No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಸಂಕುಚಿತ ರಾಜಕಾರಣದ ಬದಲು ಜಲವಿವಾದ ಕಾಯ್ದೆಗೆ ತಿದ್ದುಪಡಿ ಅಗತ್ಯ: ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 7, 2022
in ರಾಜಕೀಯ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಅಂತರರಾಜ್ಯ ಜಲವಿವಾದ ಕಾಯ್ದೆಯನ್ನು ಸಂಪೂರ್ಣವಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅಭಿಪ್ರಾಯಪಟ್ಟರು.

ಅವರು ಇಂದು ವಿಧಾನಸೌಧದ Vidhanasoudha ಸಮ್ಮೇಳನ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ Jal Jeevan Mission ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) Swatch Bharath Mission ಯೋಜನೆಗಳ ಕುರಿತಂತೆ ದಕ್ಷಿಣ ಭಾರತದ ರಾಜ್ಯಗಳ ಪ್ರಾದೇಶಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು.

ಜಲ ವಿವಾದಗಳಿಗೆ ಸಂಬಂಧಿಸಿದಂತೆ ಸಂಕುಚಿತ ರಾಜಕಾರಣದ ಬದಲಿಗೆ ಹೆಚ್ಚು ಜನರಿಗೆ ನೀರು ಲಭ್ಯವಾಗಲು ಕಾಯ್ದೆಯಲ್ಲಿ ತಿದ್ದುಪಡಿ ತರಬೇಕು. ನದಿ ಪಾತ್ರಗಳ ನಿರ್ವಹಣೆ ಮಾತ್ರ ಇದಕ್ಕೆ ಪರಿಹಾರ ಎಂದರು.

ನೀರಿನಿಂದ ಸುಸ್ಥಿರ ಜೀವನೋಪಾಯ: 
ಜನರಿಗೆ ನೀರು ಒದಗಿಸುವುದು ಸರ್ಕಾರದ ಕರ್ತವ್ಯ. ನೀರಿನ ವಿಚಾರದಲ್ಲಿ ಎಲ್ಲರೂ ಒಮ್ಮತದಿಂದ ಕಾರ್ಯನಿರ್ವಹಿಸಬೇಕು. ನೀರು ಸರಬರಾಜಿನ ಮೂಲಕ ಸುಸ್ಥಿರ ಜೀವನೋಪಾಯವನ್ನು ಕಲ್ಪಿಸಲು ಸಾಧ್ಯ ಎನ್ನುವುದು ನಮ್ಮ ಪ್ರಧಾನಿಗಳ ಗುರಿಯಾಗಿದ್ದು, ಇದನ್ನು ಈಡೇರಿಸುವ ನಿಟ್ಟಿನಲ್ಲಿ ಒಟ್ಟಾಗಿ ಶ್ರಮಿಸಬೇಕು ಎಂದರು.

ನೀರಿನ ದುರ್ಬಳಕೆಗೆ ಕ್ರಮ:
ನೀರಾವರಿಯಲ್ಲಿ ಉನ್ನತ ಗುಣಮಟ್ಟದ ದಕ್ಷತೆಯನ್ನು ತರಲು ಪ್ರಯತ್ನ ಮಾಡಬೇಕು. ನೀರಾವರಿ ಯಲ್ಲಿ ಸಾಕಷ್ಟು ಜಲಮಾರ್ಗಗಳಲ್ಲಿ ನೀರು ದುರುಪಯೋಗವಾಗುತ್ತಿದೆ. ರಾಷ್ಟ್ರ ಮಟ್ಟದಲ್ಲಿ ನಮ್ಮ ಕಾಲುವೆಗಳ ಸಾಮರ್ಥ್ಯ ಶೇ 45 ರಷ್ಟಿದೆ. ಕಾಲುವೆಗಳಲ್ಲಿ ನೀರು ಹರಿಸುವ ಸಾಮರ್ಥ್ಯದಲ್ಲಿ ಶೇ. 55% ರಷ್ಟು ಅಂತರವಿದೆ. ಇವುಗಳನ್ನು ಸರಿಪಡಿಸಿದರೆ ಹೆಚ್ಚಿನ ನೀರು ಲಭ್ಯವಾಗಲಿದೆ ಎಂದರು.

