ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ Bank Janardhan ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಭಾನುವಾರ ಸಂಜೆ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ವಿಷಯ ತಿಳಿದು ಹಿರಿಯ ನಟ ಬೀರಾದಾರ್ ಸೇರಿದಂತೆ ಹಲವು ಕಲಾವಿದರ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
Also read: ಭೀಕರ ರಸ್ತೆ ಅಪಘಾತ: ಮೂವರು ಸ್ಥಳದಲ್ಲೇ ಸಾವು
ರಂಗಭೂಮಿ ಕಲಾವಿದರಾಗಿ ದೊಡ್ಡ ಮಟ್ಟದ ಹೆಸರು ಗಳಿಸಿದ್ದ ಅವರು, ಕನ್ನಡದ 60ಕ್ಕೂ ಅಧಿಕ ಚಿತ್ರಗಳು ಹಾಗೂ ಟಿವಿ ಸಿರಿಯಲ್ಗಳಲ್ಲಿ ನಟಿಸಿ ಜನಪ್ರಿಯರಾಗಿದ್ದರು. ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡ ಇವರು, ದೊಡ್ಡಣ್ಣ, ಟೆನ್ನಿಸ್ ಕೃಷ್ಣ ಅವರ ಸಮಕಾಲೀನರು ಅವರೊಂದಿಗೆ ಮಾತ್ರವಲ್ಲದೆ, ತಮ್ಮ ನಂತರ ಬಂದ ಹಾಸ್ಯನಟರಾದ ಸಾಧುಕೋಕಿಲ, ಬುಲೆಟ್ ಪ್ರಕಾಶ್ ಸೇರಿದಂತೆ ಇನ್ನೂ ಹಲವರೊಂದಿಗೆ ನಟಿಸಿ ತಮ್ಮ ಛಾಪು ಮೂಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post