ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾರ್ಚ್ 7 ರಂದು ರಾಜ್ಯ ಬಜೆಟ್ #State Budget ಮಂಡನೆಯಾಗುವ ಸಾಧ್ಯತೆ ಇದ್ದು, ಫೆ.6 ಗುರುವಾರದಂದು ಸಿಎಂ ಸಿದ್ದರಾಮಯ್ಯ #CM Siddaramaiah ಬಜೆಟ್ ಸಿದ್ಧತೆ ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ.
ಎರಡು ದಿನಗಳ ಹಿಂದಷ್ಟೇ ಮಂಡಿ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಅದರಂತೆ ಎರಡು ದಿನ ಸಿಎಂ ಅವರ ಎಲ್ಲಾ ಕಾರ್ಯಕ್ರಮ ಗಳನ್ನು ರದ್ದು ಮಾಡಲಾಗಿತ್ತು.ಫೆಬ್ರವರಿ 6 ರಿಂದ 14 ರ ತನಕ ಬಜೆಟ್ ಪೂರ್ವಭಾವಿ ಚರ್ಚೆ ನಿಗದಿಯಾಗಿದ್ದು, ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳ ಬೇಡಿಕೆಗಳ ಕುರಿತ ಬಜೆಟ್ ಸಿದ್ಧತಾ ಸಭೆ ನಡೆಯಲಿದೆ.
ಮಾರ್ಚ್ ಮೊದಲ ವಾರದಲ್ಲಿ ಜಂಟಿ ಅವೇಶನ ನಡೆಸಲು ಸರ್ಕಾರದ ಸಿದ್ಧತೆ ನಡೆಸಿದೆ. ಮಾರ್ಚ್ 3 ರಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಸಾಧ್ಯತೆ ಇದೆ. ಮುಂದಿನ ಕ್ಯಾಬಿನೆಟ್ನಲ್ಲಿ ಬಜೆಟ್ ದಿನಾಂಕ, ಜಂಟಿ ಅವೇಶನ ದಿನಾಂಕ ಅಂತಿಮಗೊಳಿಸಲಿರುವ ಸರ್ಕಾರ ಅಧಿಕೃತ ಘೋಷಣೆ ಮಾಡಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post