ಜಲಾನಯನ ಯೋಜನೆಗಳು:
ನೀರಿನ ಝರಿಗಳನ್ನು ಜೀವಂತವಾಗಿಡುವ ಜಲಾನಯನ ಯೋಜನೆಗಳು ಸೂಕ್ತವಾಗಿ ಯೋಜಿಸಲ್ಪಡದೆ, ನೀರಿನ ಹರಿವಿಗೆ ತಡೆಯೊಡ್ಡುತ್ತಿವೆ. ನೀರು ವ್ಯರ್ಥ ವಾಗಿ ಸಮುದ್ರ ಸೇರುತ್ತದೆ ಎನ್ನುತ್ತೇವೆ. ಆದರೆ ನಾವು ವಿಜ್ಞಾನ ವನ್ನು ಮರೆಯುತ್ತಿದ್ದೇವೆ. ಕನಿಷ್ಠ ಶೇ 30 ರಷ್ಟು ಸಿಹಿ ನೀರು ಸಮುದ್ರ ಸೇರಿದರೆ ಮಾತ್ರ ಶೇ 60 ರಷ್ಟು ಉಪ್ಪು ನೀರು ಆವಿಯಾಗಳು ಸಾಧ್ಯವಾಗಿ ಮಳೆಯಾಗುತ್ತದೆ. ಈ ಸರಳ ಸತ್ಯದ ಅರಿವು ಯೋಜನೆ ರೂಪಿಸುವ ಎಲ್ಲರಿಗೂ ಅರಿವಾಗಬೇಕು.

ಪರಿಸರದ ಸವಾಲುಗಳನ್ನು ನಾವು ಎದುರಿಸಬೇಕಿದೆ. ನದಿಗಳು ಈಗ ಋತುಕಾಲಿಕವಾಗಿವೆ. ಸದಾ ಹರಿಯುವ ನದಿಗಳು ಈಗಿಲ್ಲದಂತಾಗಿದೆ. ನದಿಗಳು ಸಮುದ್ರವನ್ನೇ ಸೇರುತ್ತಿಲ್ಲ. ಮಧ್ಯದಲ್ಲಿಯೇ ಒಣಗುತ್ತಿವೆ. ಈ ರೀತಿಯ ಸವಾಲುಗಳಿವೆ.

ಜಲಜೀವನ್ ಮಿಷನ್: *ಕಾಲಮಿತಿಯಲ್ಲಿ ಗುರಿ ಮುಟ್ಟಲು ಶ್ರಮ:
ಕರ್ನಾಟಕದಲ್ಲಿ ಜಲಜೀವನ್ ಮಿಷನ್ ಯೋಜನೆಯನ್ನು ಅನುಷ್ಠಾನ ಮಾಡಲು ಅವಿರತವಾಗಿ ಶ್ರಮಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆಯಿತ್ತರು. 97.91 ಲಕ್ಷ ಗ್ರಾಮೀಣ ಮನೆಗಳಿವೆ. ಪ್ರಾರಂಭದಲ್ಲಿ 25 ಲಕ್ಷ ಮನೆಗಳಿಗೆ ನಲ್ಲಿ ಅಳವಡಿಸಲು ಯೋಜಿಸಲಾಗಿತ್ತು. ಸಾಧನೆ 18 ಲಕ್ಷವಾಗಿದೆ. ಕೆಲವೇ ತಿಂಗಳುಗಳಲ್ಲಿ ಗುರಿ ಮುಟ್ಟಲಾಗುವುದು. ಜಲಜೀವನ್ ಮಿಷನ್ ಪ್ರಾರಂಭಗೊಂಡ ನಂತರ 22 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಒದಗಿಸಲಾಗಿದೆ. 46.2 ಲಕ್ಷ ಒಟ್ಟು ವ್ಯಾಪ್ತಿ ಇದ್ದು, ಉಳಿದ 50 ಲಕ್ಷ ಮನೆಗಳಿಗೆ ಸಂಪರ್ಕ ಒಡಗಿಸಬೇಕಿದೆ. ಮುಂದಿನ ವರ್ಷ ಇದರ ಅನುಷ್ಠಾನಕ್ಕೆ ಆಯವ್ಯಯ ದಲ್ಲಿ ಅನುದಾನವನ್ನು ಮೀಸಲಿರಿಸಿದೆ. ಅನುಷ್ಠಾನದಲ್ಲಿ ಕೆಲವು ತೊಡಕುಗಳಿದ್ದು, ಅವುಗಳನ್ನು ನಿವಾರಿಸಲಾಗಿದೆ. ಈ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಲು ತಾವು ಖುದ್ದು ಯೋಜನೆಯ ಪ್ರಗತಿಯ ಮೇಲ್ವಿಚಾರಣೆ ಮಾಡುತ್ತಿರುವುದಾಗಿ ತಿಳಿಸಿದರು.

ನಿಗದಿತ ಸಮಯದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲು ವೇಗವನ್ನು ಹೆಚ್ಚಿಸಿ 25 ಲಕ್ಷ ಮನೆಗಳಿಗೆ ಸಂಪರ್ಕ ಒದಗಿಸುವ ಗುರಿಯನ್ನು 2-3 ತಿಂಗಳೂಳಗೆ ಸಾಧಿಸಲಾಗುವುದು ಎಂದರು. ಮುಂದಿನ ವರ್ಷದ ಗುರಿಯನ್ನು ಶೇ 100 ರಷ್ಟು ಮುಟ್ಟಲು ಸಹ ಈಗಾಗಲೇ ಕಾರ್ಯತಂತ್ರ ರೂಪಿಸಲಾಗಿದೆ ಎಂದರು.

ಜಲ ನಿರ್ವಹಣೆಯನ್ನು ಪುನರ್ ಪರಿಶೀಲಿಸುವ ಅಗತ್ಯ:
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನೀರು ಸರಬರಾಜಿಗೆ ಸೂಕ್ತ ವ್ಯವಸ್ಥೆಗಳಿಲ್ಲ. ಜಲ ನಿರ್ವಹಣೆಯನ್ನು ಪುನರ್ ಪರಿಶೀಲಿಸುವ ಅಗತ್ಯವಿದೆ. ನಮ್ಮ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿರುವ ಪ್ರಥಮ ಪ್ರಧಾನಿಗಳು. ಜಲಜೀವನ್ ಮಿಷನ್ ಯೋಜನೆಯಲ್ಲ. ಇದೊಂದು ಗುರಿ. ಈ ಗುರಿಯನ್ನು ಮುಟ್ಟಲು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು. ಇತರೆ ಯೋಜನೆಗಳ ಅನುಷ್ಠಾನಕ್ಕೆ ತನ್ನದೇ ನಿಯಮಗಳಿವೆ. ಮಿಷನ್ ಮಾದರಿಯಲ್ಲಿ ಕಟ್ಟಕಡೆಯ ವ್ಯಕ್ತಿಗೆ ನೀರು ತಲುಪಿಸುವ ಹೊಣೆ ನಮ್ಮ ಮೇಲಿದೆ ಎಂದರು.

ಜಲಯೋಜನೆಗಳನ್ನು ಸಮಗ್ರವಾಗಿ ರೂಪಿಸಬೇಕು:
ಜಲ ಸಂಪನ್ಮೂಲಗಳು ರಾಜ್ಯಗಳಿಗೆ ಸೇರಲ್ಪಟ್ಟಿವೆ ಎನ್ನುವುದನ್ನು ಎಲ್ಲರೂ ಒಪ್ಪಿಕೊಂಡು ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ. ನೀರು ಸ್ಥಳೀಯ ಹಾಗೂ ಜಾಗತಿಕ ಮಟ್ಟದ ಸಮಸ್ಯೆಯಾಗಿದೆ. ಸ್ಥಳೀಯವಾಗಿ ಸಮಸ್ಯೆ ಗಳನ್ನು ಬಗೆಹರಿಸಿಕೊಳ್ಳಬೇಕಿದೆ. ಅಭಿವೃದ್ಧಿಶೀಲ ರಾಷ್ಟ್ರವಾದ ನಮ್ಮಲ್ಲಿ, ವಿಭಿನ್ನ ಆರ್ಥಿಕ ಸ್ಥರಗಳಿವೆ. ಇವೆಲ್ಲವನ್ನೂ ಪರಿಗಣಿಸಿ ಜಲ ಯೋಜನೆಗಳನ್ನು ನಾವು ಸಮಗ್ರವಾಗಿ ರೂಪಿಸಬೇಕು ಎಂದರು.

ನೀರಿನೊಂದಿಗೆ ಭಾವನಾತ್ಮಕ ಸಂಬಂಧ ನಮ್ಮದಾಗಿದ್ದು, ಜಲಮೂಲಗಳು ಬಳಕೆಗೆ ವಿವಿಧ ಭಾಗೀದಾರರ ಸಮನ್ವಯವೂ ಅತ್ಯಗತ್ಯ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews KannadaState NewsSwatch Bharath MissionVidhanasoudhaಬಸವರಾಜ ಬೊಮ್ಮಾಯಿಬೆಂಗಳೂರುವಿಧಾನಸೌಧಸ್ವಚ್ಛ ಭಾರತ್ ಮಿಷನ್
Share197Tweet123Send
Previous Post

219 ಭಾರತೀಯರನ್ನು ಹೊತ್ತ ಮೊದಲ ವಿಮಾನ ಮುಂಬೈನತ್ತ : ಸಚಿವ ಜೈ ಶಂಕರ್

Next Post

ಜಿಎಸ್‌ಟಿ ಯಶಸ್ಸಿಗೆ ನಾಗರಿಕರ ಜಾಗೃತಿ ಅಗತ್ಯ: ಡಾ. ಮುರಳಿಕೃಷ್ಣ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಿಎಸ್‌ಟಿ ಯಶಸ್ಸಿಗೆ ನಾಗರಿಕರ ಜಾಗೃತಿ ಅಗತ್ಯ:  ಡಾ. ಮುರಳಿಕೃಷ್ಣ ಅಭಿಪ್ರಾಯ

ಜಿಎಸ್‌ಟಿ ಯಶಸ್ಸಿಗೆ ನಾಗರಿಕರ ಜಾಗೃತಿ ಅಗತ್ಯ: ಡಾ. ಮುರಳಿಕೃಷ್ಣ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

April 22, 2026
ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣದ ವಿಚಾರದಲ್ಲಿ ಎಂಪಿ ರಾಘವೇಂದ್ರ ಹೇಳಿದ್ದೇನು?

ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣದ ವಿಚಾರದಲ್ಲಿ ಎಂಪಿ ರಾಘವೇಂದ್ರ ಹೇಳಿದ್ದೇನು?

April 22, 2026
ಮೆಗ್ಗಾನ್ ಆಸ್ಪತ್ರೆ ವಿಚಾರದಲ್ಲಿ ಬಿಗ್ ಗುಡ್ ನ್ಯೂಸ್ ಕೊಟ್ಟ ಸಂಸದ ರಾಘವೇಂದ್ರ | ಏನೆಲ್ಲಾ ಹೇಳಿದರು?

ಮೆಗ್ಗಾನ್ ಆಸ್ಪತ್ರೆ ವಿಚಾರದಲ್ಲಿ ಬಿಗ್ ಗುಡ್ ನ್ಯೂಸ್ ಕೊಟ್ಟ ಸಂಸದ ರಾಘವೇಂದ್ರ | ಏನೆಲ್ಲಾ ಹೇಳಿದರು?

April 22, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ | ಅರಫತ್ ಅಲಿಗೆ 6 ವರ್ಷ ಶಿಕ್ಷೆ | ಎನ್ಐಎ ಕೋರ್ಟ್ ಆದೇಶ

April 22, 2026
ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ವಿವಾದಾತ್ಮಕ ಹೇಳಿಕೆ ಹಿನ್ನೆಲೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

April 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL