ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ಯಾಂಡಲ್ವುಡ್ನಲ್ಲಿ Sandalwood ಹುಲಿ ಉಗುರಿನ ಪೆಂಡೆಂಟ್ ಹಚ್ಚಿರುವ ಕಿಚ್ಚು ಹಲವು ಸೆಲೆಬ್ರೆಟಿಗಳಿಗೆ ಕಂಟಕವಾಗಿ ಪರಿಣಮಿಸುವ ಸಾಧ್ಯತೆ ಸ್ಪಷ್ಟವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ Challenging Star Darshan ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಲಾಗಿದೆ.
ಕಳೆದ ರಾತ್ರಿ ನಟ ದರ್ಶನ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, Rockline Venktesh ನಟ ಜಗ್ಗೇಶ್, Actor Jaggesh ಯುವ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ Nikhil Kumaraswamy ಅವರ ನಿವಾಸಗಳಿಗೆ ತೆರಳಿ ಪರಿಶೀಲನೆ ನಡೆಸಿದ ಅರಣ್ಯಾಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ದರ್ಶನ್ ನಿವಾಸಕ್ಕೆ ಅಧಿಕಾರಿಗಳು ತೆರಳಿದ ವೇಳೆ ಅವರು ಮನೆಯಲ್ಲಿರಲಿಲ್ಲ ಎಂದು ಹೇಳಲಾಗಿದೆ. ಆದರೆ ಮನೆಯನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಹುಲಿ ಉಗುರು ಇದ್ದರೆ ಮಾತ್ರ ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಾರೆ.
Also read: ಭೀಕರ ರಸ್ತೆ ಅಪಘಾತ: 12 ಮಂದಿ ಸಾವು
ಇನ್ನು ಸಂತೋಷ್ ಅವರ ಬಳಿ ದೊರೆತಿರುವ ಹುಲಿ ಉಗುರನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಮುಂದಿನ ಕಾನೂನು ಕ್ರಮಗಳನ್ನು ಅಧಿಕಾರಿಗಳನ್ನು ಕೈಗೊಳ್ಳಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post