Monday, July 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಡಿ.24ರಿಂದ 26ರವರೆಗೆ ‘ಸುಸ್ವರಲಯ’ ದಲ್ಲಿ ಸಂಗೀತ ಸಮಾರಾಧನೆ

ಶ್ರೀ ರಾಮ ಲಲಿತ ಕಲಾ ಮಂದಿರದಲ್ಲಿ ಆಯೋಜನೆ

December 23, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   

ಬೆಂಗಳೂರಿನ ಜಯನಗರ 4ನೇ ಬ್ಲಾಕ್‌ನ ಸುಸ್ವರಲಯ ಪ್ರೌಢ ಸಂಗೀತ ಕಲಾಶಾಲೆಗೆ ಈಗ 22ನೇ ವಸಂತ. ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಮತ್ತು ಮೃದಂಗ ವಾದನ ಸೇರಿದಂತೆ ವಿವಿಧ ಕಲಾ ಪ್ರಕಾರಗಳ ಪ್ರತಿಷ್ಠಿತ ಸಂಸ್ಥೆಯಾಗಿರುವ ಸುಸ್ವರಲಯದ 22ನೇ ವಾರ್ಷಿಕೊತ್ಸವ ಸಮಾರಂಭ ಡಿ. 24ರಿಂದ 26ರವರೆಗೆ ಆಯೋಜನೆಗೊಂಡಿದೆ.

ಬೆಂಗಳೂರಿನ ಬನಶಂಕರಿ 2ನೇ ಹಂತ, 9ನೇ ಮುಖ್ಯರಸ್ತೆಯಲ್ಲಿರುವ ಶ್ರೀ ರಾಮ ಲಲಿತ ಕಲಾ ಮಂದಿರದ ವೇದಿಕೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ವಿಜೃಂಭಿಸಲಿದ್ದು, 24ರ ಸಂಜೆ 4.15ಕ್ಕೆ ನಾಡಿನ ಖ್ಯಾತ ಮೃದಂಗ ವಿದ್ವಾಂಸರಾದ ಎಂ. ವಾಸುದೇವರಾವ್ ವಾರ್ಷಿಕೋತ್ಸವಕ್ಕೆ ವಿಧ್ಯಕ್ತ ಚಾಲನೆ ನೀಡಲಿದ್ದಾರೆ.

ಈ ಶುಭ ಸಂದರ್ಭದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಗಾಯಕರಾದ ಡಾ. ಶ್ರೀಕಾಂತಂ ನಾಗೇಂದ್ರ ಶಾಸ್ತ್ರಿ ಅವರಿಗೆ ನಾಗರತ್ನಮ್ಮ ಸ್ಮಾರಕ ‘ಸ್ವರಲಯ ರತ್ನ’ ಮತ್ತು ವಿದ್ವಾನ್ ತಿರುಮಲೆ ಶ್ರೀನಿವಾಸ ಅವರಿಗೆ ಸ್ವರಲಯ ಶೃಂಗ ಬಿರುದನ್ನು ಪ್ರದಾನ ಮಾಡಲಾಗುತ್ತದೆ. ಹಿರಿಯ ವಿದುಷಿ ಡಾ. ಟಿ. ಎಸ್. ಸತ್ಯವತಿ ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಮೃದಂಗ ವಿದ್ವಾನ್ ಶ್ರೀಮುಷ್ಣಂ ರಾಜಾರಾವ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸುಸ್ವರಲಯ ಪೌ ಢ ಸಂಗೀತ ಕಲಾಶಾಲೆ ಪ್ರಾಚಾರ್ಯ ವಿದ್ವಾನ್ ಎಚ್.ಎಸ್. ಸುಧೀಂದ್ರ, ಹಿರಿಯ ಉದ್ಯಮಿ ಮತ್ತು ಕಲಾ ಪೋಷಕರಾದ ಪತ್ತಿ ಶ್ರೀಧರ ಅವರು ಉಪಸ್ಥಿತರಿರಲಿದ್ದಾರೆ.

