No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜಾಗತಿಕ ಮಟ್ಟಕ್ಕೆ ಉದ್ಯಮವನ್ನು ಬೆಳೆಸಲು ತಂತ್ರಜ್ಞಾನ ಬಳಸಿಕೊಳ್ಳಿ: ಜಿಎಸ್‌ಟಿ ಉಪಆಯುಕ್ತೆ ಸಹನಾ ಬಾಳ್ಕಲ್ ಸಲಹೆ

ಹವ್ಯಕ ಉದ್ಯಮಿಗಳು ಹಾಗೂ ಕೈಗಾರೋದ್ಯಮಿಗಳ ಸಮಾವೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 8, 2024
in ಬೆಂಗಳೂರು ನಗರ
0
ಜಾಗತಿಕ ಮಟ್ಟಕ್ಕೆ ಉದ್ಯಮವನ್ನು ಬೆಳೆಸಲು ತಂತ್ರಜ್ಞಾನ ಬಳಸಿಕೊಳ್ಳಿ: ಜಿಎಸ್‌ಟಿ ಉಪಆಯುಕ್ತೆ ಸಹನಾ ಬಾಳ್ಕಲ್ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಸ್ತುತ ಭಾರತ ದೇಶದಲ್ಲಿ ಉದ್ಯಮಕ್ಕೆ ಉತ್ತಮವಾದ ವಾತಾವರಣ ಹಾಗೂ ಬೆಂಬಲ ಇದೆ. ತೆರಿಗೆ ವ್ಯವಸ್ಥೆಯನ್ನು ಸರಳೀಕರಣ ಮಾಡಲಾಗುತ್ತಿದ್ದು, ಈ ಎಲ್ಲಾ ಅವಕಾಶಗಳನ್ನು  ಬಳಸಿಕೊಂಡು ಉದ್ಯಮಗಳನ್ನು ಯಶಸ್ವಿಯಾಗಿ ಬೆಳೆಸಬಹುದು ಎಂದು GST ಉಪ ಆಯುಕ್ತೆ ಸಹನಾ ಬಾಳ್ಕಲ್ ಹೇಳಿದರು.

ಬೆಂಗಳೂರಿನ ಹವ್ಯಕ ಭವನದಲ್ಲಿ ಶ್ರೀ ಅಖಿಲ‌ ಹವ್ಯಕ ಮಹಾಸಭೆಯಿಂದ ಆಯೋಜಿತವಾಗಿದ್ದ ‘ಹವ್ಯಕ ಉದ್ಯಮಿಗಳು ಹಾಗೂ ಕೈಗಾರೋದ್ಯಮಿಗಳ ಸಮಾವೇಶ’ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಹಜವಾಗಿ ಪರಿಸರದ ಪರಿಚಯ ಇರುವ ಮತ್ತು ವಿಶಿಷ್ಟ ಆಹಾರ ಸಂಸ್ಕೃತಿ ಹೊಂದಿರುವ ಹವ್ಯಕರು ಇಕೋಟೂರಿಸಮ್ ಹಾಗೂ  ಹವ್ಯಕ ಆಹಾರೋದ್ಯಮ ಇತ್ಯಾದಿಗಳನ್ನು ಸ್ಥಾಪಿಸುವತ್ತ  ಯೋಚಿಸಬಹುದು. ಇದು ತಂತ್ರಜ್ಞಾನದ ಯುಗವಾಗಿದ್ದು, ತಂತ್ರಜ್ಞಾನವನ್ನು ಬಳಸಿಕೊಂಡು ಜಾಗತಿಕ ಮಟ್ಟಕ್ಕೆ ಉದ್ಯಮವನ್ನು ಬೆಳೆಸಲು ಆಲೋಚಿಸಬೇಕು ಎಂದು ಸಲಹೆ ನೀಡಿದರು.

ಬಿಸಿನೆಸ್ ಬೈಯ್ ಬ್ರಾಹ್ಮಿಣ್ಸ್ (BBB) ಸಂಸ್ಥಾಪಕರಾದ ಅನಂತ ನಾಗರಾಜ್ ಮಾತನಾಡಿ, ನಮ್ಮ ಸಂಘಟನೆಗಳು ಕೇವಲ ಪೂಜೆ – ಪುನಸ್ಕಾರಗಳಿಗೆ ಸೀಮಿತವಾಗಬಾರದು. ಧಾರ್ಮಿಕತೆ ನಮ್ಮ ಮೂಲವೇ ಆದರೂ ಇಂದಿನ ಕಾಲಕ್ಕೆ ಅನುಸಾರವಾಗಿ ನಮ್ಮ ಸಂಘಟನೆಗಳು ವ್ಯಾಪಾರ – ಉದ್ದಿಮೆಗಳಿಗೂ ಪ್ರಾಶಸ್ತ್ಯ ನೀಡುವ ಅವಶ್ಯಕತೆ ಇದೆ.  ನಾವು ಸಂಘಟಿತರಾದಾಗ ಎಲ್ಲರೂ ಯಶಸ್ವಿಗಳಾಗಲು ಸಾಧ್ಯ. ಎಲ್ಲಾ ಕಥೆಗಳಲ್ಲೂ ‘ಬಡ ಬ್ರಾಹ್ಮಣನೊಬ್ಬನಿದ್ದನ್ನು’ ಎಂದು ಓದಿರುತ್ತೇವೆ. ನಾವು ‘ಬಡ’ ಬ್ರಾಹ್ಮಣರಾಗಿಯೇ ಇರದೇ, ‘ಬಡಾ’ ಬ್ರಾಹ್ಮಣರಾಗಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾಸಭೆಯ ಅಧ್ಯಕ್ಷರಾದ ಡಾ.ಗಿರಿಧರ ಕಜೆ, ಸ್ಟಾರ್ಟ್‌ಪ್ ಆರಂಭವಾದ ನಂತರ ವಿಷನ್ ಅಪ್ ಮಾಡಿ ಉದ್ಯಮವನ್ನು ಬೆಳಸಿದರೆ ಮಾತ್ರ ಯಶಸ್ಸು ಸಾಧ್ಯ. ಇಲ್ಲದಿದ್ದರೆ ಸ್ಟಾರ್ಟ್‌ಪ್’ಗಳು ಆರಂಭವಾದಲ್ಲೇ ಎಂಡ್ ಅಪ್ ಆಗುತ್ತದೆ. ಜಗತ್ತು AI ಬಗ್ಗೆ ಮಾತನಾಡುತ್ತಿದೆ. ಆದರೆ ನಮ್ಮ ಸಮಾಜ NI ಅನ್ನು ಹೊಂದಿದ್ದೇವೆ. NI ಎಂದರೆ ಸಹಜ ಬುದ್ಧಿಮತ್ತೆ ( Natural Intelligence) ಸಹಜ ಪ್ರತಿಭೆ ಸಮಾಜಕ್ಕೆ ಇರುವ ವರವಾಗಿದ್ದು, ಇದನ್ನು ಬಳಸಿಕೊಂಡು ನಾವು ವಯಕ್ತಿಕವಾಗಿ ಯಶಸ್ವಿಯಾಗುವುದಷ್ಟೇ ಅಲ್ಲದೇ ಜಗತ್ತಿನ ಒಳಿತಿಗೆ ಬಳಸಿಕೊಳ್ಳಬೇಕು ಎಂದರು.

ಡಿಸೆಂಬರ್ 27,28 ಹಾಗೂ 29 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, 7 ಕ್ಷೇತ್ರಗಳ 81 ಸಾಧಕರಂತೆ ಒಟ್ಟು 567  ಸಾಧಕರನ್ನು ಸನ್ಮಾನಿಸಲಾಗುವುದು. ಇದು ಹವ್ಯಕ ಸಮಾಜದ ವೈಶಿಷ್ಟ್ಯವನ್ನು ಜಗತ್ತಿನ ಮುಂದೆ ತೆರೆದಿಡುವ ಬೃಹತ್ ಐತಿಹಾಸಿಕ ಕಾರ್ಯಕ್ರಮ ಇದಾಗಲಿದೆ ಎಂದು ಮಾಹಿತಿ ನೀಡಿದರು.
ಸಣ್ಣ ಉದ್ದಿಮೆಗಳು ಇಂದು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವುಗಳನ್ನು ಎದುರಿಸುವ ಮಾರ್ಗಗಳ ಬಗ್ಗೆ ಕಾಸಿಯಾ ಪ್ರಧಾನ ಕಾರ್ಯದರ್ಶಿ ಸುರೇಶ್ ಸಾಗರ್ ಮಾತನಾಡಿದರು.

ಕೃತಕ ಬುದ್ಧಿಮತ್ತೆ (AI) ಯ ಕುರಿತಾಗಿ ಸವಿಸ್ತಾರವಾಗಿ ವಿವರಿಸಿದ ಗೂಗಲ್’ನ ತಂತ್ರಜ್ಞ ನಾರಾಯಣ ಹೆಗಡೆ, ಕೃತಕ ಬುದ್ಧಿಮತ್ತೆಯನ್ನು ಉದ್ಯಮಗಳಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಹಾಗೂ ಕೃತಕ ಬುದ್ಧಿಮತ್ತೆಯ ಸಾಧಕ – ಭಾದಕಗಳ ಕುರಿತಾಗಿ ಚರ್ಚಿಸಿದರು.

ಟಯೋಟಾ ಇಂಡಸ್ಟ್ರೀಸ್’ನ ಡಿ.ಜಿ.ಎಮ್ ಸದಾನಂದ ಹರಿದಾಸ್ ಮಾತನಾಡಿ, ನಮ್ಮಲ್ಲಿ ಶ್ರೇಷ್ಠವಾದ ಬುದ್ಧಿಶಕ್ತಿಯಿದ್ದು, ಚಾಣಕ್ಯನಂತೆ ಚಲಬಿಡದೇ ತೊಡಗಿಸಿಕೊಂಡಾಗ ಯಶಸ್ಸು ನಮ್ಮದಾಗುತ್ತದೆ. ವಿಭಿನ್ನ ಪ್ರಯೋಗಗಳ ಮೂಲಕ ಉದ್ಯಮವನ್ನು ಜನಸ್ನೇಹಿಯಾಗಿಸಬಹುದು ಎಂದರು.
ಕೈಗಾರಿಕೋದ್ಯಮಿಗಳಿಗೆ ಸನ್ಮಾನ : ಯಶಸ್ವಿ ಉದ್ಯಮಿಗಳಾದ ಪ್ರಸನ್ನ ಶಾಸ್ತ್ರಿ, ರಾಮಕೃಷ್ಣ ನಿಸರಾಣಿ, ಲಕ್ಷ್ಮೀನಾರಾಯಣ ಹೆಗಡೆ, ನಾರಾಯಣ ಪ್ರಸನ್ನ ಹಾಗೂ ಕಿರಣ್ ಜಂಬಾನಿ ಅವರನ್ನು ಹವ್ಯಕ ಮಹಾಸಭೆಯಿಂದ ಗೌರವಿಸಿ; ಸನ್ಮಾನಿಸಲಾಯಿತು.

ಮಹಾಸಭೆಯ ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ ಯಲಹಂಕ ಹವ್ಯಕ ಮಹಾಸಭೆಯ ಕಾರ್ಯಚಟುವಟಿಕೆಗಳ ಕುರಿತಾಗಿ ಮಾಹಿತಿ ನೀಡಿ, ಕೈಗಾರಿಕೋದ್ಯಮಿಗಳು ಮಹಾಸಭೆಯ ಜೊತೆ ಕೈಜೋಡಿಸುವ ಕುರಿತು ಹಾಗೂ ಸಂಘಟಿತರಾಗುವ ಕುರಿತು ಮಾತುಗಳನ್ನಾಡಿದರು.
ಮಹಾಸಭೆಯ ಉಪಾಧ್ಯಕ್ಷರಾದ ಶ್ರೀಧರ ಭಟ್ ಕೆಕ್ಕಾರು, ಕಾರ್ಯದರ್ಶಿ ಪ್ರಶಾಂತ ಭಟ್ಟ ಮಲವಳ್ಳಿ, ಆದಿತ್ಯ ಹೆಗಡೆ ಕಲಗಾರು, ಸಂಚಾಲಕರಾದ ರಾಮಚಂದ್ರ ಭಟ್ ಕೆಕ್ಕಾರು ಹಾಗೂ ಶ್ರೀರಾಮ ಎಂ.ಎನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಂತರ   ಖ್ಯಾತ ಗಾಯಕ ಗಣೇಶ್ ದೇಸಾಯಿ ತಂಡದವರಿಂದ ನಡೆದ ‘ಭಾವಸಂಜೆ’ ಸಂಗೀತ ಕಾರ್ಯಕ್ರಮ ಜನಮನರಂಜಿಸಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

                                                     

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Previous Post

ಶಿವಮೊಗ್ಗ ದಸರಾ | ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ | ವಿಜೇತರಿಗೆ ಶಾಸಕ ಚನ್ನಬಸಪ್ಪ ಪ್ರೋತ್ಸಾಹ

Next Post

ಜೋಗ ಜಲಪಾತಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ | ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೋಗ ಜಲಪಾತಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ | ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಜೋಗ ಜಲಪಾತಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ | ಅಭಿವೃದ್ಧಿ ಕಾಮಗಾರಿ ಪರಿಶೀಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL