No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕನ್ನಡಿಗರು ಕೊಟ್ಟ ಪೆನ್ ತಮಿಳರಿಗೆ ಒತ್ತೆ ಇಟ್ಟ ಕಾಂಗ್ರೆಸ್ ಸರಕಾರ!

ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

kalpa News by kalpa News
August 19, 2023
in ಬೆಂಗಳೂರು ನಗರ, ರಾಜಕೀಯ
0
ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎಂದುಕೊಂಡಿದೆ ಕಾಂಗ್ರೆಸ್: ಮಾಜಿ ಸಿಎಂ ಎಚ್’ಡಿಕೆ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |       

ಜನರಿಗೆ ದುಂಬಾಲು ಬಿದ್ದು ಪೆನ್ ಕೊಡಿ, ಪೆನ್ ಕೊಡಿ ಎಂದು ಕೇಳಿದರು. ಪಾಪ.. ಜನರೂ ನಂಬಿ ಪೆನ್ ಕೊಟ್ಟರು. ಈಗ ಆ ಪೆನ್ ಅನ್ನು ತೆಗೆದುಕೊಂಡು ಹೋಗಿ ತಮಿಳುನಾಡಿಗೆ ಒತ್ತೆ ಇಟ್ಟಿದ್ದಾರೆ. ರೆಡ್ ಕಾರ್ಪೆಟ್ ಹಾಕಿ ಆ ರಾಜ್ಯದ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಸ್ವಾಗತ ಕೊರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ HDKumaraswamy  ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ DKShivakumar ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಾತ್ಯತೀತ ಜನತಾದಳ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಮಾಜಿ ಮುಖ್ಯಮಂತ್ರಿಗಳು.
ನೀರು ಬಿಡಲು ಹೇಳಿದವರು ಯಾರು?
ರಾಜ್ಯ ಕಾಂಗ್ರೆಸ್ ಸರಕಾರ ಏಕಪಕ್ಷೀಯವಾಗಿ ತಮಿಳುನಾಡಿಗೆ ನೀರು ಹರಿಸಿದೆ. ಯಾರನ್ನು ಕೇಳಿ ಇವರು ನೀರು ಹರಿಸಿದ್ದಾರೆ? ಜನರನ್ನು ಕೇಳಿದ್ದಾರೆಯೇ? ಪ್ರತಿಪಕ್ಷಗಳ ಜತೆ ಚರ್ಚೆ ಮಾಡಿದ್ದಾರೆಯೇ? ಅಥವಾ ನೀರು ಬಿಡುವಂತೆ ಸರಕಾರಕ್ಕೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಇಲ್ಲವೇ ಸುಪ್ರೀಂ ಕೋರ್ಟ್ ನಿರ್ದೇಶನ ಇದೆಯೇ? ಹಾಗೇನಾದರೂ ಇದ್ದರೆ ಜನತೆಗೆ ತೀಸಬೇಕು ಎಂದು ಅವರು ಒತ್ತಾಯ ಮಾಡಿದರು.

