Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ವಿದುಷಿ ಶಮಾ ಕೃಷ್ಣ ನೇತೃತ್ವದಲ್ಲಿ ಕಲಾಭಿವ್ಯಕ್ತಿಗೆ ಹೊಸ ಆಯಾಮ ತೆರೆದ “ನೃತ್ಯಾರ್ಣವ”

ಶ್ರದ್ಧಾ ನೃತ್ಯ ಸಂಸ್ಥೆ 14ನೇ ವಾರ್ಷಿಕೋತ್ಸವ ಸಂಪನ್ನ | ಪ್ರೇಕ್ಷಕ ವರ್ಗದಿಂದ ಮೆಚ್ಚುಗೆ

July 2, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಗರದ ಶ್ರದ್ಧಾ ನೃತ್ಯ ಸಂಸ್ಥೆ 14ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಶ್ರದ್ಧಾ ನೃತ್ಯಾರ್ಣವ’ ವಿಶೇಷ ನೃತ್ಯೋತ್ಸವ ಕಲಾ ರಸಿಕರ ಮನಸೂರೆಗೊಂಡಿತು.

ಮಲ್ಲೇಶ್ವರದ ವಯ್ಯಲಿಕಾವಲ್‌ನ ಚೌಡಯ್ಯ ಸ್ಮಾರಕ ಭವನದಲ್ಲಿ ಆಯೋಜಿದ್ದ ಕಾರ್ಯಕ್ರಮದಲ್ಲಿ ಸಂಸ್ಥೆಯ ಉತ್ಸಾಹಿ ಕಲಾವಿದರಿಂದ ನೃತ್ಯ ಸಮರ್ಪಣೆಯಾಗಿದ್ದು ವಿಶೇಷ. ಇದುವೇ ‘ನೃತ್ಯಾರ್ಣವ’ದ ವಿಶೇಷ.
ದೇಶದ ಸುವಿಖ್ಯಾತ ರಚನೆಕಾರರ ಕೃತಿಗಳನ್ನು ಮೊದಲ ಹಂತದಲ್ಲಿ ನೃತ್ಯಾರ್ಣವಕ್ಕೆ ಸಮರ್ಥವಾಗಿ ಬಳಸಿಕೊಂಡು ಅದಕ್ಕೆ ತಕ್ಕಂತೆ ಚೇತೋಹಾರಿಯಾಗಿ ಯುವತಿಯರು ಹೆಜ್ಜೆ ಹಾಕಿದ್ದು ಗಮನ ಸೆಳೆಯಿತು. ಉತುಕ್ಕಾಡು ವೆಂಕಟಸುಬ್ಬಯ್ಯ ಅವರ ಆನಂದ ನರ್ತನ ಗಣಪತಿ, ತುಳಸೀ ದಾಸರ ಶ್ರೀ ರಾಮಚಂದ್ರ ಕೃಪಾಳು ಭಜಮನ, ಪದ್ಮಚರಣರ ಪ್ರದೋಷ ಸಮಯದಿ ಪರಶಿವ ತಾಂಡವ, ಪುರಂದರ ದಾಸರ ಭಾಗ್ಯದ ಲಕ್ಷ್ಮಿ ಬಾರಮ್ಮ – ಕೃತಿಗಳಿಗೆ ಸಂಸ್ಥೆಯ ಕಿರಿಯ ಕಲಾವಿದರು ನರ್ತಿಸಿ, ಪ್ರೇಕ್ಷಕ ವರ್ಗದಿಂದ ಸೈ ಎನಿಸಿಕೊಂಡಿದ್ದು ಗಮನಾರ್ಹ.

ನನ್ನ ಕನಸು, ಕಲ್ಪನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹಿರಿಯ ಮತ್ತು ಕಿರಿಯ ಶಿಷ್ಯರು ಸೂಕ್ತವಾಗಿ ಸ್ಪಂದಿಸಿದ್ದಾರೆ. ನೃತ್ಯ ರೂಪಕ ಪ್ರಸ್ತುತಿ ಸಂದರ್ಭ ಕಲಾವಿದರ ಪ್ರತಿ ಹೆಜ್ಜೆಯಲ್ಲೂ ಹೊಸತನ ಮೂಡಿದೆ. ಶ್ರದ್ಧಾ ನೃತ್ಯ ಸಂಸ್ಥೆ ಮೂಲಕ 14 ವರ್ಷ ನಾನು ನಡೆಸಿದ ನರ್ತನ ಕಲಾ ಬೋಧನೆ ಶಿಷ್ಯವರ್ಗದ ಮನಗಳನ್ನು ಮಥನ ಮಾಡಿ ಇಂದು ರಸಿಕ ಮಹೋದಯರಿಗೆ ಆತ್ಮಾನಂದವೆಂಬ ಅಮೃತಪಾನ ಮಾಡಿಸಿದೆ. ಮುಂಬರುವ ವರ್ಷಗಳಲ್ಲಿ ಮತ್ತಷ್ಟು ಹೊಸ ಪ್ರಯೋಗಕ್ಕೆ ಅಣಿಯಾಗಲು ‘ನೃತ್ಯಾರ್ಣವ’ ಹೊಸ ಚೈತನ್ಯ ನೀಡಿದೆ.
-ವಿದುಷಿ ಶಮಾ ಕೃಷ್ಣ, ಹಿರಿಯ ಭರತನಾಟ್ಯ ಕಲಾವಿದೆ

ಕಲಾಭಿವ್ಯಕ್ತಿಗೆ ಹೊಸ ಆಯಾಮ
ಅಮೃತಕ್ಕಾಗಿ ಸುರ-ಅಸುರರು ಮಂದರ ಪರ್ವತವನ್ನೇ ಕ್ಷೀರಸಾಗರದಲ್ಲಿ ಕಡೆದ ‘ಅಮೃತ ಮಂಥನ’ ನೃತ್ಯ ರೂಪಕ ಕಲಾಭಿವ್ಯಕ್ತಿಗೆ ಹೊಸ ಆಯಾಮವನ್ನೇ ನೀಡಿತು. ಪುರಾಣದ ಕಥೆಯಲ್ಲಿ ಅಡಗಿರುವ ಒಳಾರ್ಥಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟು ವರ್ಣಿಸುವ ಉದ್ದೇಶವನ್ನು ಕಲಾವಿದರು ತಮ್ಮ ಅಭಿನಯದ ಮೂಲಕ ಸಫಲ ಮಾಡಿದರು.
ಮನದಲ್ಲೇ ಮಥನ
ಮಾನವನ ಮನಸ್ಸೇ ಕ್ಷೀರ ಸಾಗರ, ಒಳ್ಳೆಯ ಮತ್ತು ಕೆಟ್ಟ ಚಿಂತನೆಗಳೇ ಸುರ-ಅಸುರರು. ಈ ಚಿಂತನೆಗಳ ನಿರಂತರ ಕಾದಾಟದ ನಡುವೆ ಪ್ರತಿಯೊಬ್ಬರ ಮನದೊಳಗೂ ಸಮುದ್ರ ಮಥನ ನಡೆಯುತ್ತದೆ. ಮಾನವನ ಮುಖ್ಯ ಗುರಿಯೇ ಮೋಕ್ಷ ಎಂಬ ಅಮೃತವನ್ನು ಸಿದ್ಧಿಸಿಕೊಳ್ಳುವುದು. ಧರ್ಮದ ಹಾದಿಯನ್ನು ಪಾಲಿಸುವ ಸುರರಿಗೇ ಈ ಮೋಕ್ಷ ಎಂಬುವ ಅಮೃತ ಸಿಗುತ್ತದೆ ಎನ್ನುವ ಸಂದೇಶವನ್ನು ಮನಮುಟ್ಟುವ ರೀತಿಯಲ್ಲಿ ಈ ನೃತ್ಯ ರೂಪಕ ಪ್ರೇಕ್ಷಕರಿಗೆ ಉಣಬಡಿಸಿತು.

ಸಂಸ್ಥೆ ನಿರ್ದೇಶಕಿ ಶಮಾ ಕೃಷ್ಣ ಹಾಗು ಹಿರಿಯ ಕಲಾವಿದರಿಂದ ಅಮೃತ ಮಂಥನ ಎಂಬುವ ರಸಪೂರ್ಣ ನೃತ್ಯ ನಾಟಕದ ಪ್ರಸ್ತುತಿ ವಿಶೇಷವಾಗಿ ಮೂಡಿಬಂತು. ಇದಕ್ಕೆ ಶತಾವಧಾನಿ ಡಾ. ಆರ್. ಗಣೇಶ್‌ರ ಸಾಹಿತ್ಯ, ಕಲಾವಿದ ಪ್ರವೀಣ್ ಡಿ. ರಾವ್ ಸಂಗೀತ ಮತ್ತು ವಿದುಷಿ ಶಮಾ ಕೃಷ್ಣ ಅವರ ನೃತ್ಯ ಸಂಯೋಜನೆ ಸಮರ್ಥವಾದ ನ್ಯಾಯ ಒದಗಿಸಿದ್ದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.
‘ಅಮೃತ ಮಥನ’ಕ್ಕೆ ಅಂದು ಸಾಕ್ಷಾತ್ ಶ್ರೀಹರಿಯೇ ಸೂತ್ರಧಾರನಾಗಿದ್ದ. ಇಂದು ಖ್ಯಾತ ಸಂಶೋಧಕಿ ಪ್ರೊ. ಕರುಣಾ ವಿಜಯೇಂದ್ರ, ಖ್ಯಾತ ನೃತ್ಯ ಪಟುಗಳಾದ ಶೇಷಾದ್ರಿ ಅಯ್ಯಂಗಾರ್ ಮತ್ತು ನವ್ಯಾ ನಟರಾಜ ಅವರು ಕಲಾ ರಸದೌತಣಕ್ಕೆ ಸಾಕ್ಷಿಯಾಗಿದ್ದು ಬಹು ವಿಶೇಷ.

ವಿಶೇಷ ಲೇಖನ: ಕೌಸಲ್ಯಾರಾಮ  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

  

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Previous Post

ವಿದ್ಯಾರ್ಥಿಗಳು ತಮ್ಮ ಕನಸು ನನಸಾಗಿಸಲು ಆತ್ಮವಿಶ್ವಾಸದಿಂದ ಶ್ರಮಿಸಬೇಕು: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ

Next Post

ಶಿವಮೊಗ್ಗ | ಕುವೆಂಪು ನಗರದಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷ? ಅರಣ್ಯಾಧಿಕಾರಿಗಳು ಸ್ಪಷ್ಟನೆ ನೀಡುವರೇ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಕುವೆಂಪು ನಗರದಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷ? ಅರಣ್ಯಾಧಿಕಾರಿಗಳು ಸ್ಪಷ್ಟನೆ ನೀಡುವರೇ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!