No Result
View All Result
PCCF Kumar Pushkar Warns Human Intolerance Fueling Biodiversity Crisis
English Articles

PCCF Kumar Pushkar Warns Human Intolerance Fueling Biodiversity Crisis

by ಕಲ್ಪ ನ್ಯೂಸ್
May 15, 2026
0

Kalpa Media House  |  Shankaraghatta  | Warning of a volatile future where "one species stands against all others," Karnataka’s Principal...

Read moreDetails
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
  • Advertise With Us
  • Grievances
  • About Us
  • Contact Us
Friday, May 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡಿ.24ರಿಂದ 26ರವರೆಗೆ ‘ಸುಸ್ವರಲಯ’ ದಲ್ಲಿ ಸಂಗೀತ ಸಮಾರಾಧನೆ

ಶ್ರೀ ರಾಮ ಲಲಿತ ಕಲಾ ಮಂದಿರದಲ್ಲಿ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 23, 2021
in ಬೆಂಗಳೂರು ನಗರ
0
ಡಿ.24ರಿಂದ 26ರವರೆಗೆ ‘ಸುಸ್ವರಲಯ’ ದಲ್ಲಿ ಸಂಗೀತ ಸಮಾರಾಧನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   

ಬೆಂಗಳೂರಿನ ಜಯನಗರ 4ನೇ ಬ್ಲಾಕ್‌ನ ಸುಸ್ವರಲಯ ಪ್ರೌಢ ಸಂಗೀತ ಕಲಾಶಾಲೆಗೆ ಈಗ 22ನೇ ವಸಂತ. ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಮತ್ತು ಮೃದಂಗ ವಾದನ ಸೇರಿದಂತೆ ವಿವಿಧ ಕಲಾ ಪ್ರಕಾರಗಳ ಪ್ರತಿಷ್ಠಿತ ಸಂಸ್ಥೆಯಾಗಿರುವ ಸುಸ್ವರಲಯದ 22ನೇ ವಾರ್ಷಿಕೊತ್ಸವ ಸಮಾರಂಭ ಡಿ. 24ರಿಂದ 26ರವರೆಗೆ ಆಯೋಜನೆಗೊಂಡಿದೆ.

ಬೆಂಗಳೂರಿನ ಬನಶಂಕರಿ 2ನೇ ಹಂತ, 9ನೇ ಮುಖ್ಯರಸ್ತೆಯಲ್ಲಿರುವ ಶ್ರೀ ರಾಮ ಲಲಿತ ಕಲಾ ಮಂದಿರದ ವೇದಿಕೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ವಿಜೃಂಭಿಸಲಿದ್ದು, 24ರ ಸಂಜೆ 4.15ಕ್ಕೆ ನಾಡಿನ ಖ್ಯಾತ ಮೃದಂಗ ವಿದ್ವಾಂಸರಾದ ಎಂ. ವಾಸುದೇವರಾವ್ ವಾರ್ಷಿಕೋತ್ಸವಕ್ಕೆ ವಿಧ್ಯಕ್ತ ಚಾಲನೆ ನೀಡಲಿದ್ದಾರೆ.

ಈ ಶುಭ ಸಂದರ್ಭದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಗಾಯಕರಾದ ಡಾ. ಶ್ರೀಕಾಂತಂ ನಾಗೇಂದ್ರ ಶಾಸ್ತ್ರಿ ಅವರಿಗೆ ನಾಗರತ್ನಮ್ಮ ಸ್ಮಾರಕ ‘ಸ್ವರಲಯ ರತ್ನ’ ಮತ್ತು ವಿದ್ವಾನ್ ತಿರುಮಲೆ ಶ್ರೀನಿವಾಸ ಅವರಿಗೆ ಸ್ವರಲಯ ಶೃಂಗ ಬಿರುದನ್ನು ಪ್ರದಾನ ಮಾಡಲಾಗುತ್ತದೆ. ಹಿರಿಯ ವಿದುಷಿ ಡಾ. ಟಿ. ಎಸ್. ಸತ್ಯವತಿ ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಮೃದಂಗ ವಿದ್ವಾನ್ ಶ್ರೀಮುಷ್ಣಂ ರಾಜಾರಾವ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸುಸ್ವರಲಯ ಪೌ ಢ ಸಂಗೀತ ಕಲಾಶಾಲೆ ಪ್ರಾಚಾರ್ಯ ವಿದ್ವಾನ್ ಎಚ್.ಎಸ್. ಸುಧೀಂದ್ರ, ಹಿರಿಯ ಉದ್ಯಮಿ ಮತ್ತು ಕಲಾ ಪೋಷಕರಾದ ಪತ್ತಿ ಶ್ರೀಧರ ಅವರು ಉಪಸ್ಥಿತರಿರಲಿದ್ದಾರೆ.

ಪ್ರೌಢ ಸಂಗೀತ ಕಛೇರಿ:
ಬಿರುದು ಪ್ರದಾನದ ನಂತರ ಡಾ. ಶ್ರೀಕಾಂತಂ ನಾಗೇಂದ್ರ ಶಾಸ್ತ್ರಿ ಅವರಿಂದ ಸಂಗೀತ ಕಛೇರಿ ಸಂಪನ್ನಗೊಳ್ಳಲಿದೆ.

ವಿದ್ಯಾರ್ಥಿಗಳಿಂದ ತಾಳವಾದ್ಯ:
25ರ ಬೆಳಗ್ಗೆ ಸುಸ್ವರಲಯ ಶಾಲೆ ವಿದ್ಯಾರ್ಥಿಗಳಿಂದ ತಾಳವಾದ್ಯ, 10.15ಕ್ಕೆ ಆರ್.ಎಸ್. ಚಿನ್ಮಯಮ್ಮ ಅವರಿಂದ ‘ಸಂಗೀತ ಕಛೇರಿಗಳಲ್ಲಿ ಮೃದಂಗದ ಪಾತ್ರ’ ಕುರಿತ ಪ್ರಾತ್ಯಕ್ಷಿಕೆ ಆಯೋಜನೆಗೊಂಡಿದೆ. ನಂತರ ವಿದ್ವಾನ್ ಎಚ್.ಕೆ. ವೆಂಕಟರಾಮ್ ಅವರಿಂದ ‘ಪಿಟೀಲು-ಮುಖ್ಯವಾದ್ಯ ಮತ್ತು ಪಕ್ಕವಾದ್ಯವಾಗಿ ಬಳಕೆ’ ಕುರಿತು ಪ್ರಾತ್ಯಕ್ಷಿಕೆ ನಡೆಯಲಿದೆ.

ಸಂಜೆ 4.30ಕ್ಕೆ ಯುವ ಕಲಾವಿದರಾದ ವರಲಕ್ಷ್ಮೀ (ಪಿಟೀಲು) ಮತ್ತು ಜ್ಯೋತ್ಸ್ನಾ ಹೆಬ್ಬಾರ್ (ವೀಣೆ) ಕಛೇರಿ, ಶ್ರೀನಿವಾಸ, ಶ್ರೀರಾಮ ಮತ್ತು ರವಿಶಂಕರ್ (ಮೃದಂಗತ್ರಯ) ಕಛೇರಿ ಹಮ್ಮಿಕೊಳ್ಳಲಾಗಿದೆ. ಸಂಜೆ ೬ಕ್ಕೆ ವಿದ್ವಾನ್ ಎ.ಎಸ್. ಮುರಳಿ ಅವರಿಂದ ಶಾಸ್ತ್ರೀಯ ಗಾಯನವಿದೆ.

26ರಂದು ಮೇಳಕರ್ತ ತಾಳ ಮಾಲಿಕೆ- ರತ್ನಾಂಗಿ ತಾಳದ ಪ್ರಾತ್ಯಕ್ಷಿಕೆ ಇದೆ. ಕೃತಿಕ್ ಕೌಶಿಕ್( ಪಿಟೀಲು) ಮತ್ತು ವಿದ್ವಾಂಸರಾದ ಫಣೀಂದ್ರ ಭಾಸ್ಕರ, ರಕ್ಷಿತ್ ಶರ್ಮಾ (ಯುಗಳ ಮೃದಂಗ) ಪ್ರಸ್ತುತಿ ಶೋಭೆ ನೀಡಲಿದೆ.

ನಂತರ ವಿದುಷಿ ಅಶ್ವಿನಿ ಸತೀಶ್ ‘ಹೆಚ್ಚು ಪ್ರಚಾರಕ್ಕೆ ಬಾರದ ಹರಿದಾಸರ ಕೀರ್ತನೆಗಳು’ ಎಂಬ ಪ್ರಾತ್ಯಕ್ಷಿಕೆ ನೀಡಲಿದ್ದಾರೆ. 11.15ಕ್ಕೆ ಖ್ಯಾತ ವಿದುಷಿ ಶುಭಾ ಸಂತೋಷ್ ‘ವೀಣಾ ವಾದಕರು ರಚಿಸಿರುವ ಕೃತಿಗಳು’ ಬಗ್ಗೆ ಪ್ರಾತ್ಯಕ್ಷಿಕೆ ಪ್ರಸ್ತುತಿ ಇದೆ.

ಮಕ್ಕಳಿಂದ ವಿಶೇಷ ಜುಗಲ್ ಬಂದಿ:
ಸುಸ್ವರಲಯದ 22ನೇ ವಾರ್ಷಿಕೊತ್ಸವದ ವಿಶೇಷ ಆಕರ್ಷಣೆಯಾಗಿ ಮಕ್ಕಳಿಂದ ವಿಶೇಷ ಜುಗಲ್ ಬಂದಿ ಸಂಪನ್ನಗೊಳ್ಳಲಿದೆ. ಸಂಜೆ 4.15ರ ಈ ಕಛೇರಿಯಲ್ಲಿ ಕುಮಾರಿ ಮಹತಿ (ಪಿಟೀಲು), ರಕ್ಷಾ (ಹಾರ್‍ಮೋನಿಯಂ), ಸುಧನ್ವ (ಮೃದಂಗ) ಮತ್ತು ಪ್ರದ್ಯುಮ್ನ (ತಬಲಾ) ಕಲಾವಂತಿಕೆ ಪ್ರದರ್ಶಿಸಲಿದ್ದಾರೆ. ಸಂಜೆ 6ಕ್ಕೆ ವಿದ್ವಾನ್ ತಿರುಮಲೆ ಶ್ರೀನಿವಾಸರ ಶಾಸ್ತ್ರೀಯ ಗಾಯನವಿದೆ ಎಂದು ಪ್ರಾಂಶುಪಾಲ ವಿದ್ವಾನ್ ಎಚ್.ಎಸ್. ಸುಧೀಂದ್ರ ತಿಳಿಸಿದ್ದಾರೆ.

ಸುಸ್ವರಲಯ ಬೆಳೆದುಬಂದ ಹಾದಿ:
ರಾಜಧಾನಿ ಬೆಂಗಳೂರಿನಲ್ಲಿ 1999ರಲ್ಲಿ ವಿದ್ವಾನ್ ಎಚ್.ಎಸ್. ಸುಧೀಂದ್ರ ಹಾಗೂ ವಿದ್ವಾನ್ ಬಾಲು ರಘುರಾಮನ್ ಅವರಿಂದ ಸ್ಥಾಪನೆಗೊಂಡ ಸುಸ್ವರಲಯ ಪ್ರೌಢ ಸಂಗೀತ ಕಲಾಶಾಲೆ ಒಂದು ಅಂಗೀಕೃತ ಧರ್ಮ ಸಂಸ್ಥೆಯಾಗಿ ಭಾರತೀಯ ಪರಂಪರೆಯ ಪ್ರದರ್ಶಿತ ಕಲೆಗಳನ್ನು ಪೋಷಿಸಿ ಬೆಳೆಸುವ ಘನ ಉದ್ದೇಶ ಹೊಂದಿದೆ.

ಕಲಾಶಾಲೆಯು ಪರಿಣತ ವಿದ್ವಾಂಸರ ತಂಡವನ್ನು ಹೊಂದಿದ್ದು, ಯುವ ಮತ್ತು ಉದಯೋನ್ಮುಖ ವಿದ್ಯಾರ್ಥಿಗಳಿಗೆ ಸಮರ್ಥ ಮಾರ್ಗದರ್ಶನ ನೀಡುವುದರೊಂದಿಗೆ ಬೋಧ ಪ್ರದವಾದ, ಆಸಕ್ತಿಯಿಂದ ಕೂಡಿದ ಸಂಗೀತ ಕಛೇರಿಗಳನ್ನೂ ಆಗಾಗ್ಗೆ ಆಯೋಜಿಸುತ್ತದೆ. ಕಳೆದ 22 ವರ್ಷಗಳಿಂದ ವಾದನ, ಹಾಗೂ ತಾಳವಾದ್ಯ ಕ್ಷೇತ್ರಗಳಲ್ಲಿ ಶಿಕ್ಷಣ ನೀಡುತ್ತಾ, ಒಂದು ವಿದ್ವತ್ ಪೂರ್ಣ ಕಛೇರಿಗೆ ಬೇಕಾಗುವ ಸಮಗ್ರ ತರಬೇತಿ ನೀಡಿ, ಸಾಹಿತ್ಯ ಮತ್ತು ಲಯದ ತಿಳಿವಳಿಕೆಗೆ ವಿಶೇಷ ಆದ್ಯತೆ ನೀಡುವ ಮಹತ್ತರವಾದ ಸೇವೆ ಮಾಡುತ್ತಿದೆ. ಈ ಶಾಲೆಯ ಆಶ್ರಯದಲ್ಲಿ ಬೆಳೆದ ನೂರಾರು ಕಲಾವಿದರು
ಆಕಾಶವಾಣಿ ಮತ್ತು ದೂರದರ್ಶನದ ಕಲಾವಿದರಾಗಿ, ದೇಶ- ವಿದೇಶಗಳಲ್ಲಿ ಶುದ್ಧ ಭಾರತೀಯ ಶಾಸ್ತ್ರೀಯ ಸಂಗೀತದ ವಿದ್ವಾಂಸರಾಗಿ ಖ್ಯಾತರಾಗಿರುವುದು ಹೆಮ್ಮೆಯ ಸಂಗತಿ. ಕಲೆಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿಕೊಂಡ ವಿದ್ವಾನ್ ಎಚ್.ಎಸ್. ಸುಧೀಂದ್ರ ಈ ಪ್ರೌಢ ಸಂಗೀತ ಕಲಾಶಾಲೆಯ ಸಾಧನೆಗಳ ಹಿಂದಿನ ರೂವಾರಿ. ಶಾಲೆಯ ಪ್ರಾಂಶುಪಾಲರಾಗಿ ಇವರು ಅಹರ್ನಿಷಿ ಸೇವೆ ಸಲ್ಲಿಸುತ್ತಿರುವುದು ಕಲಾರಂಗದ ಸುಕೃತವೇ ಆಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMusic ProgramNews in KannadaNews Kannadaಬೆಂಗಳೂರುಸಂಗೀತ ಸಮಾರಾಧನೆ
Share197Tweet123Send
Previous Post

