ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೇಶದಲ್ಲಿ ಎಲ್ಲದಕ್ಕೂ ಒಂದೊAದು ಕಾಲ ಬರುತ್ತದೆ ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ #D K Shivakumar ಮಾರ್ಮಿಕವಾಗಿ ನುಡಿದಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಬದಲಾವಣೆಯೇ ಬೆಳಕು, ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ ಎಂದಿದ್ದಾರೆ.
Also read: ಬೆಂಗಳೂರು | ಪ್ರವಾಸಿಗರ ವಾಹನದ ಮೇಲೆ ಹಾರಿದ ಚಿರತೆ | ಮುಂದೆ ಆಗಿದ್ದೇನು?
ದೇಶದಲ್ಲಿ ಎಲ್ಲದಕ್ಕೂ ಒಂದೊAದು ಕಾಲ ಇರುತ್ತೆ. 12 ವರ್ಷ ಎನ್’ಡಿಎಗೆ ದೊಡ್ಡ ಅವಕಾಶ ಕೊಟ್ಟಿದ್ದಾರೆ. ಈಗ ಜನರು ಬದಲಾವಣೆ ಬಯಸಿದ್ದಾರೆ. ಅದರ ಫಲವಾಗಿ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದೆ ಎಂದಿದ್ದಾರೆ.
ನಮ್ಮ ರಾಜ್ಯದಿಂದ ಕಾರ್ಯಕ್ರಮಗಳು ಆರಂಭವಾಗಿವೆ. ಮುಂದೆ ಮಹಾರಾಷ್ಟç ಚುನಾವಣೆ ಇದೆ. ನಾವು ಜನರ ಪರ ಕಾರ್ಯಕ್ರಮ ಕೋಟ್ಟಿದ್ದೇವೆ. ಭಾವನೆ ಬೇಡ ಎಂದು ಬದುಕಿಗಾಗಿ ಕಾರ್ಯಕ್ರಮ ಕೊಟ್ಟಿದ್ದೇವೆ. ಜನರ ಭಾವನೆಯೇ ಇದು. ನಾನು ಇದನ್ನು ಮುಂದಿನ ರಾಜ್ಯಗಳ ಚುನಾವಣೆಗೆ ದಿಕ್ಸೂಚಿ ಎಂದು ಹೇಳುತ್ತಿಲ್ಲ. ಬದಲಾವಣೆಯೇ ಬೆಳಕು ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post