ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ ಎಂದು ಸಿಎಂ ಸಿದ್ಧರಾಮಯ್ಯ #CM Siddaramaiah ಹೇಳಿದರು.
ಮಹಾರಾಷ್ಟ್ರದ ನಾನಾ ಕಡೆ ಚುನಾವಣಾ ಪ್ರಚಾರ ಪೂರೈಸಿ, ಸೋಲಾಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಗೃಹಜ್ಯೋತಿ : ಒಂದು ಕೋಟಿ 62 ಲಕ್ಷ ಕುಟುಂಬಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ.
ಅನ್ನಭಾಗ್ಯ : ಒಂದು ಕೋಟಿ 20 ಲಕ್ಷ ಕುಟುಂಬಗಳು ಐದು ಕೆಜಿ ಉಚಿತ ಅಕ್ಕಿ ಜೊತೆಗೆ ಐದು ಕೆಜಿ ಅಕ್ಕಿಯ ಬಾಬ್ತು 170 ರೂಪಾಯಿಗಳನ್ನು ತಲಾ ಪಡೆಯುತ್ತಿದ್ದಾರೆ.
Also read: ಮಕ್ಕಳು ಶಿಸ್ತುಬದ್ಧ ಜೀವನಶೈಲಿ ಅಳವಡಿಸಿಕೊಂಡಾಗ ಸದೃಢ ಸಮಾಜ ನಿರ್ಮಾಣ ಸಾಧ್ಯ
ಗೃಹಲಕ್ಷ್ಮಿ: ಒಂದು ಕೋಟಿ 22 ಲಕ್ಷ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು 2,000 ರೂಪಾಯಿ ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದಾರೆ. ಹೆಚ್ಚೂ ಕಡಿಮೆ ಈ ಗ್ಯಾರಂಟಿಯಿಂದ ಪ್ರತೀ ವರ್ಷ 30 ಸಾವಿರ ಕೋಟಿ ರೂಪಾಯಿ ಹಣ ಮನೆ ಯಜಮಾನಿಯರ ಖಾತೆಗೆ ನೇರವಾಗಿ ಜಮೆ ಆಗುತ್ತಿದೆ.
ಯುವನಿಧಿ: ಸರ್ಕಾರ ಬಂದ 8 ತಿಂಗಳೊಳಗೆ ಇದೂ ಸೇರಿ ಎಲ್ಲಾ ಐದು ಗ್ಯಾರಂಟಿಗಳು ಆರಂಭವಾಗಿದ್ದು, ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮೋ ಹೊಂದಿರುವವರು ಯುವನಿಧಿ ಅಡಿಯಲ್ಲಿ ಭತ್ಯೆ ಪಡೆಯುತ್ತಿದ್ದಾರೆ.

ಕರ್ನಾಟಕ ಪ್ರತೀ ವರ್ಷ 4 ಲಕ್ಷ 50 ಸಾವಿರ ಕೋಟಿಯಷ್ಟು ತೆರಿಗೆಯನ್ನು ಕೇಂದ್ರಕ್ಕೆ ಪಾವತಿಸಿದರೆ, ವಾಪಾಸ್ ರಾಜ್ಯಕ್ಕೆ ಬರುತ್ತಿರುವುದು 60 ಸಾವಿರ ಕೋಟಿ ರೂಪಾಯಿ ಮಾತ್ರ. ಮಹಾರಾಷ್ಟ್ರ ರಾಜ್ಯ ಪ್ರತೀ ವರ್ಷ 8 ಲಕ್ಷ 78 ಸಾವಿರ ಕೋಟಿ ರೂಪಾಯಿ ತೆರಿಗೆ ಕಟ್ಟಿದರೆ ವಾಪಾಸ್ ಬರುತ್ತಿರುವುದು 1 ಲಕ್ಷ 30 ಸಾವಿರ ಕೋಟಿ ಮಾತ್ರ. ಹೀಗಾಗಿ ಮಹಾರಾಷ್ಟ್ರ ಕಟ್ಟುವ ಪ್ರತೀ ಒಂದು ರೂಪಾಯಿ ತೆರಿಗೆಯಲ್ಲಿ 15 ಪೈಸೆಯಷ್ಟನ್ನು, ಕರ್ನಾಟಕ 13 ಪೈಸೆಯಷ್ಟನ್ನು ಮಾತ್ರ ವಾಪಾಸ್ ಪಡೆಯುತ್ತಿದೆ. ಕೇಂದ್ರದ ಮೋದಿ ಸರ್ಕಾರ ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಿಗೂ ಅನ್ಯಾಯ ಮಾಡುತ್ತಿದೆ ಎಂದರು.
ಗ್ಯಾರಂಟಿಗಳ ಜಾರಿಯಿಂದ ಆರ್ಥಿಕತೆ ನಾಶವಾಗುತ್ತದೆ ಎಂದು ಮೋದಿ ಭಾಷಣ ಮಾಡಿದ್ದಾರೆ. ಆದರೆ, ಇದೇ ಬಿಜೆಪಿ ಮಹಾರಾಷ್ಟ್ರ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿದೆ. ಮಧ್ಯಪ್ರದೇಶ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿತ್ತು. ಮೋದಿ ಯಾಕೆ ಈ ಮಟ್ಟದ ಸುಳ್ಳು ಹೇಳುತ್ತಾರೆ? ಕರ್ನಾಟಕ ರಾಜ್ಯದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರೂ ನಮ್ಮ ಗ್ಯಾರಂಟಿಗಳ ಅನುಕೂಲ ಪಡೆಯುತ್ತಿದ್ದಾರೆ ಎಂದರು.

ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ರೈತರ ₹8,165 ಕೋಟಿ ಸಾಲ ಮನ್ನಾ ಮಾಡಿದ್ದೇನೆ. ಮನಮೋಹನ್ ಸಿಂಗ್ ಅವರು ಪ್ರಧಾನಿ ಆದಾಗ ಭಾರತದ ರೈತರ 76 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದರು. ಆದ್ದರಿಂದ ಮಹಾರಾಷ್ಟ್ರ ಜನತೆ ಮಹಾ ವಿಕಾಸ್ ಅಘಾಡಿಯನ್ನು ಗೆಲ್ಲಿಸುವ ಮೂಲಕ ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಮಹಾರಾಷ್ಟ್ರದ ಜನತೆಯ ಆರ್ಥಿಕ ಪ್ರಗತಿಗೆ ಕಾರಣರಾಗಬೇಕು ಎಂದು ವಿನಂತಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post