ಮಕ್ಕಳಿಗೆ ಪರಿಸರದ ಅರಿವು ಮೂಡಿಸಲು ಮುಂದಾಗಬೇಕು: ಎಂ.ಆರ್. ಪಾಟೀಲ್ ಸಲಹೆ

Next Post

ಶಿವಮೊಗ್ಗ ಬೆಳ್ಳಿಮಂಡಲ ಸಭೆ: ನೂತನ ವಿಧಾನ ಪರಿಷತ್‌ ಸದಸ್ಯ ಅರುಣ್‌ಗೆ ಅಭಿನಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ಬೆಳ್ಳಿಮಂಡಲ ಸಭೆ: ನೂತನ ವಿಧಾನ ಪರಿಷತ್‌ ಸದಸ್ಯ ಅರುಣ್‌ಗೆ ಅಭಿನಂದನೆ

ಶಿವಮೊಗ್ಗ ಬೆಳ್ಳಿಮಂಡಲ ಸಭೆ: ನೂತನ ವಿಧಾನ ಪರಿಷತ್‌ ಸದಸ್ಯ ಅರುಣ್‌ಗೆ ಅಭಿನಂದನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೇ 16-24 | ರಾಜ್ಯಮಟ್ಟದ ಅಂತರ್ ಜಿಲ್ಲಾ ಫುಟ್‍ಬಾಲ್ ಲೀಗ್ | MLC ಡಾ.ಧನಂಜಯ ಸರ್ಜಿ

ಶಿವಮೊಗ್ಗ | ಮೇ 16-24 | ರಾಜ್ಯಮಟ್ಟದ ಅಂತರ್ ಜಿಲ್ಲಾ ಫುಟ್‍ಬಾಲ್ ಲೀಗ್ | MLC ಡಾ.ಧನಂಜಯ ಸರ್ಜಿ

May 15, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
ದಿ ಕ್ಲೈಮೇಟ್ ಪ್ಲೆಡ್ಜ್ ನಿಂದ ಸಿ40 ಸಿಟೀಸ್ ಸಹಭಾಗಿತ್ವದಲ್ಲಿ ಭಾರತದ ಸರಕು ಸಾಗಣೆ ಹೆದ್ದಾರಿಗಳ ವಿದ್ಯುದ್ದೀಕರಣಕ್ಕೆ ಬ್ಲೂಪ್ರಿಂಟ್ ಬಿಡುಗಡೆ

ದಿ ಕ್ಲೈಮೇಟ್ ಪ್ಲೆಡ್ಜ್ ನಿಂದ ಸಿ40 ಸಿಟೀಸ್ ಸಹಭಾಗಿತ್ವದಲ್ಲಿ ಭಾರತದ ಸರಕು ಸಾಗಣೆ ಹೆದ್ದಾರಿಗಳ ವಿದ್ಯುದ್ದೀಕರಣಕ್ಕೆ ಬ್ಲೂಪ್ರಿಂಟ್ ಬಿಡುಗಡೆ

May 15, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಸಿಎಂ ಸುವೇಂಧು ಇನ್ ಆಕ್ಷನ್ | ಆರ್’ಜಿ ಕರ್ ರೇಪ್ & ಮರ್ಡರ್ ಕೇಸ್ | 3 IPS ಅಧಿಕಾರಿಗಳ ಸಸ್ಪೆಂಡ್

May 15, 2026
ಮೇ 18ರಂದು ಮೈಸೂರು ರೈಲು ವಸ್ತು ಸಂಗ್ರಹಾಲಯಕ್ಕೆ ಉಚಿತ ಪ್ರವೇಶ | ಸದುಪಯೋಗಮಾಡಿಕೊಳ್ಳಿ

ಮೇ 18ರಂದು ಮೈಸೂರು ರೈಲು ವಸ್ತು ಸಂಗ್ರಹಾಲಯಕ್ಕೆ ಉಚಿತ ಪ್ರವೇಶ | ಸದುಪಯೋಗಮಾಡಿಕೊಳ್ಳಿ

May 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL