ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೊರೋನಾ ಆತಂಕದ ನಡುವೆಯೇ ನಡೆದ ಎಸ್’ಎಸ್’ಎಲ್’ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಇಡಿಯ ರಾಜ್ಯದಲ್ಲಿ ಏಕೈಕ ವಿದ್ಯಾರ್ಥಿ ಮಾತ್ರ ಅನುತ್ತೀರ್ಣಗೊಂಡಿದ್ದಾಳೆ.
ರಾಜ್ಯದಲ್ಲಿ ನಡೆದ ಪರೀಕ್ಷೆಯಲ್ಲಿ ಶೇ.99.9ರಷ್ಟು ಅಂದರೆ 8,76,581 ವಿದ್ಯಾರ್ಥಿಗಳಲ್ಲಿ ಓರ್ವ ಖಾಸಗಿ ವಿದ್ಯಾರ್ಥಿ ಮಾತ್ರ ಅನುತ್ತೀರ್ಣಗೊಂಡಿದ್ದು, ಈಕೆ ಬಾಲಕಿ ಎಂದು ಹೇಳಲಾಗಿದೆ.
ಅನುತ್ತೀರ್ಣಗೊಂಡ ವಿದ್ಯಾರ್ಥಿಯ ಹೆಸರು ಸೇರಿ ವೈಯಕ್ತಿಕ ಮಾಹಿತಿಯನ್ನು ಸಚಿವರು ಸುದ್ದಿಗೋಷ್ಠೀಯಲ್ಲಿ ಬಹಿರಂಗಪಡಿಸಲು ಇಚ್ಚಿಸಲಿಲ್ಲ. ಆದರೆ, ಈ ವಿದ್ಯಾರ್ಥಿ ತಾನು ಪರೀಕ್ಷೆ ಬರೆಯುವ ಬದಲಾಗಿ ಅಗತ್ಯವಿರುವ ಇನ್ನೋರ್ವ ವಿದ್ಯಾರ್ಥಿಗೆ ಸಹಾಯ ಮಾಡಿ, ಪರೀಕ್ಷೆ ಬರೆದಿರಲಿಲ್ಲ. ಹೀಗಾಗಿ, ಆ ವಿದ್ಯಾರ್ಥಿ ಅನುತ್ತೀರ್ಣಗೊಂಡಿದ್ದು, ಮುಂದಿನ ಬಾರಿ ಪರೀಕ್ಷೆ ಬರೆಯಲಿದ್ದಾಳೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post