No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಒಂದು ರೂಪಾಯಿ ಲಂಚ ಪಡೆಯದೇ ಗ್ರಾಮ ಆಡಳಿತಾಧಿಕಾರಿಗಳ ನೇಮಕ: ಸಿಎಂ ಸಿದ್ದರಾಮಯ್ಯ

kalpa News by kalpa News
April 29, 2025
in ಬೆಂಗಳೂರು ನಗರ
0
ಒಂದು ರೂಪಾಯಿ ಲಂಚ ಪಡೆಯದೇ ಗ್ರಾಮ ಆಡಳಿತಾಧಿಕಾರಿಗಳ ನೇಮಕ: ಸಿಎಂ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |   ವರದಿ: ಡಿ.ಎಲ್. ಹರೀಶ್

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು.

ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.

ಹಿಂದೆ 94-95 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ್ದು, ಆಯ್ಕೆಯಾಗಿರುವವರು ಪುಣ್ಯವಂತರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದೀರಿ. 9834 ಒಟ್ಟು ಗ್ರಾಮ ಆಡಳಿತಾಧಿಕಾಗಳಿದ್ದು, ಅದರಲ್ಲಿ 8003 ಜನ ಕಾರ್ಯನಿರ್ವಹಿಸುತ್ತಿದ್ದಾರೆ.ಈಗ 1000 ಜನ ಸೇರ್ಪಡೆಯಾಗುತ್ತಿದ್ದಾರೆ. ಯಾವುದೇ ಗ್ರಾಮ ಆಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಅಲ್ಲೇ ಇದ್ದು ಸಾಧ್ಯವಾದಷ್ಟು ಮಟ್ಟಿಗೆ ಗ್ರಾಮಗಳಲ್ಲಿಯೇ ವಾಸ ಮಾಡುವುದು ಉತ್ತಮ ಎಂದರು.
ದಾಖಲೆಗಳನ್ನು ಕರಾರುವಾಕ್ಕಾಗಿಡುವುದು ಅವಶ್ಯಕ

ನಮ್ಮ ದೇಶ ಗ್ರಾಮಗಳ ದೇಶ. ಕೃಷಿ ಪ್ರಮುಖವಾದ ಉದ್ಯೋಗವಾಗಿದ್ದು, ಹೆಚ್ಚು ಶೇ 60 ಕ್ಕೂ ಹೆಚ್ಚು ಜನ ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಜಮೀನುಗಳ ಲೆಕ್ಕ ಇಡುವುದು ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿ. ಹಳ್ಳಿಗಳಲ್ಲಿ ಶಾಂತಿ, ನೆಮ್ಮದಿ ನೆಲೆಸಲು ದಾಖಲಾತಿಗಳು ಸರಿಯಾಗಿರಬೇಕು. ದಾಖಲೆಗಳನ್ನು ಬಹಳ ಕರಾರುವಾಕ್ಕಾಗಿ ಇಡುವುದು ಅವಶ್ಯಕ. ಆಧುನಿಕ ನಾಡಿನಲ್ಲಿ ತಂತ್ರಜ್ಞಾನ, ವಿಜ್ಞಾನ ಬೆಳೆದಿದೆ. ಈಗ ಪ್ರತಿಯೊಂದೂ ಡಿಜಿಟಲೀಕರಣವಾಗಿದೆ. ಆನ್ ಲೈನ್ ನಲ್ಲಿ ದಾಖಲಾತಿಗಳನ್ನು ಪಡೆಯುವ ವ್ಯವಸ್ಥೆ ಬಂದ ನಂತರ ನಾವು ಯಾವುದೇ ಕಾರಣಕ್ಕೂ ತಪ್ಪುಗಳಿಗೆ ಅವಕಾಶ ನೀಡಬಾರದು. ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿ ಬಹಳ ಮಹತ್ವದ್ದು. ರೈತರಿಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಹತ್ತಿರದ ಸಂಬಂಧವಿದ್ದು, ಪ್ರತಿಯೊಬ್ಬ ರೈತರ ಪರಿಚಯ ಅವರಿಗಿರುತ್ತದೆ. ಅವರ ಭೂಮಿಯ ಕುರಿತು ಮಾಹಿತಿ ಗೊತ್ತಿರುತ್ತದೆ. ಅವರ ಪರಿಚಯವಿಟ್ಟುಕೊಂಡು ಅಗತ್ಯ ದಾಖಲಾತಿಗಳನ್ನು ಒದಗಿಸುವುದು ನಿಮ್ಮ ಕೆಲಸ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ಗ್ರಾಮ ಆಡಳಿತಾಧಿಕಾರಿಗಳು ಉತ್ತಮ ನಡತೆ, ಸಂಪರ್ಕವನ್ನು ಹೊಂದಿದ್ದರೆ ರೈತರು ನಿಮ್ಮ ಮಾತನ್ನು ಕೇಳುತ್ತಾರೆ. ಗ್ರಾಮ ಆಡಳಿತಾಧಿಕಾರಿಗಳು ಒಳ್ಳೆ ರೀತಿಯ ಕೆಲಸ ಮಾಡಿಕೊಟ್ಟರೆ ಅವರ ಮೇಲೂ ಗೌರವ ವಿರುತ್ತದೆ. ಜನರ ಕೆಲಸ ದೇವರ ಕೆಲಸ ಎಂದು ನೆನೆಪಿಟ್ಟುಕೊಳ್ಳಬೇಕು. ನಾವಿರುವುದೇ ಜನರ ಸೇವೆಗಾಗಿ ಎನ್ನುವುದನ್ನು ಮರೆಯಬಾರದು. ಆರು ಲಕ್ಷ ಜನ ಸರ್ಕಾರಿ ನೌಕರರು ಅವರಿಗಾಗಿಯೇ ಇರುವುದು. ರಾಜಕಾರಣಿಗಳು, ಜನರಿಂದ ಆಯ್ಕೆಯಾದರೆ, ಸರ್ಕಾರದಿಂದ ಆಯ್ಕೆಯಾದ ಸರ್ಕಾರಿ ನೌಕರರು ಜನಸೇವೆಯನ್ನು ಅವರ ಧ್ಯೇಯವಾಗಿಸಬೇಕು.

ಕಂದಾಯ ಇಲಾಖೆಯದ್ದು ಅತ್ಯಂತ ಜವಾಬ್ದಾರಿಯುತ ಕೆಲಸ. ಇಲ್ಲಿ ಸುಧಾರಣೆಗಳನ್ನು ತರಬೇಕೆಂದು ಕೃಷ್ಣಬೈರೇಗೌಡರಿಗೆ ಸೂಚಿಸಲಾಗಿತ್ತು,ಅವರು ಈಗಾಗಲೇ ಅನೇಕ ಸುಧಾರಣೆಗಳನ್ನು ತಂದಿದ್ದಾರೆ. ಅವರಿಗೆ ಇನ್ನಷ್ಟ ಸುಧಾರಣೆಗಳನ್ನು ತರುವ ಶಕ್ತಿ ಇದೆ ಎಂದು ನಂಬಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಅಧಿಕಾರಿಗಳು ರೈತರಿಗೆ ಎಲ್ಲ ಸಮಯದಲ್ಲಿಯೂ ಲಭ್ಯವಿರಬೇಕು

ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವ್ಯಾಪ್ತಿಯ ಪಂಚಾಯಿತಿಯ ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿರುವುದರಿಂದ ರೈತರಿಗೆ ಎಲ್ಲ ಸಮಯದಲ್ಲಿಯೂ ಲಭ್ಯವಿರಲು ಸಾಧ್ಯವಾಗುತ್ತದೆ. ರೈತರ ಮನೆಮನೆಗೆ ಭೇಟಿ ನೀಡಿ ಅವರ ಕುಂದುಕೊರತೆಗಳನ್ನು ಆಲಿಸಬೇಕು. ಗ್ರಾಮ ಆಡಳಿತಾಧಿಕಾರಿಗಳ ಮಂಜೂ 9834 ಮಂಜೂರಾದ ಹುದ್ದೆಗಳಿಗೆ ಲ್ಯಾಪಟಾಪ್ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4000 ಲ್ಯಾಪ್ ಟಾಪ್ ಗಳನ್ನು ಇಂದು ನೀಡಲಾಗುತ್ತಿದೆ. ಯಾವುದೇ ಕಾರಣಕ್ಕೆ ರೈತರಿಗೆ ತೊಂದರೆ ಕೊಡುವುದಾಗಲಿ, ಭ್ರಷ್ಟಾಚಾರಕ್ಕಾಗಲಿ ಅವಕಾಶ ಕೊಡಬಾರದು. ಸಣ್ಣ ಹಿಡುವಳಿದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರಿಗೆ ಅನುಕೂಲ ಕಲ್ಪಿಸುವುದು ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದರು.

ಭೂಮಿ ಬೀಟ್ ಕಾರ್ಯಕ್ರಮ

ಕೃಷಿ, ಲಾಭದಾಯಕ ವೃತ್ತಿಯಾಗಿ ಉಳಿದುಕೊಂಡಿಲ್ಲ. ಅನ್ನದಾತರ ಹಾಗೂ ನಾಡಿನ ಒಳಿತಿಗೆ ಕೆಲಸ ಮಾಡುತ್ತಿರುವ ಅರಿವಿರಬೇಕು. ರೈತರಿಗೆ ಭೂಮಿ ಬೀಟ್ ಕಾರ್ಯಕ್ರಮ ಸರ್ಕಾರ ಜಾರಿಗೆ ತಂದಿದೆ. ವಿದ್ಯಾರ್ಥಿದೆಸೆಯಲ್ಲಿ ವ್ಯವಸಾಯ ಕೈಗೊಂಡ ಸಂದರ್ಭದಲ್ಲಿ ಪಕ್ಕದ ರೈತ ಜಮೀನನ್ನು ಅತಿಕ್ರಮಣ ಮಾಡಿದ್ದು, ಈ ಬಗ್ಗೆ ನಡೆದ ಪಂಚಾಯತಿಯ ಬಗ್ಗೆ ತಮ್ಮ ಅನುಭವ ಹಂಚಿಕೊಂಡ ಮುಖ್ಯಮಂತ್ರಿಗಳು, ಜಮೀನುಗಳನ್ನು ಅತಿಕ್ರಮಣದ ಇಂತಹ ಸಮಸ್ಯೆಗಳನ್ನು ನಿವಾರಿಸಲು ಭೂಮಿ ಬೀಟ್ ಕಾರ್ಯಕ್ರಮ ಅನುಕೂಲ ಕಲ್ಪಿಸಿದೆ ಎಂದರು.

https://kalpa.news/wp-content/uploads/2025/03/PES-Video.mp4

ರೈತರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ

ಗ್ರಾಮ ಆಡಳಿತಾಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ, ರೈತರಿಗೆ ಅನ್ಯಾಯವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಜಮೀನಿನ ದಾಖಲಾತಿಗಳ ಹಾಗೂ ಸರ್ವೇಗಳು ಸಮರ್ಪಕವಾಗಿ ನಡೆದರೆ ಗ್ರಾಮಗಳಲ್ಲಿ ಭೂಮಿ ಕಲಹವಿಲ್ಲದೇ ಬಹುಮಟ್ಟಿಗೆ ನೆಮ್ಮದಿ ನೆಲಸಲು ಸಾಧ್ಯವಿದೆ. ಇಂದು ನೇಮಕಗೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು ಉದಾಸೀನತೆಯ ಭಾವನೆಯನ್ನು ತಳೆಯದೇ ಪ್ರಾಮಾಣಿಕವಾಗಿ ದುಡಿಯಬೇಕು ಎಂದು ತಿಳಿಸಿ ಶುಭಹಾರೈಸಿದರು.

ಹಿಂದೆ ಗ್ರಾಮಗಳಲ್ಲಿ ಜಮೀನಿನ ವಿವರಗಳನ್ನು ಶಾನುಭೋಗರು ಮಾಡುತ್ತಿದ್ದರು. ಶಾನುಭೋಗರು ಎಂದರೆ ರೈತರಿಗೆ ಗುರುಗಳಿದ್ದಂತೆ. ಶಾನುಭೋಗರು ಹೇಳಿದ್ದೇ ಅಂತಿಮ ಎಂಬಂತಿತ್ತು. ಕೆಲವರು ಉತ್ತಮ ಕೆಲಸ ಮಾಡುತ್ತಿದ್ದರೆ, ಕೆಲವರು ಕಿತಾಪತಿಯನ್ನೂ ಮಾಡುತ್ತಿದ್ದರು. ಶಾನುಭೋಗರು ದಾಖಲೆ ಬರೆಯುತ್ತಿದ್ದರು. ಅವರು ಏನು ಬರೆದಿದ್ದರು ಎಂದು ಯಾರಿಗೂ ಓದಿ ಹೇಳುತ್ತಿರಲಿಲ್ಲ. 1978 ರಲ್ಲಿ ತಾಲ್ಲೂಕು ಮಂಡಳಿ ಚುನಾವಣೆಗೆ ನಿಂತಾಗ, ಅವರ ತಂದೆ ನಿಲ್ಲಿಸಬೇಕೋ ಬೇಡವೋ ಎಂದು ಶಾನುಭೋಗರನ್ನು ಕೇಳಿ ನಿಲ್ಲಬಾರದು ಎಂದು ತಮ್ಮ ತಂದೆ ಹಠ ಮಾಡಿದ್ದನ್ನು, ನಂತರ ಗೆದ್ದದ್ದನ್ನು ಸಿಎಂ ಸ್ಮರಿಸಿದರು. ಚುನಾವಣೆಗೆ ಆಗ 3500 ಮಾತ್ರ ವೆಚ್ಚವಾಗಿತ್ತು ಎಂದು ತಿಳಿಸಿದ ಮುಖ್ಯಮಂತ್ರಿಗಳ ಶಾನುಭೋಗರ ಎಷ್ಟು ಪ್ರಭಾವ ಬೀರುತ್ತಿದ್ದರು ಎಂದು ವಿವರಿಸಿದರು.

ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ, ಶಾಸಕ ಶ್ರೀನಿವಾಸ್, ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಎಲ್.ಕೆ.ಅತೀಕ್ , ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಬಿಸಿಎ ವಿದ್ಯಾಥಿಗಳು ಪ್ರತಿಷ್ಠಿತ ಕಂಪೆನಿಗೆ ಆಯ್ಕೆ

Next Post

ಸೇನೆಗೆ ಪರಮಾಧಿಕಾರ | ಫ್ರೀ ಹ್ಯಾಂಡ್ಸ್ | ಟೈಮ್, ಪ್ಲೇಸ್, ಆಕ್ಷನ್ ನೀವೇ ಡಿಸೈಡ್ ಮಾಡಿ | ಉಗ್ರರನ್ನು ಮಟ್ಟಹಾಕಿ

kalpa News

kalpa News

Next Post
ಸೇನೆಗೆ ಪರಮಾಧಿಕಾರ | ಫ್ರೀ ಹ್ಯಾಂಡ್ಸ್ | ಟೈಮ್, ಪ್ಲೇಸ್, ಆಕ್ಷನ್ ನೀವೇ ಡಿಸೈಡ್ ಮಾಡಿ | ಉಗ್ರರನ್ನು ಮಟ್ಟಹಾಕಿ

ಸೇನೆಗೆ ಪರಮಾಧಿಕಾರ | ಫ್ರೀ ಹ್ಯಾಂಡ್ಸ್ | ಟೈಮ್, ಪ್ಲೇಸ್, ಆಕ್ಷನ್ ನೀವೇ ಡಿಸೈಡ್ ಮಾಡಿ | ಉಗ್ರರನ್ನು ಮಟ್ಟಹಾಕಿ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL