No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಾರ್ವಜನಿಕರ ಜೀವನಮಟ್ಟ ಸುಧಾರಿಸುವಲ್ಲಿ ಮೈಕ್ರೋಫೈನಾನ್ಸ್ ಕೊಡುಗೆ ಅಪಾರ | ಆನಂದ್ ರಾವ್

ಮೈಕ್ರೋಫೈನಾನ್ಸ್ ಇಂಡಸ್ಟ್ರಿ ನೆಟ್‌ವರ್ಕ್, ಅಸೋಸಿಯೇಶನ್ ಆಫ್ ಕರ್ನಾಟಕ ಮೈಕ್ರೋ ಫೈನಾನ್ಸ್ ಇನ್ಸ್ಟಿಟ್ಯೂಷನ್ ಜಂಟಿ ಪತ್ರಿಕಾಗೋಷ್ಠಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 25, 2025
in ಬೆಂಗಳೂರು ನಗರ
0
ಸಾರ್ವಜನಿಕರ ಜೀವನಮಟ್ಟ ಸುಧಾರಿಸುವಲ್ಲಿ ಮೈಕ್ರೋಫೈನಾನ್ಸ್ ಕೊಡುಗೆ ಅಪಾರ | ಆನಂದ್ ರಾವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |   ಬೆಂಗಳೂರು  |

ಆರ್‌ಬಿಐ (RBI) ಮಾನ್ಯತೆ ಹೊಂದಿರುವ ಸ್ವಯಂ – ನಿಯಂತ್ರಕ ಸಂಸ್ಥೆಯಾದ ಮೈಕ್ರೋಫೈನಾನ್ಸ್ ಇಂಡಸ್ಟ್ರಿ ನೆಟ್‌ವರ್ಕ್ (MFIN), ಅಸೋಸಿಯೇಶನ್ ಆಫ್ ಕರ್ನಾಟಕ ಮೈಕ್ರೋ ಫೈನಾನ್ಸ್ ಇನ್ಸ್ಟಿಟ್ಯೂಷನ್ (AKMI) ಜೊತೆ, “ಸಮಾಜದ ಹಿಂದುಳಿದ ವರ್ಗಗಳ ಜೀವನವನ್ನು ಸುಧಾರಿಸುವಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಎಂಎಫ್ಐಎನ್‌ನ ರಾಜ್ಯ ಉಪಕ್ರಮಗಳ ಮುಖ್ಯಸ್ಥರಾದ ರಾಮ ಕಾಮರಾಜು, ಐಐಎಫ್‌ಎಲ್ ಸಮಸ್ತದ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಶ್ ಎನ್ ಮತ್ತು ಚೈತನ್ಯ ಇಂಡಿಯಾ ಫಿನ್ ಕ್ರೆಡಿಟ್‌ನ ವ್ಯವಸ್ಥಾಪಕ ನಿರ್ದೇಶಕ ಆನಂದ್ ರಾವ್ ಹೇಳಿದರು.

ಬೆಂಗಳೂರಿನಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ಕರ್ನಾಟಕದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ  ಆರ್ಥಿಕ ಒಳಗೊಳ್ಳುವಿಕೆ ಮತ್ತು ಸಬಲೀಕರಣವನ್ನು ಬೆಳೆಸುವಲ್ಲಿ ಮೈಕ್ರೋಫೈನಾನ್ಸ್ ಸಾಲಗಳ ಅಪಾರ ಕೊಡುಗೆಯ ಬಗ್ಗೆ ವಿವರಿಸಿದರು.
ಸಾಲ ಮತ್ತು ಅಗತ್ಯ ಹಣಕಾಸು ಸೇವೆಗಳು ಭಾರತದ ಅತ್ಯಂತ ದೂರದ ಮೂಲೆಗಳನ್ನು ತಲುಪುವಂತೆ ನೋಡಿಕೊಳ್ಳುವಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳು ಪರಿಣಾಮಕಾರಿ ಸಾಧನವಾಗಿ ಹೊರಹೊಮ್ಮಿವೆ. ಕರ್ನಾಟಕದಲ್ಲಿ, ಮೈಕ್ರೋಫೈನಾನ್ಸ್ ಸಂಸ್ಥೆಗಳು, ಮೈಕ್ರೋಫೈನಾನ್ಸ್ ಸಾಲಗಳ ಮೂಲಕ ಒಂದು ಕೋಟಿಗೂ ಹೆಚ್ಚು ವ್ಯಕ್ತಿಗಳ (ಅನನ್ಯ ಸಾಲಗಾರರು) ಜೀವನವನ್ನು ಪರಿವರ್ತಿಸಿದ್ದು, ಪ್ರಸ್ತುತ 63 ಲಕ್ಷಕ್ಕೂ ಹೆಚ್ಚು ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿವೆ. ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳ ಒಟ್ಟು ಸಾಲದ ಬಂಡವಾಳವು ಕಳೆದ ಹಣಕಾಸು ವರ್ಷದಲ್ಲಿ (ಮಾರ್ಚ್-2019) ರೂ. 16,946 ಕೋಟಿಗಳಷ್ಟಿತ್ತು, ಅದು ಪ್ರಸ್ತುತ ವೃದ್ಧಿಯಾಗಿ ರೂ. 42,265 ಕೋಟಿಗಳಿಗೆ ಏರಿದ್ದು, ಇದು ಸಾವಿರಾರು ಮಹಿಳೆಯರು, ಕುಟುಂಬಗಳು ಮತ್ತು ಸಮುದಾಯಗಳು ಸಬಲೀಕರಣಹೊಂದಿ ಅಭಿವೃದ್ಧಿ ಹೊಂದುವಂತೆ ಮಾಡಿವೆ ಎಂದರು.

ಕರ್ನಾಟಕದಲ್ಲಿ ಮೈಕ್ರೋಫೈನಾನ್ಸ್ ಗ್ರಾಹಕರು ತಮ್ಮ ಕುಟುಂಬದ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಮತ್ತು ಹೊಸ ವ್ಯವಹಾರಗಳನ್ನು ಪ್ರಾರಂಭಿಸಲು, ನೂತನ ಮಾರ್ಗಗಳನ್ನು ಅನ್ವೇಷಿಸಲು ಉತ್ಸುಕತೆಯನ್ನು ತೋರಿಸಿದ್ದಾರೆ. ಉತ್ತಮ ಸಾಲ ಶಿಸ್ತು, ಸಾಲಗಳ ನಿಯಮಿತ ಮರುಪಾವತಿ ಮತ್ತು ಸಾಲ ನೀಡುವ ಸಂಸ್ಥೆಗಳ ಸಲಹೆಯನ್ನು ಗೌರವಿಸುವ ಬಗ್ಗೆ ಕಲಿಯುವಲ್ಲಿ ಗ್ರಾಹಕರು ಇದೇ ರೀತಿಯ ಉತ್ಸಾಹವನ್ನು ತೋರಿಸಿದ್ದಾರೆ ಎಂದರು.

MFINನ ರಾಜ್ಯ ಉಪಕ್ರಮಗಳ ಮುಖ್ಯಸ್ಥ ರಾಮ ಕಾಮರಾಜು ಮಾತನಾಡುತ್ತಾ, “ಕರ್ನಾಟಕ ರಾಜ್ಯದಲ್ಲಿ ಆರ್‌ಬಿಐ ನಿಯಂತ್ರಿತ ಮೈಕ್ರೋಫೈನಾನ್ಸ್ ಘಟಕಗಳ ಕಾರ್ಯಾಚರಣೆಗಳು, ನೋಟು ರದ್ದತಿ ಮತ್ತು ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿಯೂ ಕೂಡ ಸುಗಮ ಹಾದಿಯಲ್ಲಿ ಸಾಗಿದವು. ರಾಜ್ಯದ ಮಹಿಳಾ ಸಾಲಗಾರರು ಅಸಾಧಾರಣ ಸ್ಥಿತಿಸ್ಥಾಪಕತ್ವವನ್ನು ಪ್ರದರ್ಶಿಸುತ್ತಾ, ವರ್ಷಗಳ ಕಾಲ ಅತ್ಯುತ್ತಮ ಸಾಲಶಿಸ್ತನ್ನು ಕಾಯ್ದುಕೊಂಡಿದ್ದಾರೆ. ನಿಯಂತ್ರಿತ ಎಂಎಫ್‌ಐಗಳು ನೀಡುವ ಸಾಲಗಳು “ಮಹಿಳಾ ಅಭಿವೃದ್ಧಿ” ಯಿಂದ “ಮಹಿಳಾ ನೇತೃತ್ವದ ಅಭಿವೃದ್ಧಿ” ಯೆಡೆಗೆ ನಿರೂಪಣೆಯನ್ನು ಬದಲಾಯಿಸಲು ನಿಸ್ಸಂದಿಗ್ಧವಾಗಿ ಸಹಾಯ ಮಾಡಿವೆ ಎಂದು ಹೇಳಿದರು.

ಮಹಿಳೆಯರ ಸಾಮಾಜಿಕ-ಆರ್ಥಿಕ ಸಬಲೀಕರಣಕ್ಕಾಗಿ ಮೈಕ್ರೋಫೈನಾನ್ಸ್ ವ್ಯಾಪಕ ಮನ್ನಣೆಯನ್ನು ಪಡೆದಿದ್ದು, ಇದು ಕುಟುಂಬದಲ್ಲಿ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅವರಿಗೆ ಸರಿಯಾದ ಮತ್ತು ಅರ್ಹ ಪಾತ್ರವನ್ನು ಗಳಿಸಿಕೊಟ್ಟಿದೆ. ಸರ್ಕಾರದ ಪರಿಣಾಮಕಾರಿ ಯೋಜನೆಗಳೊಂದಿಗೆ  ತಾಳೆಯಾಗುವ ಮೈಕ್ರೋಫೈನಾನ್ಸ್, ತಳಮಟ್ಟದಲ್ಲಿ ಅವರನ್ನು  ಬಡತನದ ಬಲೆಯಿಂದ ಮುಕ್ತಗೊಳಿಸುವಲ್ಲಿ ಯಶಸ್ವಿಯಾಗಿ, ಅವರನ್ನು ಸುಸ್ಥಿರ ಜೀವನೋಪಾಯದ ಮೇಲ್ಮುಖ ಪಥದಲ್ಲಿ ಇರಿಸಿದೆ ಎಂದು ಹೇಳಿದರು.”

ಮತ್ತೊಂದೆಡೆ, ನಿಯಂತ್ರಿತ ಮೈಕ್ರೋ ಫೈನಾನ್ಸ್‌ಗಳು (NBFC-MFIs, Banks, Small Finance Banks),  RBI ಮತ್ತು MFIN SRO ಎರಡರಿಂದಲೂ ಬಹಳ ಕಠಿಣ ನಿಯಮಗಳು ಮತ್ತು ಮೇಲ್ವಿಚಾರಣೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು ಕಾಮರಾಜು ಹೇಳಿದರು.

ಈ ಎಲ್ಲಾ ನಿಯಂತ್ರಿತ ಸಂಸ್ಥೆಗಳು (Regulated Entities) ‘RBI ನ ಮೈಕ್ರೋಫೈನಾನ್ಸ್ ಮತ್ತು ನ್ಯಾಯಯುತ ಅಭ್ಯಾಸ ಸಂಹಿತೆಯ’ ಮೇಲಿನ RBI ನಿರ್ದೇಶನಗಳಿಂದ ನಿಯಂತ್ರಿಸಲ್ಪಡುತ್ತವೆ. ಇದರ ಜೊತೆಗೆ, ಸದಸ್ಯ ಸಂಸ್ಥೆಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ, ನಿಯಂತ್ರಕ ಮಾನದಂಡಗಳಿಗೆ ಬದ್ಧವಾಗಿರುವಂತೆ ಮತ್ತು ತಪ್ಪು ಅಭ್ಯಾಸಗಳನ್ನು ಮಾಡದಂತೆ ಖಚಿತಪಡಿಸಿಕೊಳ್ಳಲು, MFIN ಉತ್ತಮ ವ್ಯವಸ್ಥೆ ಮತ್ತು ಕಟ್ಟುನಿಟ್ಟಿನ ಕಾರ್ಯವಿಧಾನಗಳನ್ನು ಸ್ಥಾಪಿಸಿದೆ. ಉದಾಹರಣೆಗೆ, ಪ್ರಸ್ತುತ MFIN, ಮುಂದಿನ 2 ವರ್ಷಗಳಲ್ಲಿ ದೇಶಾದ್ಯಂತ RBI ನ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ (DEA) ಯೋಜನೆಯ ಉಪಕ್ರಮದ ಅಡಿಯಲ್ಲಿ 2,131 ಹಣಕಾಸು ಸಾಕ್ಷರತಾ ಕಾರ್ಯಾಗಾರಗಳನ್ನು ಕೈಗೊಳ್ಳಲಿದೆ ಮತ್ತು MFIN ಸ್ಥಳೀಯ ಭಾಷೆಯಲ್ಲಿ 24*7  ಟೋಲ್ ಫ್ರೀ ಗ್ರಾಹಕರ ಕುಂದುಕೊರತೆ ಪರಿಹಾರ ವ್ಯವಸ್ಥೆಯನ್ನು ಸಹ ನಿರ್ವಹಿಸುತ್ತಿದೆ ಎಂದು ಹೇಳಿದರು.
ಮುಂದುವರೆಸುತ್ತಾ, ಅವರು ಮೈಕ್ರೋ ಫೈನಾನ್ಸ್‌ಗಳ ವಿರುದ್ಧದ ಪ್ರತಿಭಟನೆಗಳ ಇತ್ತೀಚಿನ ವರದಿಗಳ ಬಗ್ಗೆ ಮಾತನಾಡುತ್ತಾ, ಅನಧಿಕೃತ ಸಂಸ್ಥೆಗಳ ಸಹಾಯದಿಂದ ಮಾಹಿತಿಯಿಲ್ಲದ ವ್ಯಕ್ತಿಗಳ ಒಂದು ಸಣ್ಣ ಸಮೂಹ  ನಿರ್ಲಜ್ಜ ವದಂತಿಗಳನ್ನು ಹರಡುತ್ತಿರುವ ಬಗ್ಗೆ  ಜಾಗೃತಿ ಮೂಡಿಸಿದರು. ನಾವು ಸರಿಯಾಗಿ  ನಿರ್ಣಯಿಸಿದ ಮಾಪನಾಂಕದ ಸಲಹಾ ವಿಧಾನವನ್ನು ಅನುಸರಿಸುತ್ತೇವೆ, ಮತ್ತು ಎಲ್ಲಾ ಸಮಯದಲ್ಲೂ ನಾವಿದನ್ನು ಗಮನಿಸುತ್ತಿದ್ದೇವೆ ಎಂದು ನಿಮಗೆಲ್ಲರಿಗೂ ಭರವಸೆ ನೀಡಲು  ಬಯಸುತ್ತೇವೆ. ಮೈಕ್ರೋ ಫೈನಾನ್ಸ್ ಪರಿಸರ ವ್ಯವಸ್ಥೆಯು ಯಾವುದೇ ಅಹಿತಕರ ವದಂತಿಗಳಿಂದ ರಕ್ಷಿಸಲ್ಪಡಲು, ಈ ವಲಯದಲ್ಲಿ ವರದಿಯಾಗುತ್ತಿರುವ ಯಾವುದೇ ಸಮಸ್ಯೆಗಳ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನಡೆಸಬೇಕೆಂದು  ಮಾಧ್ಯಮಗಳನ್ನು ಒತ್ತಾಯಿಸಿದರು.  ನಂತರ, ಮೈಕ್ರೋಫೈನಾನ್ಸ್ ಪರಿಸರ ವ್ಯವಸ್ಥೆ ಮತ್ತು ಅದರ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಯಾವುದೇ ನಿಜವಾದ ಕಾಳಜಿಗಳನ್ನು ಪರಿಹರಿಸಲು ಸರಿಯಾದ ವೇದಿಕೆಯಲ್ಲಿ ಮಾತನಾಡಲು ಮತ್ತು ತೊಡಗಿಸಿಕೊಳ್ಳಲು ನಾವು ಸದಾ ಮುಕ್ತರಾಗಿದ್ದೇವೆ ಎಂದರು.

IIFL ಸಮಸ್ತಾ ಫೈನಾನ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಶ್ ಎನ್ ಮಾತನಾಡುತ್ತಾ, “ಬ್ಯಾಂಕ್ ಸೌಲಭ್ಯವಿಲ್ಲದವರಿಗೆ, ನಿರ್ಣಾಯಕವಾದ ಆರ್ಥಿಕ ಪ್ರವೇಶವನ್ನು ಒದಗಿಸುವ ಮೂಲಕ ಮೈಕ್ರೋಫೈನಾನ್ಸ್ ಸಂಸ್ಥೆಗಳು ಮಹಿಳಾ ಉದ್ಯಮಿಗಳನ್ನು ಸಬಲೀಕರಣಗೊಳಿಸುವಲ್ಲಿ ಮತ್ತು ಸಮುದಾಯಗಳನ್ನು ಉನ್ನತೀಕರಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ” ಎಂದರು.

“ನಿಯಂತ್ರಿತ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಮಹಿಳಾ ಉದ್ಯಮಶೀಲತೆ ಹೆಚ್ಚಿಸಿ, ಅವರನ್ನು  ಸಬಲೀಕರಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ, ಹಾಗೇ ಇವು ಕುಟುಂಬಗಳನ್ನು ಉನ್ನತೀಕರಿಸುವ ಮತ್ತು ಇಡೀ ಸಮುದಾಯಗಳನ್ನು ಪರಿವರ್ತಿಸುವ ದೂರಗಾಮಿ ಪರಿಣಾಮಗಳನ್ನು ಹೊಂದಿವೆ. ಬ್ಯಾಂಕ್ ಸೌಲಭ್ಯವಿಲ್ಲದವರಿಗೆ ಈ ಅವಕಾಶ ನೀಡುವ ಮೂಲಕ, ನಾವು ಉದ್ಯಮಶೀಲ ಬೆಳವಣಿಗೆಯನ್ನು ಉತ್ತೇಜಿಸುತ್ತಾ, ನಿರ್ಣಾಯಕ ಸ್ಥಳೀಯ ಉದ್ಯೋಗವನ್ನು ಸೃಷ್ಟಿಸುತ್ತೇವೆ ಮತ್ತು ತಳಮಟ್ಟದ ಆರ್ಥಿಕತೆಯನ್ನು ಬಲಪಡಿಸುತ್ತೇವೆ” ಎಂದರು.

“ಕಳೆದ ಕೆಲವು ತಿಂಗಳುಗಳಲ್ಲಿ, ಬಹು ಸಾಲದಾತರಿಂದ ಸಾಲ ಪಡೆದ ಸಾಲಗಾರರಿಂದ, ಸಾಲ ಸಂಗ್ರಹಗಳಲ್ಲಿ ಸ್ವಲ್ಪ ಸಮಸ್ಯೆ ಕಂಡುಬಂದಿದೆ. ಆದಾಗ್ಯೂ, ಡಿಸೆಂಬರ್‌ನ ಕ್ಷೇತ್ರ ವರದಿಗಳು ಸುಧಾರಣೆಯ ಸಕಾರಾತ್ಮಕ ಸಂಕೇತಗಳನ್ನು ತೋರಿಸುತ್ತಿವೆ ಮತ್ತು ಮುಂದಿನ ಕೆಲವು ತ್ರೈಮಾಸಿಕಗಳಲ್ಲಿ ವಿಷಯಗಳು ತಿಳಿಯಾಗುತ್ತಿದ್ದಂತೆ  ಸಕಾರಾತ್ಮಕ ಪ್ರವೃತ್ತಿಗಳನ್ನು ಕಾಣುವುದರಲ್ಲಿ ನನಗೆ ವಿಶ್ವಾಸವಿದೆ, ಹಾಗೇ ಮುದ್ರಾ ಯೋಜನೆಯಡಿ ಶಿಶು ಸಾಲಗಳನ್ನು ನೀಡುವಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತವೆ ” ಎಂದು ವೆಂಕಟೇಶ್ ಭರವಸೆ ನೀಡಿದರು.

ಚೈತನ್ಯ ಇಂಡಿಯಾ ಫಿನ್ ಕ್ರೆಡಿಟ್‌ನ  ಎಂಡಿ ಶ್ರೀಯುತ ಆನಂದ್ ರಾವ್ ಮಾತನಾಡುತ್ತಾ “ಕರ್ನಾಟಕದಲ್ಲಿ, ರಾಜ್ಯದ ಗ್ರಾಮೀಣಾಭಿವೃದ್ಧಿ ಕಥೆಯ ಭಾಗವಾಗಿರುವ ಮೈಕ್ರೋ ಫೈನಾನ್ಸ್‌ಗಳು 20 ವರ್ಷಗಳಿಗೂ ಹೆಚ್ಚಿನ ಇತಿಹಾಸವನ್ನು ಹೊಂದಿವೆ. ಆರ್‌ಬಿಐ ನಿಯಂತ್ರಿತ ಘಟಕಗಳು ಬಲವಾದ ನೀತಿ ಸಂಹಿತೆಯಿಂದ ನಿಯಂತ್ರಿಸಲ್ಪಡುತ್ತವೆ. ಈ ವಲಯ ಎದುರಿಸುತ್ತಿರುವ ಸವಾಲುಗಳು ಬರುತ್ತಿರುವುದು ಅನಿಯಂತ್ರಿತ ಘಟಕಗಳಿಂದ” ಎಂದರು.

ದೇಶದ ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ  ಮೈಕ್ರೋ ಫೈನಾನ್ಸ್‌ಗಳು ಮುಖ್ಯವಾಗಿವೆ, ಏಕೆಂದರೆ ಅವು ಬಡತನದ ಅಂಚಿನಲ್ಲಿರುವ ಗುಂಪುಗಳಿಗೆ ಮತ್ತು ಅನೌಪಚಾರಿಕ ಆರ್ಥಿಕತೆಯಲ್ಲಿರುವವರಿಗೆ ಸಂಪನ್ಮೂಲಗಳು ಮತ್ತು ಬಂಡವಾಳವನ್ನು ಒದಗಿಸುತ್ತವೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲಗಾರರ ಮನೆಯ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡುವುದಲ್ಲದೆ, ವ್ಯವಹಾರಗಳ ಬಗ್ಗೆ ಅವರಿಗೆ ಶಿಕ್ಷಣ ನೀಡಿ ಅವರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತವೆ ಎಂದರು.

MFINನ 78 ಸದಸ್ಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳು (ನಿಯಂತ್ರಿತ ಸಂಸ್ಥೆಗಳು), 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ, ಮತ್ತು 112 ಮಹತ್ವಾಕಾಂಕ್ಷೆಯ ಜಿಲ್ಲೆಗಳು ಸೇರಿದಂತೆ 721 ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಾ, ಸಾಲ ಮತ್ತು ಇತರ ನಿರ್ಣಾಯಕ ಹಣಕಾಸು ಸೇವೆಗಳು ನಗರ ಮತ್ತು ಗ್ರಾಮೀಣ ಭಾರತವನ್ನು ತಲುಪುವುದನ್ನು ಖಚಿತಪಡಿಸುತ್ತವೆ. ಮೈಕ್ರೋ ಫೈನಾನ್ಸ್ ಸೇವೆಗಳ ಪ್ರಾಥಮಿಕ ಗ್ರಾಹಕರು ಕಡಿಮೆ ಆದಾಯದ ಕುಟುಂಬಗಳ 7.94 ಕೋಟಿ (ಸುಮಾರು 80 ಮಿಲಿಯನ್) ಮಹಿಳೆಯರಾಗಿದ್ದಾರೆ ಎಂಬುದು ಹೆಮ್ಮೆಯ ಸಂಗತಿ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Previous Post

ಅರಣ್ಯ ಪ್ರದೇಶದಲ್ಲಿ ಯಾವುದೇ ಶೂಟಿಂಗ್ ಮಾಡ್ತೀರಾ? ಹಾಗಾದ್ರೆ ಈ ನಿಯಮ ಅನುಸರಿಸಲೇಬೇಕು

Next Post

ಮುಡಾ ಹಗರಣ ಮುಚ್ಚಿಹಾಕಲು ಯತ್ನ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ: ವಿಪಕ್ಷ ನಾಯಕ ಆರ್. ಅಶೋಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ | ವಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ

ಮುಡಾ ಹಗರಣ ಮುಚ್ಚಿಹಾಕಲು ಯತ್ನ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ: ವಿಪಕ್ಷ ನಾಯಕ ಆರ್. ಅಶೋಕ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

April 25, 2026
ಏ.27ರಂದು ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ

ಏ.27ರಂದು ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ

April 25, 2026
ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL