No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Wednesday, March 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೋದಿಯವರೇ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಲ್ಲಿ? ಸುರ್ಜೇವಾಲ ಪ್ರಶ್ನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 13, 2024
in ಬೆಂಗಳೂರು ನಗರ
0
ಸಿಬಿಐ, ಇಡಿಗಳು ಬಿಜೆಪಿ ಸರ್ಕಾರದ ಸೇಡು ತೀರಿಸಿಕೊಳ್ಳುವ ಸಂಸ್ಥೆಗಳಾಗಿವೆ: ಕಾಂಗ್ರೆಸ್ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕನ್ನು ಯೋಜನೆಗಳನ್ನು ಈಗಾಗಲೇ ಅನುಷ್ಠಾನಗೊಳಸಿದ್ದು, ಇಂದು 5ನೇ ಗ್ಯಾರಂಟಿ ಯೋಜನೆ ಯುವ ನಿಧಿಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ Ranadeep Singh Sujewala ಹೇಳಿದ್ದಾರೆ.

ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂಪಾಯಿ ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿಯನ್ನು ಎರಡು ವರ್ಷಗಳ ಅವಧಿವರೆಗೆ ನೀಡುತ್ತಿದ್ದೇವೆ. ಈ ಮೂಲಕ ಕರುನಾಡಿಗೆ ನಮ್ಮ ಪಕ್ಷ ನೀಡಿದ್ದ ವಾಗ್ದಾನವನ್ನು ಈಡೇರಿಸಿರುವ ಸಂತೃಪ್ತಿ ತಮಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್‌ ಎಂಬುದು ಬದ್ಧತೆಯ ಪಕ್ಷ ಎಂಬುದನ್ನು ಸಮಸ್ತ ನಾಡಿನ ಜನತೆಗೆ ತೋರಿಸಿಕೊಟ್ಟಿದ್ದೇವೆ. ನಮ್ಮ ಕಾಂಗ್ರೆಸ್‌ ಪಕ್ಷದ ಮೇಲೆ ಜನರು ವಿಶ್ವಾಸವನ್ನಿಟ್ಟಿದ್ದಾರೆ, ಆ ವಿಶ್ವಾಸಕ್ಕೆ ನಾವು ಬದ್ಧರಾಗಿ ಕೆಲಸ ಮಾಡುತ್ತಿದ್ದೇವೆ. ಅದರ ಭಾಗವೇ ಈ 5ನೇ ಗ್ಯಾರಂಟಿಯಾಗಿದೆ. ಇಂದು ಇದನ್ನು ಜಾರಿ ಮಾಡಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

Also read: ಯುವನಿಧಿ ಗ್ಯಾರಂಟಿ ಯೋಜನೆ ಜಾರಿ ನಮ್ಮ ಸರ್ಕಾರದ ಹೆಮ್ಮೆ: ಸಚಿವ ಮಧು ಬಂಗಾರಪ್ಪ

ಗೃಹ ಜ್ಯೋತಿ, Gruha Jyothi ಗೃಹ ಲಕ್ಷ್ಮಿ, Gruha Lakshmi ಶಕ್ತಿ ಯೋಜನೆಗಳನ್ನು Shakthi Scheme ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ಇನ್ನು ಹಸಿದವರಿಗೆ ಅನ್ನ ನೀಡುವ ಅನ್ನಭಾಗ್ಯವನ್ನೂ Annabhagya ಅಷ್ಟೇ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದೇವೆ. ಆದರೆ, ನಮಗೆ ಈ ಯೋಜನೆ ಮೂಲಕ ತಲಾ 5 ಕೆಜಿ ಅಕ್ಕಿ ಕೊಡಬೇಕು ಎಂಬ ಆಶಯ ಇತ್ತು. ಈ ಸಂಬಂಧ ಕೇಂದ್ರ ಸರ್ಕಾರವನ್ನು ನಾವು ಕೇಳಿದೆವು ಕೂಡ. ಆದರೆ, ಕೇಂದ್ರ ಸರ್ಕಾರ ನಮಗೆ ಅಕ್ಕಿಯನ್ನು ಕೊಡಲು ನಿರಾಕರಣೆ ಮಾಡಿದರು. ಇದರಿಂದ ನಾವೇನೂ ಜಗ್ಗಲಿಲ್ಲ, ಕೊಟ್ಟ ಮಾತಿಗೂ ತಪ್ಪಲಿಲ್ಲ. ಐದು ಕೆಜಿ ಅಕ್ಕಿಯ ಬದಲಾಗಿ ಹಣವನ್ನು ನೀಡಿದೆವು. ಅನ್ನ ಭಾಗ್ಯ ಯೋಜನೆಯಲ್ಲಿ 1.8 ಕೋಟಿ ಕುಟುಂಬಗಳ 3.92 ಕೋಟಿ ಸದಸ್ಯರಿಗೆ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ 5 ಕೆಜಿ ಅಕ್ಕಿಗೆ ಒಟ್ಟು 170 ರೂ.ಗಳನ್ನು ಪ್ರತಿ ತಿಂಗಳು ನೀಡುತ್ತಿದ್ದೇವೆ. ಇದಕ್ಕಾಗಿ ಮಾಸಿಕವಾಗಿ 646 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರದಿಂದ ಖರ್ಚು ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈಗ ನಾವು ನಮ್ಮ ವಾಗ್ದಾನದಂತೆ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆಯನ್ನು ನೀಡುತ್ತಿದ್ದೇವೆ. ಇದು ಕಾಂಗ್ರೆಸ್‌ನ ಕಾರ್ಯವೈಖರಿ ಎಂದು ರಣದೀಪ್‌ ಸುರ್ಜೇವಾಲ ಹೇಳಿದ್ದಾರೆ.
Kalahamsa Infotech private limitedಬಿಜೆಪಿ ಪರಾಮರ್ಶೆ ಮಾಡಿಕೊಳ್ಳಲಿ

ನಾವು ನುಡಿದಂತೆ ನಡೆದಿದ್ದೇವೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆಯೇ? ಈ ಪ್ರಶ್ನೆಯನ್ನು ಆ ಪಕ್ಷದವರು ಒಮ್ಮೆ ತಮಗೆ ತಾವೇ ಹಾಕಿಕೊಳ್ಳಬೇಕು. ತಮ್ಮ ಕಾರ್ಯವೈಖರಿಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿಕೊಳ್ಳಬೇಕು. ಪ್ರತಿ ವರ್ಷಕ್ಕೆ 2 ಕೋಟಿ ಉದ್ಯೋಗವನ್ನು ಸೃಷ್ಟಿ ಮಾಡುವುದಾಗಿ ಹೇಳಿತ್ತು? ಆದರೆ, ಈಗ ಏನಾಗಿದೆ? ಅಷ್ಟು ಪ್ರಮಾಣದ ಉದ್ಯೋಗಗಳು ಸೃಷ್ಟಿಯಾದವೇ? ಇದಕ್ಕೆ ಉತ್ತರ ಕೊಡಿ ಬಿಜೆಪಿಯವರೇ? 15 ಲಕ್ಷ ರೂಪಾಯಿಯನ್ನು ಪ್ರತಿಯೊಬ್ಬ ಭಾರತೀಯನ ಖಾತೆಗೆ ಹಾಕುವುದಾಗಿ ಹೇಳಿದ್ದರು. ಕೊನೆಗೆ ಹಾಕಿದರೇ? ಆ ಹಣವನ್ನೂ ಹಾಕಲಿಲ್ಲ. ಅವರ ಭರವಸೆಗಳು ಭರವಸೆಯಾಗಿಯೇ ಉಳಿಯಿತು. ಇಲ್ಲಿ ನಾವು ಭರವಸೆಯನ್ನು ಈಡೇರಿಸಿದ್ದೇವೆ. ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನೂ ಅನುಷ್ಠಾನ ಮಾಡಿದ್ದೇವೆ. ಇದು ನಮ್ಮ ಕಾಂಗ್ರೆಸ್‌ನ ಬದ್ಧತೆಯಾಗಿದೆ ಎಂದು ರಣದೀಪ್‌ ಸುರ್ಜೇವಾಲ ಹೇಳಿದ್ದಾರೆ.

ಜನರ ವಿಶ್ವಾಸ ಗಳಿಸಿದ್ದೇವೆ

ಇನ್ನು ನಮ್ಮ ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಅಣಕಿಸುವ, ಕುಹುಕವಾಡುವ ಕೆಲಸ ಬಿಜೆಪಿಯಿಂದ ಆಗುತ್ತಿದೆ. ಇಲ್ಲಿ ನಮ್ಮ ರಾಜ್ಯದ ಗ್ಯಾರಂಟಿಗಳ ಬಗ್ಗೆ ಅಪಹಾಸ್ಯ ಮಾಡಿ, ಬಿಜೆಪಿ ಆಡಳಿತದಲ್ಲಿ ಇರುವ ಬೇರೆ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಾರೆ. ಈ ದ್ವಂದ್ವ ನಿಲುವು ಬೇಕಾ? ಇನ್ನು ಕರ್ನಾಟಕದಲ್ಲಿ ವಿರೋಧ ಪಕ್ಷ ಬಿಜೆಪಿ ಹಾಗೂ ಜೆಡಿಎಸ್‌ನವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ಅಣಕಿಸುವ ಮೂಲಕ ನಾಡಿನ ಯೋಜನೆಯ ಫಲಾನುಭವಿಗಳಿಗೆ ಅಪಮಾನ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಆದರೆ, ನಾವು ಜನರ ವಿಶ್ವಾಸವನ್ನು ಗಳಿಸಿದ್ದೇವೆ ಎಂದು ರಣದೀಪ್‌ ಸುರ್ಜೇವಾಲ ತಿಳಿಸಿದ್ದಾರೆ.

ಅಪಪ್ರಚಾರಕ್ಕೆ ಕಿವಿಗೊಡಬೇಡಿ

ಈಗ ಯುವ ನಿಧಿ ಯೋಜನೆ ಅದ್ಧೂರಿಯಾಗಿ ಜಾರಿಯಾಗುತ್ತಿದೆ. ಹಾಗಂತ ನಾವು ಇಷ್ಟಕ್ಕೆ ವಿರಮಿಸುವುದಿಲ್ಲ. ಯುವ ಜನತೆಗೆ ಕೌಶಲ್ಯಯುಕ್ತ ಶಿಕ್ಷಣ ನೀಡಿ ಅವರಿಗೆ ಉದ್ಯೋಗಗಳು ಹೆಚ್ಚು ಸಿಗುವಂತೆ ಮಾಡುತ್ತೇವೆ. ಇದೂ ಸಹ ನಮ್ಮ ಬದ್ಧತೆಯಲ್ಲಿ ಒಂದಾಗಿದೆ. ಅಲ್ಲದೆ, ರಾಷ್ಟ್ರ ನಿರ್ಮಾಣಕ್ಕೆ ಯುವ ಜನತೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕಾಂಗ್ರೆಸ್‌ ಬದ್ಧವಾಗಿದೆ. ಬಿಜೆಪಿ ಸೇರಿದಂತೆ ಅದರ ಮಿತ್ರಪಕ್ಷಗಳ ಅಪಪ್ರಚಾರಕ್ಕೆ ಯಾರೂ ಕಿವಿಗೊಡಬೇಡಬಾರದು. ಇಂದು ಬಿಜೆಪಿಯವರ ಭಾಷಣದಿಂದ ಯುವ ಜನತೆ ಭ್ರಮನಿರಸವಾಗಿರುವುದು ಕಂಡುಬಂದಿದೆ. ವಾಸ್ತವ ಏನು ಎಂಬುದು ಎಲ್ಲರಿಗೂ ಗೊತ್ತಾಗಿದೆ ಎಂದು ರಣದೀಪ್‌ ಸುರ್ಜೇವಾಲ ಹೇಳಿದ್ದಾರೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು) 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AnnabhagyaBangaloreGruha JyothiGruha LakshmiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRanadeep Singh SurjewalaShakthi Schemeಅನ್ನಭಾಗ್ಯಗೃಹ ಜ್ಯೋತಿಗೃಹ ಲಕ್ಷ್ಮಿಬೆಂಗಳೂರುರಣದೀಪ್ ಸಿಂಗ್ ಸುರ್ಜೆವಾಲಶಕ್ತಿ ಯೋಜನೆ
Share216Tweet123Send
Previous Post

ಯುವನಿಧಿ ಗ್ಯಾರಂಟಿ ಯೋಜನೆ ಜಾರಿ ನಮ್ಮ ಸರ್ಕಾರದ ಹೆಮ್ಮೆ: ಸಚಿವ ಮಧು ಬಂಗಾರಪ್ಪ

Next Post

….ಅಂತಹ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
….ಅಂತಹ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ

....ಅಂತಹ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಯುವತಿಗೆ ಉಪಟಳ | ಅಕ್ಕ ಪಡೆ ಸಿಬ್ಬಂದಿಯಿಂದ ಆರೋಪಿ ವಶಕ್ಕೆ | ಪ್ರಕರಣ ದಾಖಲು

ಯುವತಿಗೆ ಉಪಟಳ | ಅಕ್ಕ ಪಡೆ ಸಿಬ್ಬಂದಿಯಿಂದ ಆರೋಪಿ ವಶಕ್ಕೆ | ಪ್ರಕರಣ ದಾಖಲು

March 4, 2026
​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

March 4, 2026
ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

March 4, 2026
ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ

ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ

March 4, 2026
ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರದೊಂದಿಗೆ ಮಾತುಕತೆ: ವಿಜಯೇಂದ್ರ ಭರವಸೆ

ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರದೊಂದಿಗೆ ಮಾತುಕತೆ: ವಿಜಯೇಂದ್ರ ಭರವಸೆ

March 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL