No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜೂ.26ರಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌

ಜು.3ರಿಂದ 14ರವರೆಗೆ ಅಧಿವೇಶನ | ಜು.7ರಂದು 2023-24ನೇ ಸಾಲಿನ ಆಯವ್ಯಯ ಮಂಡನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 22, 2023
in ಬೆಂಗಳೂರು ನಗರ
0
ಜೂ.26ರಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

16ನೇ ವಿಧಾನಸಭೆಗೆ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಜೂ.26ರಿಂದ ಜೂ.28ರವರೆಗೆ ಮೂರು ದಿನಗಳ ಕಾಲ ನಡೆಯುವ ತರಬೇತಿ ಶಿಬಿರದಲ್ಲಿ ಈ ನೂತನ ಶಾಸಕರಿಗೆ ಆರೋಗ್ಯ ಸುಸ್ಥಿರತೆ ಮತ್ತು ಜ್ಞಾನಾಭಿವೃದ್ಧಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ UTKhader ಅವರು ತಿಳಿಸಿದರು.

ವಿಧಾನಸೌಧದದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಯುವ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಸದೀಯ ಕಲಾಪಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಉದ್ದೇಶದಿಂದ ಮತ್ತು ಯುವಜನರ ಆಲೋಚನೆಗಳು,ದೂರದೃಷ್ಟಿ,ಪ್ರತಿಭೆ ಬಿಂಬಿಸಲು ನಮ್ಮ ಸಚಿವಾಲಯದ ಮುಖಾಂತರ 03ದಿವಸಗಳ ಕಾಲ ಪ್ರಕೃತಿ ಮತ್ತು ತರಬೇತಿ ಶಿಬಿರವನ್ನು ನೆಲಮಂಗಲದ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ನಡೆಸಲಾಗುತ್ತದೆ. ಈಗಾಗಲೇ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ ಶಾಸಕರಿಗೆ ಮಾಹಿತಿ ನೀಡಲಾಗಿದ್ದು,ತಮ್ಮೆಲ್ಲ ಕೆಲಸಗಳನ್ನು ಬದಿಗೊತ್ತಿ ಸಕ್ರಿಯವಾಗಿ ಈ ತರಬೇತಿ ಶಿಬಿರದಲ್ಲಿ ಭಾಗವಹಿಸುವ ಮೂಲಕ ಈ ತರಬೇತಿ ಶಿಬಿರವನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಮನವಿ ಮಾಡಿದರು.

ಜೂ.25ರಂದು ಸಂಜೆ ಕ್ಷೇಮವನದಲ್ಲಿ ನೂತನ ಶಾಸಕರು ಆಗಮಿಸಿ ನೋಂದಣಿ ಮಾಡಿಕೊಳ್ಳಲಿದ್ದಾರೆ. ಜೂ.26ರಿಂದ ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ ಬೆಳಗ್ಗೆ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು(ಕಾರ್ಯಕ್ರಮಗಳು) ನಡೆಯಲಿವೆ ಎಂದರು.

ಬೆಳಗ್ಗೆ 10ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ ಎಂದರು.
ಜೂ.26ರಂದು ಮಧ್ಯಾಹ್ನ 12ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್ ಅವರು ಪಾಲ್ಗೊಳ್ಳಲಿದ್ದಾರೆ.  ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ನೂತನ ಶಾಸಕರ ಜೊತೆಗೆ ಸಂವಾದ ಏರ್ಪಡಿಸಲಾಗಿದೆ.

ಶಾಸಕರ ಹಕ್ಕುಗಳು ಮತ್ತು ಕರ್ತವ್ಯಗಳು,ಶಾಸನಗಳ ರಚನೆ ಮತ್ತು ಸದಸ್ಯರ ಭಾಗವಹಿಸುವಿಕೆ, ಶೂನ್ಯವೇಳೆ, ಪ್ರಶ್ನೋತ್ತರ, ಜನಮೆಚ್ಚಿಸುವ ಶಾಸಕನಾಗುವುದು ಹೇಗೆ, ವಿಧಾನಮಂಡಲದ ಸಮಿತಿಗಳು ಮತ್ತು ಸದಸ್ಯರ ಭಾಗವಹಿಸುವಿಕೆ ಸೇರಿದಂತೆ ವಿಧಾನಮಂಡಲದ ಕಾರ್ಯಕಲಾಪಗಳು ಮತ್ತು ಶಾಸಕರ ಜವಾಬ್ದಾರಿಗಳ ಕುರಿತು ಹಿರಿಯ ಸದಸ್ಯರು ತರಬೇತಿ ಶಿಬಿರದಲ್ಲಿ ತಮ್ಮ ಅನುಭವಗಳನ್ನ ಹಂಚಿಕೊಳ್ಳಲಿದ್ದಾರೆ. ಒಟ್ಟಾರೆಯಾಗಿ ಗುಣಮಟ್ಟದ ಅಧಿವೇಶನ ಮತ್ತು ಸದ್ಭಳಕೆ ಕುರಿತು ಶಾಸಕರಲ್ಲಿ ಜಾಗೃತಿ ಮೂಡಿಸುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ ಎಂದರು.

ಆರೋಗ್ಯ,ದೈಹಿಕ, ಮಾನಸಿಕ ಸದೃಢತೆ ಜೊತೆಗೆ ಅತ್ಯಂತ ಆತ್ಮವಿಶ್ವಾಸದಿಂದ ಸದನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಸದಸ್ಯರಿಗೆ ಅಗತ್ಯ ತರಬೇತಿ ನೀಡಲಾಗುತ್ತದೆ.
ಜು.3ರಿಂದ ಅಧಿವೇಶನ ಆರಂಭ:
16ನೇ ವಿಧಾನಸಭೆಯ ೦1ನೇ ಅಧಿವೇಶನದ ಮುಂದುವರಿದ ಉಪವೇಶನ ಇದೇ ಜು.3ರಿಂದ ಆರಂಭವಾಗಲಿದ್ದು, ಜು.14ರವರೆಗೆ 10ದಿನಗಳ ಕಾಲ ನಡೆಯಲಿದೆ. ಜು.03ರಂದು ಮಧ್ಯಾಹ್ನ 12ಕ್ಕೆ ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.  ಈ ಅಧಿವೇಶನದಲ್ಲಿ ಮುಖ್ಯವಾಗಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆ ನಡೆದು ತದನಂತರ ನಿರ್ಣಯ ಅಂಗೀಕಾರವಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.7ರಂದು 2023-24ನೇ ಸಾಲಿನ ಆಯವ್ಯಯ ಮಂಡಿಸಲಿದ್ದು, ಆಯವ್ಯಯದ ಮೇಲೆ ಸಾಮಾನ್ಯ ಚರ್ಚೆ ನಡೆದ ನಂತರ ಅನುದಾನದ ಬೇಡಿಕೆಗಳನ್ನ ಅಂಗೀಕರಿಸಲಾಗುತ್ತದೆ.
ಈ ಅಧಿವೇಶನದಲ್ಲಿ ಸರಕಾರದಿಂದ ಸ್ವೀಕರಿಸಲಾದ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. ಒಟ್ಟು 08 ದಿನಗಳ ಕಾಲ ಪ್ರಶ್ನೋತ್ತರ ಕಲಾಪ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು,ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳು ಕಾರ್ಯಕಲಾಪಗಳನ್ನು ನಡೆಸಲಾಗುವುದು ಎಂದು ಸ್ಪೀಕರ್‌ ಯು.ಟಿ.ಖಾದರ್‌ ಅವರು ವಿವರಿಸಿದರು.

ಈ ಸಂದರ್ಭದಲ್ಲಿ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಇದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: . UTKhaderBangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಯು.ಟಿ. ಖಾದರ್
Share197Tweet123Send
Previous Post

65 ವರ್ಷ ಮೇಲ್ಪಟ್ಟವರಿಗೆ ಮುಜರಾಯಿ ದೇಗುಲಗಳಲ್ಲಿ ನೇರ ದರ್ಶನ: ಆದರೆ ಈ ದಾಖಲೆ ಬೇಕು

Next Post

ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪರಿಶ್ರಮ, ಛಲ, ಆತ್ಮವಿಶ್ವಾಸ ಅತ್ಯಗತ್ಯ: ಮಂಜುನಾಥ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪರಿಶ್ರಮ, ಛಲ, ಆತ್ಮವಿಶ್ವಾಸ ಅತ್ಯಗತ್ಯ: ಮಂಜುನಾಥ್ ಅಭಿಪ್ರಾಯ

ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪರಿಶ್ರಮ, ಛಲ, ಆತ್ಮವಿಶ್ವಾಸ ಅತ್ಯಗತ್ಯ: ಮಂಜುನಾಥ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ವರ್ಲ್ಡ್ ಲೆಜೆಂಡ್ಸ್ ಪ್ರೊ ಟಿ20 ಲೀಗ್ | ದುಬೈ ರಾಯಲ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ!

ವರ್ಲ್ಡ್ ಲೆಜೆಂಡ್ಸ್ ಪ್ರೊ ಟಿ20 ಲೀಗ್ | ದುಬೈ ರಾಯಲ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ!

February 5, 2026
ಜನಸಹಭಾಗಿತ್ವದಲ್ಲಿ ಬೃಹತ್ ಮೈಸೂರು ಮಹಾನಗರಪಾಲಿಕೆ ರಚಿಸುವಂತೆ ಆಗ್ರಹ

ಜನಸಹಭಾಗಿತ್ವದಲ್ಲಿ ಬೃಹತ್ ಮೈಸೂರು ಮಹಾನಗರಪಾಲಿಕೆ ರಚಿಸುವಂತೆ ಆಗ್ರಹ

February 5, 2026
ಬೆಂಗಳೂರು | ಮತ್ತೆ ನಮ್ಮ ಮೆಟ್ರೋ ಪ್ರಯಾಣದರ ಏರಿಕೆ | ಎಂದಿನಿಂದ ಜಾರಿ? ಎಷ್ಟು ಹೆಚ್ಚಳ?

ಬೆಂಗಳೂರು | ಮತ್ತೆ ನಮ್ಮ ಮೆಟ್ರೋ ಪ್ರಯಾಣದರ ಏರಿಕೆ | ಎಂದಿನಿಂದ ಜಾರಿ? ಎಷ್ಟು ಹೆಚ್ಚಳ?

February 5, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL