ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿದ್ಯಾರ್ಥಿಗಳು ಆಯಾ ಶಾಲಾಕಾಲೇಜುಗಳು ಸೂಚಿಸುವ ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೈಕೋರ್ಟ್ High Court ನೀಡಿರುವ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ Minister Ashwatha Narayana ಹೇಳಿದ್ದಾರೆ.
ನ್ಯಾಯಾಲಯವು ಮಂಗಳವಾರ ತೀರ್ಪು ನೀಡಿದ ನಂತರ ಮಾತನಾಡಿದ ಅವರು, `ರಾಜ್ಯ ಹೈಕೋರ್ಟ್ ಸಮವಸ್ತ್ರದ ವಿಚಾರದಲ್ಲಿ ಸರಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಇದನ್ನು ಎಲ್ಲ ವಿದ್ಯಾರ್ಥಿಗಳೂ ಗೌರವಿಸಿ, ಪಾಲಿಸಬೇಕು’ ಎಂದಿದ್ದಾರೆ.
`ಯಾವುದೇ ಧರ್ಮದ ಮಕ್ಕಳಾದರೂ ಶಿಕ್ಷಣಕ್ಕೆ ಆದ್ಯ ಗಮನ ಕೊಟ್ಟು, ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವುದರ ಕಡೆಗೆ ಗಮನ ಕೊಡಬೇಕು. ಯಾವುದೇ ಧಾರ್ಮಿಕ ವಸ್ತ್ರಗಳತ್ತ ಅನಗತ್ಯ ಆದ್ಯತೆ ನೀಡುವ ಮೂಲಕ ಬದುಕಿನ ಸದಾವಕಾಶಗಳನ್ನು ವ್ಯರ್ಥ ಮಾಡಿಕೊಳ್ಳಬಾರದು. ಈ ಮೂಲಕ ಎಲ್ಲರೂ ಸೌಹಾರ್ದದಿಂದ ಮತ್ತು ಪರಸ್ಪರ ಗೌರವದಿಂದ ಬದುಕಬೇಕು’ ಎಂದು ಸಚಿವರು ಹೇಳಿದ್ದಾರೆ.
Also read: ಹೊಟ್ಟೆ ತುಂಬ ತಿಂದು, ಗಲಾಟೆ ಮಾಡಿ, ಅಡುಗೆ ಸಿಬ್ಬಂದಿ ಮುಖಕ್ಕೆ ಕಾದ ಎಣ್ಣೆ ಎರಚಿದ ಪುಂಡರು
`ಹಿಂದೆಂದೂ ಶಾಲಾಕಾಲೇಜುಗಳಲ್ಲಿ ಇಂತಹ ವಿವಾದ ಕಂಡುಬಂದಿರಲಿಲ್ಲ. ಕೆಲವು ವಿಚ್ಛಿದ್ರಕಾರಿ ಶಕ್ತಿಗಳು ಬೇಕೆಂದೇ ಈ ವಿವಾದವನ್ನು ಸೃಷ್ಟಿಸಿದ್ದವು. ನ್ಯಾಯಾಲಯವು ಈ ವಿಚಾರವನ್ನು ಆಳವಾಗಿ ಅಧ್ಯಯನ ಮಾಡಿ, ಸರಿಯಾದ ತೀರ್ಪು ನೀಡಿದೆ. ಈ ಮೂಲಕ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಅದು ಇಂದು ನೀಡಿದೆ’ ಎಂದು ಅವರು ಸ್ವಾಗತಿಸಿದ್ದಾರೆ.
ನ್ಯಾಯ ಪಾಲನೆ ಎಲ್ಲರ ಕರ್ತವ್ಯ: ಸಚಿವ ಸಿ. ಸಿ. ಪಾಟೀಲ್
ಹಿಜಾಬ್ Hijab ವಿವಾದದ ಕುರಿತು ಇಂದು ಹೈಕೋರ್ಟ್ High Court ನ್ಯಾಯಮೂರ್ತಿಗಳು ನ್ಯಾಯಸಮ್ಮತವಾದ ಐತಿಹಾಸಿಕ ತೀರ್ಪು ನೀಡಿದ್ದು ಸ್ವಾಗತಾರ್ಹ ಎಂದು ಸಚಿವ ಸಿ.ಸಿ. ಪಾಟೀಲ್ Minister C.C. Patil ಹೇಳಿದ್ದಾರೆ.
ನ್ಯಾಯಾಲಯದ ಈ ತೀರ್ಪನ್ನು ಪಾಲಿಸುವುದು ನಮ್ಮ ರಾಷ್ಟ್ರದ ನೆಲದಲ್ಲಿರುವ ಎಲ್ಲರ ಕರ್ತವ್ಯವಾಗಿದೆ. ಉತ್ತಮ ಶಿಕ್ಷಣ ವ್ಯವಸ್ಥೆ ಮತ್ತು ನ್ಯಾಯ ಪಾಲನೆಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post