ಪ್ರೌಢ ಸಂಗೀತ ಕಛೇರಿ:
ಬಿರುದು ಪ್ರದಾನದ ನಂತರ ಡಾ. ಶ್ರೀಕಾಂತಂ ನಾಗೇಂದ್ರ ಶಾಸ್ತ್ರಿ ಅವರಿಂದ ಸಂಗೀತ ಕಛೇರಿ ಸಂಪನ್ನಗೊಳ್ಳಲಿದೆ.

ವಿದ್ಯಾರ್ಥಿಗಳಿಂದ ತಾಳವಾದ್ಯ:
25ರ ಬೆಳಗ್ಗೆ ಸುಸ್ವರಲಯ ಶಾಲೆ ವಿದ್ಯಾರ್ಥಿಗಳಿಂದ ತಾಳವಾದ್ಯ, 10.15ಕ್ಕೆ ಆರ್.ಎಸ್. ಚಿನ್ಮಯಮ್ಮ ಅವರಿಂದ ‘ಸಂಗೀತ ಕಛೇರಿಗಳಲ್ಲಿ ಮೃದಂಗದ ಪಾತ್ರ’ ಕುರಿತ ಪ್ರಾತ್ಯಕ್ಷಿಕೆ ಆಯೋಜನೆಗೊಂಡಿದೆ. ನಂತರ ವಿದ್ವಾನ್ ಎಚ್.ಕೆ. ವೆಂಕಟರಾಮ್ ಅವರಿಂದ ‘ಪಿಟೀಲು-ಮುಖ್ಯವಾದ್ಯ ಮತ್ತು ಪಕ್ಕವಾದ್ಯವಾಗಿ ಬಳಕೆ’ ಕುರಿತು ಪ್ರಾತ್ಯಕ್ಷಿಕೆ ನಡೆಯಲಿದೆ.

ಸಂಜೆ 4.30ಕ್ಕೆ ಯುವ ಕಲಾವಿದರಾದ ವರಲಕ್ಷ್ಮೀ (ಪಿಟೀಲು) ಮತ್ತು ಜ್ಯೋತ್ಸ್ನಾ ಹೆಬ್ಬಾರ್ (ವೀಣೆ) ಕಛೇರಿ, ಶ್ರೀನಿವಾಸ, ಶ್ರೀರಾಮ ಮತ್ತು ರವಿಶಂಕರ್ (ಮೃದಂಗತ್ರಯ) ಕಛೇರಿ ಹಮ್ಮಿಕೊಳ್ಳಲಾಗಿದೆ. ಸಂಜೆ ೬ಕ್ಕೆ ವಿದ್ವಾನ್ ಎ.ಎಸ್. ಮುರಳಿ ಅವರಿಂದ ಶಾಸ್ತ್ರೀಯ ಗಾಯನವಿದೆ.

26ರಂದು ಮೇಳಕರ್ತ ತಾಳ ಮಾಲಿಕೆ- ರತ್ನಾಂಗಿ ತಾಳದ ಪ್ರಾತ್ಯಕ್ಷಿಕೆ ಇದೆ. ಕೃತಿಕ್ ಕೌಶಿಕ್( ಪಿಟೀಲು) ಮತ್ತು ವಿದ್ವಾಂಸರಾದ ಫಣೀಂದ್ರ ಭಾಸ್ಕರ, ರಕ್ಷಿತ್ ಶರ್ಮಾ (ಯುಗಳ ಮೃದಂಗ) ಪ್ರಸ್ತುತಿ ಶೋಭೆ ನೀಡಲಿದೆ.

ನಂತರ ವಿದುಷಿ ಅಶ್ವಿನಿ ಸತೀಶ್ ‘ಹೆಚ್ಚು ಪ್ರಚಾರಕ್ಕೆ ಬಾರದ ಹರಿದಾಸರ ಕೀರ್ತನೆಗಳು’ ಎಂಬ ಪ್ರಾತ್ಯಕ್ಷಿಕೆ ನೀಡಲಿದ್ದಾರೆ. 11.15ಕ್ಕೆ ಖ್ಯಾತ ವಿದುಷಿ ಶುಭಾ ಸಂತೋಷ್ ‘ವೀಣಾ ವಾದಕರು ರಚಿಸಿರುವ ಕೃತಿಗಳು’ ಬಗ್ಗೆ ಪ್ರಾತ್ಯಕ್ಷಿಕೆ ಪ್ರಸ್ತುತಿ ಇದೆ.

ಮಕ್ಕಳಿಂದ ವಿಶೇಷ ಜುಗಲ್ ಬಂದಿ:
ಸುಸ್ವರಲಯದ 22ನೇ ವಾರ್ಷಿಕೊತ್ಸವದ ವಿಶೇಷ ಆಕರ್ಷಣೆಯಾಗಿ ಮಕ್ಕಳಿಂದ ವಿಶೇಷ ಜುಗಲ್ ಬಂದಿ ಸಂಪನ್ನಗೊಳ್ಳಲಿದೆ. ಸಂಜೆ 4.15ರ ಈ ಕಛೇರಿಯಲ್ಲಿ ಕುಮಾರಿ ಮಹತಿ (ಪಿಟೀಲು), ರಕ್ಷಾ (ಹಾರ್‍ಮೋನಿಯಂ), ಸುಧನ್ವ (ಮೃದಂಗ) ಮತ್ತು ಪ್ರದ್ಯುಮ್ನ (ತಬಲಾ) ಕಲಾವಂತಿಕೆ ಪ್ರದರ್ಶಿಸಲಿದ್ದಾರೆ. ಸಂಜೆ 6ಕ್ಕೆ ವಿದ್ವಾನ್ ತಿರುಮಲೆ ಶ್ರೀನಿವಾಸರ ಶಾಸ್ತ್ರೀಯ ಗಾಯನವಿದೆ ಎಂದು ಪ್ರಾಂಶುಪಾಲ ವಿದ್ವಾನ್ ಎಚ್.ಎಸ್. ಸುಧೀಂದ್ರ ತಿಳಿಸಿದ್ದಾರೆ.

ಸುಸ್ವರಲಯ ಬೆಳೆದುಬಂದ ಹಾದಿ:
ರಾಜಧಾನಿ ಬೆಂಗಳೂರಿನಲ್ಲಿ 1999ರಲ್ಲಿ ವಿದ್ವಾನ್ ಎಚ್.ಎಸ್. ಸುಧೀಂದ್ರ ಹಾಗೂ ವಿದ್ವಾನ್ ಬಾಲು ರಘುರಾಮನ್ ಅವರಿಂದ ಸ್ಥಾಪನೆಗೊಂಡ ಸುಸ್ವರಲಯ ಪ್ರೌಢ ಸಂಗೀತ ಕಲಾಶಾಲೆ ಒಂದು ಅಂಗೀಕೃತ ಧರ್ಮ ಸಂಸ್ಥೆಯಾಗಿ ಭಾರತೀಯ ಪರಂಪರೆಯ ಪ್ರದರ್ಶಿತ ಕಲೆಗಳನ್ನು ಪೋಷಿಸಿ ಬೆಳೆಸುವ ಘನ ಉದ್ದೇಶ ಹೊಂದಿದೆ.

ಕಲಾಶಾಲೆಯು ಪರಿಣತ ವಿದ್ವಾಂಸರ ತಂಡವನ್ನು ಹೊಂದಿದ್ದು, ಯುವ ಮತ್ತು ಉದಯೋನ್ಮುಖ ವಿದ್ಯಾರ್ಥಿಗಳಿಗೆ ಸಮರ್ಥ ಮಾರ್ಗದರ್ಶನ ನೀಡುವುದರೊಂದಿಗೆ ಬೋಧ ಪ್ರದವಾದ, ಆಸಕ್ತಿಯಿಂದ ಕೂಡಿದ ಸಂಗೀತ ಕಛೇರಿಗಳನ್ನೂ ಆಗಾಗ್ಗೆ ಆಯೋಜಿಸುತ್ತದೆ. ಕಳೆದ 22 ವರ್ಷಗಳಿಂದ ವಾದನ, ಹಾಗೂ ತಾಳವಾದ್ಯ ಕ್ಷೇತ್ರಗಳಲ್ಲಿ ಶಿಕ್ಷಣ ನೀಡುತ್ತಾ, ಒಂದು ವಿದ್ವತ್ ಪೂರ್ಣ ಕಛೇರಿಗೆ ಬೇಕಾಗುವ ಸಮಗ್ರ ತರಬೇತಿ ನೀಡಿ, ಸಾಹಿತ್ಯ ಮತ್ತು ಲಯದ ತಿಳಿವಳಿಕೆಗೆ ವಿಶೇಷ ಆದ್ಯತೆ ನೀಡುವ ಮಹತ್ತರವಾದ ಸೇವೆ ಮಾಡುತ್ತಿದೆ. ಈ ಶಾಲೆಯ ಆಶ್ರಯದಲ್ಲಿ ಬೆಳೆದ ನೂರಾರು ಕಲಾವಿದರು
ಆಕಾಶವಾಣಿ ಮತ್ತು ದೂರದರ್ಶನದ ಕಲಾವಿದರಾಗಿ, ದೇಶ- ವಿದೇಶಗಳಲ್ಲಿ ಶುದ್ಧ ಭಾರತೀಯ ಶಾಸ್ತ್ರೀಯ ಸಂಗೀತದ ವಿದ್ವಾಂಸರಾಗಿ ಖ್ಯಾತರಾಗಿರುವುದು ಹೆಮ್ಮೆಯ ಸಂಗತಿ. ಕಲೆಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿಕೊಂಡ ವಿದ್ವಾನ್ ಎಚ್.ಎಸ್. ಸುಧೀಂದ್ರ ಈ ಪ್ರೌಢ ಸಂಗೀತ ಕಲಾಶಾಲೆಯ ಸಾಧನೆಗಳ ಹಿಂದಿನ ರೂವಾರಿ. ಶಾಲೆಯ ಪ್ರಾಂಶುಪಾಲರಾಗಿ ಇವರು ಅಹರ್ನಿಷಿ ಸೇವೆ ಸಲ್ಲಿಸುತ್ತಿರುವುದು ಕಲಾರಂಗದ ಸುಕೃತವೇ ಆಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMusic ProgramNews in KannadaNews Kannadaಬೆಂಗಳೂರುಸಂಗೀತ ಸಮಾರಾಧನೆ
Previous Post

ಮಕ್ಕಳಿಗೆ ಪರಿಸರದ ಅರಿವು ಮೂಡಿಸಲು ಮುಂದಾಗಬೇಕು: ಎಂ.ಆರ್. ಪಾಟೀಲ್ ಸಲಹೆ

Next Post

ಶಿವಮೊಗ್ಗ ಬೆಳ್ಳಿಮಂಡಲ ಸಭೆ: ನೂತನ ವಿಧಾನ ಪರಿಷತ್‌ ಸದಸ್ಯ ಅರುಣ್‌ಗೆ ಅಭಿನಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ಬೆಳ್ಳಿಮಂಡಲ ಸಭೆ: ನೂತನ ವಿಧಾನ ಪರಿಷತ್‌ ಸದಸ್ಯ ಅರುಣ್‌ಗೆ ಅಭಿನಂದನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ ಯತ್ನ ಖಂಡನೀಯ: ಫಕೀರಪ್ಪ ಭಜಂತ್ರಿ

July 7, 2025

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

July 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ ಯತ್ನ ಖಂಡನೀಯ: ಫಕೀರಪ್ಪ ಭಜಂತ್ರಿ

July 7, 2025

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!