ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪೌರಕಾರ್ಮಿಕರು ಅತ್ಯಂತ ತಳಮಟ್ಟದಲ್ಲಿ ಕೆಲಸ ಮಾಡುತ್ತಾರೆ. ಅವರಲ್ಲಿ ಆತ್ಮವಿಶ್ವಾಸ ಮತ್ತು ಆತ್ಮಗೌರವ ತುಂಬಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಇಂದು ಬೆಳಗಿನ ಉಪಾಹಾರವನ್ನು ಪೌರಕಾರ್ಮಿಕರೊಂದಿಗೆ ಮುಖ್ಯ ಮಂತ್ರಿಗಳು ಸೇವಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಪೌರಕಾರ್ಮಿಕರಿಗೆ ಸೇವಾ ಭದ್ರತೆ ಇರದಿದ್ದ ಕಾರಣ ಸಮಿತಿ ರಚಿಸಲಾಗಿತ್ತು. ಸಮಿತಿಯ ಶಿಫಾರಸ್ಸಿನಂತೆ ಹಂತ ಹಂತವಾಗಿ ಸುಮಾರು 43 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಆದೇಶಿಸಲಾಗಿತ್ತು. ಅದರ ಮೊದಲ ಕಂತಾಗಿ 11,137 ಪೌರಕಾರ್ಮಿಕರ ಹುದ್ದೆಗಳನ್ನು ಖಾಯಂಗೊಳಿಸಲಾಗಿದೆ. 2 ನೇ ಹಾಗೂ 3 ನೇ ಕಂತಿನಲ್ಲಿ ಪೂರ್ತಿ ಮಾಡಲಾಗುವುದು ಎಂದರು.
Also read: ಗಮನಿಸಿ! ಸೆ.24ರಂದು ಗಾಜನೂರು ಡ್ಯಾಂ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ
ಸರ್ಕಾರದ ಈ ಉಪಕ್ರಮದಿಂದ ಈ ವರ್ಗದ ಜನರಲ್ಲಿ ಆತ್ಮವಿಶ್ವಾಸ ತುಂಬಿದೆ. ಇಷ್ಟು ವರ್ಷದ ನಮ್ಮ ಕಠಿಣ ಪರಿಶ್ರಮಕ್ಕೆ ನ್ಯಾಯ ಸಿಕ್ಕಿರುವ ಭಾವನೆ ಇದೆ. ಮಾನವೀಯತೆಯಿಂದ ಅವರ ಭಾವನೆಗಳಿಗೆ ಗೌರವ ನೀಡಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















