ಜೆಡಿಎಸ್ ಇರಲ್ಲ ಎಂದಿದ್ದ ಎಂ.ಬಿ.ಪಾಟೀಲ್ ಗೆ ತಿರುಗೇಟು

January 13, 2025
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ತಿಳಿಸಿದರು.

ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವರು ಹೇಳಿದರು.

ಜತೆಗೆ; ಪಕ್ಷದ ದ್ವೈವಾರ್ಷಿಕ ಸಾಂಸ್ಥಿಕ ಚುನಾವಣೆ, ಸದಸ್ಯತ್ವ ಅಭಿಯಾನವನ್ನು ಚುರುಕುಗೊಳಿಸುವುದು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ತಯಾರಿ ಹಾಗೂ ಪಕ್ಷ ಸಂಘಟನೆ ವಿಷಯಗಳ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು.
ಮುಖಂಡರ ಸಭೆಯ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಮುಂದಿನ ಏಪ್ರಿಲ್ ಒಳಗೆ ರಾಜ್ಯದ ಘಟಕದ ಅಧ್ಯಕ್ಷ ಸ್ಥಾನವನ್ನು ಚುನಾವಣೆ ಮೂಲಕ ಆಯ್ಕೆ ಮಾಡುವ ತೀರ್ಮಾನ ಆಗಿದೆ. ಪಕ್ಷದ ಸಂಘಟನೆ ಬಗ್ಗೆ ಪಕ್ಷದ ನಾಯಕರಿಗೆ ಕಠಿಣವಾಗಿಯೇ ಹೇಳಿದ್ದೇನೆ. ಯಾರು ಪ್ರಾಮಾಣಿಕವಾಗಿ ಪಕ್ಷದ ಸಂಘಟನೆಗೆ ದುಡಿಯುತ್ತಾರೋ ಅಂಥವರಿಗೆ ಆದ್ಯತೆ ಕೊಡುತ್ತೇವೆ. ನಾನು ಕೂಡ ಪಕ್ಷ ಸಂಘಟನೆಯಲ್ಲಿ ನಿಯಮಿತವಾಗಿ ತೊಡಗಿಸಿಕೊಳ್ಳುತ್ತೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Also read: ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ? ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಮೇಲೆ ರಾಜ್ಯದಲ್ಲಿ ನಾಯಕತ್ವ ಶೂನ್ಯ ಉಂಟಾಗಿದೆ ಎಂದು ಹೇಳಲಾಗುತ್ತಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು; ವಾರದಲ್ಲಿ ನಾಲ್ಕು ದಿನ ನವದೆಹಲಿಯ ಸಚಿವಾಲಯದಲ್ಲಿ ಕೆಲಸ ಮಾಡುತ್ತೇನೆ. ಒಂದು ಅಥವಾ ಎರಡು ದಿನ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಕಾರ್ಖಾನೆಗಳಿಗೆ ಭೇಟಿ ಕೊಡುತ್ತೇನೆ. ಉಳಿದ ಸಮಯವನ್ನು ಪಕ್ಷದ ಕೆಲಸಕ್ಕೆ ಮಿಸಲಿಡುತ್ತೇನೆ. ಪಕ್ಷದ ಸಂಘಟನೆ, ಸಭೆ, ಪ್ರವಾಸ, ಮಂಡ್ಯ ಕ್ಷೇತ್ರಕ್ಕೆ ಭೇಟಿ ಇತ್ಯಾದಿಗಳ ಬಗ್ಗೆ ವೇಳಾಪಟ್ಟಿ ಸಿದ್ಧ ಮಾಡಿಕೊಂಡಿದ್ದೇನೆ. ಇನ್ನು ಮುಂದೆ ಅದರಂತೆಯೇ ಕೆಲಸ ಮಾಡುತ್ತೇನೆ ಎಂದು ಸಚಿವರು ಹೇಳಿದರು.

ಸಾರ್ವಜನಿಕ ಉದ್ಯಮಿಗಳು ಅಭದಾಯಕವಲ್ಲ ಎನ್ನುವ ಮಾತಿದೆ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಆ ಕಾರ್ಖಾನೆಗಳು ಲಾಭ ಮಾಡಬಲ್ಲವು ಎಂಬುದನ್ನು ತೋರಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.
ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಕಿಡಿ:

ಕಾಂಗ್ರೆಸ್ ಪಕ್ಷ ಜೆಡಿಎಸ್ ಶಾಸಕರನ್ನು ಆಪರೇಷನ್ ಮಾಡುತ್ತಿದೆ, ಜೆಡಿಎಸ್ ನಲ್ಲಿ ಗಡಗಡ, ಸಂಕ್ರಾಂತಿ ನಂತರ ಜೆಡಿಎಸ್ ಇರುವುದೇ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸಚಿವರೇ.. ಮೊದಲು ನಿಮ್ಮ ಪಕ್ಷದ ಕಥೆ ನೋಡಿಕೊಳ್ಳಿ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸನ್ನು ದೂರ ಇಟ್ಟು ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದೆ. ಇಂಡಿ ಕೂಟವನ್ನು ವಿಸರ್ಜನೆ ಮಾಡಿ ಎಂದು ಓಮರ್ ಅಬ್ದುಲ್ಲಾ ಹೇಳುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ನಾವು ಏಕಾಂಗಿಯಾಗಿ ಸ್ಥಳಿಯ ಸಂಸ್ಥೆಗಳ ಚುನಾವಣೆ ಎದುರಿಸುತ್ತೇವೆ ಎಂದು ಶಿವಸೇನೆ ಹೇಳುತ್ತಿದೆ. ಅಲ್ಲೆಲ್ಲಾ ಎಲ್ಲಿದೆ ಕಾಂಗ್ರೆಸ್? ನಿಮ್ಮ ಪಕ್ಷದ ಒಳಗೆ ಏನಾಗುತ್ತಿದೆ ಎನ್ನುವುದನ್ನು ಮೊದಲು ನೋಡಿಕೊಳ್ಳಿ. ಪಾಟೀಲರೇ.. ನಿಮ್ಮ ಪಕ್ಷದ ತಟ್ಟೆಯಲ್ಲಿಯೇ  ಹೆಗ್ಗಣ ಸತ್ತು ಬಿದ್ದಿದೆ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.

ನಮಗೆ, ನಮ್ಮ ಕುಟುಂಬಕ್ಕೆ ಸೋಲು ಗೆಲುವು ಹೊಸದೇನಲ್ಲ. ಸೋತಾಗ ಕುಗ್ಗಿಲ್ಲ, ಗೆದ್ದಾಗ ಹಿಗ್ಗಿಲ್ಲ ಎಂದ ಅವರು; ನಮ್ಮ ಪಕ್ಷ ಗಟ್ಟಿಯಾಗಿದೆ. ಅದನ್ನು ಸಹಿಸುವುದು ಕಾಂಗ್ರೆಸ್ ಪಕ್ಷಕ್ಕೆ ಆಗುತ್ತಿಲ್ಲ. ಅದಕ್ಕೆ ಇಷ್ಟೆಲ್ಲಾ ನಾಟಕ ಆಡುತ್ತಿದೆ. ಅದರ ಆಟ ನಡೆಯುವುದಿಲ್ಲ ಎಂದು ಸಚಿವರು ಎಚ್ಚರಿಕೆ ಕೊಟ್ಟರು.

ಜಾತಿಗಣತಿ; ಸಿಎಂ ವಿರುದ್ಧ HDK ಕೆಂಡ

ಕಾಂತರಾಜ್ ವರದಿ ಸರ್ಕಾರದ ಕೈ ಸೇರಿ ಎಷ್ಟು ವರ್ಷವಾಯಿತು? ಜಾತಿಗಳ ಸಮಸ್ಯಗಳಿಗೆ ಏನು  ಪರಿಹಾರ ಕೊಟ್ಟಿದ್ದಾರೆ ಇವರು. ಏಳು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇದ್ದಾರಲ್ಲವೇ? ಅಹಿಂದಾ ನಾಯಕರು, ಬೇರೆ ಸಮಾಜಗಳ ಮಾತಿರಲಿ, ಅಹಿಂದಾ ವರ್ಗಕ್ಕೆ ಅವರು ಏನು ಮಾಡಿದ್ದಾರೆ. ಇಷ್ಟು ದಿನ ಅಧಿಕಾರದಲ್ಲಿ ಇದ್ದರೂ ಇವರು ಇನ್ನೂ ಅಹಿಂದಾ ಅಹಿಂದಾ ಎಂದು ಹೇಳುತ್ತಿದ್ದಾರೆ. ಕೇವಲ ರಾಜಕೀಯಕ್ಕಾಗಿ ಸಿದ್ದರಾಮಯ್ಯ ಅವರು ಈ ಸಮುದಾಯವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಹೋದ ಕಡೆ, ಬಂದ ಕಡೆ ಜಾತಿಗಣತಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರಕಾರವೇ ಜಾತಿ ಗಣತಿಗೆ ತೀರ್ಮಾನ ಮಾಡಿದೆ. ಹೀಗಿದ್ದ ಮೇಲೆ ರಾಜ್ಯ ಸರಕಾರ ಕೇಂದ್ರದ ವರದಿ ಬರುವ ತನಕ ಕಾಯಲಿ. ರಾಜ್ಯದಲ್ಲಿ ಈಗಾಗಲೇ ಆಗಿರುವ ಜಾತಿಗಣತಿ ವರದಿ ದೋಷಪೂರಿತವಾಗಿದೆ. ಗಣತಿ ಆಗಿ ಹತ್ತು ವರ್ಷಗಳು ಮೀರಿದೆ. ರಾಜ್ಯದಲ್ಲಿ ಹಣಕ್ಕೆ ಬರವಿಲ್ಲ. ರಾಜ್ಯ ಸರಕಾರವೇ ಹೊಸದಾಗಿ ಇನ್ನೊಂದು ಜಾತಿ ಜನಗಣತಿ ಮಾಡಲಿ. ಜನರಿಂದ ಹಣವನ್ನು ಯಥೇಚ್ಛವಾಗಿ ಸುಲಿಗೆ ಮಾಡುತ್ತಿದ್ದೀರಿ. ಗಂಜಿ ಕೇಂದ್ರಗಳಿಗಾಗಿ ಬಾಯಿ ಬಿಟ್ಟುಕೊಂಡು ಕಾಯುತ್ತಾ ಕೂತಿರುವರು ಕೆಲವರು ಇರುತ್ತಾರಲ್ಲವೇ.. ಅವರನ್ನೇ ಸೇರಿಸಿ ಇನ್ನೊಂದು ಇನ್ನೊಂದು ಸಮಿತಿ ಮಾಡಿ  ಜಾತಿಗಣತಿ ಮಾಡಿ ಎಂದು ಸಿಎಂಗೆ ಟಾಂಗ್ ಕೊಟ್ಟರು ಕುಮಾರಸ್ವಾಮಿ ಅವರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreH D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಹೆಚ್.ಡಿ. ಕುಮಾರಸ್ವಾಮಿ
Previous Post

ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ? ಹೆಚ್.ಡಿ. ಕುಮಾರಸ್ವಾಮಿ ಕಿಡಿ

Next Post

ಮಹಾಕುಂಭ 2025 | ಯಾತ್ರಾರ್ಥಿಗಳಿಗಾಗಿ ರೈಲ್ವೆ ಇಲಾಖೆಯಿಂದ ಐತಿಹಾಸಿಕ ನಿರ್ಣಯ | ಏನೆಲ್ಲಾ ವ್ಯವಸ್ಥೆಯಾಗಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಹಾಕುಂಭ 2025 | ಯಾತ್ರಾರ್ಥಿಗಳಿಗಾಗಿ ರೈಲ್ವೆ ಇಲಾಖೆಯಿಂದ ಐತಿಹಾಸಿಕ ನಿರ್ಣಯ | ಏನೆಲ್ಲಾ ವ್ಯವಸ್ಥೆಯಾಗಿದೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!