ದೇವೇಗೌಡರು ಏಕಪಕ್ಷೀಯವಾಗಿ ನೀರು ಹರಿಸಿಲ್ಲ
ಕುಮಾರಸ್ವಾಮಿ ಅವರು ಅವರ ಕಾಲದಲ್ಲಿ ನೀರು ಬಿಟ್ಟಿಲ್ವಾ? ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ. ಅವರಿಗೆ ತಿಳಿವಳಿಕೆ ಕೊರತೆ ಇದೆ. ನಾನು ಎರಡು ಸಲ ಮುಖ್ಯಮಂತ್ರಿ ಆಗಿದ್ದಾಗ ತಮಿಳುನಾಡಿಗೆ ನೀರು ಹರಿಸಿದ್ದು ನಿಜ. ಆಗ ನಮ್ಮಲ್ಲಿ ಯಥೇಚ್ಛವಾಗಿ ನೀರು ಇತ್ತು. ಸಂಕಷ್ಟದ ಪರಿಸ್ಥಿತಿ ಇರಲಿಲ್ಲ. ದೇವೇಗೌಡರ ಕಾಲದಲ್ಲಿಯೂ ಕೇಂದ್ರ ಸರಕಾರದ ಮನವಿ ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ನೀರು ಬಿಡಲಾಗಿತ್ತು. ಏಕಪಕ್ಷೀಯವಾಗಿ ಹಿಂದಿನ ಯಾವ ಸರಕಾರವೂ ನಿರ್ಧಾರ ಕೈಗೊಂಡು ಸರ್ವಾಧಿಕಾರಿ ಮನೋಭಾವದಿಂದ ಜನರ ಸಂಕಷ್ಟ ಲೆಕ್ಕಿಸದೆ ನೆರೆ ರಾಜ್ಯಕ್ಕೆ ನೀರು ಹರಿಸಿರಲಿಲ್ಲ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ದೇವೇಗೌಡರ ಬಗ್ಗೆ ಮಾತನಾಡಬೇಕಾದರೆ ಇತಿಹಾಸ ತಿಳಿದು ಮಾತನಾಡಬೇಕು. 1962ರಿಂದ ಅವರು ಕಾವೇರಿ, ಕೃಷ್ಣಾ ಸೇರಿದಂತೆ ವಿವಿಧ ನದಿ ನೀರು ಹಕ್ಕಿಗಾಗಿ ಅವರು ನಡೆಸಿದ ಹೋರಾಟವನ್ನು ತಿಳಿದು ಮಾತನಾಡಬೇಕು. ಅವರೆಂದೂ ನಮ್ಮ ರಾಜ್ಯದ ರೈತರ ಹಿತಾಸಕ್ತಿ ಕಡೆಗಣಿಸಿ ನೆರೆ ರಾಜ್ಯಕ್ಕೆ ನೀರು ಬಿಟ್ಟಿಲ್ಲ. ಅವರ ಬಗ್ಗೆ ಮಾತಾಡೋಕೆ ಯಾರಿಗೂ ನೈತಿಕತೆ ಇಲ್ಲ ಎಂದು ಅವರು ತಿಳಿಸಿದರು.

ಈಗ ರಾಜ್ಯದಲ್ಲಿ ಮಳೆ ಇಲ್ಲ, ಬರ ಬಂದು ಕೂತಿದೆ. ಇದು ಸರಕಾರದ ಪಾಪದ ಫಲ. ಇವರ ಲೂಟಿ ಹೊಡೆಯುವ ಕುಕೃತ್ಯಕ್ಕೆ ಪ್ರಕೃತಿಯೂ ಸಹಕಾರ ನೀಡುತ್ತಿಲ್ಲ ಎಂದು ಅವರು ಕಿಡಿಕಾರಿದರು.

ಮೇಕೆದಾಟು ಎಲ್ಲಗೆ ಬಂತು?
ಕಾಂಗ್ರೆಸ್ ನವರು ಮೇಕೆದಾಟ ಪಾದಯಾತ್ರೆ ಮಾಡಿದರು, ಅದು ಎಲ್ಲಿಗೆ ಬಂತು? ಚಿಕನ್ ಲೆಗ್, ಮಟನ್ ಪೀಸ್ ತಿಂದು ಹೋರಾಟ ಮಾಡಿದ್ದು ಅಷ್ಟೇ ಆಯಿತು ಅಲ್ಲಿ. ಡಿಎಂಕೆ ನಿಮ್ಮ ಮಿತ್ರಪಕ್ಷ ಅಲ್ಲವೇ? ತಮಿಳುನಾಡು ಮುಖ್ಯಾಮಂತಿ ಸ್ಟಾಲಿನ್ ಅವರು ನಿಮ್ಮ ಸ್ನೇಹಿತರೇ ಅಲ್ಲವೇ? ಕೊಟ್ಟು ತಗೆದುಕೊಳ್ಳುವ ಸಂಬಂಧ ಮಾಡ್ತಾ ಇದ್ದೀರಲ್ಲಾ? ಮೇಕೆದಾಟು ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಅವರು ಟಾಂಗ್ ನೀಡಿದರು.
ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನಲ್ಲಿ ತಮಿಳುನಾಡಿನವರು ಅರ್ಜಿ ಹಾಕಿದ್ದಾರೆ. ರಾಜ್ಯ ಸರಕಾರ ಏನು ಮಾಡುತ್ತಿದೆ. ಈಗಾಗಲೇ ಜನರನ್ನು ಲೆಕ್ಕಕ್ಕೆ ಇಡದೇ ತಮಿಳುನಾಡಿಗೆ ನೀರು ಬಿಡುತ್ತಿದ್ದೀರಿ. ಅವರು ಹೆಚ್ಚುವರಿ ನೀರು ಕೇಳಿದರೆ ಕೊಡಲು ಆಗುತ್ತಾ? ನಮ್ಮ ರೈತರು ಇನ್ನೂ ಒಂದು ಬೆಳೆಯನ್ನೂ ಬೆಳೆದಿಲ್ಲ. ತಮಿಳುನಾಡಿನಲ್ಲಿ ಏನು ಪರಿಸ್ಥಿತಿ ಇದೆ, ಅಲ್ಲಿ ಎಷ್ಟು ಬೆಳೆಗಳನ್ನು ತೆಗೆಯಲಾಗುತ್ತಿದೆ ಎನ್ನುವುದು ಈ ಸರಕಾರಕ್ಕೆ ಗೊತ್ತಿದೆಯಾ? ಅಲ್ಲಿ ನಾಲ್ಕು ಲಕ್ಷ ಎಕರೆಗೆ ನೀರಾವರಿ ಸೌಲಭ್ಯ ಮಾಡಿಕೊಂಡಿದ್ದಾರೆ. ಕನಿಷ್ಠ ಜ್ಞಾನ ಈ ಸರಕಾರಕ್ಕೆ ಇದೆಯಾ ಎಂದು ಕುಮಾರಸ್ವಾಮಿ ಅವರು ಕಿಡಿ ಕಾರಿದರು.

ಮಾಡಿದ ಪ್ರಮಾದವನ್ನು ಮುಚ್ಚಿಕೊಳ್ಳಲು ಸರಕಾರ, ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಕಾಂಗ್ರೆಸ್ ನವರು ಆರೋಪ ಮಾಡುತ್ತಿದ್ದಾರೆ. ನಾವು ವಿಪಕ್ಷದಲ್ಲಿ ಇರುವುದೇ ರಾಜಕೀಯ ಮಾಡಲು ಹಾಗೂ ಸರಕಾರದ ಲೋಪಗಳನ್ನು ಎತ್ತಿ ತೋರಿಸಲು. ಕರ್ನಾಟಕದ ರೈತರ ಔದಾರ್ಯ ಬೆಲೆ ಇದೆಯಾ? I.n.d.i.a. ಮೈತ್ರಿ ಕೂಟಕ್ಕೆ ಶಕ್ತಿ ತುಂಬಲು ರಾಜ್ಯದ ರೈತರನ್ನು ಬಲಿ ಕೊಡಲು ಹೊರಟಿದ್ದೀರಿ. ಇಂಥ ಓಲೈಕೆ ಅಗತ್ಯ ಇತ್ತಾ? ಸುಪ್ರೀಂ ಕೋರ್ಟ್ ಮುಂದೆ ತಮಿಳುನಾಡಿನವರು ಮತ್ತೊಂದು ಅರ್ಜಿ ಹಾಕಿದರೆ, ಆಗ ನೀವೇನು ಮಾಡುತ್ತೀರಿ? ಎಂದು ಮಾಜಿ ಮುಖ್ಯಮಂತ್ರಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಮಾಜಿ ಸಚಿವರಾದ ಬಂಡೆಪ್ಪ ಕಾಷೆಂಪೂರ್, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಜತೆಯಲ್ಲಿ ಇದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited 

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಕ್ಷ ಸದೃಢಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ನೂತನ ಕೋರ್ ಕಮಿಟಿ ರಚನೆ

Next Post

ಕ್ರೈಸ್ಟ್‌ಕಿಂಗ್ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ಕಾರ್ಯಾಗಾರ

kalpa News

kalpa News

Next Post
ಕ್ರೈಸ್ಟ್‌ಕಿಂಗ್ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ಕಾರ್ಯಾಗಾರ

ಕ್ರೈಸ್ಟ್‌ಕಿಂಗ್ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ಕಾರ್ಯಾಗಾರ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL