ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅನ್ನಭಾಗ್ಯ #Annabhagya ಎಂದು ಹೇಳಿ ಜನರ ಅನ್ನ ಕಸಿದುಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನ ನರಕ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #Basavaraja Bommai ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಲಮ್ ನಲ್ಲಿ ವಾಸಿಸಲು ಆಗದ ಜಾಗದಲ್ಲಿ ಏಳು ವಾಸವಾಗಿದ್ದಾರೆ. ಅಂತವರ ಬಿಪಿಎಲ್ ಕಾರ್ಡ್ ರದ್ದಾಗಿದೆ. ಅವರು ತೆರಿಗೆ ಕಟ್ಟುವವರು ಅಂತ ಹೇಳುತ್ತಾರೆ. ಅವರೆಲ್ಲ ತೆರಿಗೆ ಕಟ್ಟುತ್ತಾರಾ ಎಂದು ಪ್ರಶ್ನಿಸಿದರು.

Also read: ಮೋದಿ ಏಕೆ ನನ್ನ ಸವಾಲು ಸ್ವೀಕರಿಸುತ್ತಿಲ್ಲ. ಏನು ಭಯ ಅವರಿಗೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಕಾರ್ಡ್ ರದ್ದು ಮಾಡಿರುವುದನ್ನು ವಿರೋಧಿಸಿದ ಮೇಲೆ ಈಗ ವಾಪಸ್ ತೆಗೆದುಕೊಳ್ಳುವ ಕೆಲಸ ಮಾಡುತ್ತಾರೆ. ರೇಷನ್ ಕಾರ್ಡ್ ರದ್ದಾದವರು ಅರ್ಜಿ ಹಾಕಿದರೆ ತಕ್ಷಣ ವಾಪಸ್ ಕೊಡಲಾಗುವುದು ಎಂದು ಹೇಳುತ್ತಾರೆ. ಅರ್ಜಿ ಹಾಕಿದ ಮೇಲೆ ಕಾರ್ಡ್ ಬರುವುದು ಯಾವಗ? ಅಲ್ಲಿಯ. ತನಕ ಕಾರ್ಡ್ ರದ್ದಾಗಿರುವ ಬಡವರು ಏನು ತಿನ್ನಬೇಕು ಎಂದು ಪ್ರಶ್ನಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post