Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸಾವಿನ ನಂತರವೂ ಬದುಕಿರುವವರು ಸಾಧಕ: ಸಂಸದ ಬಸವರಾಜ ಬೊಮ್ಮಾಯಿ

October 10, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಈ  ರಾಜ್ಯ, ದೇಶದ ಭವಿಷ್ಯ ಎಂಜನೀಯರ್ ಗಳ ಕೈಯಲ್ಲಿದೆ. ನಾವು ವಿಶ್ವೇಶ್ವರಯ್ಯ ಅವರ ನಾಡಿನಲ್ಲಿ ಹುಟ್ಟಿದ್ದೇವೆ, ನಾವು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದರಾಗಿ‌ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #Basavaraja Bommai ಹೇಳಿದರು.

ಅವರು ಇಂದು ನಗರದ ಸೆಂಚ್ಯೂರಿ ಕ್ಲಬ್ ನಲ್ಲಿ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಎಂಜನೀಯರ್ಸ್ ಏರ್ಪಡಿಸಿದ್ದ ಎಂಜನೀಯರ್ಸ್ ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೀಪ ಎಂದರೆ ಜ್ಞಾನದ ಜ್ಯೋತಿ, ನಾವು ದೀಪವನ್ನು ಹಚ್ಚಲು ಪ್ರಯತ್ನಿಸಿದೆವು, ಅದು ಗಾಳಿಗೆ ಆರುತ್ತಿತ್ತು. ವಿಶ್ವೇಶ್ವರಯ್ಯ ಅವರ ಫೋಟೊ ಬಳಿ ತೆಗೆದುಕೊಂಡು ಹೋಗಿ ದೀಪ ಹಚ್ಚಿದಾಗ ದೀಪ ಹತ್ತಿತು, ಅದು ಜ್ಞಾನದ ದೀಪ, ಸ್ವಾಮಿ ವಿವೇಕಾನಂದರ ಪುಸ್ತಕ ಲೈಫ್ ಆಪ್ಟರ್ ಡೆತ್ ಪುಸ್ತಕದಲ್ಲಿ ಒಂದು ಮಾತು ಬರುತ್ತದೆ. ಸಾಧನೆಗೆ ಸಾವು ಅಂತ್ಯವಲ್ಲ, ಸಾವಿನ ನಂತರವೂ ಬದುಕಿರುವವನು ಸಾಧಕ. ವಿಶ್ವೇಶ್ವರಯ್ಯ ಅವರು ಸಾವಿನ ನಂತರವೂ ಬದುಕಿದ್ದಾರೆ. ನಾನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿಶ್ವೇಶ್ವರಯ್ಯ ಅವರ ಮನೆಗೆ ಹೋದಾಗ ಅವರ ಜೀವನ ಅತ್ಯಂತ ಸರಳವಾಗಿತ್ತು. ಅವರು ವಿಜನರಿ ಆಗಿದ್ದರು. ಎಂಜನೀಯರ್ ಆಗಿ ಅವರು ಅದ್ಬುತಗಳನ್ನು ಮಾಡಿದ್ದಾರೆ. ನಗರಗಳ ನಿರ್ಮಾಣ, ನಗರಗಳಿಗೆ ನೀರು ಸೌಕರ್ಯ, ಕನ್ನಂಬಾಡಿ ಕಟ್ಟಿದ್ದಾರೆ. ಬ್ಯಾಂಕ್ ಸ್ಥಾಪನೆ ಮಾಡಿದ್ದಾರೆ. ಕಾರ್ಖಾನೆಗಳನ್ನು ಸ್ಥಾಪನೆ ಮಾಡಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ಯಾರಾದರೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರೆ ಅವರು ಎಂ. ವಿಶ್ವೇಶ್ವರಯ್ಯ ನವರು ಎಂದು ಹೇಳಿದರು.

Also read: ಜಾತಿ ಜನಗಣತಿ ಅನುಷ್ಠಾನಕ್ಕೆ ಬಿಜೆಪಿ ಬೆಂಬಲ ಹೇಳಿಕೆಯಿಂದ ಮನಸ್ಸು ನಿರಾಳವಾಯಿತು: ಸಿಎಂ

ವಿಶ್ವೇಶ್ವರಯ್ಯ ನವರು ಈಗಲೂ ನಮಗೆ ಒಂದಿಲ್ಲೊಂದು ರೀತಿಯಲ್ಲಿ ಸ್ಪೂರ್ತಿಯಾಗಿದ್ದಾರೆ. ನಾನು ಜಲ ಸಂಪನ್ಮೂಲ ಸಚಿವನಾಗಿದ್ದಾಗ ಕನ್ನಂಬಾಡಿ ಆಣೆಕಟ್ಟೆಗೆ ಭೇಟಿ ನೀಡಿದಾಗ ಎರಡು ಗೇಟ್ ಗಳು ಸೋರುತ್ತಿದ್ದವು. ಅವುಗಳನ್ನು ಬದಲಾಯಿಸಲು ನಾನು ಅಧಿಕಾರಿಗಳಿಗೆ ಸೂಚಿಸಿದೆ. ಅವರು ಮಹಾರಾಜರು ಕಟ್ಟಿದ್ದು, ವಿಶ್ವೇಶ್ವರಯ್ಯ ಕಟ್ಟಿದ್ದು, ಇದನ್ನು ಬದಲಾಯಿಸುವುದು ಸುಲಭವಲ್ಲ ಎಂದು ಹೇಳಿದರು. ಆದರೆ, ನಾನು ಅದನ್ನು ಬದಲಾಯಿಸಲು ಹೇಳಿದೆ, ವಿಶ್ವೇಶ್ವರಯ್ಯ ಕಟ್ಟಿದ ಡ್ಯಾಮಿಗೆ ನಾನು ಗೇಟು ಹಾಕುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದು ಹೇಳಿದರು.

ಜ್ಞಾನದ ಬಾಗಿಲು ಅವರಿಗೆ ಯಾವಾಗಲೂ ತೆರೆದಿದ್ದವು. ನಾವು ಎಂಜನೀಯರ್ ಆಗಿರುವುದಕ್ಕೆ ಹೆಮ್ಮೆ ಪಡಬೇಕು. ನಾವು ಈ ದೇಶ, ಈ ಸಮಾಜ ನಿರ್ಮಾಣ ಮಾಡಿದ್ದೇವೆ. ನಮ್ಮ ಹಿರಿಯರ ಸಾಧನೆಗಳನ್ನು ನಾವು ಸ್ಮರಿಸಬೇಕು. ನಮ್ಮ ಅವಧಿಯಲ್ಲಿ ಒಳ್ಳೆಯ ಕೆಲಸ ಮಾಡಬೇಕು. ಹೊರ ದೇಶಗಳಲ್ಲಿ ವಿಶೇಷ ಕಟ್ಟಡಗಳನ್ನು ನಿರ್ಮಾಣ ಮಾಡಿದರೆ ಅದರ ಎಂಜನೀಯರ್ ನನ್ನು ಸ್ಮರಿಸುತ್ತಾರೆ. ಆದರೆ ನಮ್ಮ ದೇಶದಲ್ಲಿ ಆ ರೀತಿಯ ವಾತಾವರಣ ಇಲ್ಲ. ಈ ವ್ಯವಸ್ಥೆ ಬದಲಾಗಬೇಕು. ಎಂಜನೀಯರ್ ಉತ್ಪಾದಕ, ಗ್ರಾಹಕನಲ್ಲ. ಎಂಜನೀಯರ್ ಗಳ ಕೊಡುಗೆ ಸಮಾಜದ ಎಲ್ಲ ರಂಗದಲ್ಲಿಯೂ ಇದೆ ಎಂದರು.

ನಾವು ಸ್ವಾತಂತ್ರ್ಯ ಪಡೆದಾಗ ನಮ್ಮ ದೇಶದ ಜನಸಂಖ್ಯೆ ಮೂವತ್ತು ಕೋಟಿ ಇತ್ತು, ಈಗ ನೂರಾ ಮೂವತ್ತು ಕೋಟಿ ಇದೆ. ಪ್ರಧಾನಿ ನರೇಂದ್ರ ಮೋದಿಯವರು ಜನಸಂಖ್ಯೆಯನ್ನು ಉತ್ಪಾದಕರನ್ನಾಗಿ ಪರಿವರ್ತಿಸಿದರು, ನಮ್ಮ ತಂತ್ರಜ್ಞರನ್ನು ದೇಶ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಳ್ಳಲು ಬಯಸುತ್ತಿದ್ದಾರೆ.
ಕೆಲವು ಸಾರಿ ಕಿರಿಯ ಎಂಜನೀಯರ್ ಒಳ್ಳೆಯ ಯೋಜನೆ ಜೊತೆಗೆ ಬರುತ್ತಾರೆ ಅವರನ್ನು ಪ್ರೋತ್ಸಾಹಿಸಿದರೆ ಒಳ್ಳೆಯ ಯೋಜನೆಗಳು ಬರುತ್ತವೆ ಎಂದರು.

ಯೋಜನಾ ರಹಿತ ಅಭಿವೃದ್ಧಿ ಸಾಕಷ್ಟು ಸಮಸ್ಯೆಗಳಿಗೆ ಕಾರಣವಾಗಲಿದೆ. ಯಾವುದೇ ನಗರ, ಹಳ್ಳಿ ಯೋಜನಾ ರಹಿತವಾಗಿ ನಿರ್ಮಾಣ ಹಾಗೂ ವಿಸ್ತರಣೆ ಮಾಡಿದರೆ ಸಮಸ್ಯೆ ಆಗುತ್ತದೆ. ಎಂಜನೀಯರ್ ಗಳು ಆಡಳಿತ ಮಾಡುವವರಿರಬೇಕು, ನಾವು ಹೊಂದಾಣಿಕೆ ಮಾಡಿಕೊಂಡು ಬದುಕುತ್ತಿದ್ದೇವೆ. ನೀವು ಮಾಡುವ ಯೋಜನೆಗೆ ಯಾವುದೇ ವಿರೋಧ, ಆಕ್ಷೇಪ ಬರದಿದ್ದರೆ ಅದು, ಉತ್ತಮ ಯೋಜನೆ ಅಲ್ಲ, ಯಾವುದಾದರೂ ಆಕ್ಷೇಪ ಬಂದರೆ ಅದನ್ನು ಎದುರಿಸಿ ಯಶಸ್ವಿಯಾಗಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಎಸಿಸಿಎ ಅಧ್ಯಕ್ಷ ನಾಗೇಶ್ ಪುಟ್ಟಸ್ವಾಮಿ ಹಾಗೂ ಮತ್ತಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreBasavaraja BommaiKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಸಂಸದ ಬಸವರಾಜ ಬೊಮ್ಮಾಯಿ
Previous Post

ಜಾತಿ ಜನಗಣತಿ ಅನುಷ್ಠಾನಕ್ಕೆ ಬಿಜೆಪಿ ಬೆಂಬಲ ಹೇಳಿಕೆಯಿಂದ ಮನಸ್ಸು ನಿರಾಳವಾಯಿತು: ಸಿಎಂ

Next Post

ಮೋದಿ ಸಮರ್ಥ ನಾಯಕತ್ವಕ್ಕೆ ಹರಿಯಾಣ, ಜಮ್ಮು-ಕಾಶ್ಮೀರ ಫಲಿತಾಂಶ ನಿದರ್ಶನ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೋದಿ ಸಮರ್ಥ ನಾಯಕತ್ವಕ್ಕೆ ಹರಿಯಾಣ, ಜಮ್ಮು-ಕಾಶ್ಮೀರ ಫಲಿತಾಂಶ ನಿದರ್ಶನ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!