ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯನ್ನುನ್ನು ಮುಚ್ಚಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಗುರುವಾರ ವಿಧಾನಸಭೆಯಲ್ಲಿ ಭರವಸೆ ನೀಡಿದರು.
ಶೂನ್ಯವೇಳೆಯಲ್ಲಿ ಕಾಂಗ್ರೆಸ್ನ ಬಿ.ಕೆ.ಸಂಗಮೇಶ್ MLA Sangamesh ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ವಿಐಎಸ್ಎಲ್ ಕರ್ನಾಟಕದ ಹೆಮ್ಮೆ ಮತ್ತು ದಕ್ಷಿಣ ಭಾರತದ ಮೊದಲ ಉಕ್ಕಿನ ಕಾರ್ಖಾನೆ. ಇಲ್ಲಿ ಉತ್ಪಾದನೆಯಾಗುವ ಉಕ್ಕಿನ ಗುಣಮಟ್ಟ ಉತ್ತಮವಾಗಿದೆ. ಇದನ್ನು ಉಳಿಸಿಕೊಳ್ಳಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ವಿಐಎಸ್ಎಲ್ ಪುನರುಜ್ಜೀವನಗೊಳಿಸಲು ಈ ಹಿಂದೆ ಹಲವಾರು ಪ್ರಯತ್ನಗಳನ್ನು ಮಾಡಲಾಗಿತ್ತು. ಈ ನಿಟ್ಟಿನಲ್ಲಿ ತಾನು ಕೇಂದ್ರ ಸಚಿವ ಸಿಂಧಿಯಾ ಅವರಿಗೆ ಪತ್ರ ಬರೆದಿದ್ದೇನೆ. ‘ಭಾರತೀಯ ಉಕ್ಕು ಪ್ರಾಧಿಕಾರ ತಮ್ಮಿಂದ ಇದನ್ನು ನಡೆಸಲು ಸಾಧ್ಯವಿಲ್ಲ ಎಂದು ಬಹಳ ಹಿಂದೆಯೇ ಹೇಳಿ ಬಿಟ್ಟಿದೆ. ಖಾಸಗಿಯವರು ತೆಗೆದುಕೊಳ್ಳಲು ಮುಂದೆ ಬಂದರೆ ಅವಕಾಶ ನೀಡುತ್ತೇವೆ. ಕೆಲವು ಉದ್ಯಮಿಗಳ ಜತೆ ಚರ್ಚಿಸಿದ್ದೇವೆ. ಕೆಲವರು ಪರಿಶೀಲಿಸುವುದಾಗಿ ಹೇಳಿದ್ದಾರೆ. ಇದು ಒಮ್ಮೆ ಆರಂಭವಾದರೆ ರಾಜ್ಯ ಮತ್ತು ಕೇಂದ್ರಕ್ಕೆ ತೆರಿಗೆ ಬರುತ್ತದೆ. ನೌಕರರ ಕೆಲಸವೂ ಉಳಿಯುತ್ತದೆ’ ಎಂದು ತಿಳಿಸಿದರು.
Also read: ಯುವಕರಿಗೆ ಗಾಳ: ಬಜೆಟ್’ನಲ್ಲಿ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಘೋಷಣೆ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ B S Yadiyurappa ಅವರು ಮಾತನಾಡಿ, ವಿಐಎಸ್ಎಲ್ ಬಂದ್ ಆಗಲು ಬಿಡಬಾರದು, ಕಾರ್ಖಾನೆ ಮುಚ್ಚದಂತೆ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಸಿಎಂ ಬೊಮ್ಮಾಯಿ ಅವರನ್ನು ಒತ್ತಾಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post