No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Sunday, August 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಚನ ಸಾಹಿತ್ಯದ ಮೌಲ್ಯಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲ ಸೂತ್ರ: ಬಸವರಾಜ ಹೊರಟ್ಟಿ

82ನೇ ಅಖಿಲ ಭಾರತ ಪೀಠಾಸಿನಾಧಿಕಾರಿಗಳ ಸಮ್ಮೇಳನ ಮತ್ತು ಶತಮಾನೋತ್ಸವ ಸಮಾರಂಭದಲ್ಲಿ ಪ್ರತಿಪಾದನೆ

kalpa News by kalpa News
November 18, 2021
in ಬೆಂಗಳೂರು ನಗರ
0
ವಚನ ಸಾಹಿತ್ಯದ ಮೌಲ್ಯಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲ ಸೂತ್ರ: ಬಸವರಾಜ ಹೊರಟ್ಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

12 ನೇ ಶತಮಾನದಲ್ಲಿ ವಿಶ್ವಗುರು ಬಸವಣನವರು ನಿರ್ಮಿಸಿದ ಅನುಭವ ಮಂಟಪ ಇಡೀ ವಿಶ್ವದ ಪ್ರಪ್ರಥಮ ಶಾಸನ ಸಭೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ವಚನ ಸಾಹಿತ್ಯದ ಮೌಲ್ಯಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲ ಸೂತ್ರಗಳಾಗಿವೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಪಾದಿಸಿದ್ದಾರೆ.

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯುತ್ತಿರುವ 82ನೇ ಅಖಿಲ ಭಾರತ ಪೀಠಾಸಿನಾಧಿಕಾರಿಗಳ ಸಮ್ಮೇಳನ ಮತ್ತು ಶತಮಾನೋತ್ಸವ ಸಮಾರಂಭದ ಉದ್ಘಾಟನಾ ಸಮಾರಂಭದ ಬಳಿಕ “ಸಂವಿಧಾನ, ಸದನ ಮತ್ತು ನಾಗರೀಕರ ಬಗೆಗೆ ಪೀಠಾಸಿನಾಧಿಕಾರಿಗಳ ಜವಾಬ್ದಾರಿ” ಕುರಿತು ವಿಚಾರ ಮಂಡಿಸಿದ ಬಸವರಾಜ ಹೊರಟ್ಟಿ, “ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು” ಎಂಬ ಸಂದೇಶ ಸಾರುವ ಸಾರ್ವಕಾಲಿಕ ವಿಚಾರಧಾರೆ ಅಡಿಯಲ್ಲಿ ನಿರ್ಮಾಣ ಗೊಂಡಿದ್ದ ಬಸವಣ್ಣನವರ ಅನುಭವ ಮಂಟಪ, ಪ್ರಜಾಪ್ರಭುತ್ವ ಪರಿಕಲ್ಪನೆಗೆ ಮೂಲ ಅಡಿಪಾಯವಾಗಿದೆ. ತಮ್ಮ ವಚನಗಳ ಮೂಲಕ ಸಾಮಾಜಿಕ ಸಬಲೀಕರಣ, ಸಮಾನತೆ, ಸೌಹಾರ್ದತೆ, ಸಹೋದರತ್ವ ಕುರಿತು ಇಡೀ ಸಮಾಜಕ್ಕೆ ಸಂದೇಶ ಸಾರಿರುವ ಅವರ ಸಂದೇಶಗಳು ಇಂದಿನ ಪ್ರಜಾಪ್ರಭುತ್ವದ ಮೂಲ ಆಶಯಗಳಾಗಿ ರೂಪಗೊಂಡಿವೆ. ಕ್ರಾಂತಿಕಾರಿ ಬಸವಣ್ಣನವರು ಕರ್ನಾಟಕದವರು ಎಂಬುದು ಹೆಮ್ಮೆಯ ವಿಷಯವೆಂದು ಸಂತಸ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ನೆಲಗಟ್ಟಿನಲ್ಲಿ ರೂಪುಗೊಂಡಿದ್ದ ಅಂದಿನ ಅನುಭವಮಂಟಪ, ಸರ್ವ ಜಾತಿ, ಸಮುದಾಯ ಹಾಗೂ ಲಿಂಗಗಳಿಗೆ ಪ್ರಾತಿನಿಧ್ಯ ನೀಡಿ ಪ್ರಜಾಸತ್ತಾತ್ಮಕ ಮೌಲ್ಯಗಳ ವರ್ಧನೆಗೆ ಬೀಜಾಂಕುರ ನೀಡಿದ್ದು, ಇಂದಿನ 21ನೇ ಶತಮಾನದಲ್ಲಿ ಅದು ಹೆಮ್ಮರವಾಗಿ ಬೆಳೆದಿದೆ. ಬಸವಣ್ಣನವರ ಅರಿವು, ಆಚಾರ ಮತ್ತು ಅನುಭವದ ತತ್ವಗಳ ಆಧಾರದಲ್ಲಿ ನಿರ್ಮಾಣಗೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆ, ಭಾರತವು ಸೇರಿದಂತೆ ಜಗತ್ತಿನ ಹಲವು ರಾಷ್ಟçಗಳಲ್ಲಿ ಯಶಸ್ವಿಯಾಗಿರುವುದು ಸಂತಸದ ಸಂಗತಿ ಎಂದು ಹೊರಟ್ಟಿ ತಿಳಿಸಿದರು.
ತಮ್ಮ 4 ದಶಕಗಳ ಶಾಸಕಾಂಗ ಅನುಭವ ಕುರಿತು ಮಾಹಿತಿ ಹಂಚಿಕೊAಡ ಸಭಾಪತಿ ಮಾನ್ಯ ಬಸವರಾಜ ಹೊರಟ್ಟಿ, ಸದನಗಳ ಯಶಸ್ಸು ಮತ್ತು ಸಾರ್ಥಕತೆ ಬಗ್ಗೆ ಹಲವು ಸಲಹೆ ನೀಡಿದರು. ಸದನದ ಕಾರ್ಯಕಲಾಪಗಳ ಗುಣಮಟ್ಟ ಹಾಗೂ ನಿಗದಿತ ಕಾರ್ಯಸೂಚಿ ಕುರಿತಂತೆ ಸಲಹೆ ನೀಡಿದ ಅವರು, ಕಲಾಪ ಸಲಹಾ ಸಮಿತಿಯಲ್ಲಿ ಎಲ್ಲಾ ನಿರ್ದಿಷ್ಟ ವಿಷಯಗಳ ಕುರಿತಾಗಿ ಸದನದ ಘನತೆ ಹೆಚ್ಚಿಸುವ ನಿಟ್ಟಿನಲ್ಲಿ ನಿರ್ಣಯ ತೆಗೆದುಕೊಳ್ಳುವ ಅವಶ್ಯಕತೆ ಇದೆ. ಕಲಾಪಗಳಲ್ಲಿ ಸದಸ್ಯರ ವರ್ತನೆ, ವಿಷಯ ಮಂಡನೆ ಹಾಗೂ ಸಹಭಾಗಿತ್ವ ಕುರಿತು ಕಾಲಕಾಲಕ್ಕೆ ಸೂಕ್ತ ತರಬೇತಿಯ ಅವಶ್ಯಕತೆಯಿದೆ. ಸದನದಲ್ಲಿ ಸಮರ್ಥವಾಗಿ ವಿಷಯ ಮಂಡಿಸಿ ಸಕ್ರಿಯವಾಗಿ ಪಾಲ್ಗೊಳ್ಳುವ ಸದಸ್ಯರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಕಲಾಪದ ಘನತೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕಿದೆ ಎಂದರು.

ಕಾರ್ಯ ಸೂಚಿಯ ಪ್ರಕಾರ ಅಂದಿನ ವಿಷಯ ಕುರಿತು ಅಂದೇ ಚರ್ಚೆ ನಡೆಸಿ ಮುಕ್ತಾಯಗೊಳಿಸಬೇಕು. ಹಾಗೂ ಸದನದ ಕಲಾಪಗಳ ಸಂಧರ್ಭದಲ್ಲಿ ಅನಗತ್ಯವಾಗಿ ಗೊಂದಲ, ಗದ್ದಲ ಉಂಟುಮಾಡುವುದು, ಅನಾವಶ್ಯಕವಾಗಿ ಸದನದ ಬಾವಿಗೆ  ಇಳಿದು ಕಲಾಪಕ್ಕೆ ತೊಂದರೆ ಉಂಟುಮಾಡುವುದು. ಪ್ರಚಾರಕ್ಕಾಗಿ ಧರಣಿ, ಪ್ರತಿಭಟನೆ, ಸದನ ಬಹಿಷ್ಕಾರ ಮುಂತಾದ ಅಸಂವಿಧಾನಿಕ ಕಾರ್ಯಗಳನ್ನು ನಡೆಸಬಾರದು. ಹಾಗೂ ಸದನದ ಒಳಗಡೆ ಬಿತ್ತಿ ಚಿತ್ರಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗುವ ಪರಿಪಾಠಕ್ಕೆ ಇತೀಶ್ರಿ ಹಾಡುವುದು ಸೇರಿದಂತೆ ಹಲವು ರೀತಿಯ ಸಲಹೆಗಳನ್ನು ಬಸವರಾಜ ಹೊರಟ್ಟಿ ಸಭೆಯಲ್ಲಿ ನೀಡಿ, ಅವುಗಳ ಪಾಲನೆ ಕುರಿತಂತೆ ಪೀಠಾಸೀನಾಧಿಕಾರಿಗಳ ಸಭೆ, ನಿರ್ಣಯ ಸ್ವೀಕರಿಸಿ, ಪ್ರಜಾಪ್ರಭುತ್ವದ ಸಾರ್ಥಕತೆಗೆ ಮುಂದಡಿ ಇಡಬೇಕೆಂದು ಮನವಿ ಮಾಡಿದರು.

ಇದಕ್ಕೂ ಮೊದಲು 2 ದಿನಗಳ 82 ನೇ ಅಖಿಲ ಭಾರತ ಪೀಠಾಸಿನಾಧಿಕಾರಿಗಳ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.

ಲೋಕಸಭಾಧ್ಯಕ್ಷ ಓಂ ಬಿರ್ಲಾ ಹಿಮಾಚಲ ವಿಧಾನ ಸಬಾಧ್ಯಕ್ಷ, ವಿಪಿನ್ ಸಿಂಗ್ ಪರ್ಮಾರ್, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜಯರಾಮ ಠಾಕೂರ್, ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ ಸಿಂಗ್, ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳ ವಿಧಾನಸಭಾಧ್ಯಕ್ಷರು, ಎಲ್ಲಾ ರಾಜ್ಯಗಳ ಸಭಾಪತಿಗಳು ಪಾಲ್ಗೊಂಡಿದ್ದರು. ಸಮ್ಮೇಳನ ನಾಳೆ ಸಮಾಪನಗೊಳ್ಳಲಿದೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreHimachala PradeshKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM Narendra ModiShimlaState Newsಅಖಿಲ ಭಾರತ ಪೀಠಾಸಿನಾಧಿಕಾರಿಗಳ ಸಮ್ಮೇಳನಧಾನಿ ನರೇಂದ್ರ ಮೋದಿಪ್ರಧಾನಿ ನರೇಂದ್ರ ಮೋದಿಬಸವರಾಜ ಹೊರಟ್ಟಿಬೆಂಗಳೂರುಶಿಮ್ಲಾಹಿಮಾಚಲ ಪ್ರದೇಶ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ: ಮಣಿಪಾಲ ಆರೋಗ್ಯ ಕಾರ್ಡ್-2021ರ ನೋಂದಣಿ ನ.30ರವರೆಗೆ ವಿಸ್ತರಣೆ

Next Post

ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ಭದ್ರತೆಯುತ ದತ್ತಾಂಶ ನಿರ್ವಹಣೆಯೇ ನಮ್ಮ ಮುಂದಿರುವ ಸವಾಲು

kalpa News

kalpa News

Next Post
ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ಭದ್ರತೆಯುತ ದತ್ತಾಂಶ ನಿರ್ವಹಣೆಯೇ ನಮ್ಮ ಮುಂದಿರುವ ಸವಾಲು

ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ಭದ್ರತೆಯುತ ದತ್ತಾಂಶ ನಿರ್ವಹಣೆಯೇ ನಮ್ಮ ಮುಂದಿರುವ ಸವಾಲು

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL