ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅಂಬಾರಿ ಹೊರುತ್ತಿದ್ದ ಆನೆ ಅರ್ಜುನನ ಸಾವಿನ ಕುರಿತಾಗಿ ಸರ್ಕಾರ ಸತ್ಯವನ್ನು ಮುಚ್ಚಿಡುವ ಕೆಲಸ ಮಾಡುತ್ತಿದ್ದು, ಇದರ ಕುರಿತಾಗಿ ಸಮಗ್ರ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Basavaraja Bommai ಆಗ್ರಹಿಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಆನೆ ಅರ್ಜುನ ಸಾವಿನ ಬಗ್ಗೆ ಸರ್ಕಾರ ಸತ್ಯ ಮುಚ್ಚಿಡುವ ಕೆಲಸ ಮಾಡುತ್ತಿದೆ. ಅದೇ ಕಾರಣಕ್ಕೆ ತರಾತುರಿಯಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದಾರೆ ಎಂದು ಆರೋಪಿಸಿದರು.
ಅರಣ್ಯ ಇಲಾಖೆಯಲ್ಲಿ ಅರಾಜಕತೆ ನಡೆಯುತ್ತಿದೆ. ಐಎಫ್’ಎಸ್ ಅಧಿಕಾರಿಗಳ ಹಿಂಡು ಬೆಂಗಳೂರಿನಲ್ಲಿ ಆನೆ ಹಿಂಡಿನಂತಿದ್ದಾರೆ. ಅವರನ್ನು ನಾನು ಕಾಡಿಗೆ ಕಳುಹಿಸುವ ಕೆಲಸ ಮಾಡಿz್ದೆ, ಈಗ ಮತ್ತೆ ವಾಪಸ್ ಬರುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. ಐಎಫ್’ಎಸ್ ಅಧಿಕಾರಿಗಳು ಬೆಂಗಳೂರಿನಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ ಅವರಿಗೆ ಅರಣ್ಯದ ಜವಾಬ್ದಾರಿ ನೀಡಿ ಕಾಡಿಗೆ ಕಳುಹಿಸಬೇಕು ಎಂದರು.
Also read: ಸರ್ಕಾರ ರೈತರ ಸಾಲ ವಸೂಲಾತಿ ನಿಲ್ಲಿಸಿ, ಹೊಸ ಸಾಲ ನೀಡಿ: ಬಸವರಾಜ ಬೊಮ್ಮಾಯಿ
ಆನೆ ಅರ್ಜುನ ಹಾಗೂ ಬೆಂಗಳೂರಿನ ಚೀತಾ ಸಾವಿನ ಪ್ರಕರಣದಲ್ಲಿ ಸರಿಯಾದ ತರಬೇತಿ ಇಲ್ಲದೆ ಕಾರಣವಾಗಿದೆ ಎಂದು ಹೇಳಿದರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post